Homeಕರ್ನಾಟಕಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತಿದೆ, ಎನ್‌ಐಎ ಅಗತ್ಯವಿಲ್ಲ: ಪರಮೇಶ್ವರ್

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತಿದೆ, ಎನ್‌ಐಎ ಅಗತ್ಯವಿಲ್ಲ: ಪರಮೇಶ್ವರ್

- Advertisement -
- Advertisement -

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆಗೆ ಬಿಜೆಪಿಯಿಂದ ಹೆಚ್ಚುತ್ತಿರುವ ಒತ್ತಡದ ಮಧ್ಯೆ, “ರಾಜ್ಯ ಸರ್ಕಾರ ಈಗಾಗಲೇ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ, ಎನ್‌ಐಎ ಅಗತ್ಯವಿಲ್ಲ” ಎಂದು ಗೃಹ ಸಚಿವ ಜಿ.ಪರಮೇಶ್ವರ ಗುರುವಾರ ಹೇಳಿದ್ದಾರೆ.

“ನಾವು ಧರ್ಮಸ್ಥಳ ಪ್ರಕರಣ ತನಿಖೆಗಾಗಿ ಎಸ್‌ಐಟಿ ರಚಿಸಿದ್ದೇವೆ. ಈ ಹಿಂದೆ, ಅವರು ಎಸ್‌ಐಟಿ ತನಿಖೆಯೇ ಸರಿಯಾಗಿಲ್ಲ ಎಂದು ಹೇಳುತ್ತಿದ್ದರು. ಈಗ ಅವರು ಈ ವಿಷಯವನ್ನು ಎನ್‌ಐಎಗೆ ಹಸ್ತಾಂತರಿಸಬೇಕೆಂದು ಒತ್ತಾಯಿಸುತ್ತಿದ್ದಾರೆ; ಈಗ ನಡೆಯುತ್ತಿರುವುದೂ ಕೂಡ ತನಿಖೆಯಲ್ಲವೇ” ಎಂದು ಅವರು ಸುದ್ದಿಗಾರರನ್ನು ಕೇಳಿದರು.

ವಿದೇಶಿ ನಿಧಿಯ ವಿಷಯಕ್ಕೆ ಸಂಬಂಧಿಸಿದಂತೆ ಮಾತ್ರ ಕೇಂದ್ರ ಸರ್ಕಾರದ ತನಿಖಾ ತಂಡ ಪರಿಶೀಲಿಸಬಹುದು. ಸ್ವಾಭಾವಿಕವಾಗಿ, ಕೇಂದ್ರ ಸರ್ಕಾರವು ಆ ಅಂಶವನ್ನು ತನಿಖೆ ಮಾಡಬೇಕು. ಏಕೆಂದರೆ, ರಾಜ್ಯ ಸರ್ಕಾರ ಅದನ್ನು ಮಾಡಲು ಸಾಧ್ಯವಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

ಉದಯ್ ಜೈನ್‌ರಂತಹ ವ್ಯಕ್ತಿಗಳಿಗೆ ಸಮನ್ಸ್ ನೀಡಿವುದು ಸೇರಿದಂತೆ ಎಲ್ಲ ಕೋನಗಳಲ್ಲಿ, ತಾವು ಸ್ವೀಕರಿಸಿದ ಮಾಹಿತಿಯ ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು. 2012 ರಲ್ಲಿ ಯುವತಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲೆ ಮಾಡಿದ ಸೌಜನ್ಯ ಪ್ರಕರಣದ ‘ಮರುತನಿಖೆ’ಯ ಹೇಳಿಕೆಗಳನ್ನು ನಿರಾಕರಿಸಿದ ಅವರು, “ನಾನು ಅದನ್ನು ಮರುತನಿಖೆ ಎಂದು ಕರೆಯುವುದಿಲ್ಲ. ಅವರು (ಎಸ್‌ಐಟಿ) ಯಾವ ಉದ್ದೇಶ ಮತ್ತು ಲಿಂಕ್‌ನೊಂದಿಗೆ ತನಿಖೆ ನಡೆಸುತ್ತಿದ್ದಾರೆಂದು ನಮಗೆ ತಿಳಿಯುತ್ತದೆ” ಎಂದು ಹೇಳಿದರು.

ಎನ್‌ಐಎ ಔಪಚಾರಿಕವಾಗಿ ಅಧಿಕಾರ ವಹಿಸಿಕೊಂಡರೆ ಕರ್ನಾಟಕ ಸಹಕರಿಸುತ್ತದೆಯೇ ಎಂದು ಕೇಳಿದಾಗ, “ಎನ್‌ಐಎ ಅದನ್ನು ಏಕೆ ತನಿಖೆ ಮಾಡಲು ಬಯಸುತ್ತದೆ ಎಂಬುದನ್ನು ಸಮರ್ಥಿಸಿಕೊಳ್ಳಬೇಕಾಗುತ್ತದೆ. ಅವರು ಅದನ್ನು ಸಮರ್ಥಿಸಿಕೊಂಡರೆ ರಾಜ್ಯ ಸರ್ಕಾರಕ್ಕೆ ಯಾವುದೇ ಆಯ್ಕೆಗಳಿರುವುದಿಲ್ಲ” ಎಂದು ಉತ್ತರಿಸಿದರು.

ಧರ್ಮಸ್ಥಳಕ್ಕೆ ರಾಜಕೀಯ ಮೆರವಣಿಗೆಗಳ ಕುರಿತು ಮಾತನಾಡಿದ ಪರಮೇಶ್ವರ್, ದೇವಸ್ಥಾನಕ್ಕೆ ಭೇಟಿ ನೀಡುವ ಪಕ್ಷಗಳಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಈ ಸಮಯದ ಹಿಂದೆ ರಾಜಕೀಯವಿದೆ ಎಂದು ಆರೋಪಿಸಿದರು. “ಮಂಜುನಾಥ ಸ್ವಾಮಿ ಯಾವುದೇ ವ್ಯಕ್ತಿಗೆ ಸೇರಿದವರಲ್ಲ. ಧರ್ಮಸ್ಥಳ ವಿಷಯ ಬೆಳಕಿಗೆ ಬಂದ ನಂತರ ಅವರು (ಬಿಜೆಪಿ) ಅಲ್ಲಿಗೆ ಏಕೆ ಹೋದರು ಎಂಬುದನ್ನು ಮಾತ್ರ ನಾವು ಪ್ರಶ್ನಿಸುತ್ತಿದ್ದೇವೆ. ಅದರ ಹಿಂದೆ ರಾಜಕೀಯವಿದೆ ಎಂಬುದು ಸ್ಪಷ್ಟವಾಗಿದೆ. ಬಿಜೆಪಿಗೆ ಪ್ರತಿಕ್ರಿಯೆಯಾಗಿ ಮಾತ್ರ ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿ ಮೆರವಣಿಗೆ ನಡೆಸಿದರು” ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ನೂರಾರು ಕೊಲೆಗಳು, ಅಕ್ರಮವಾಗಿ ಹೂತಿಟ್ಟ ಆರೋಪಗಳ ಬಗ್ಗೆ ಎನ್‌ಐಎ ತನಿಖೆ ನಡೆಸಬೇಕೆಂದು ಹಲವು ಮಠಾಧೀಶರು ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.

ಸುಳ್ಳು ಆರೋಪದ ಮೇಲೆ ಇದೀಗ ಬಂಧಿಸಲ್ಪಟ್ಟ ದೂರುದಾರ ಸಿ.ಎನ್. ಚಿನ್ನಯ್ಯ, ಲೈಂಗಿಕ ದೌರ್ಜನ್ಯದ ಗುರುತುಗಳನ್ನು ಹೊಂದಿರುವ ಮಹಿಳೆಯರ ಶವಗಳು ಸೇರಿದಂತೆ ಹಲವಾರು ಶವಗಳನ್ನು ಧರ್ಮಸ್ಥಳದಲ್ಲಿ ದೀರ್ಘಕಾಲದವರೆಗೆ ಹೂಳಲಾಗಿದೆ ಎಂದು ಆರೋಪಿಸಿದ ನಂತರ ವಿವಾದ ಭುಗಿಲೆದ್ದಿತು. ದೇವಾಲಯವನ್ನು ಗುರಿಯಾಗಿಸಿಕೊಂಡಿದ್ದಾಗಿ ಬಿಜೆಪಿ ಕರೆದಿದ್ದರ ವಿರುದ್ಧ ಪ್ರತಿಭಟಿಸಿತ್ತು. ಆದರೆ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಎಸ್‌ಐಟಿ ತನಿಖೆಯನ್ನು ಸ್ವಾಗತಿಸಿದರು.

‘ಸೌಜನ್ಯ ತಾಯಿ ಹೇಳಿದ ನೈಜ ಸಂಗತಿ ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ..?’; ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...