Homeಮುಖಪುಟಪ್ರಜ್ವಲ್ ರೇವಣ್ಣ ಕರೆತರಲು ಎಸ್‌ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗುತ್ತಿಲ್ಲ: ಗೃಹ ಸಚಿವ ಪರಮೇಶ್ವರ್

ಪ್ರಜ್ವಲ್ ರೇವಣ್ಣ ಕರೆತರಲು ಎಸ್‌ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗುತ್ತಿಲ್ಲ: ಗೃಹ ಸಚಿವ ಪರಮೇಶ್ವರ್

- Advertisement -
- Advertisement -

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಅವರನ್ನು ಕರೆತರಲು ವಿದೇಶಕ್ಕೆ ಹೋಗುವುದಿಲ್ಲ ಮತ್ತು ಇಂಟರ್‌ಪೋಲ್ ಅವರ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಭಾನುವಾರ ಹೇಳಿದ್ದಾರೆ.

ಸೂಕ್ಷ್ಮವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹೇಳಿಕೆಗಳನ್ನು ನೀಡುವುದು ಅಥವಾ ಮಾಹಿತಿಯನ್ನು ಹಂಚಿಕೊಳ್ಳುಬಾರದು ಎಂದು ಅವರು ರಾಜಕೀಯ ಮುಖಂಡರಿಗೆ ಎಚ್ಚರಿಕೆ ನೀಡಿದರು.

33 ವರ್ಷದ ಪ್ರಜ್ವಲ್ ರೇವಣ್ಣ ಅವರು ಜೆಡಿಸ್ ಮುಖ್ಯಸ್ಥರಾದ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದಾರೆ. ಈ ಹಗರಣ ರಾಜಕೀಯ ಬಿರುಗಾಳಿ ಎಬ್ಬಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಯು ಜಟಾಪಟಿಯಲ್ಲಿ ತೊಡಗಿದೆ. ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದ ಒಂದು ದಿನದ ನಂತರ, ಅಂದರೆ ಏಪ್ರಿಲ್ 27 ರಂದು ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದಾರೆ ಎನ್ನಲಾಗಿದೆ.

ಮೊದಲ ಹಂತದಲ್ಲಿ ಚುನಾವಣೆ ನಡೆದ ಹಾಸನ ಲೋಕಸಭೆ ಕ್ಷೇತ್ರದಿಂದ ಬಿಜೆಪಿ-ಜೆಡಿಸ್ ಮೈತ್ರಿಕೂಟದ ಜಂಟಿ ಅಭ್ಯರ್ಥಿಯಾಗಿದ್ದರು.

ಪ್ರಜ್ವಲ್ ಬಂಧಿಸಲು ಅಧಿಕಾರಿಗಳು ವಿದೇಶಕ್ಕೆ ಪ್ರಯಾಣ ಬೆಳೆಸುತ್ತಾರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿರುವ ಅವರು, “ಇಲ್ಲ, ಅಂತಹ ಯಾವುದೇ ಆಯ್ಕೆ ಇಲ್ಲ; ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿದೆ ಮತ್ತು ಇಂಟರ್‌ಪೋಲ್ ಮಾಹಿತಿಯನ್ನು ಹಂಚಿಕೊಳ್ಳುತ್ತದೆ. ಅವರು ಪತ್ತೆಯಾದ ಅಥವಾ ಗುರುತಿಸಲಾದ ಆಯಾ ದೇಶದವರು ಅವರಿಗೆ ತಿಳಿಸುತ್ತಾರೆ. ನಂತರ ನಮ್ಮ ಏಜೆನ್ಸಿಗಳು, ಸಿಬಿಐ ತಿಳಿಯುತ್ತದೆ. ಅವರ ಮೂಲಕ ನಮಗೆ ಇದುವರೆಗೆ ಯಾವುದೇ ಮಾಹಿತಿ ಇಲ್ಲ” ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ತನಿಖೆ ನಡೆಯುತ್ತಿದೆ, ಪ್ರಕರಣದ ಮೇಲೆ ಪರಿಣಾಮ ಬೀರದಂತೆ ನಾವು ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಲು ಬಯಸುವುದಿಲ್ಲ” ಎಂದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರ ವಿರುದ್ಧ ಆರೋಪ ಮಾಡಿರುವ ಬಿಜೆಪಿ ಮುಖಂಡ ದೇವರಾಜೇಗೌಡ ಬಂಧನದ ಹಿಂದೆ ಷಡ್ಯಂತ್ರವಿದೆ ಎಂಬ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ, “ಯಾರಾದರೂ ಏನಾದರೂ ಹೇಳಿದರೆ ಅದಕ್ಕೆ ಪ್ರತಿಕ್ರಿಯಿಸಲಾರೆವು. ಇದು ಗಂಭೀರ ಪ್ರಕರಣವಾಗಿರುವುದರಿಂದ ತನಿಖೆ ಪೂರ್ಣಗೊಳ್ಳುವವರೆಗೆ ನಾವು ಮಾಹಿತಿಯನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದು.

“ನಮ್ಮ ನಾಯಕರು ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡುವಾಗ ಜಾಗರೂಕರಾಗಿರಬೇಕು. ಇಲ್ಲದಿದ್ದರೆ, ಅವರು ನೀಡಿದ ಹೇಳಿಕೆಗಳ ಆಧಾರದ ಮೇಲೆ, ನಾವು ಅವರನ್ನು ತನಿಖೆಗೆ ಕರೆದು ಸಿಆರ್‌ಪಿಸಿಯ 41 ಎ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಬೇಕಾಗಬಹುದು” ಎಂದರು.

ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರಿಗೂ ನೋಟಿಸ್ ಜಾರಿಯಾಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಅವರು ಮಾಜಿ ಸಿಎಂ ಆಗಿದ್ದು, ಈ ಪ್ರಕರಣವನ್ನು ಮಾಜಿ ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ ಎಂಬ ನಂಬಿಕೆ ಇದೆ. ಈ ಪ್ರಕರಣದ ಕುರಿತು ಯಾವುದೇ ಹೇಳಿಕೆಗಳನ್ನು ನೀಡುವ ಮೊದಲು ಅಥವಾ ಸಾರ್ವಜನಿಕ ಡೊಮೇನ್‌ನಲ್ಲಿ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವ ಮೊದಲು, ಒಬ್ಬರು ಜಾಗರೂಕರಾಗಿರಬೇಕು ಮತ್ತು ಇದು ಎಲ್ಲರಿಗೂ ಅನ್ವಯಿಸುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ವಿಧಾನ ಪರಿಷತ್‌ಗೆ ಕೈತಪ್ಪಿದ ಟಿಕೆಟ್‌: ಬಿಜೆಪಿ ವಿರುದ್ಧ ರಘುಪತಿ ಭಟ್‌ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...