Homeಮುಖಪುಟಲಖೀಂಪುರ ಹತ್ಯಾಕಾಂಡ ಕುರಿತು SIT ವರದಿ-ಗೃಹಸಚಿವರು ರಾಜೀನಾಮೆ ನೀಡುವುದಿಲ್ಲವೇ?: ಮಮತಾ ಬ್ಯಾನರ್ಜಿ ವಾಗ್ದಾಳಿ

ಲಖೀಂಪುರ ಹತ್ಯಾಕಾಂಡ ಕುರಿತು SIT ವರದಿ-ಗೃಹಸಚಿವರು ರಾಜೀನಾಮೆ ನೀಡುವುದಿಲ್ಲವೇ?: ಮಮತಾ ಬ್ಯಾನರ್ಜಿ ವಾಗ್ದಾಳಿ

- Advertisement -
- Advertisement -

ಲಖಿಂಪುರ್‌‌ ಖೇರಿ ರೈತರ ಹತ್ಯಾಕಾಂಡ ಘಟನೆಯು ಯೋಜಿತ ಪಿತೂರಿ ಎಂದು ಎಸ್‌ಐಟಿ ವರದಿ ಹೇಳಿದೆ. ಈ ವರದಿಯನ್ನು ಉಲ್ಲೇಖಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗೋವಾಕ್ಕೆ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಎಸ್‌ಐಟಿ ವರದಿ ಬಗ್ಗೆ ಉಲ್ಲೇಖಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, “ಗೃಹ ಸಚಿವರು ರಾಜೀನಾಮೆ ನೀಡಬೇಕಲ್ಲ? ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಧಾನಿ ಚರ್ಚಿಸುವುದಿಲ್ಲವೇ?” ಎಂದು ಕೇಳಿದ್ದು, ರೈತರು ಮತ್ತು ಕಾರ್ಮಿಕರ ಬಗ್ಗೆ ಬಿಜೆಪಿಯಿಂದ ನಾವು ಕಲಿಯಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

ಎಂಟು ಮಂದಿ ಪ್ರಾಣ ಕಳೆದುಕೊಂಡ ಲಖಿಂಪುರ ಖೇರಿ ಹತ್ಯಾಕಾಂಡ ಘಟನೆಯ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(SIT) ಪ್ರತಿಭಟನಾ ನಿರತ ರೈತರ ಹತ್ಯೆಗೆ ಯೋಜಿತ ಸಂಚು ನಡೆದಿದೆ ಎಂದು ಹೇಳಿದೆ.

ತಮ್ಮ ತನಿಖೆಯ ಹಿನ್ನೆಲೆಯಲ್ಲಿ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ ಉಳಿದ ಆರೋಪಿಗಳ ವಿರುದ್ಧದ ಆರೋಪಗಳನ್ನು ನವೀಕರಿಸಲು ತನಿಖಾಧಿಕಾರಿ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ.

ಈಗಾಗಲೇ ಆಶಿಶ್ ಮಿಶ್ರಾ ವಿರುದ್ಧ ಕೊಲೆಯತ್ನದ ಪ್ರಕರಣ ದಾಖಲಾಗಿದೆ. ನಂತರದ ತನಿಖೆಯ ಸಂದರ್ಭದಲ್ಲಿ ಹೊಸ ಸಾಕ್ಷ್ಯಗಳು ಸಿಕ್ಕಿದ್ದರಿಂದ ಈಗ ಎಲ್ಲಾ 13 ಆರೋಪಿಗಳ ಮೇಲೆ ಕೊಲೆಯತ್ನ ಪ್ರಕರಣ ಸೇರಿಸಲು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:700 ಕ್ಕೂ ಹೆಚ್ಚು ರೈತರ ಸಾವು ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡ ತಡೆಯಬಹುದಿತ್ತು: ಸಂಯುಕ್ತ ಕಿಸಾನ್ ಮೋರ್ಚಾ

ಜೊತೆಗೆ ಆರೋಪಿಗಳ ವಿರುದ್ಧದ ಮೂರು ಆರೋಪಗಳನ್ನು ಕೈಬಿಡುವಂತೆ ಸಹ ಎಸ್‌ಐಟಿ ನ್ಯಾಯಾಲಯಕ್ಕೆ ಮನವಿ ಮಾಡಿದೆ. ಅವುಗಳೆಂದರೆ ಐಪಿಸಿ ಸೆಕ್ಷನ್‌ 279 (ಸಾರ್ವಜನಿಕ ಮಾರ್ಗದಲ್ಲಿ ದುಡುಕಿನ ಚಾಲನೆ), 338 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕ್ರಿಯೆ) ಮತ್ತು 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ).

ತನಿಖಾಧಿಕಾರಿ ವಿದ್ಯಾ ರಾಮ್ ದಿವಾಕರ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ, ಲಖಿಂಪುರ ಖೇರಿಯಲ್ಲಿ ನಡೆದ ಘಟನೆಯು ಅಪಘಾತವಲ್ಲ, ಬದಲಾಗಿ ಶಸ್ತ್ರಸಜ್ಜಿತ ಕೊಲೆ ಯತ್ನದ ಯೋಜಿತ ಸಂಚು ಎಂದು ಹೇಳಿದ್ದಾರೆ.

ಲಖಿಂಪುರ ಜಿಲ್ಲಾ ನ್ಯಾಯಾಲಯವು ಮಂಗಳವಾರ ಎಲ್ಲಾ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆಸಿದೆ.

ಅಕ್ಟೋಬರ್‌ 3 ರಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಭೇಟಿಯನ್ನು ವಿರೋಧಿಸಿ, ಒಕ್ಕೂಟ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾನೂನುಗಳ ವಿರುದ್ಧ ಆಂದೋಲನ ನಡೆಸುತ್ತಿದ್ದ ರೈತರ ಗುಂಪಿನ ಮೇಲೆ ಆಶಿಶ್‌ ಮಿಶ್ರಾ ಕಾರನ್ನು ಹರಿಸಿದ್ದರು.

ಆಶಿಶ್ ಮಿಶ್ರಾ ಸೇರಿದಂತೆ ಪ್ರಕರಣದ ಇತರ ಆರೋಪಿಗಳು ಪ್ರಸ್ತುತ ಪೊಲೀಸ್ ವಶದಲ್ಲಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಯುಪಿ ಸರ್ಕಾರದ ಬಗ್ಗೆ ಅಸಮಾಧಾನ, ಸ್ವತಂತ್ರ ಮೇಲ್ವಿಚಾರಣೆಗೆ ಸುಪ್ರೀಂ ಒಲವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...