Homeಮುಖಪುಟಲಖೀಂಪುರ ಹತ್ಯಾಕಾಂಡ ಕುರಿತು SIT ವರದಿ-ಗೃಹಸಚಿವರು ರಾಜೀನಾಮೆ ನೀಡುವುದಿಲ್ಲವೇ?: ಮಮತಾ ಬ್ಯಾನರ್ಜಿ ವಾಗ್ದಾಳಿ

ಲಖೀಂಪುರ ಹತ್ಯಾಕಾಂಡ ಕುರಿತು SIT ವರದಿ-ಗೃಹಸಚಿವರು ರಾಜೀನಾಮೆ ನೀಡುವುದಿಲ್ಲವೇ?: ಮಮತಾ ಬ್ಯಾನರ್ಜಿ ವಾಗ್ದಾಳಿ

- Advertisement -
- Advertisement -

ಲಖಿಂಪುರ್‌‌ ಖೇರಿ ರೈತರ ಹತ್ಯಾಕಾಂಡ ಘಟನೆಯು ಯೋಜಿತ ಪಿತೂರಿ ಎಂದು ಎಸ್‌ಐಟಿ ವರದಿ ಹೇಳಿದೆ. ಈ ವರದಿಯನ್ನು ಉಲ್ಲೇಖಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗೋವಾಕ್ಕೆ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಎಸ್‌ಐಟಿ ವರದಿ ಬಗ್ಗೆ ಉಲ್ಲೇಖಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, “ಗೃಹ ಸಚಿವರು ರಾಜೀನಾಮೆ ನೀಡಬೇಕಲ್ಲ? ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಧಾನಿ ಚರ್ಚಿಸುವುದಿಲ್ಲವೇ?” ಎಂದು ಕೇಳಿದ್ದು, ರೈತರು ಮತ್ತು ಕಾರ್ಮಿಕರ ಬಗ್ಗೆ ಬಿಜೆಪಿಯಿಂದ ನಾವು ಕಲಿಯಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

ಎಂಟು ಮಂದಿ ಪ್ರಾಣ ಕಳೆದುಕೊಂಡ ಲಖಿಂಪುರ ಖೇರಿ ಹತ್ಯಾಕಾಂಡ ಘಟನೆಯ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(SIT) ಪ್ರತಿಭಟನಾ ನಿರತ ರೈತರ ಹತ್ಯೆಗೆ ಯೋಜಿತ ಸಂಚು ನಡೆದಿದೆ ಎಂದು ಹೇಳಿದೆ.

ತಮ್ಮ ತನಿಖೆಯ ಹಿನ್ನೆಲೆಯಲ್ಲಿ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ ಉಳಿದ ಆರೋಪಿಗಳ ವಿರುದ್ಧದ ಆರೋಪಗಳನ್ನು ನವೀಕರಿಸಲು ತನಿಖಾಧಿಕಾರಿ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ.

ಈಗಾಗಲೇ ಆಶಿಶ್ ಮಿಶ್ರಾ ವಿರುದ್ಧ ಕೊಲೆಯತ್ನದ ಪ್ರಕರಣ ದಾಖಲಾಗಿದೆ. ನಂತರದ ತನಿಖೆಯ ಸಂದರ್ಭದಲ್ಲಿ ಹೊಸ ಸಾಕ್ಷ್ಯಗಳು ಸಿಕ್ಕಿದ್ದರಿಂದ ಈಗ ಎಲ್ಲಾ 13 ಆರೋಪಿಗಳ ಮೇಲೆ ಕೊಲೆಯತ್ನ ಪ್ರಕರಣ ಸೇರಿಸಲು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:700 ಕ್ಕೂ ಹೆಚ್ಚು ರೈತರ ಸಾವು ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡ ತಡೆಯಬಹುದಿತ್ತು: ಸಂಯುಕ್ತ ಕಿಸಾನ್ ಮೋರ್ಚಾ

ಜೊತೆಗೆ ಆರೋಪಿಗಳ ವಿರುದ್ಧದ ಮೂರು ಆರೋಪಗಳನ್ನು ಕೈಬಿಡುವಂತೆ ಸಹ ಎಸ್‌ಐಟಿ ನ್ಯಾಯಾಲಯಕ್ಕೆ ಮನವಿ ಮಾಡಿದೆ. ಅವುಗಳೆಂದರೆ ಐಪಿಸಿ ಸೆಕ್ಷನ್‌ 279 (ಸಾರ್ವಜನಿಕ ಮಾರ್ಗದಲ್ಲಿ ದುಡುಕಿನ ಚಾಲನೆ), 338 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕ್ರಿಯೆ) ಮತ್ತು 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ).

ತನಿಖಾಧಿಕಾರಿ ವಿದ್ಯಾ ರಾಮ್ ದಿವಾಕರ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ, ಲಖಿಂಪುರ ಖೇರಿಯಲ್ಲಿ ನಡೆದ ಘಟನೆಯು ಅಪಘಾತವಲ್ಲ, ಬದಲಾಗಿ ಶಸ್ತ್ರಸಜ್ಜಿತ ಕೊಲೆ ಯತ್ನದ ಯೋಜಿತ ಸಂಚು ಎಂದು ಹೇಳಿದ್ದಾರೆ.

ಲಖಿಂಪುರ ಜಿಲ್ಲಾ ನ್ಯಾಯಾಲಯವು ಮಂಗಳವಾರ ಎಲ್ಲಾ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆಸಿದೆ.

ಅಕ್ಟೋಬರ್‌ 3 ರಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಭೇಟಿಯನ್ನು ವಿರೋಧಿಸಿ, ಒಕ್ಕೂಟ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾನೂನುಗಳ ವಿರುದ್ಧ ಆಂದೋಲನ ನಡೆಸುತ್ತಿದ್ದ ರೈತರ ಗುಂಪಿನ ಮೇಲೆ ಆಶಿಶ್‌ ಮಿಶ್ರಾ ಕಾರನ್ನು ಹರಿಸಿದ್ದರು.

ಆಶಿಶ್ ಮಿಶ್ರಾ ಸೇರಿದಂತೆ ಪ್ರಕರಣದ ಇತರ ಆರೋಪಿಗಳು ಪ್ರಸ್ತುತ ಪೊಲೀಸ್ ವಶದಲ್ಲಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಯುಪಿ ಸರ್ಕಾರದ ಬಗ್ಗೆ ಅಸಮಾಧಾನ, ಸ್ವತಂತ್ರ ಮೇಲ್ವಿಚಾರಣೆಗೆ ಸುಪ್ರೀಂ ಒಲವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...