Homeಕರ್ನಾಟಕಪತ್ರಕರ್ತ ವಾರಿಷೆ ಹತ್ಯೆ ತನಿಖೆಗೆ ಎಸ್‌ಐಟಿ ರಚಿಸಲಾಗುವುದು: ಮಹಾರಾಷ್ಟ್ರ ಡಿಸಿಎಂ

ಪತ್ರಕರ್ತ ವಾರಿಷೆ ಹತ್ಯೆ ತನಿಖೆಗೆ ಎಸ್‌ಐಟಿ ರಚಿಸಲಾಗುವುದು: ಮಹಾರಾಷ್ಟ್ರ ಡಿಸಿಎಂ

- Advertisement -
- Advertisement -

ಪತ್ರಕರ್ತ ಶಶಿಕಾಂತ್ ವಾರಿಷೆ ಅವರ ಹತ್ಯೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವನ್ನು ರಚಿಸಲಾಗುವುದು ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶನಿವಾರ ಹೇಳಿದ್ದಾರೆ.

ರತ್ನಗಿರಿ ಜಿಲ್ಲೆಯ ಕೊಡವಲಿ ಗ್ರಾಮದಲ್ಲಿ ಪಂಢರಿನಾಥ್ ಅಂಬೇರ್ಕರ್ ಎಂಬ ಭೂ ಡೀಲರ್ ತನ್ನ ಎಸ್‌ಯುವಿಯನ್ನು ವಾರಿಷೆಯವರ ಮೇಲೆ ಹತ್ತಿಸಿ ಕೊಲೆ ಮಾಡಿದ್ದನು

ಹಲವಾರು ಮಾಧ್ಯಮ ಸಂಸ್ಥೆಗಳು ವಾರಿಷೆ ಅವರ ಸಾವಿನ ತನಿಖೆಗೆ ಒತ್ತಾಯಿಸಿದ್ದವು. ಹತ್ಯೆಯಾಗಿರುವ ವಾರಿಷೆಯವರು ಇತ್ತೀಚೆಗೆ ಅಂಬರ್ಕರ್ ವಿರುದ್ಧ ಲೇಖನ ಬರೆದಿದ್ದರು.

ಶನಿವಾರ ಫಡ್ನವೀಸ್ ಅವರ ಕಚೇರಿಯಿಂದ ಬಿಡುಗಡೆಯಾದ ಹೇಳಿಕೆಯಲ್ಲಿ, “ವಿಶೇಷ ತನಿಖಾ ತಂಡವನ್ನು ರಚಿಸುವಂತೆ ರಾಜ್ಯದ ಪೊಲೀಸ್ ಆಡಳಿತಕ್ಕೆ ಸೂಚಿಸಲಾಗಿದೆ” ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ವಿಶೇಷ ತನಿಖಾ ತಂಡವು ಉನ್ನತ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿರುತ್ತದೆ ಎಂದು ಅದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಗೃಹ ಇಲಾಖೆಯ ಖಾತೆಯನ್ನು ಹೊಂದಿರುವ ಫಡ್ನವಿಸ್ ಅವರಿಗೆ ಪತ್ರ ಬರೆದಿದ್ದ ಶಿವಸೇನಾ ಸಂಸದ ಸಂಜಯ್ ರಾವತ್, ತನಿಖೆಗೆ ಒತ್ತಾಯಿಸಿದ್ದರು.

“ತೈಲ ಸಂಸ್ಕರಣಾಗಾರದ ಹೆಸರಿನಲ್ಲಿ ನಾನಾರ್ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಂದ ಸ್ವಾಧೀನಪಡಿಸಿಕೊಂಡಿರುವ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಭೂ ವಹಿವಾಟುಗಳನ್ನು ಶಶಿಕಾಂತ್ ವಾರಿಷೆ ಬಹಿರಂಗಪಡಿಸಿದ್ದರು. ಇದರಿಂದಾಗಿ ಭೂ ವ್ಯವಹಾರದಲ್ಲಿ ತೊಡಗಿರುವವರು ಅಸಮಾಧಾನಗೊಂಡಿದ್ದರು” ಎಂದು ರಾವತ್‌ ಆರೋಪಿಸಿದ್ದರು.

ಮೂಲತಃ ರತ್ನಗಿರಿಯ ನಾನಾರ್ ಗ್ರಾಮದಲ್ಲಿ ಯೋಜಿಸಲಾಗಿದ್ದ ರತ್ನಗಿರಿ ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಯೋಜನೆಯನ್ನು ಶಿವಸೇನೆ ವಿರೋಧಿಸಿತ್ತು. “ಈ ಯೋಜನೆಯು ದೊಡ್ಡ ಪ್ರಮಾಣದ ಪರಿಸರ ಮಾಲಿನ್ಯವನ್ನು ಉಂಟುಮಾಡುತ್ತದೆ; ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳ 17 ಹಳ್ಳಿಗಳನ್ನು ಸ್ಥಳಾಂತರಿಸಬೇಕಾಗುತ್ತದೆ” ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದ್ದರು.

ಅಪರಾಧ ಹಿನ್ನೆಲೆಯುಳ್ಳ ಲ್ಯಾಂಡ್‌ ಏಜೆಂಟ್ ಕುರಿತು ಫೆಬ್ರವರಿ 6ರಂದು ಮಹಾರಾಷ್ಟ್ರ ರತ್ನಗಿರಿ ಮೂಲದ ಸ್ಥಳೀಯ ದೈನಿಕವು ಮೊದಲ ಪುಟದ ವರದಿಯನ್ನು ಪ್ರಕಟಿಸಿದ ಕೆಲವೇ ಗಂಟೆಗಳ ಬಳಿಕ, ವರದಿ ಬರೆದ ಪತ್ರಕರ್ತರಾದ ವಾರಿಷೆಯವರನ್ನು ಕೊಲ್ಲಲಾಯಿತು. ಕಾರನ್ನು ಅವರ ಮೇಲೆ ಹತ್ತಿಸಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

‘ಮಹಾನಗರಿ ಟೈಮ್ಸ್’ ಪತ್ರಿಕೆಯ ಪ್ರಾದೇಶಿಕ ಮುಖ್ಯಸ್ಥ 48 ವರ್ಷದ ಶಶಿಕಾಂತ್ ವಾರಿಷೆ ಅವರು ಸ್ಥಳೀಯ ಪ್ರಭಾವಿ ವ್ಯಕ್ತಿಯಾದ ಪಂಢರಿನಾಥ್ ಅಂಬರ್ಕರ್ ಅವರ ಬಗ್ಗೆ ವರದಿಯನ್ನು ಬರೆದಿದ್ದರು.

“ರಿಫೈನರಿ ಪರ ಏಜೆಂಟ್ ಆಗಿರುವ ವ್ಯಕ್ತಿಯು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಜೊತೆಯಲ್ಲಿ ತನ್ನ ಫೋಟೋಗಳನ್ನು ಏಕೆ ಹಂಚಿಕೊಳ್ಳುತ್ತಿದ್ದಾನೆ?” ಎಂದು ವರದಿಯಲ್ಲಿ ಗಮನ ಸೆಳೆಯಲಾಗಿತ್ತು.

ಕೊಂಕಣಕ್ಕೆ ಸಂಸ್ಕರಣಾಗಾರ ಯೋಜನೆಯನ್ನು ತಂದಿದ್ದಕ್ಕಾಗಿ ಪ್ರಧಾನಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರಿಗೆ ಧನ್ಯವಾದ ಸಲ್ಲಿಸಿ ಲ್ಯಾಂಡ್ ಏಜೆಂಟ್ ತನ್ನ ಫೋಟೋಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಿದ್ದನು.

ಸುದ್ದಿಯು ವಾರಿಷೆ ಅವರ ಬೈಲೈನ್ ಹೊಂದಿರಲಿಲ್ಲ. ಆದರೆ ಇದನ್ನು ಬರೆದವರು ಯಾರೆಂಬುದು ಅಂಬರ್ಕರ್‌ಗೆ ಚೆನ್ನಾಗಿ ಗೊತ್ತಿತ್ತು ಎಂದು ವಾರಿಷೆ ಸಹೋದ್ಯೋಗಿಗಳು ಹೇಳಿದ್ದರು.

ವರದಿ ಪ್ರಕಟವಾದ ದಿನ ಅಂದು ಮಧ್ಯಾಹ್ನ 1.30ರ ಸುಮಾರಿಗೆ ವಾರಿಷೆಯವರ ಮೇಲೆ ದಾಳಿ ಮಾಡಲಾಯಿತು. ರತ್ನಗಿರಿಯ ಮುನ್ಸಿಪಲ್ ಕೌನ್ಸಿಲ್ ರಾಜಾಪುರದ ಪೆಟ್ರೋಲ್ ಪಂಪ್‌ನ ಹೊರಗೆ ಈ ಘಟನೆ ನಡೆಯಿತು. ವಾರಿಷೆ ತನ್ನ ದ್ವಿಚಕ್ರ ವಾಹನಕ್ಕೆ ಪೆಟ್ರೊಲ್ ಹಾಕಿಸಲು ನಿಂತಿದ್ದಾಗ ಅಂಬರ್ಕರ್ ತನ್ನ ಮಹೀಂದ್ರ ಥಾರ್ ಎಸ್‌ಯುವಿಯನ್ನು ವಾರಿಷೆ ಮೇಲೆ ಹತ್ತಿಸಿ ಸುಮಾರು 100 ಮೀಟರ್ ಎಳೆದೊಯ್ದಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ವಾರಿಷೆಯವರನ್ನು, ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗಾಯಗೊಂಡು ಒಂದು ದಿನದ ನಂತರ ಫೆಬ್ರವರಿ 7 ರಂದು ಅವರು ನಿಧನರಾದರು.

ಸ್ಥಳದಿಂದ ಪರಾರಿಯಾಗಿದ್ದ ಅಂಬರ್ಕರ್‌ನನ್ನು ಫೆ.7ರ ಸಂಜೆ ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

“ನಾವು ಆರಂಭದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಕೊಲೆಗೆ ಸಮನಾಗಿರುವುದಿಲ್ಲ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಆದರೆ ವಾರಿಷೆಯವರನ್ನು ಕೊಲ್ಲುವ ಉದ್ದೇಶವಿದ್ದದ್ದು ಸಾಕ್ಷ್ಯಗಳಿಂದ ಕಂಡುಬಂದ ಬಳಿಕ ಐಪಿಸಿಯ ಸೆಕ್ಷನ್ 302 (ಕೊಲೆ) ಅಡಿಯಲ್ಲೂ ಆರೋಪ ಹೊರಿಸಲಾಗಿದೆ. ಅಂಬರ್ಕರ್‌ ಕೊಲ್ಲುವ ಉದ್ದೇಶದಿಂದಲೇ ಬಂದಿದ್ದನು ಎಂದು ಪ್ರಾಥಮಿಕ ಸಾಕ್ಷ್ಯಗಳು ತಿಳಿಸುತ್ತಿವೆ. ಅಂಬರ್ಕರ್‌ನನ್ನು ಫೆಬ್ರವರಿ 14ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ” ಎಂದು ರತ್ನಗಿರಿ ಪೊಲೀಸ್ ವರಿಷ್ಠಾಧಿಕಾರಿ ಧನಂಜಯ್ ಕುಲಕರ್ಣಿ ಮಾಹಿತಿ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಬುರ್ಖಾ ಧರಿಸಿ ಧುರಂಧರ್ ಹಾಡಿಗೆ ನೃತ್ಯ; ಹುಡುಗರ ಪುಂಡಾಟಕ್ಕೆ ಆಕ್ರೋಶ

ಧುರಂಧರ್ ಚಿತ್ರದ ಹಾಡಿಗೆ ಬುರ್ಖಾ ಧರಿಸಿ ನೃತ್ಯ ಮಾಡಿದ ಯುವಕರು ಇಸ್ಲಾಮಿಕ್ ಉಡುಗೆಯನ್ನು ಬಹಿರಂಗವಾಗಿ ಅಪಹಾಸ್ಯ ಮಾಡಿದ್ದಾರೆ ಎಂಬ ಕಾರಣಕ್ಕೆ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಶಾಲಾ ಕಾರ್ಯಕ್ರಮವೊಂದರಲ್ಲಿ ಈ...

ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಝಿಯಾ ಅಂತ್ಯಕ್ರಿಯೆ : ಭಾರತದಿಂದ ಸಚಿವ ಜೈಶಂಕರ್ ಭಾಗಿ

ಮಂಗಳವಾರ (ಡಿ.30) ನಿಧನರಾದ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ಅವರ ಅಂತ್ಯಕ್ರಿಯೆ ಬುಧವಾರ (ಡಿ.31) ಢಾಕಾದಲ್ಲಿ ನಡೆಯಿತು. ಭಾರತದಿಂದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್ ಪಾಲ್ಗೊಂಡು ಪ್ರಧಾನಿ ಮೋದಿ...

ಇಂದೋರ್| ಕಲುಷಿತ ನೀರು ಸೇವಿಸಿ ಏಳು ಜನರು ಸಾವು; ದೃಢಪಡಿಸಿದ ಮೇಯರ್

ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ಅತಿಸಾರ ಮತ್ತು ವಾಂತಿಯಿಂದ ಇದುವರೆಗೆ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಮೇಯರ್ ಪುಷ್ಯಮಿತ್ರ ಭಾರ್ಗವ ಬುಧವಾರ ದೃಢಪಡಿಸಿದರು. "ಭಾಗೀರಥಪುರ ಪ್ರದೇಶದಲ್ಲಿ ಅತಿಸಾರದಿಂದ ಮೂರು ಸಾವುಗಳು...

ಉತ್ತರ ಪ್ರದೇಶ| ಅಮೇಥಿಯಲ್ಲಿ 15 ವರ್ಷದ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಆರೋಪಿ ಬಂಧನ

ಅಮೇಥಿಯಲ್ಲಿ 15 ವರ್ಷದ ದಲಿತ ಬಾಲಕಿಯ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ವಶಕ್ಕೆ ಪಡೆದು...

ಚಲಿಸುತ್ತಿದ್ದ ವ್ಯಾನ್‌ನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ರಸ್ತೆಗೆ ಎಸೆದ ಪ್ರಕರಣ : ಇಬ್ಬರ ಬಂಧನ

ಚಲಿಸುತ್ತಿದ್ದ ವ್ಯಾನ್‌ನಲ್ಲಿ 25 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ನಂತರ ಆಕೆಯನ್ನು ರಸ್ತೆಗೆ ಎಸೆದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಫರೀದಾಬಾದ್‌ನಲ್ಲಿ ನಡೆದಿದ್ದು, ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು...

ವಶಪಡಿಸಿಕೊಂಡ 200 ಕೆ.ಜಿ ಗಾಂಜಾ ಇಲಿಗಳು ತಿಂದಿವೆ ಎಂದ ಪೊಲೀಸರು : ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ಮೂರು ವರ್ಷಗಳ ಹಿಂದೆ ಜಾರ್ಖಂಡ್ ಪೊಲೀಸರು ವಾಹನವೊಂದನ್ನು ತಡೆದು, ಅದರಿಂದ ಭಾರೀ ಪ್ರಮಾಣದ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡಿದ್ದರು. 2024ರಲ್ಲಿ ಈ ಪ್ರಕರಣದ ವಿಚಾರಣೆ ನಡೆಯುವಾಗ, ವಶಪಡಿಸಿಕೊಂಡ ಗಾಂಜಾವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿತ್ತು....

ಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ ಸಾಧ್ಯತೆ

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ದೇಶದ ವಿವಿಧ ನಗರಗಳಲ್ಲಿ ಮುಷ್ಕರ ನಡೆಸಿರುವ ಗಿಗ್‌ ಕಾರ್ಮಿಕರು, ಹೊಸ ವರ್ಷದ ಸಂಜೆಯಾದ ಇಂದು (ಡಿ.31) ಮತ್ತೊಮ್ಮೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ನ್ಯಾಯಯುತ ಮತ್ತು...

ಉತ್ತರಾಖಂಡ: ಜಲವಿದ್ಯುತ್ ಯೋಜನೆಯ ಸುರಂಗದೊಳಗೆ ಎರಡು ಲೋಕೋ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ

ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯ ವಿಷ್ಣುಗಢ-ಪಿಪಲ್ಕೋಟಿ ಜಲ ವಿದ್ಯುತ್ ಯೋಜನೆಯ ಸುರಂಗದ ಪಿಪಲ್ಕೋಟಿ ಸುರಂಗದೊಳಗೆ ಮಂಗಳವಾರ ಸಂಜೆ ಕಾರ್ಮಿಕರು ಮತ್ತು ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಲೋಕೋ ರೈಲು, ಸರಕು ರೈಲಿಗೆ ಡಿಕ್ಕಿ ಹೊಡೆದು ಸುಮಾರು...

ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಲು ಆಗ್ರಹ

ನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆಯ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಅನುಷ್ಠಾನ ತಡೆ ಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳವಾರ (ಡಿ.30)...

ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ವಿರೋಧಿಸಿ ಪ್ರತಿಭಟನೆ; ಧಾರವಾಡ ಕೃಷಿ ವಿವಿ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ರದ್ದು

ಧಾರವಾಡದ ಕೃಷಿ ವಿಶ್ವ ವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮಕ್ಕೆ ಹಿಂದುತ್ವ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ದಲಿತ ಸಂಘಟನೆ ಹಾಗೂ ಕೃಷಿ ವಿವಿ ಬೋರ್ಡ್ ಸದಸ್ಯರು ವಿವಿ...