Homeಕರ್ನಾಟಕಪತ್ರಕರ್ತ ವಾರಿಷೆ ಹತ್ಯೆ ತನಿಖೆಗೆ ಎಸ್‌ಐಟಿ ರಚಿಸಲಾಗುವುದು: ಮಹಾರಾಷ್ಟ್ರ ಡಿಸಿಎಂ

ಪತ್ರಕರ್ತ ವಾರಿಷೆ ಹತ್ಯೆ ತನಿಖೆಗೆ ಎಸ್‌ಐಟಿ ರಚಿಸಲಾಗುವುದು: ಮಹಾರಾಷ್ಟ್ರ ಡಿಸಿಎಂ

- Advertisement -
- Advertisement -

ಪತ್ರಕರ್ತ ಶಶಿಕಾಂತ್ ವಾರಿಷೆ ಅವರ ಹತ್ಯೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವನ್ನು ರಚಿಸಲಾಗುವುದು ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶನಿವಾರ ಹೇಳಿದ್ದಾರೆ.

ರತ್ನಗಿರಿ ಜಿಲ್ಲೆಯ ಕೊಡವಲಿ ಗ್ರಾಮದಲ್ಲಿ ಪಂಢರಿನಾಥ್ ಅಂಬೇರ್ಕರ್ ಎಂಬ ಭೂ ಡೀಲರ್ ತನ್ನ ಎಸ್‌ಯುವಿಯನ್ನು ವಾರಿಷೆಯವರ ಮೇಲೆ ಹತ್ತಿಸಿ ಕೊಲೆ ಮಾಡಿದ್ದನು

ಹಲವಾರು ಮಾಧ್ಯಮ ಸಂಸ್ಥೆಗಳು ವಾರಿಷೆ ಅವರ ಸಾವಿನ ತನಿಖೆಗೆ ಒತ್ತಾಯಿಸಿದ್ದವು. ಹತ್ಯೆಯಾಗಿರುವ ವಾರಿಷೆಯವರು ಇತ್ತೀಚೆಗೆ ಅಂಬರ್ಕರ್ ವಿರುದ್ಧ ಲೇಖನ ಬರೆದಿದ್ದರು.

ಶನಿವಾರ ಫಡ್ನವೀಸ್ ಅವರ ಕಚೇರಿಯಿಂದ ಬಿಡುಗಡೆಯಾದ ಹೇಳಿಕೆಯಲ್ಲಿ, “ವಿಶೇಷ ತನಿಖಾ ತಂಡವನ್ನು ರಚಿಸುವಂತೆ ರಾಜ್ಯದ ಪೊಲೀಸ್ ಆಡಳಿತಕ್ಕೆ ಸೂಚಿಸಲಾಗಿದೆ” ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ವಿಶೇಷ ತನಿಖಾ ತಂಡವು ಉನ್ನತ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿರುತ್ತದೆ ಎಂದು ಅದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಗೃಹ ಇಲಾಖೆಯ ಖಾತೆಯನ್ನು ಹೊಂದಿರುವ ಫಡ್ನವಿಸ್ ಅವರಿಗೆ ಪತ್ರ ಬರೆದಿದ್ದ ಶಿವಸೇನಾ ಸಂಸದ ಸಂಜಯ್ ರಾವತ್, ತನಿಖೆಗೆ ಒತ್ತಾಯಿಸಿದ್ದರು.

“ತೈಲ ಸಂಸ್ಕರಣಾಗಾರದ ಹೆಸರಿನಲ್ಲಿ ನಾನಾರ್ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಂದ ಸ್ವಾಧೀನಪಡಿಸಿಕೊಂಡಿರುವ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಭೂ ವಹಿವಾಟುಗಳನ್ನು ಶಶಿಕಾಂತ್ ವಾರಿಷೆ ಬಹಿರಂಗಪಡಿಸಿದ್ದರು. ಇದರಿಂದಾಗಿ ಭೂ ವ್ಯವಹಾರದಲ್ಲಿ ತೊಡಗಿರುವವರು ಅಸಮಾಧಾನಗೊಂಡಿದ್ದರು” ಎಂದು ರಾವತ್‌ ಆರೋಪಿಸಿದ್ದರು.

ಮೂಲತಃ ರತ್ನಗಿರಿಯ ನಾನಾರ್ ಗ್ರಾಮದಲ್ಲಿ ಯೋಜಿಸಲಾಗಿದ್ದ ರತ್ನಗಿರಿ ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಯೋಜನೆಯನ್ನು ಶಿವಸೇನೆ ವಿರೋಧಿಸಿತ್ತು. “ಈ ಯೋಜನೆಯು ದೊಡ್ಡ ಪ್ರಮಾಣದ ಪರಿಸರ ಮಾಲಿನ್ಯವನ್ನು ಉಂಟುಮಾಡುತ್ತದೆ; ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳ 17 ಹಳ್ಳಿಗಳನ್ನು ಸ್ಥಳಾಂತರಿಸಬೇಕಾಗುತ್ತದೆ” ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದ್ದರು.

ಅಪರಾಧ ಹಿನ್ನೆಲೆಯುಳ್ಳ ಲ್ಯಾಂಡ್‌ ಏಜೆಂಟ್ ಕುರಿತು ಫೆಬ್ರವರಿ 6ರಂದು ಮಹಾರಾಷ್ಟ್ರ ರತ್ನಗಿರಿ ಮೂಲದ ಸ್ಥಳೀಯ ದೈನಿಕವು ಮೊದಲ ಪುಟದ ವರದಿಯನ್ನು ಪ್ರಕಟಿಸಿದ ಕೆಲವೇ ಗಂಟೆಗಳ ಬಳಿಕ, ವರದಿ ಬರೆದ ಪತ್ರಕರ್ತರಾದ ವಾರಿಷೆಯವರನ್ನು ಕೊಲ್ಲಲಾಯಿತು. ಕಾರನ್ನು ಅವರ ಮೇಲೆ ಹತ್ತಿಸಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

‘ಮಹಾನಗರಿ ಟೈಮ್ಸ್’ ಪತ್ರಿಕೆಯ ಪ್ರಾದೇಶಿಕ ಮುಖ್ಯಸ್ಥ 48 ವರ್ಷದ ಶಶಿಕಾಂತ್ ವಾರಿಷೆ ಅವರು ಸ್ಥಳೀಯ ಪ್ರಭಾವಿ ವ್ಯಕ್ತಿಯಾದ ಪಂಢರಿನಾಥ್ ಅಂಬರ್ಕರ್ ಅವರ ಬಗ್ಗೆ ವರದಿಯನ್ನು ಬರೆದಿದ್ದರು.

“ರಿಫೈನರಿ ಪರ ಏಜೆಂಟ್ ಆಗಿರುವ ವ್ಯಕ್ತಿಯು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಜೊತೆಯಲ್ಲಿ ತನ್ನ ಫೋಟೋಗಳನ್ನು ಏಕೆ ಹಂಚಿಕೊಳ್ಳುತ್ತಿದ್ದಾನೆ?” ಎಂದು ವರದಿಯಲ್ಲಿ ಗಮನ ಸೆಳೆಯಲಾಗಿತ್ತು.

ಕೊಂಕಣಕ್ಕೆ ಸಂಸ್ಕರಣಾಗಾರ ಯೋಜನೆಯನ್ನು ತಂದಿದ್ದಕ್ಕಾಗಿ ಪ್ರಧಾನಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರಿಗೆ ಧನ್ಯವಾದ ಸಲ್ಲಿಸಿ ಲ್ಯಾಂಡ್ ಏಜೆಂಟ್ ತನ್ನ ಫೋಟೋಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಿದ್ದನು.

ಸುದ್ದಿಯು ವಾರಿಷೆ ಅವರ ಬೈಲೈನ್ ಹೊಂದಿರಲಿಲ್ಲ. ಆದರೆ ಇದನ್ನು ಬರೆದವರು ಯಾರೆಂಬುದು ಅಂಬರ್ಕರ್‌ಗೆ ಚೆನ್ನಾಗಿ ಗೊತ್ತಿತ್ತು ಎಂದು ವಾರಿಷೆ ಸಹೋದ್ಯೋಗಿಗಳು ಹೇಳಿದ್ದರು.

ವರದಿ ಪ್ರಕಟವಾದ ದಿನ ಅಂದು ಮಧ್ಯಾಹ್ನ 1.30ರ ಸುಮಾರಿಗೆ ವಾರಿಷೆಯವರ ಮೇಲೆ ದಾಳಿ ಮಾಡಲಾಯಿತು. ರತ್ನಗಿರಿಯ ಮುನ್ಸಿಪಲ್ ಕೌನ್ಸಿಲ್ ರಾಜಾಪುರದ ಪೆಟ್ರೋಲ್ ಪಂಪ್‌ನ ಹೊರಗೆ ಈ ಘಟನೆ ನಡೆಯಿತು. ವಾರಿಷೆ ತನ್ನ ದ್ವಿಚಕ್ರ ವಾಹನಕ್ಕೆ ಪೆಟ್ರೊಲ್ ಹಾಕಿಸಲು ನಿಂತಿದ್ದಾಗ ಅಂಬರ್ಕರ್ ತನ್ನ ಮಹೀಂದ್ರ ಥಾರ್ ಎಸ್‌ಯುವಿಯನ್ನು ವಾರಿಷೆ ಮೇಲೆ ಹತ್ತಿಸಿ ಸುಮಾರು 100 ಮೀಟರ್ ಎಳೆದೊಯ್ದಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ವಾರಿಷೆಯವರನ್ನು, ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗಾಯಗೊಂಡು ಒಂದು ದಿನದ ನಂತರ ಫೆಬ್ರವರಿ 7 ರಂದು ಅವರು ನಿಧನರಾದರು.

ಸ್ಥಳದಿಂದ ಪರಾರಿಯಾಗಿದ್ದ ಅಂಬರ್ಕರ್‌ನನ್ನು ಫೆ.7ರ ಸಂಜೆ ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

“ನಾವು ಆರಂಭದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಕೊಲೆಗೆ ಸಮನಾಗಿರುವುದಿಲ್ಲ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಆದರೆ ವಾರಿಷೆಯವರನ್ನು ಕೊಲ್ಲುವ ಉದ್ದೇಶವಿದ್ದದ್ದು ಸಾಕ್ಷ್ಯಗಳಿಂದ ಕಂಡುಬಂದ ಬಳಿಕ ಐಪಿಸಿಯ ಸೆಕ್ಷನ್ 302 (ಕೊಲೆ) ಅಡಿಯಲ್ಲೂ ಆರೋಪ ಹೊರಿಸಲಾಗಿದೆ. ಅಂಬರ್ಕರ್‌ ಕೊಲ್ಲುವ ಉದ್ದೇಶದಿಂದಲೇ ಬಂದಿದ್ದನು ಎಂದು ಪ್ರಾಥಮಿಕ ಸಾಕ್ಷ್ಯಗಳು ತಿಳಿಸುತ್ತಿವೆ. ಅಂಬರ್ಕರ್‌ನನ್ನು ಫೆಬ್ರವರಿ 14ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ” ಎಂದು ರತ್ನಗಿರಿ ಪೊಲೀಸ್ ವರಿಷ್ಠಾಧಿಕಾರಿ ಧನಂಜಯ್ ಕುಲಕರ್ಣಿ ಮಾಹಿತಿ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...