Homeಕರ್ನಾಟಕಪತ್ರಕರ್ತ ವಾರಿಷೆ ಹತ್ಯೆ ತನಿಖೆಗೆ ಎಸ್‌ಐಟಿ ರಚಿಸಲಾಗುವುದು: ಮಹಾರಾಷ್ಟ್ರ ಡಿಸಿಎಂ

ಪತ್ರಕರ್ತ ವಾರಿಷೆ ಹತ್ಯೆ ತನಿಖೆಗೆ ಎಸ್‌ಐಟಿ ರಚಿಸಲಾಗುವುದು: ಮಹಾರಾಷ್ಟ್ರ ಡಿಸಿಎಂ

- Advertisement -
- Advertisement -

ಪತ್ರಕರ್ತ ಶಶಿಕಾಂತ್ ವಾರಿಷೆ ಅವರ ಹತ್ಯೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವನ್ನು ರಚಿಸಲಾಗುವುದು ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶನಿವಾರ ಹೇಳಿದ್ದಾರೆ.

ರತ್ನಗಿರಿ ಜಿಲ್ಲೆಯ ಕೊಡವಲಿ ಗ್ರಾಮದಲ್ಲಿ ಪಂಢರಿನಾಥ್ ಅಂಬೇರ್ಕರ್ ಎಂಬ ಭೂ ಡೀಲರ್ ತನ್ನ ಎಸ್‌ಯುವಿಯನ್ನು ವಾರಿಷೆಯವರ ಮೇಲೆ ಹತ್ತಿಸಿ ಕೊಲೆ ಮಾಡಿದ್ದನು

ಹಲವಾರು ಮಾಧ್ಯಮ ಸಂಸ್ಥೆಗಳು ವಾರಿಷೆ ಅವರ ಸಾವಿನ ತನಿಖೆಗೆ ಒತ್ತಾಯಿಸಿದ್ದವು. ಹತ್ಯೆಯಾಗಿರುವ ವಾರಿಷೆಯವರು ಇತ್ತೀಚೆಗೆ ಅಂಬರ್ಕರ್ ವಿರುದ್ಧ ಲೇಖನ ಬರೆದಿದ್ದರು.

ಶನಿವಾರ ಫಡ್ನವೀಸ್ ಅವರ ಕಚೇರಿಯಿಂದ ಬಿಡುಗಡೆಯಾದ ಹೇಳಿಕೆಯಲ್ಲಿ, “ವಿಶೇಷ ತನಿಖಾ ತಂಡವನ್ನು ರಚಿಸುವಂತೆ ರಾಜ್ಯದ ಪೊಲೀಸ್ ಆಡಳಿತಕ್ಕೆ ಸೂಚಿಸಲಾಗಿದೆ” ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ವಿಶೇಷ ತನಿಖಾ ತಂಡವು ಉನ್ನತ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿರುತ್ತದೆ ಎಂದು ಅದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಗೃಹ ಇಲಾಖೆಯ ಖಾತೆಯನ್ನು ಹೊಂದಿರುವ ಫಡ್ನವಿಸ್ ಅವರಿಗೆ ಪತ್ರ ಬರೆದಿದ್ದ ಶಿವಸೇನಾ ಸಂಸದ ಸಂಜಯ್ ರಾವತ್, ತನಿಖೆಗೆ ಒತ್ತಾಯಿಸಿದ್ದರು.

“ತೈಲ ಸಂಸ್ಕರಣಾಗಾರದ ಹೆಸರಿನಲ್ಲಿ ನಾನಾರ್ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಂದ ಸ್ವಾಧೀನಪಡಿಸಿಕೊಂಡಿರುವ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಭೂ ವಹಿವಾಟುಗಳನ್ನು ಶಶಿಕಾಂತ್ ವಾರಿಷೆ ಬಹಿರಂಗಪಡಿಸಿದ್ದರು. ಇದರಿಂದಾಗಿ ಭೂ ವ್ಯವಹಾರದಲ್ಲಿ ತೊಡಗಿರುವವರು ಅಸಮಾಧಾನಗೊಂಡಿದ್ದರು” ಎಂದು ರಾವತ್‌ ಆರೋಪಿಸಿದ್ದರು.

ಮೂಲತಃ ರತ್ನಗಿರಿಯ ನಾನಾರ್ ಗ್ರಾಮದಲ್ಲಿ ಯೋಜಿಸಲಾಗಿದ್ದ ರತ್ನಗಿರಿ ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಯೋಜನೆಯನ್ನು ಶಿವಸೇನೆ ವಿರೋಧಿಸಿತ್ತು. “ಈ ಯೋಜನೆಯು ದೊಡ್ಡ ಪ್ರಮಾಣದ ಪರಿಸರ ಮಾಲಿನ್ಯವನ್ನು ಉಂಟುಮಾಡುತ್ತದೆ; ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳ 17 ಹಳ್ಳಿಗಳನ್ನು ಸ್ಥಳಾಂತರಿಸಬೇಕಾಗುತ್ತದೆ” ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದ್ದರು.

ಅಪರಾಧ ಹಿನ್ನೆಲೆಯುಳ್ಳ ಲ್ಯಾಂಡ್‌ ಏಜೆಂಟ್ ಕುರಿತು ಫೆಬ್ರವರಿ 6ರಂದು ಮಹಾರಾಷ್ಟ್ರ ರತ್ನಗಿರಿ ಮೂಲದ ಸ್ಥಳೀಯ ದೈನಿಕವು ಮೊದಲ ಪುಟದ ವರದಿಯನ್ನು ಪ್ರಕಟಿಸಿದ ಕೆಲವೇ ಗಂಟೆಗಳ ಬಳಿಕ, ವರದಿ ಬರೆದ ಪತ್ರಕರ್ತರಾದ ವಾರಿಷೆಯವರನ್ನು ಕೊಲ್ಲಲಾಯಿತು. ಕಾರನ್ನು ಅವರ ಮೇಲೆ ಹತ್ತಿಸಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

‘ಮಹಾನಗರಿ ಟೈಮ್ಸ್’ ಪತ್ರಿಕೆಯ ಪ್ರಾದೇಶಿಕ ಮುಖ್ಯಸ್ಥ 48 ವರ್ಷದ ಶಶಿಕಾಂತ್ ವಾರಿಷೆ ಅವರು ಸ್ಥಳೀಯ ಪ್ರಭಾವಿ ವ್ಯಕ್ತಿಯಾದ ಪಂಢರಿನಾಥ್ ಅಂಬರ್ಕರ್ ಅವರ ಬಗ್ಗೆ ವರದಿಯನ್ನು ಬರೆದಿದ್ದರು.

“ರಿಫೈನರಿ ಪರ ಏಜೆಂಟ್ ಆಗಿರುವ ವ್ಯಕ್ತಿಯು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಜೊತೆಯಲ್ಲಿ ತನ್ನ ಫೋಟೋಗಳನ್ನು ಏಕೆ ಹಂಚಿಕೊಳ್ಳುತ್ತಿದ್ದಾನೆ?” ಎಂದು ವರದಿಯಲ್ಲಿ ಗಮನ ಸೆಳೆಯಲಾಗಿತ್ತು.

ಕೊಂಕಣಕ್ಕೆ ಸಂಸ್ಕರಣಾಗಾರ ಯೋಜನೆಯನ್ನು ತಂದಿದ್ದಕ್ಕಾಗಿ ಪ್ರಧಾನಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರಿಗೆ ಧನ್ಯವಾದ ಸಲ್ಲಿಸಿ ಲ್ಯಾಂಡ್ ಏಜೆಂಟ್ ತನ್ನ ಫೋಟೋಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಿದ್ದನು.

ಸುದ್ದಿಯು ವಾರಿಷೆ ಅವರ ಬೈಲೈನ್ ಹೊಂದಿರಲಿಲ್ಲ. ಆದರೆ ಇದನ್ನು ಬರೆದವರು ಯಾರೆಂಬುದು ಅಂಬರ್ಕರ್‌ಗೆ ಚೆನ್ನಾಗಿ ಗೊತ್ತಿತ್ತು ಎಂದು ವಾರಿಷೆ ಸಹೋದ್ಯೋಗಿಗಳು ಹೇಳಿದ್ದರು.

ವರದಿ ಪ್ರಕಟವಾದ ದಿನ ಅಂದು ಮಧ್ಯಾಹ್ನ 1.30ರ ಸುಮಾರಿಗೆ ವಾರಿಷೆಯವರ ಮೇಲೆ ದಾಳಿ ಮಾಡಲಾಯಿತು. ರತ್ನಗಿರಿಯ ಮುನ್ಸಿಪಲ್ ಕೌನ್ಸಿಲ್ ರಾಜಾಪುರದ ಪೆಟ್ರೋಲ್ ಪಂಪ್‌ನ ಹೊರಗೆ ಈ ಘಟನೆ ನಡೆಯಿತು. ವಾರಿಷೆ ತನ್ನ ದ್ವಿಚಕ್ರ ವಾಹನಕ್ಕೆ ಪೆಟ್ರೊಲ್ ಹಾಕಿಸಲು ನಿಂತಿದ್ದಾಗ ಅಂಬರ್ಕರ್ ತನ್ನ ಮಹೀಂದ್ರ ಥಾರ್ ಎಸ್‌ಯುವಿಯನ್ನು ವಾರಿಷೆ ಮೇಲೆ ಹತ್ತಿಸಿ ಸುಮಾರು 100 ಮೀಟರ್ ಎಳೆದೊಯ್ದಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ವಾರಿಷೆಯವರನ್ನು, ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗಾಯಗೊಂಡು ಒಂದು ದಿನದ ನಂತರ ಫೆಬ್ರವರಿ 7 ರಂದು ಅವರು ನಿಧನರಾದರು.

ಸ್ಥಳದಿಂದ ಪರಾರಿಯಾಗಿದ್ದ ಅಂಬರ್ಕರ್‌ನನ್ನು ಫೆ.7ರ ಸಂಜೆ ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

“ನಾವು ಆರಂಭದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಕೊಲೆಗೆ ಸಮನಾಗಿರುವುದಿಲ್ಲ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಆದರೆ ವಾರಿಷೆಯವರನ್ನು ಕೊಲ್ಲುವ ಉದ್ದೇಶವಿದ್ದದ್ದು ಸಾಕ್ಷ್ಯಗಳಿಂದ ಕಂಡುಬಂದ ಬಳಿಕ ಐಪಿಸಿಯ ಸೆಕ್ಷನ್ 302 (ಕೊಲೆ) ಅಡಿಯಲ್ಲೂ ಆರೋಪ ಹೊರಿಸಲಾಗಿದೆ. ಅಂಬರ್ಕರ್‌ ಕೊಲ್ಲುವ ಉದ್ದೇಶದಿಂದಲೇ ಬಂದಿದ್ದನು ಎಂದು ಪ್ರಾಥಮಿಕ ಸಾಕ್ಷ್ಯಗಳು ತಿಳಿಸುತ್ತಿವೆ. ಅಂಬರ್ಕರ್‌ನನ್ನು ಫೆಬ್ರವರಿ 14ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ” ಎಂದು ರತ್ನಗಿರಿ ಪೊಲೀಸ್ ವರಿಷ್ಠಾಧಿಕಾರಿ ಧನಂಜಯ್ ಕುಲಕರ್ಣಿ ಮಾಹಿತಿ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...