Homeಕರ್ನಾಟಕತಿಮರೋಡಿ ಮನೆಗೆ ಎಸ್‌ಐಟಿ ಭೇಟಿ: ಗೃಹ ಸಚಿವರು ಹೇಳಿದ್ದೇನು?

ತಿಮರೋಡಿ ಮನೆಗೆ ಎಸ್‌ಐಟಿ ಭೇಟಿ: ಗೃಹ ಸಚಿವರು ಹೇಳಿದ್ದೇನು?

- Advertisement -
- Advertisement -

“ಧರ್ಮಸ್ಥಳ ಪ್ರಕರಣದ ಎಸ್‌ಐಟಿ ಯಾರ ಮನೆಗೆ ಭೇಟಿ ನೀಡಬೇಕು, ಯಾರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ನಾವು ಹೇಳಲು ಸಾಧ್ಯವಿಲ್ಲ. ತನಗೆ ಸಿಕ್ಕ ಮಾಹಿತಿ ಆಧರಿಸಿ ಅದು ತನಿಖೆ ನಡೆಸುತ್ತದೆ, ಎಲ್ಲಿ ಪರಿಶೀಲನೆ ಮಾಡಬೇಕೋ ಮಾಡುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.

ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಎಸ್‌ಐಟಿ ತಂಡ ಭೇಟಿ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, “ಎಸ್‌ಐಟಿ ಏನು ಮಾಡುತ್ತಿದೆ, ಯಾವ ರೀತಿ ತನಿಖೆ ನಡೆಸುತ್ತಿದೆ ಎಂದು ಸರ್ಕಾರ ಪ್ರತಿನಿತ್ಯ ಗಮನಿಸುವುದಿಲ್ಲ. ಅದು ತನ್ನ ಪರಿಮಿತಿಯಲ್ಲಿ ಏನೆಲ್ಲ ಮಾಡಬೇಕೋ ಅದನ್ನು ಮಾಡುತ್ತದೆ” ಎಂದರು.

ಧರ್ಮಸ್ಥಳ ಪ್ರಕರಣದ ತನಿಖೆ ಬಹಳ ಗಂಭೀರವಾಗಿ ನಡೆಯುತ್ತಿದೆ. ಕೋಟ್ಯಾಂತರ ಭಕ್ತಾದಿಗಳು ಧರ್ಮಸ್ಥಳದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಸತ್ಯ ಹೊರಗಡೆ ಬರಲಿ ಎಂದು ಕಾಯುತ್ತಿದ್ದಾರೆ. ಹಾಗಾಗಿ, ಎಸ್‌ಐಟಿಗೆ ಜವಾಬ್ದಾರಿ ಹೆಚ್ಚಿದೆ ಎಂದು ಹೇಳಿದರು.

“ದೂರುದಾರ ಚಿನ್ನಯ್ಯ ಅವರ ಬಂಧನ ಆಗಿರುವುದರಿಂದ ಅವರ ಹೇಳಿಕೆಯಿಂದ ಉಂಟಾಗುವ ಪರಿಣಾಮಗಳನ್ನು ಎಸ್‌ಐಟಿ ಗಂಭೀರವಾಗಿ ಪರಿಗಣಿಸಿದೆ. ನಾವೂ ಪರಿಗಣಿಸಿದ್ದೇವೆ. ಈ ಪ್ರಕರಣ ಆದಷ್ಟು ಬೇಗ ಇತ್ಯರ್ಥವಾದರೆ ಒಳ್ಳೆಯದು ಎನ್ನುವುದು ಸರ್ಕಾರದ ಭಾವನೆ. ಹಾಗಾಗಿ, ಪ್ರಕರಣದ ತನಿಖೆಯನ್ನು ತ್ವರಿತವಾಗಿ ಮುಗಿಸಲು ಎಸ್‌ಐಟಿ ಕೂಡ ಪ್ರಯತ್ನ ಮಾಡುತ್ತಿದೆ” ಎಂದು ತಿಳಿಸಿದರು.

ಧರ್ಮಸ್ಥಳ ಪ್ರಕರಣದ ಸಂಬಂಧ ಸರ್ಕಾರ ಕ್ಷಮೆಯಾಚಿಸಬೇಕು, ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡಬೇಕು ಎಂದು ಶೋಭಾ ಕರಂದ್ಲಾಜೆ, ಪ್ರಲ್ಹಾದ್ ಜೋಶಿ ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, “ಈ ಪ್ರಕರಣವನ್ನು ಎನ್‌ಐಎಗೆ ಕೊಡುವ ಅಗತ್ಯ ಇಲ್ಲ ಎಂದು ನಾನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಎಸ್‌ಐಟಿಯವರು ಸಮರ್ಪಕವಾಗಿ ತನಿಖೆ ಮಾಡುತ್ತಿದ್ದಾರೆ. ಎಸ್‌ಐಟಿ ತನಿಖೆಯಲ್ಲಿ ಏನಾದರು ಲೋಪ ಕಂಡು ಬಂದರೆ ಅದು ಬೇರೆ ವಿಚಾರ. ಎಸ್‌ಐಟಿ ತನಿಖೆ ಪೂರ್ಣಗೊಳಿಸಿ ವರದಿ ಕೊಡುವವರೆಗೆ ನಾನು ಏನೂ ಹೇಳಲು ಸಾಧ್ಯವಿಲ್ಲ” ಎಂದು ಹೇಳಿದರು.

“ಎಸ್‌ಐಟಿ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎನ್ನಲು ನಮಗೆ ಏನಾದರು ಆಧಾರ ಬೇಕು. ಸದ್ಯಕ್ಕೆ ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡುವ ಅಗತ್ಯವಿಲ್ಲ. ಎಸ್‌ಐಟಿ ಅಂತಿಮ ವರದಿ ಕೊಡಲಿ. ಆ ಬಳಿಕ ಸಾಮಾನ್ಯವಾಗಿ ಪರ-ವಿರೋಧ ಚರ್ಚೆಯಾಗುತ್ತದೆ. ಆನಂತರ ಸರ್ಕಾರದ ಮಟ್ಟದಲ್ಲಿ ಏನು ತೀರ್ಮಾನ ಮಾಡಬೇಕೋ ನಾವು ಮಾಡುತ್ತೇವೆ” ಎಂದರು.

“ಆರೋಪಗಳನ್ನು ಮಾಡುವುದು ಸುಲಭ. ಅದನ್ನು ರುಜುವಾತು ಮಾಡೋದು ಕಷ್ಟ. ಯಾವ ಆಧಾರದ ಮೇಲೆ ಸರ್ಕಾರ ಈ ಪ್ರಕರಣದಲ್ಲಿ ತಪ್ಪಿತಸ್ಥ ಎನ್ನಲು ಸಾಧ್ಯ. ನಾವು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಎಸ್‌ಐಟಿ ರಚಿಸಿರುವುದೇ ತಪ್ಪು ಎಂದರೆ ಅದು ವಿರ್ಪಯಾಸ ಎನ್ನಬೇಕಷ್ಟೆ” ಎಂದು ಹೇಳಿದರು.

ಧರ್ಮಸ್ಥಳದಲ್ಲಿ ಧರ್ಮ ಸಂರಕ್ಷಣಾ ಸಮಾವೇಶ ಆಯೋಜನೆ ಬಗ್ಗೆ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, “ಅದು ಅವರಿಗೆ ಬಿಟ್ಟ ವಿಚಾರ, ಅವರು ಏನು ಬೇಕಾದರು ಮಾಡಲಿ” ಎಂದರು.

“ತನಿಖೆ ತ್ವರಿತವಾಗಿ ಆಗಬೇಕು. ಹಾಗಂತ, ಮಾಡಬೇಕಾದ ಕಾರ್ಯವನ್ನು ಮಾಡದಿರಲು ಸಾಧ್ಯವಿಲ್ಲ. ತನಿಖೆಯಲ್ಲಿ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತಿದೆ. ಒಂದು ಕೆಮಿಕಲ್ ಅನಾಲಿಸಿಸ್ ಮಾಡಲು ಒಂದು ಕ್ರಮ ಇದೆ. ಅದನ್ನು ಬೇಗ ಮಾಡಿ ಅಂದರೆ ಆಗುವುದಿಲ್ಲ. ಎಲ್ಲಾ ಪ್ರಕ್ರಿಯೆಗಳು ಅನುಸರಿಸಬೇಕಿದೆ. ಹಾಗಾಗಿ, ಎಸ್‌ಐಟಿ ಅಗತ್ಯ ಎಲ್ಲಾ ಪ್ರಕ್ರಿಯೆಗಳನ್ನು ಮಾಡಿ, ಆದಷ್ಟು ಬೇಗ ವರದಿ ಕೊಡಲಿ ಎನ್ನುವುದು ನಮ್ಮ ಆಶಯ” ಎಂದು ಹೇಳಿದರು.

“ನಮ್ಮ ಉದ್ದೇಶ ಸತ್ಯವನ್ನು ಹೊರಗಡೆ ತರುವುದು. ನಾವು ಆ ಕೆಲಸ ಮಾಡುತ್ತಿದ್ದೇವೆ. ಅದಕ್ಕಾಗಿಯೇ ಎಸ್‌ಐಟಿ ಮಾಡಿರುವುದು. ಅದನ್ನೇ ಸರಿ ಇಲ್ಲ ಎನ್ನುವುದು ಸರಿಯಲ್ಲ” ಎಂದು ಗೃಹ ಸಚಿವರು ತಿಳಿಸಿದರು.

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...