Homeಕರ್ನಾಟಕತಿಮರೋಡಿ ಮನೆಗೆ ಎಸ್‌ಐಟಿ ಭೇಟಿ: ಗೃಹ ಸಚಿವರು ಹೇಳಿದ್ದೇನು?

ತಿಮರೋಡಿ ಮನೆಗೆ ಎಸ್‌ಐಟಿ ಭೇಟಿ: ಗೃಹ ಸಚಿವರು ಹೇಳಿದ್ದೇನು?

- Advertisement -
- Advertisement -

“ಧರ್ಮಸ್ಥಳ ಪ್ರಕರಣದ ಎಸ್‌ಐಟಿ ಯಾರ ಮನೆಗೆ ಭೇಟಿ ನೀಡಬೇಕು, ಯಾರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ನಾವು ಹೇಳಲು ಸಾಧ್ಯವಿಲ್ಲ. ತನಗೆ ಸಿಕ್ಕ ಮಾಹಿತಿ ಆಧರಿಸಿ ಅದು ತನಿಖೆ ನಡೆಸುತ್ತದೆ, ಎಲ್ಲಿ ಪರಿಶೀಲನೆ ಮಾಡಬೇಕೋ ಮಾಡುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.

ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಎಸ್‌ಐಟಿ ತಂಡ ಭೇಟಿ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, “ಎಸ್‌ಐಟಿ ಏನು ಮಾಡುತ್ತಿದೆ, ಯಾವ ರೀತಿ ತನಿಖೆ ನಡೆಸುತ್ತಿದೆ ಎಂದು ಸರ್ಕಾರ ಪ್ರತಿನಿತ್ಯ ಗಮನಿಸುವುದಿಲ್ಲ. ಅದು ತನ್ನ ಪರಿಮಿತಿಯಲ್ಲಿ ಏನೆಲ್ಲ ಮಾಡಬೇಕೋ ಅದನ್ನು ಮಾಡುತ್ತದೆ” ಎಂದರು.

ಧರ್ಮಸ್ಥಳ ಪ್ರಕರಣದ ತನಿಖೆ ಬಹಳ ಗಂಭೀರವಾಗಿ ನಡೆಯುತ್ತಿದೆ. ಕೋಟ್ಯಾಂತರ ಭಕ್ತಾದಿಗಳು ಧರ್ಮಸ್ಥಳದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಸತ್ಯ ಹೊರಗಡೆ ಬರಲಿ ಎಂದು ಕಾಯುತ್ತಿದ್ದಾರೆ. ಹಾಗಾಗಿ, ಎಸ್‌ಐಟಿಗೆ ಜವಾಬ್ದಾರಿ ಹೆಚ್ಚಿದೆ ಎಂದು ಹೇಳಿದರು.

“ದೂರುದಾರ ಚಿನ್ನಯ್ಯ ಅವರ ಬಂಧನ ಆಗಿರುವುದರಿಂದ ಅವರ ಹೇಳಿಕೆಯಿಂದ ಉಂಟಾಗುವ ಪರಿಣಾಮಗಳನ್ನು ಎಸ್‌ಐಟಿ ಗಂಭೀರವಾಗಿ ಪರಿಗಣಿಸಿದೆ. ನಾವೂ ಪರಿಗಣಿಸಿದ್ದೇವೆ. ಈ ಪ್ರಕರಣ ಆದಷ್ಟು ಬೇಗ ಇತ್ಯರ್ಥವಾದರೆ ಒಳ್ಳೆಯದು ಎನ್ನುವುದು ಸರ್ಕಾರದ ಭಾವನೆ. ಹಾಗಾಗಿ, ಪ್ರಕರಣದ ತನಿಖೆಯನ್ನು ತ್ವರಿತವಾಗಿ ಮುಗಿಸಲು ಎಸ್‌ಐಟಿ ಕೂಡ ಪ್ರಯತ್ನ ಮಾಡುತ್ತಿದೆ” ಎಂದು ತಿಳಿಸಿದರು.

ಧರ್ಮಸ್ಥಳ ಪ್ರಕರಣದ ಸಂಬಂಧ ಸರ್ಕಾರ ಕ್ಷಮೆಯಾಚಿಸಬೇಕು, ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡಬೇಕು ಎಂದು ಶೋಭಾ ಕರಂದ್ಲಾಜೆ, ಪ್ರಲ್ಹಾದ್ ಜೋಶಿ ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, “ಈ ಪ್ರಕರಣವನ್ನು ಎನ್‌ಐಎಗೆ ಕೊಡುವ ಅಗತ್ಯ ಇಲ್ಲ ಎಂದು ನಾನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಎಸ್‌ಐಟಿಯವರು ಸಮರ್ಪಕವಾಗಿ ತನಿಖೆ ಮಾಡುತ್ತಿದ್ದಾರೆ. ಎಸ್‌ಐಟಿ ತನಿಖೆಯಲ್ಲಿ ಏನಾದರು ಲೋಪ ಕಂಡು ಬಂದರೆ ಅದು ಬೇರೆ ವಿಚಾರ. ಎಸ್‌ಐಟಿ ತನಿಖೆ ಪೂರ್ಣಗೊಳಿಸಿ ವರದಿ ಕೊಡುವವರೆಗೆ ನಾನು ಏನೂ ಹೇಳಲು ಸಾಧ್ಯವಿಲ್ಲ” ಎಂದು ಹೇಳಿದರು.

“ಎಸ್‌ಐಟಿ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎನ್ನಲು ನಮಗೆ ಏನಾದರು ಆಧಾರ ಬೇಕು. ಸದ್ಯಕ್ಕೆ ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡುವ ಅಗತ್ಯವಿಲ್ಲ. ಎಸ್‌ಐಟಿ ಅಂತಿಮ ವರದಿ ಕೊಡಲಿ. ಆ ಬಳಿಕ ಸಾಮಾನ್ಯವಾಗಿ ಪರ-ವಿರೋಧ ಚರ್ಚೆಯಾಗುತ್ತದೆ. ಆನಂತರ ಸರ್ಕಾರದ ಮಟ್ಟದಲ್ಲಿ ಏನು ತೀರ್ಮಾನ ಮಾಡಬೇಕೋ ನಾವು ಮಾಡುತ್ತೇವೆ” ಎಂದರು.

“ಆರೋಪಗಳನ್ನು ಮಾಡುವುದು ಸುಲಭ. ಅದನ್ನು ರುಜುವಾತು ಮಾಡೋದು ಕಷ್ಟ. ಯಾವ ಆಧಾರದ ಮೇಲೆ ಸರ್ಕಾರ ಈ ಪ್ರಕರಣದಲ್ಲಿ ತಪ್ಪಿತಸ್ಥ ಎನ್ನಲು ಸಾಧ್ಯ. ನಾವು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಎಸ್‌ಐಟಿ ರಚಿಸಿರುವುದೇ ತಪ್ಪು ಎಂದರೆ ಅದು ವಿರ್ಪಯಾಸ ಎನ್ನಬೇಕಷ್ಟೆ” ಎಂದು ಹೇಳಿದರು.

ಧರ್ಮಸ್ಥಳದಲ್ಲಿ ಧರ್ಮ ಸಂರಕ್ಷಣಾ ಸಮಾವೇಶ ಆಯೋಜನೆ ಬಗ್ಗೆ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, “ಅದು ಅವರಿಗೆ ಬಿಟ್ಟ ವಿಚಾರ, ಅವರು ಏನು ಬೇಕಾದರು ಮಾಡಲಿ” ಎಂದರು.

“ತನಿಖೆ ತ್ವರಿತವಾಗಿ ಆಗಬೇಕು. ಹಾಗಂತ, ಮಾಡಬೇಕಾದ ಕಾರ್ಯವನ್ನು ಮಾಡದಿರಲು ಸಾಧ್ಯವಿಲ್ಲ. ತನಿಖೆಯಲ್ಲಿ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತಿದೆ. ಒಂದು ಕೆಮಿಕಲ್ ಅನಾಲಿಸಿಸ್ ಮಾಡಲು ಒಂದು ಕ್ರಮ ಇದೆ. ಅದನ್ನು ಬೇಗ ಮಾಡಿ ಅಂದರೆ ಆಗುವುದಿಲ್ಲ. ಎಲ್ಲಾ ಪ್ರಕ್ರಿಯೆಗಳು ಅನುಸರಿಸಬೇಕಿದೆ. ಹಾಗಾಗಿ, ಎಸ್‌ಐಟಿ ಅಗತ್ಯ ಎಲ್ಲಾ ಪ್ರಕ್ರಿಯೆಗಳನ್ನು ಮಾಡಿ, ಆದಷ್ಟು ಬೇಗ ವರದಿ ಕೊಡಲಿ ಎನ್ನುವುದು ನಮ್ಮ ಆಶಯ” ಎಂದು ಹೇಳಿದರು.

“ನಮ್ಮ ಉದ್ದೇಶ ಸತ್ಯವನ್ನು ಹೊರಗಡೆ ತರುವುದು. ನಾವು ಆ ಕೆಲಸ ಮಾಡುತ್ತಿದ್ದೇವೆ. ಅದಕ್ಕಾಗಿಯೇ ಎಸ್‌ಐಟಿ ಮಾಡಿರುವುದು. ಅದನ್ನೇ ಸರಿ ಇಲ್ಲ ಎನ್ನುವುದು ಸರಿಯಲ್ಲ” ಎಂದು ಗೃಹ ಸಚಿವರು ತಿಳಿಸಿದರು.

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...