Homeಕರ್ನಾಟಕತಿಮರೋಡಿ ಮನೆಗೆ ಎಸ್‌ಐಟಿ ಭೇಟಿ: ಗೃಹ ಸಚಿವರು ಹೇಳಿದ್ದೇನು?

ತಿಮರೋಡಿ ಮನೆಗೆ ಎಸ್‌ಐಟಿ ಭೇಟಿ: ಗೃಹ ಸಚಿವರು ಹೇಳಿದ್ದೇನು?

- Advertisement -
- Advertisement -

“ಧರ್ಮಸ್ಥಳ ಪ್ರಕರಣದ ಎಸ್‌ಐಟಿ ಯಾರ ಮನೆಗೆ ಭೇಟಿ ನೀಡಬೇಕು, ಯಾರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ನಾವು ಹೇಳಲು ಸಾಧ್ಯವಿಲ್ಲ. ತನಗೆ ಸಿಕ್ಕ ಮಾಹಿತಿ ಆಧರಿಸಿ ಅದು ತನಿಖೆ ನಡೆಸುತ್ತದೆ, ಎಲ್ಲಿ ಪರಿಶೀಲನೆ ಮಾಡಬೇಕೋ ಮಾಡುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.

ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಎಸ್‌ಐಟಿ ತಂಡ ಭೇಟಿ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, “ಎಸ್‌ಐಟಿ ಏನು ಮಾಡುತ್ತಿದೆ, ಯಾವ ರೀತಿ ತನಿಖೆ ನಡೆಸುತ್ತಿದೆ ಎಂದು ಸರ್ಕಾರ ಪ್ರತಿನಿತ್ಯ ಗಮನಿಸುವುದಿಲ್ಲ. ಅದು ತನ್ನ ಪರಿಮಿತಿಯಲ್ಲಿ ಏನೆಲ್ಲ ಮಾಡಬೇಕೋ ಅದನ್ನು ಮಾಡುತ್ತದೆ” ಎಂದರು.

ಧರ್ಮಸ್ಥಳ ಪ್ರಕರಣದ ತನಿಖೆ ಬಹಳ ಗಂಭೀರವಾಗಿ ನಡೆಯುತ್ತಿದೆ. ಕೋಟ್ಯಾಂತರ ಭಕ್ತಾದಿಗಳು ಧರ್ಮಸ್ಥಳದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಸತ್ಯ ಹೊರಗಡೆ ಬರಲಿ ಎಂದು ಕಾಯುತ್ತಿದ್ದಾರೆ. ಹಾಗಾಗಿ, ಎಸ್‌ಐಟಿಗೆ ಜವಾಬ್ದಾರಿ ಹೆಚ್ಚಿದೆ ಎಂದು ಹೇಳಿದರು.

“ದೂರುದಾರ ಚಿನ್ನಯ್ಯ ಅವರ ಬಂಧನ ಆಗಿರುವುದರಿಂದ ಅವರ ಹೇಳಿಕೆಯಿಂದ ಉಂಟಾಗುವ ಪರಿಣಾಮಗಳನ್ನು ಎಸ್‌ಐಟಿ ಗಂಭೀರವಾಗಿ ಪರಿಗಣಿಸಿದೆ. ನಾವೂ ಪರಿಗಣಿಸಿದ್ದೇವೆ. ಈ ಪ್ರಕರಣ ಆದಷ್ಟು ಬೇಗ ಇತ್ಯರ್ಥವಾದರೆ ಒಳ್ಳೆಯದು ಎನ್ನುವುದು ಸರ್ಕಾರದ ಭಾವನೆ. ಹಾಗಾಗಿ, ಪ್ರಕರಣದ ತನಿಖೆಯನ್ನು ತ್ವರಿತವಾಗಿ ಮುಗಿಸಲು ಎಸ್‌ಐಟಿ ಕೂಡ ಪ್ರಯತ್ನ ಮಾಡುತ್ತಿದೆ” ಎಂದು ತಿಳಿಸಿದರು.

ಧರ್ಮಸ್ಥಳ ಪ್ರಕರಣದ ಸಂಬಂಧ ಸರ್ಕಾರ ಕ್ಷಮೆಯಾಚಿಸಬೇಕು, ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡಬೇಕು ಎಂದು ಶೋಭಾ ಕರಂದ್ಲಾಜೆ, ಪ್ರಲ್ಹಾದ್ ಜೋಶಿ ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, “ಈ ಪ್ರಕರಣವನ್ನು ಎನ್‌ಐಎಗೆ ಕೊಡುವ ಅಗತ್ಯ ಇಲ್ಲ ಎಂದು ನಾನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಎಸ್‌ಐಟಿಯವರು ಸಮರ್ಪಕವಾಗಿ ತನಿಖೆ ಮಾಡುತ್ತಿದ್ದಾರೆ. ಎಸ್‌ಐಟಿ ತನಿಖೆಯಲ್ಲಿ ಏನಾದರು ಲೋಪ ಕಂಡು ಬಂದರೆ ಅದು ಬೇರೆ ವಿಚಾರ. ಎಸ್‌ಐಟಿ ತನಿಖೆ ಪೂರ್ಣಗೊಳಿಸಿ ವರದಿ ಕೊಡುವವರೆಗೆ ನಾನು ಏನೂ ಹೇಳಲು ಸಾಧ್ಯವಿಲ್ಲ” ಎಂದು ಹೇಳಿದರು.

“ಎಸ್‌ಐಟಿ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎನ್ನಲು ನಮಗೆ ಏನಾದರು ಆಧಾರ ಬೇಕು. ಸದ್ಯಕ್ಕೆ ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡುವ ಅಗತ್ಯವಿಲ್ಲ. ಎಸ್‌ಐಟಿ ಅಂತಿಮ ವರದಿ ಕೊಡಲಿ. ಆ ಬಳಿಕ ಸಾಮಾನ್ಯವಾಗಿ ಪರ-ವಿರೋಧ ಚರ್ಚೆಯಾಗುತ್ತದೆ. ಆನಂತರ ಸರ್ಕಾರದ ಮಟ್ಟದಲ್ಲಿ ಏನು ತೀರ್ಮಾನ ಮಾಡಬೇಕೋ ನಾವು ಮಾಡುತ್ತೇವೆ” ಎಂದರು.

“ಆರೋಪಗಳನ್ನು ಮಾಡುವುದು ಸುಲಭ. ಅದನ್ನು ರುಜುವಾತು ಮಾಡೋದು ಕಷ್ಟ. ಯಾವ ಆಧಾರದ ಮೇಲೆ ಸರ್ಕಾರ ಈ ಪ್ರಕರಣದಲ್ಲಿ ತಪ್ಪಿತಸ್ಥ ಎನ್ನಲು ಸಾಧ್ಯ. ನಾವು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಎಸ್‌ಐಟಿ ರಚಿಸಿರುವುದೇ ತಪ್ಪು ಎಂದರೆ ಅದು ವಿರ್ಪಯಾಸ ಎನ್ನಬೇಕಷ್ಟೆ” ಎಂದು ಹೇಳಿದರು.

ಧರ್ಮಸ್ಥಳದಲ್ಲಿ ಧರ್ಮ ಸಂರಕ್ಷಣಾ ಸಮಾವೇಶ ಆಯೋಜನೆ ಬಗ್ಗೆ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, “ಅದು ಅವರಿಗೆ ಬಿಟ್ಟ ವಿಚಾರ, ಅವರು ಏನು ಬೇಕಾದರು ಮಾಡಲಿ” ಎಂದರು.

“ತನಿಖೆ ತ್ವರಿತವಾಗಿ ಆಗಬೇಕು. ಹಾಗಂತ, ಮಾಡಬೇಕಾದ ಕಾರ್ಯವನ್ನು ಮಾಡದಿರಲು ಸಾಧ್ಯವಿಲ್ಲ. ತನಿಖೆಯಲ್ಲಿ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತಿದೆ. ಒಂದು ಕೆಮಿಕಲ್ ಅನಾಲಿಸಿಸ್ ಮಾಡಲು ಒಂದು ಕ್ರಮ ಇದೆ. ಅದನ್ನು ಬೇಗ ಮಾಡಿ ಅಂದರೆ ಆಗುವುದಿಲ್ಲ. ಎಲ್ಲಾ ಪ್ರಕ್ರಿಯೆಗಳು ಅನುಸರಿಸಬೇಕಿದೆ. ಹಾಗಾಗಿ, ಎಸ್‌ಐಟಿ ಅಗತ್ಯ ಎಲ್ಲಾ ಪ್ರಕ್ರಿಯೆಗಳನ್ನು ಮಾಡಿ, ಆದಷ್ಟು ಬೇಗ ವರದಿ ಕೊಡಲಿ ಎನ್ನುವುದು ನಮ್ಮ ಆಶಯ” ಎಂದು ಹೇಳಿದರು.

“ನಮ್ಮ ಉದ್ದೇಶ ಸತ್ಯವನ್ನು ಹೊರಗಡೆ ತರುವುದು. ನಾವು ಆ ಕೆಲಸ ಮಾಡುತ್ತಿದ್ದೇವೆ. ಅದಕ್ಕಾಗಿಯೇ ಎಸ್‌ಐಟಿ ಮಾಡಿರುವುದು. ಅದನ್ನೇ ಸರಿ ಇಲ್ಲ ಎನ್ನುವುದು ಸರಿಯಲ್ಲ” ಎಂದು ಗೃಹ ಸಚಿವರು ತಿಳಿಸಿದರು.

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...