Homeಕರ್ನಾಟಕಧರ್ಮಸ್ಥಳದಲ್ಲಿ ಶವ ಶೋಧ ಮುಂದುವರಿಸಬೇಕೆ ಬೇಡವೇ ಎಂದು ಎಸ್‌ಐಟಿ ತೀರ್ಮಾನಿಸುತ್ತದೆ: ಗೃಹ ಸಚಿವ ಪರಮೇಶ್ವರ್

ಧರ್ಮಸ್ಥಳದಲ್ಲಿ ಶವ ಶೋಧ ಮುಂದುವರಿಸಬೇಕೆ ಬೇಡವೇ ಎಂದು ಎಸ್‌ಐಟಿ ತೀರ್ಮಾನಿಸುತ್ತದೆ: ಗೃಹ ಸಚಿವ ಪರಮೇಶ್ವರ್

- Advertisement -
- Advertisement -

ಧರ್ಮಸ್ಥಳದಲ್ಲಿ ಶವ ಶೋಧ ಮುಂದುವರಿಸಬೇಕೇ ಬೇಡವೇ? ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ತೀರ್ಮಾನಿಸಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.

ಸೋಮವಾರ (ಆ.18) ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಅವರು,”ಇದುವರೆಗೆ ಆಗಿರುವುದು ಶವಗಳ ಶೋಧ ಮಾತ್ರ, ಸರಿಯಾದ ತನಿಖೆ ಇನ್ನೂ ಪ್ರಾರಂಭಗೊಂಡಿಲ್ಲ. ಶವ ಶೋಧ ಮುಕ್ತಾಯಗೊಂಡು, ಈಗ ಸಿಕ್ಕಿರುವ ಅಸ್ತಿಪಂಜರ ಮತ್ತು ಮುಂದೆ ಸಿಕ್ಕರೆ ಅವುಗಳ ಎಫ್‌ಎಸ್‌ಎಲ್‌ ಪರೀಕ್ಷೆ ನಡೆಸಿ ವರದಿ ಬರಬೇಕು. ಆ ಬಳಿಕ ನಿಜವಾದ ತನಿಖೆ ಆರಂಭಗೊಳ್ಳಲಿದೆ ಎಂದರು.

ಇದುವರೆಗೆ ಶೋಧದ ವೇಳೆ ಒಂದು ಕಡೆ ಮಾನವನ ತಲೆ ಬುರುಡೆ, ಮೂಳೆಗಳು ಸಿಕ್ಕಿವೆ. ಮತ್ತೊಂದೆಡೆ ಅಸ್ತಿ ಪಂಜರ ದೊರೆತಿದೆ. ಅವುಗಳನ್ನು ಎಫ್‌ಎಸ್‌ಎಲ್‌ ಪರೀಕ್ಷೆಗೆ ಕಳುಹಿಸಲಾಗಿದೆ. ಅಲ್ಲಿನ ಮಣ್ಣನ್ನೂ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಮಾಡಿರುವ ಸಾಕ್ಷಿ ರಕ್ಷಣಾ ಕಾಯ್ದೆಯಡಿ ದೂರುದಾರನಿಗೆ ಎಸ್‌ಐಟಿ ಎಲ್ಲಾ ರೀತಿಯ ರಕ್ಷಣೆ ಒದಗಿಸಿದೆ. ಪ್ರಧಾನ ಜಿಲ್ಲಾ ಮ್ಯಾಜಿಸ್ಟ್ರೇಟ್ ರಕ್ಷಣೆ ಒದಗಿಸುವ ನಿರ್ದೇಶನ ನೀಡಿದ್ದಾರೆ. ದೂರುದಾರನನ್ನು ಅವರು ‘ವಿ’ ಎಂದು ಗುರುತಿಸಿದ್ದಾರೆ. ಅದರಂತೆ ಎಸ್‌ಐಟಿ ರಕ್ಷಣೆ ನೀಡಿದೆ ಎಂದು ಹೇಳಿದರು.

ಸಾಕ್ಷಿ ರಕ್ಷಣಾ ಕಾಯ್ದೆಯಡಿ ದೂರುದಾರನಿಗೆ ರಕ್ಷಣೆ ನೀಡಿರುವ ಹಿನ್ನೆಲೆ, ಆತನನ್ನು ಬಂಧಿಸಲು ಅಥವಾ ನ್ಯಾಯಾಂಗ ಬಂಧನಕ್ಕೆ ಕಳುಹಿಸಲು ಸಾಧ್ಯವಿಲ್ಲ. ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆ. ಎಸ್‌ಐಟಿ ಅಧಿಕಾರಿಗಳು ಈಗ ಸಿಕ್ಕಿರುವ ಮೂಳೆ, ಅಸ್ತಿ ಪಂಜರವನ್ನು ಎಫ್‌ಎಸ್‌ಎಲ್‌ ಪರೀಕ್ಷೆಗೆ ಕಳುಹಿಸಿ ವರದಿಗಾಗಿ ಕಾಯುತ್ತಿದ್ದಾರೆ. ಅಲ್ಲಿಯವರೆಗೆ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿದೆ. ವರದಿ ಬಂದ ಬಳಿಕ ಮುಂದಕ್ಕೆ ಹೋಗಬೇಕಾ (ಶೋಧ ಮುಂದುವರಿಸಬೇಕಾ) ಎನ್ನುವ ತೀರ್ಮಾನ ಅವರು ಮಾಡುತ್ತಾರೆ ಎಂದು ಪರಮೇಶ್ವರ್ ತಿಳಿಸಿದರು.

ನಾನು ಈಗ ಹೇಳಿರುವುದು ಪ್ರಕರಣದ ವಸ್ತುಸ್ಥಿತಿ ಮಾತ್ರ. ಮಧ್ಯಂತರ ವರದಿ ಇನ್ನೂ ಬಂದಿಲ್ಲ. ಕಾಲ ಮಿತಿಯಲ್ಲಿ ತನಿಖೆ ಮುಗಿಸಿ ಎಂದು ಎಸ್‌ಐಟಿ ಹೇಳಲು ಸಾಧ್ಯವಿಲ್ಲ ಎಂದರು.

ನಾವು ನೆಲದ ನ್ಯಾಯವನ್ನು ಗೌರವಿಸೋಣ. ಸತ್ಯ ಹೊರಗೆ ಬರಲಿ, ಸತ್ಯ ಹೊರಗೆ ಬಂದರೆ ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ. ಹಾಗಾಗಿ, ವಿವಿಧ ರೀತಿಯ ಹೇಳಿಕೆಗಳನ್ನು ನೀಡುವುದು ಒಳ್ಳೆಯದಲ್ಲ. ಏನೂ ಆಗಿಲ್ಲ ಅಂದರೆ ಧರ್ಮಸ್ಥಳದ ಗೌರವ ಹೆಚ್ಚುತ್ತದೆ. ಆಗಿದೆ, ಎಂದರೆ ಸತ್ಯ ಹೊರ ಬರುತ್ತದೆ. ವಿರೋಧ ಪಕ್ಷದವರು ಸೇರಿದಂತೆ ಎಲ್ಲರೂ ಸಹಕರಿಸಬೇಕು. ಸರ್ಕಾರ ಯಾರನ್ನೂ ದೂಷಿಸುವುದಿಲ್ಲ. ಯಾರ ಒತ್ತಡಕ್ಕೆ ಮಣಿದೂ ಎಸ್‌ಐಟಿ ರಚನೆ ಮಾಡಿಲ್ಲ, ಪರಿಸ್ಥಿತಿ ನೋಡಿ ಮಾಡಿದ್ದೇವೆ ಎಂದು ಪರಮೇಶ್ವರ್ ಹೇಳಿದರು.

ಬಿಹಾರ| ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳನ್ನು ಬಹಿರಂಗಪಡಿಸಿದ ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...