Homeಕರ್ನಾಟಕಧರ್ಮಸ್ಥಳದಲ್ಲಿ ಶವ ಶೋಧ ಮುಂದುವರಿಸಬೇಕೆ ಬೇಡವೇ ಎಂದು ಎಸ್‌ಐಟಿ ತೀರ್ಮಾನಿಸುತ್ತದೆ: ಗೃಹ ಸಚಿವ ಪರಮೇಶ್ವರ್

ಧರ್ಮಸ್ಥಳದಲ್ಲಿ ಶವ ಶೋಧ ಮುಂದುವರಿಸಬೇಕೆ ಬೇಡವೇ ಎಂದು ಎಸ್‌ಐಟಿ ತೀರ್ಮಾನಿಸುತ್ತದೆ: ಗೃಹ ಸಚಿವ ಪರಮೇಶ್ವರ್

- Advertisement -
- Advertisement -

ಧರ್ಮಸ್ಥಳದಲ್ಲಿ ಶವ ಶೋಧ ಮುಂದುವರಿಸಬೇಕೇ ಬೇಡವೇ? ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ತೀರ್ಮಾನಿಸಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.

ಸೋಮವಾರ (ಆ.18) ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಅವರು,”ಇದುವರೆಗೆ ಆಗಿರುವುದು ಶವಗಳ ಶೋಧ ಮಾತ್ರ, ಸರಿಯಾದ ತನಿಖೆ ಇನ್ನೂ ಪ್ರಾರಂಭಗೊಂಡಿಲ್ಲ. ಶವ ಶೋಧ ಮುಕ್ತಾಯಗೊಂಡು, ಈಗ ಸಿಕ್ಕಿರುವ ಅಸ್ತಿಪಂಜರ ಮತ್ತು ಮುಂದೆ ಸಿಕ್ಕರೆ ಅವುಗಳ ಎಫ್‌ಎಸ್‌ಎಲ್‌ ಪರೀಕ್ಷೆ ನಡೆಸಿ ವರದಿ ಬರಬೇಕು. ಆ ಬಳಿಕ ನಿಜವಾದ ತನಿಖೆ ಆರಂಭಗೊಳ್ಳಲಿದೆ ಎಂದರು.

ಇದುವರೆಗೆ ಶೋಧದ ವೇಳೆ ಒಂದು ಕಡೆ ಮಾನವನ ತಲೆ ಬುರುಡೆ, ಮೂಳೆಗಳು ಸಿಕ್ಕಿವೆ. ಮತ್ತೊಂದೆಡೆ ಅಸ್ತಿ ಪಂಜರ ದೊರೆತಿದೆ. ಅವುಗಳನ್ನು ಎಫ್‌ಎಸ್‌ಎಲ್‌ ಪರೀಕ್ಷೆಗೆ ಕಳುಹಿಸಲಾಗಿದೆ. ಅಲ್ಲಿನ ಮಣ್ಣನ್ನೂ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಮಾಡಿರುವ ಸಾಕ್ಷಿ ರಕ್ಷಣಾ ಕಾಯ್ದೆಯಡಿ ದೂರುದಾರನಿಗೆ ಎಸ್‌ಐಟಿ ಎಲ್ಲಾ ರೀತಿಯ ರಕ್ಷಣೆ ಒದಗಿಸಿದೆ. ಪ್ರಧಾನ ಜಿಲ್ಲಾ ಮ್ಯಾಜಿಸ್ಟ್ರೇಟ್ ರಕ್ಷಣೆ ಒದಗಿಸುವ ನಿರ್ದೇಶನ ನೀಡಿದ್ದಾರೆ. ದೂರುದಾರನನ್ನು ಅವರು ‘ವಿ’ ಎಂದು ಗುರುತಿಸಿದ್ದಾರೆ. ಅದರಂತೆ ಎಸ್‌ಐಟಿ ರಕ್ಷಣೆ ನೀಡಿದೆ ಎಂದು ಹೇಳಿದರು.

ಸಾಕ್ಷಿ ರಕ್ಷಣಾ ಕಾಯ್ದೆಯಡಿ ದೂರುದಾರನಿಗೆ ರಕ್ಷಣೆ ನೀಡಿರುವ ಹಿನ್ನೆಲೆ, ಆತನನ್ನು ಬಂಧಿಸಲು ಅಥವಾ ನ್ಯಾಯಾಂಗ ಬಂಧನಕ್ಕೆ ಕಳುಹಿಸಲು ಸಾಧ್ಯವಿಲ್ಲ. ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆ. ಎಸ್‌ಐಟಿ ಅಧಿಕಾರಿಗಳು ಈಗ ಸಿಕ್ಕಿರುವ ಮೂಳೆ, ಅಸ್ತಿ ಪಂಜರವನ್ನು ಎಫ್‌ಎಸ್‌ಎಲ್‌ ಪರೀಕ್ಷೆಗೆ ಕಳುಹಿಸಿ ವರದಿಗಾಗಿ ಕಾಯುತ್ತಿದ್ದಾರೆ. ಅಲ್ಲಿಯವರೆಗೆ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿದೆ. ವರದಿ ಬಂದ ಬಳಿಕ ಮುಂದಕ್ಕೆ ಹೋಗಬೇಕಾ (ಶೋಧ ಮುಂದುವರಿಸಬೇಕಾ) ಎನ್ನುವ ತೀರ್ಮಾನ ಅವರು ಮಾಡುತ್ತಾರೆ ಎಂದು ಪರಮೇಶ್ವರ್ ತಿಳಿಸಿದರು.

ನಾನು ಈಗ ಹೇಳಿರುವುದು ಪ್ರಕರಣದ ವಸ್ತುಸ್ಥಿತಿ ಮಾತ್ರ. ಮಧ್ಯಂತರ ವರದಿ ಇನ್ನೂ ಬಂದಿಲ್ಲ. ಕಾಲ ಮಿತಿಯಲ್ಲಿ ತನಿಖೆ ಮುಗಿಸಿ ಎಂದು ಎಸ್‌ಐಟಿ ಹೇಳಲು ಸಾಧ್ಯವಿಲ್ಲ ಎಂದರು.

ನಾವು ನೆಲದ ನ್ಯಾಯವನ್ನು ಗೌರವಿಸೋಣ. ಸತ್ಯ ಹೊರಗೆ ಬರಲಿ, ಸತ್ಯ ಹೊರಗೆ ಬಂದರೆ ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ. ಹಾಗಾಗಿ, ವಿವಿಧ ರೀತಿಯ ಹೇಳಿಕೆಗಳನ್ನು ನೀಡುವುದು ಒಳ್ಳೆಯದಲ್ಲ. ಏನೂ ಆಗಿಲ್ಲ ಅಂದರೆ ಧರ್ಮಸ್ಥಳದ ಗೌರವ ಹೆಚ್ಚುತ್ತದೆ. ಆಗಿದೆ, ಎಂದರೆ ಸತ್ಯ ಹೊರ ಬರುತ್ತದೆ. ವಿರೋಧ ಪಕ್ಷದವರು ಸೇರಿದಂತೆ ಎಲ್ಲರೂ ಸಹಕರಿಸಬೇಕು. ಸರ್ಕಾರ ಯಾರನ್ನೂ ದೂಷಿಸುವುದಿಲ್ಲ. ಯಾರ ಒತ್ತಡಕ್ಕೆ ಮಣಿದೂ ಎಸ್‌ಐಟಿ ರಚನೆ ಮಾಡಿಲ್ಲ, ಪರಿಸ್ಥಿತಿ ನೋಡಿ ಮಾಡಿದ್ದೇವೆ ಎಂದು ಪರಮೇಶ್ವರ್ ಹೇಳಿದರು.

ಬಿಹಾರ| ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳನ್ನು ಬಹಿರಂಗಪಡಿಸಿದ ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...