Homeಮುಖಪುಟನ್ಯೂಸ್ ಕ್ಲಿಕ್‌ ಪ್ರಕರಣ: ಸೀತಾರಾಂ ಯೆಚೂರಿ ನಿವಾಸದಲ್ಲಿ ಶೋಧ

ನ್ಯೂಸ್ ಕ್ಲಿಕ್‌ ಪ್ರಕರಣ: ಸೀತಾರಾಂ ಯೆಚೂರಿ ನಿವಾಸದಲ್ಲಿ ಶೋಧ

- Advertisement -
- Advertisement -

ನ್ಯೂಸ್ ಕ್ಲಿಕ್‌ ಪೋರ್ಟಲ್‌ಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನ್ಯೂಸ್‌ಕ್ಲಿಕ್‌ಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ದಾಳಿಯನ್ನು ನಡೆಸಿದ್ದಾರೆ. ಸಿಪಿಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಸೀತಾರಾಂ ಯೆಚೂರಿಯವರು ಮಾತನಾಡಿ ನನ್ನ ಮನೆಗೆ ದೆಹಲಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ನನ್ನೊಂದಿಗೆ ನನ್ನ ಜೊತೆಗಿರುವ ಓರ್ವರ ಮಗ ನ್ಯೂಸ್‌ಕ್ಲಿಕ್‌ನಲ್ಲಿ ಕೆಲಸ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಪೊಲೀಸರು ನನ್ನ ನಿವಾಸಕ್ಕೆ ಬಂದರು.  ಅವರನ್ನು ಪ್ರಶ್ನಿಸಿ, ಅವರು ಅವರ ಲ್ಯಾಪ್‌ಟಾಪ್ ಮತ್ತು ಫೋನ್‌ನ್ನು ತೆಗೆದುಕೊಂಡರು, ಅವರು ಏನು ತನಿಖೆ ಮಾಡುತ್ತಿದ್ದಾರೆ, ಯಾರಿಗೂ ತಿಳಿದಿಲ್ಲ, ಇದು ಮಾಧ್ಯಮವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಮತ್ತು ಈ ದಾಳಿಗಳ ಹಿಂದಿನ ಕಾರಣವನ್ನು ದೇಶಕ್ಕೆ ತಿಳಿಸಬೇಕು ಎಂದು ಸೀತಾರಾಂ ಯೆಚೂರಿ ಹೇಳಿದ್ದಾರೆ.

ಮಂಗಳವಾರ ಬೆಳಗ್ಗೆ ತಂಡವು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ನಿವಾಸಕ್ಕೆ ಆಗಮಿಸಿ ಅವರ ಜೊತೆ ಕೆಲಸ ಮಾಡುತ್ತಿದ್ದ ನಾರಾಯಣ್ ಅವರ ಪುತ್ರ ಸನ್ಮಿತ್ ಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಇದಲ್ಲದೆ ಮುಂಬೈನಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ಮತ್ತು ಮುಂಬೈ ಪೊಲೀಸರ ತಂಡಗಳು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ನಿವಾಸದಲ್ಲಿ ಶೋಧ ನಡೆಸಿದ್ದಾರೆ.

ಸುದ್ದಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ನ್ಯೂಸ್‌ಕ್ಲಿಕ್ ವಿರುದ್ಧದ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡಿದ್ದು, ಯಾರಾದರೂ ಏನಾದರೂ ಮಾಡಿದ್ದರೆ, ತನಿಖಾ ಸಂಸ್ಥೆಗಳು ತನಿಖೆ ನಡೆಸಲು ಸ್ವತಂತ್ರವಾಗಿವೆ ಎಂದು ಹೇಳಿದ್ದಾರೆ.

ನ್ಯೂಸ್ ಕ್ಲಿಕ್ ಪೋರ್ಟಲ್ ಚೀನಾದ ಅಜೆಂಡಾವನ್ನು ಪ್ರಚಾರ ಮಾಡುವ ನೆಟ್‌ವರ್ಕ್‌ನಿಂದ ಹಣವನ್ನು ಪಡೆದಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಆಧರಿಸಿ ದಿಲ್ಲಿ ಪೊಲೀಸರು ಆ.17 ರಂದು ಪ್ರಕರಣ ದಾಖಲಿಸಿದ್ದರು.

ಇಂದು ಸುಮಾರು 20 ಸ್ಥಳಗಳಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್‌ನ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆದರೆ ಕೆಲವು ಪತ್ರಕರ್ತರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗಳಿಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಚೀನಾದೊಂದಿಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ನ್ಯೂಸ್ ಪೋರ್ಟಲ್ ಸುಮಾರು 38 ಕೋಟಿ ಮೊತ್ತವನ್ನು ಪಡೆದಿದೆ ಎಂದು ಇಡಿ ಈ ಹಿಂದೆ ಆರೋಪಿಸಿತ್ತು. ಈ ಮೊತ್ತವನ್ನು ಹೇಗೆ ಬಳಸಲಾಗಿದೆ ಎಂಬುದು ಪರಿಶೀಲನೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

UAPA ಮತ್ತು 153A IPC (ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), ಮತ್ತು IPC ಯ 120 B (ಅಪರಾಧ ಪಿತೂರಿ) ಅಡಿಯಲ್ಲಿ ಆಗಸ್ಟ್ 17 ರಂದು ದಾಖಲಿಸಲಾದ ಪ್ರಕರಣದ ಅಡಿಯಲ್ಲಿ ದಾಳಿಗಳನ್ನು ನಡೆಸಲಾಗಿದೆ.

ಈ ಹಿಂದೆ ಆಗಸ್ಟ್ 10 ರಂದು ನ್ಯೂಯಾರ್ಕ್ ಟೈಮ್ಸ್‌ನ ವರದಿಯೊಂದು ನ್ಯೂಸ್‌ಕ್ಲಿಕ್ ಅಮೆರಿಕದ ಬಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್‌ನಿಂದ ಹಣವನ್ನು ಪಡೆಯುವ ಜಾಗತಿಕ ನೆಟ್‌ವರ್ಕ್‌ನ ಭಾಗವಾಗಿದೆ ಎಂದು ಆರೋಪಿಸಿತ್ತು.

ಇದನ್ನು ಓದಿ: ‘ನ್ಯೂಸ್‌ಕ್ಲಿಕ್‌’ ವಿರುದ್ಧ ಯುಎಪಿಎ ಪ್ರಕರಣ: ದೆಹಲಿ ಪೊಲೀಸರಿಂದ ಪತ್ರಕರ್ತರ ಮೇಲೆ ದಿಢೀರ್‌ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...