Homeಮುಖಪುಟನ್ಯೂಸ್ ಕ್ಲಿಕ್‌ ಪ್ರಕರಣ: ಸೀತಾರಾಂ ಯೆಚೂರಿ ನಿವಾಸದಲ್ಲಿ ಶೋಧ

ನ್ಯೂಸ್ ಕ್ಲಿಕ್‌ ಪ್ರಕರಣ: ಸೀತಾರಾಂ ಯೆಚೂರಿ ನಿವಾಸದಲ್ಲಿ ಶೋಧ

- Advertisement -
- Advertisement -

ನ್ಯೂಸ್ ಕ್ಲಿಕ್‌ ಪೋರ್ಟಲ್‌ಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನ್ಯೂಸ್‌ಕ್ಲಿಕ್‌ಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ದಾಳಿಯನ್ನು ನಡೆಸಿದ್ದಾರೆ. ಸಿಪಿಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಸೀತಾರಾಂ ಯೆಚೂರಿಯವರು ಮಾತನಾಡಿ ನನ್ನ ಮನೆಗೆ ದೆಹಲಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ನನ್ನೊಂದಿಗೆ ನನ್ನ ಜೊತೆಗಿರುವ ಓರ್ವರ ಮಗ ನ್ಯೂಸ್‌ಕ್ಲಿಕ್‌ನಲ್ಲಿ ಕೆಲಸ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಪೊಲೀಸರು ನನ್ನ ನಿವಾಸಕ್ಕೆ ಬಂದರು.  ಅವರನ್ನು ಪ್ರಶ್ನಿಸಿ, ಅವರು ಅವರ ಲ್ಯಾಪ್‌ಟಾಪ್ ಮತ್ತು ಫೋನ್‌ನ್ನು ತೆಗೆದುಕೊಂಡರು, ಅವರು ಏನು ತನಿಖೆ ಮಾಡುತ್ತಿದ್ದಾರೆ, ಯಾರಿಗೂ ತಿಳಿದಿಲ್ಲ, ಇದು ಮಾಧ್ಯಮವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಮತ್ತು ಈ ದಾಳಿಗಳ ಹಿಂದಿನ ಕಾರಣವನ್ನು ದೇಶಕ್ಕೆ ತಿಳಿಸಬೇಕು ಎಂದು ಸೀತಾರಾಂ ಯೆಚೂರಿ ಹೇಳಿದ್ದಾರೆ.

ಮಂಗಳವಾರ ಬೆಳಗ್ಗೆ ತಂಡವು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ನಿವಾಸಕ್ಕೆ ಆಗಮಿಸಿ ಅವರ ಜೊತೆ ಕೆಲಸ ಮಾಡುತ್ತಿದ್ದ ನಾರಾಯಣ್ ಅವರ ಪುತ್ರ ಸನ್ಮಿತ್ ಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಇದಲ್ಲದೆ ಮುಂಬೈನಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ಮತ್ತು ಮುಂಬೈ ಪೊಲೀಸರ ತಂಡಗಳು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ನಿವಾಸದಲ್ಲಿ ಶೋಧ ನಡೆಸಿದ್ದಾರೆ.

ಸುದ್ದಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ನ್ಯೂಸ್‌ಕ್ಲಿಕ್ ವಿರುದ್ಧದ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡಿದ್ದು, ಯಾರಾದರೂ ಏನಾದರೂ ಮಾಡಿದ್ದರೆ, ತನಿಖಾ ಸಂಸ್ಥೆಗಳು ತನಿಖೆ ನಡೆಸಲು ಸ್ವತಂತ್ರವಾಗಿವೆ ಎಂದು ಹೇಳಿದ್ದಾರೆ.

ನ್ಯೂಸ್ ಕ್ಲಿಕ್ ಪೋರ್ಟಲ್ ಚೀನಾದ ಅಜೆಂಡಾವನ್ನು ಪ್ರಚಾರ ಮಾಡುವ ನೆಟ್‌ವರ್ಕ್‌ನಿಂದ ಹಣವನ್ನು ಪಡೆದಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಆಧರಿಸಿ ದಿಲ್ಲಿ ಪೊಲೀಸರು ಆ.17 ರಂದು ಪ್ರಕರಣ ದಾಖಲಿಸಿದ್ದರು.

ಇಂದು ಸುಮಾರು 20 ಸ್ಥಳಗಳಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್‌ನ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆದರೆ ಕೆಲವು ಪತ್ರಕರ್ತರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗಳಿಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಚೀನಾದೊಂದಿಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ನ್ಯೂಸ್ ಪೋರ್ಟಲ್ ಸುಮಾರು 38 ಕೋಟಿ ಮೊತ್ತವನ್ನು ಪಡೆದಿದೆ ಎಂದು ಇಡಿ ಈ ಹಿಂದೆ ಆರೋಪಿಸಿತ್ತು. ಈ ಮೊತ್ತವನ್ನು ಹೇಗೆ ಬಳಸಲಾಗಿದೆ ಎಂಬುದು ಪರಿಶೀಲನೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

UAPA ಮತ್ತು 153A IPC (ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), ಮತ್ತು IPC ಯ 120 B (ಅಪರಾಧ ಪಿತೂರಿ) ಅಡಿಯಲ್ಲಿ ಆಗಸ್ಟ್ 17 ರಂದು ದಾಖಲಿಸಲಾದ ಪ್ರಕರಣದ ಅಡಿಯಲ್ಲಿ ದಾಳಿಗಳನ್ನು ನಡೆಸಲಾಗಿದೆ.

ಈ ಹಿಂದೆ ಆಗಸ್ಟ್ 10 ರಂದು ನ್ಯೂಯಾರ್ಕ್ ಟೈಮ್ಸ್‌ನ ವರದಿಯೊಂದು ನ್ಯೂಸ್‌ಕ್ಲಿಕ್ ಅಮೆರಿಕದ ಬಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್‌ನಿಂದ ಹಣವನ್ನು ಪಡೆಯುವ ಜಾಗತಿಕ ನೆಟ್‌ವರ್ಕ್‌ನ ಭಾಗವಾಗಿದೆ ಎಂದು ಆರೋಪಿಸಿತ್ತು.

ಇದನ್ನು ಓದಿ: ‘ನ್ಯೂಸ್‌ಕ್ಲಿಕ್‌’ ವಿರುದ್ಧ ಯುಎಪಿಎ ಪ್ರಕರಣ: ದೆಹಲಿ ಪೊಲೀಸರಿಂದ ಪತ್ರಕರ್ತರ ಮೇಲೆ ದಿಢೀರ್‌ ದಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ....

0
ನಾಗಾಂವ್‌ ಜಿಲ್ಲೆಯಲ್ಲಿ 2022ರಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆಯ ಬಳಿಕ ಐದು ಮುಸ್ಲಿಂ ಕುಟುಂಬಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಸರ್ಕಾರ ಧ್ವಂಸಗೊಳಿಸಿತ್ತು. ಇದೀಗ ಮನೆ ಕಳೆದುಕೊಂಡವರಿಗೆ ಪರಿಹಾರವಾಗಿ 30 ಲಕ್ಷ ರೂಪಾಯಿಗಳನ್ನು...