Homeಮುಖಪುಟನ್ಯೂಸ್ ಕ್ಲಿಕ್‌ ಪ್ರಕರಣ: ಸೀತಾರಾಂ ಯೆಚೂರಿ ನಿವಾಸದಲ್ಲಿ ಶೋಧ

ನ್ಯೂಸ್ ಕ್ಲಿಕ್‌ ಪ್ರಕರಣ: ಸೀತಾರಾಂ ಯೆಚೂರಿ ನಿವಾಸದಲ್ಲಿ ಶೋಧ

- Advertisement -
- Advertisement -

ನ್ಯೂಸ್ ಕ್ಲಿಕ್‌ ಪೋರ್ಟಲ್‌ಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನ್ಯೂಸ್‌ಕ್ಲಿಕ್‌ಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ದಾಳಿಯನ್ನು ನಡೆಸಿದ್ದಾರೆ. ಸಿಪಿಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಸೀತಾರಾಂ ಯೆಚೂರಿಯವರು ಮಾತನಾಡಿ ನನ್ನ ಮನೆಗೆ ದೆಹಲಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ನನ್ನೊಂದಿಗೆ ನನ್ನ ಜೊತೆಗಿರುವ ಓರ್ವರ ಮಗ ನ್ಯೂಸ್‌ಕ್ಲಿಕ್‌ನಲ್ಲಿ ಕೆಲಸ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಪೊಲೀಸರು ನನ್ನ ನಿವಾಸಕ್ಕೆ ಬಂದರು.  ಅವರನ್ನು ಪ್ರಶ್ನಿಸಿ, ಅವರು ಅವರ ಲ್ಯಾಪ್‌ಟಾಪ್ ಮತ್ತು ಫೋನ್‌ನ್ನು ತೆಗೆದುಕೊಂಡರು, ಅವರು ಏನು ತನಿಖೆ ಮಾಡುತ್ತಿದ್ದಾರೆ, ಯಾರಿಗೂ ತಿಳಿದಿಲ್ಲ, ಇದು ಮಾಧ್ಯಮವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಮತ್ತು ಈ ದಾಳಿಗಳ ಹಿಂದಿನ ಕಾರಣವನ್ನು ದೇಶಕ್ಕೆ ತಿಳಿಸಬೇಕು ಎಂದು ಸೀತಾರಾಂ ಯೆಚೂರಿ ಹೇಳಿದ್ದಾರೆ.

ಮಂಗಳವಾರ ಬೆಳಗ್ಗೆ ತಂಡವು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ನಿವಾಸಕ್ಕೆ ಆಗಮಿಸಿ ಅವರ ಜೊತೆ ಕೆಲಸ ಮಾಡುತ್ತಿದ್ದ ನಾರಾಯಣ್ ಅವರ ಪುತ್ರ ಸನ್ಮಿತ್ ಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಇದಲ್ಲದೆ ಮುಂಬೈನಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ಮತ್ತು ಮುಂಬೈ ಪೊಲೀಸರ ತಂಡಗಳು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ನಿವಾಸದಲ್ಲಿ ಶೋಧ ನಡೆಸಿದ್ದಾರೆ.

ಸುದ್ದಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ನ್ಯೂಸ್‌ಕ್ಲಿಕ್ ವಿರುದ್ಧದ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡಿದ್ದು, ಯಾರಾದರೂ ಏನಾದರೂ ಮಾಡಿದ್ದರೆ, ತನಿಖಾ ಸಂಸ್ಥೆಗಳು ತನಿಖೆ ನಡೆಸಲು ಸ್ವತಂತ್ರವಾಗಿವೆ ಎಂದು ಹೇಳಿದ್ದಾರೆ.

ನ್ಯೂಸ್ ಕ್ಲಿಕ್ ಪೋರ್ಟಲ್ ಚೀನಾದ ಅಜೆಂಡಾವನ್ನು ಪ್ರಚಾರ ಮಾಡುವ ನೆಟ್‌ವರ್ಕ್‌ನಿಂದ ಹಣವನ್ನು ಪಡೆದಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಆಧರಿಸಿ ದಿಲ್ಲಿ ಪೊಲೀಸರು ಆ.17 ರಂದು ಪ್ರಕರಣ ದಾಖಲಿಸಿದ್ದರು.

ಇಂದು ಸುಮಾರು 20 ಸ್ಥಳಗಳಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್‌ನ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆದರೆ ಕೆಲವು ಪತ್ರಕರ್ತರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗಳಿಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಚೀನಾದೊಂದಿಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ನ್ಯೂಸ್ ಪೋರ್ಟಲ್ ಸುಮಾರು 38 ಕೋಟಿ ಮೊತ್ತವನ್ನು ಪಡೆದಿದೆ ಎಂದು ಇಡಿ ಈ ಹಿಂದೆ ಆರೋಪಿಸಿತ್ತು. ಈ ಮೊತ್ತವನ್ನು ಹೇಗೆ ಬಳಸಲಾಗಿದೆ ಎಂಬುದು ಪರಿಶೀಲನೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

UAPA ಮತ್ತು 153A IPC (ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), ಮತ್ತು IPC ಯ 120 B (ಅಪರಾಧ ಪಿತೂರಿ) ಅಡಿಯಲ್ಲಿ ಆಗಸ್ಟ್ 17 ರಂದು ದಾಖಲಿಸಲಾದ ಪ್ರಕರಣದ ಅಡಿಯಲ್ಲಿ ದಾಳಿಗಳನ್ನು ನಡೆಸಲಾಗಿದೆ.

ಈ ಹಿಂದೆ ಆಗಸ್ಟ್ 10 ರಂದು ನ್ಯೂಯಾರ್ಕ್ ಟೈಮ್ಸ್‌ನ ವರದಿಯೊಂದು ನ್ಯೂಸ್‌ಕ್ಲಿಕ್ ಅಮೆರಿಕದ ಬಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್‌ನಿಂದ ಹಣವನ್ನು ಪಡೆಯುವ ಜಾಗತಿಕ ನೆಟ್‌ವರ್ಕ್‌ನ ಭಾಗವಾಗಿದೆ ಎಂದು ಆರೋಪಿಸಿತ್ತು.

ಇದನ್ನು ಓದಿ: ‘ನ್ಯೂಸ್‌ಕ್ಲಿಕ್‌’ ವಿರುದ್ಧ ಯುಎಪಿಎ ಪ್ರಕರಣ: ದೆಹಲಿ ಪೊಲೀಸರಿಂದ ಪತ್ರಕರ್ತರ ಮೇಲೆ ದಿಢೀರ್‌ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...