Homeಅಂಕಣಗಳುನೀನಾ ಮತ್ತು ಸೀತೆಯರ ದುಃಖ

ನೀನಾ ಮತ್ತು ಸೀತೆಯರ ದುಃಖ

- Advertisement -
- Advertisement -

| ಗೌರಿ ಲಂಕೇಶ್ |
27 ಮೇ 2009 (ಸಂಪಾದಕೀಯದಿಂದ)

ಒಬ್ಬಳ ಹೆಸರು ಸೀತಾ, ಇನ್ನೊಬ್ಬಳ ಹೆಸರು ನೀನಾ. ಮೊದ¯ನೆಯವಳು ಸುಮಾರು ಎರಡು ಸಾವಿರ ವರ್ಷಗಳ ಹಿಂದೆ ಸೃಷ್ಠಿಸಲ್ಪಟ್ಟ ಪುರಾಣದಲ್ಲಿ ಕಾಣಿಸಿಕೊಳ್ಳುವ ಮಹಿಳೆ. ಎರಡನೆಯವಳು ಆಧುನಿಕ ದೇಶವಾದ ಅಮೆರಿಕಾದಲ್ಲಿ ವ್ಯಂಗ್ಯಚಿತ್ರಕಾರಳಾಗಿ ದುಡಿಯುತ್ತಿರುವ ಹೆಂಗಸು. ಆದರೆ ಕಾಲ, ದೇಶ, ಭಾಷೆ, ಸಂಸ್ಕøತಿ ಮತ್ತು ಪರಂಪರೆಯನ್ನು ಮೀರಿ ಇವರಿಬ್ಬರನ್ನು ಒಂದು ಸಂಗತಿ ಜೊತೆಗೂಡಿಸುತ್ತದೆ. ಅದು ಗಂಡನಿಂದ ತಿರಸ್ಕøತಗೊಂಡಿರುವ ಮಡದಿಯೊಬ್ಬಳ ಯಾತನೆ, ಅಸಹಾಯಕತೆ ಮತ್ತು ಏಕಾಂಗಿತನ.
ಸೀತಿ ಬೇರೆ ಯಾರೂ ಅಲ್ಲ. ವಾಲ್ಮೀಕಿ ಬರೆದ ರಾಮಾಯಣದ ನಾಯಕಿ. ಆ ಸೀತೆಗಾದ ವ್ಯಥೆ ತನಗಾದ ದುಃಖಕ್ಕಿಂತ ವಿಭಿನ್ನವಾಗಿರಲಿಲ್ಲ ಎಂದು ‘ಸೀತಾ ಸಿಂಗ್ಸ್ ದ ಬ್ಲೂಸ್’ ಎಂಬ ಅನಿಮೇಷನ್ ಸಿನಿಮಾದ ಮೂಲಕ ನೀನಾ ಪ್ಯಾಲಿ ತೋರಿಸಿದ್ದರಿಂದ ಇವತ್ತು ಆಕೆ ಕೆಲ ಹಿಂದೂತ್ವವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾಳೆ.

ಅದು ಆದದ್ದು ಹೀಗೆ: ನೀನಾಳ ಅಮೆರಿಕನ್ ಗಂಡನಿಗೆ ಭಾರತದಲ್ಲಿ ಆರು ತಿಂಗಳ ಕಾಲ ಕಾಂಟ್ರಾಕ್ಟ್ ಮೇಲೆ ಕೆಲಸ ಮಾಡುವ ಅವಕಾಶ ಸಿಗುತ್ತದೆ. ಅಲ್ಲಿಯತನಕ ಅವರಿಬ್ಬರ ದಾಂಪತ್ಯಜೀವನ ಚೆನ್ನಾಗಿ ಸಾಗಿದ್ದು, ಆತ ನೀನಾಳನ್ನು ಅಮೆರಿಕದಲ್ಲಿ ಬಿಟ್ಟು ಭಾರತಕ್ಕೆ ಬರುತ್ತಾನೆ. ಆದರೆ ಇಲ್ಲಿಗೆ ಬಂದನಂತರ ನೀನಾಳನ್ನು ನಿರ್ಲಕ್ಷಿಸಲಾರಂಭಿಸುತ್ತಾನೆ. ಹೀಗೆ ಕೆಲ ತಿಂಗಳುಗಳು ಉರುಳಿದ ನಂತರ ಆತನ ಕಾಂಟ್ರಾಕ್ಟ್ ಅನ್ನು ಇನ್ನೊಂದು ವರ್ಷದ ಅವಧಿಗೆ ವಿಸ್ತರಿಸಲಾಗುತ್ತದೆ. ಆಗ ನೀನಾ ತಾನು ತನ್ನ ಗಂಡನೊಂದಿಗೆ ವಾಸಿಸಬೇಕೆಂದು ನಿರ್ಧರಿಸಿ ತನ್ನ ಕೆಲಸಕ್ಕೆ ರಾಜಿನಾಮೆ ನೀಡಿ, ಬಾಡಿಗೆ ಮನೆಯನ್ನು ತೊರೆದು, ಗಂಟುಮೂಟೆ ಕಟ್ಟಿಕೊಂಡು ಆಕೆಯೂ ಭಾರತಕ್ಕೆ ಬರುತ್ತಾಳೆ.

ಅಪಾರ ಪ್ರೀತಿ ಹೊತ್ತು ಬಂದಿರುವ ನೀನಾಳಿಗೆ ಇಲ್ಲಿ ಆಘಾತ ಕಾದಿರುತ್ತದೆ. ಅವಳ ಗಂಡ ಆಕೆಯ ಬಗೆಗಿನ ಪ್ರೀತಿ ಮತ್ತು ಆಸಕ್ತಿಯನ್ನು ಕಳೆದುಕೊಂಡಿರುತ್ತಾನೆ. ಸಹಜವಾಗಿಯೇ ನೀನಾ ಇದನ್ನು ಕಂಡು ಘಾಸಿಗೊಳಗಾಗುತ್ತಾಳೆ. ಇದು ತಾತ್ಕಾಲಿಕ ಸಮಸ್ಯೆ ಎಂದು ಭಾವಿಸಿ ಗಂಡನ ತಾತ್ಸಾರವನ್ನು ಸಹಿಸಿಕೊಂಡಿರುತ್ತಾಳೆ. ಭಾರತದಲ್ಲಿ ಆಕೆಗೆ ಸ್ನೇಹಿತರಾಗಲಿ, ಸಹೋದ್ಯೋಗಿಗಳಾಗಲಿ ಇಲ್ಲದಿರುವುದು ಆಕೆಯ ಏಕಾಂಗಿತನವನ್ನು ಹೆಚ್ಚಿಸುತ್ತದೆ. ಜೊತೆಗೆ ಭಾರತೀಯ ಮಹಿಳೆಯರಿಗೆ ಸ್ವಾತಂತ್ರ್ಯ ಇಲ್ಲದಿರುವುದು, ಅವರನ್ನು ಎರಡನೆ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳುವುದು, ಗಂಡನ ಹೊರತಾಗಿ ಪ್ರತ್ಯೇಕ ಅಸ್ತಿತ್ವ ಇಲ್ಲದಿರುವುದೆಲ್ಲ ನೀನಾಳಲ್ಲಿ ಬೇಸರ ಮೂಡಿಸುತ್ತದೆ.

 

ಅದೇ ಹೊತ್ತಿಗೆ ನೀನಾ ‘ರಾಮಾಯಣ’ವನ್ನು ಓದಲು ಪ್ರಾರಂಭಿಸುತ್ತಾಳೆ. ರಾಮನನ್ನು ಮರ್ಯಾದ ಪುರುಷೋತ್ತಮನೆಂದೂ, ಆತ ಎಲ್ಲ ರೀತಿಯ ಸದ್ಗುಣಗಳನ್ನು ಹೊಂದಿರುವವನೆಂದೂ; ಆದರೆ ಸೀತೆಯನ್ನು ಯಾವ ಸ್ವಂತಿಕೆಯೂ ಇಲ್ಲದ, ಸ್ವಾತಂತ್ರ್ಯವಿಲ್ಲದ ಆಕೃತಿಯಂತೆ ಚಿತ್ರಿಸಿರುವುದನ್ನು ನೋಡಿ ನೀನಾಳಿಗೆ ‘ರಾಮಾಯಣ’ ಸ್ತ್ರೀದ್ವೇಷಿಯಾದ ಕರಪತ್ರಕ್ಕಿಂತ ಹೆಚ್ಚಿನ ಮೌಲ್ಯ ಹೊಂದಿರದ ಕೃತಿ ಎಂಬಂತೆ ಕಾಣಿಸುತ್ತದೆ.ಮೂರು ಸಾವಿರ ವರ್ಷಗಳ ಹಿಂದೆ ವಾಲ್ಮೀಕಿಯ ಕಾಲ್ಪನಿಕ ಸೃಷ್ಟಿಯಾದ ಸೀತೆ ಅನುಭವಿಸಿದ ಒಬ್ಬಂಟಿತನಕ್ಕೂ, ಆಧುನಿಕ ಮಹಿಳೆಯಾದ ತಾನು 21ನೇ ಶತಮಾನದಲ್ಲಿ ಅನುಭವಿಸುತ್ತಿರುವ ನೋವಿಗೂ ಅಷ್ಟೇನೂ ವ್ಯತ್ಯಾಸವಿಲ್ಲ ಎನಿಸುತ್ತದೆ ನೀನಾಳಿಗೆ. “ನನ್ನನ್ನು ತಿರಸ್ಕರಿಸಿದ ತನ್ನ ಗಂಡನ ಬಗ್ಗೆ ನನಗಿನ್ನೂ ಇದ್ದ ಪ್ರೀತಿ, ಹಂಬಲ ಮತ್ತು ಆಶೆ ಸೀತೆಯ ಅನುಭವವೂ ಆಗಿತ್ತು. ಆಗ ರಾಮಾಯಣ ಕೇವಲ ಲಿಂಗಭೇದ ತೋರುವ ದೃಷ್ಟಾಂತ ಕತೆಯಾಗಲ್ಲದೆ, ಮನುಷ್ಯರ ನಡುವಿನ ಸಂಬಂಧಗಳು ಮತ್ತು ಹೃದಯಾಳದಲ್ಲಿರುವ ವೇದನೆಯ ಕತೆಯಂತೆ ಕಂಡಿತು. ಅದೇ ಹೊತ್ತಿಗೆ 1920ರಲ್ಲಿ ಬ್ಲೂಸ್ (ಹೆಚ್ಚಾಗಿ ದುಮ್ಮಾನಗಳ ಬಗೆಗಿನ ಹಾಡುಗಳ ಒಂದು ಸಂಗೀತ ಶೈಲಿ) ಕವನಗಳನ್ನು ಹಾಡಿದ್ದ ಆನೆಟ್ ಹಾನ್‍ಶಾ ಅವರ ಸಂಗೀತವನ್ನು ಕೇಳಿದೆ. ನನ್ನ ವೈಯಕ್ತಿಕ ದುಃಖ, ಸೀತಾಳ ಕಥನ ಮತ್ತು ಹಾನ್‍ಶಾಳ ಸಂಗೀತ, ಈ ಮೂರು ಒಟ್ಟಾಗಿ ಸಾಗಿದ್ದರಿಂದ ‘ಸೀತಾ ಸಿಂಗ್ಸ್ ದ ಬ್ಲೂ’ ಸಿನಿಮಾವನ್ನು ಮಾಡಿದೆ” ಎನ್ನುತ್ತಾಳೆ ನೀನಾ.

82 ನಿಮಿಷಗಳ ಈ ಅನಿಮೇಟೆಡ್ ಸಿನಿಮಾದಲ್ಲಿ ಸೀತೆಯನ್ನು ತಾನು ವಿಧೇಯಳನ್ನಾಗಿ ತೋರಿಸದೆ. ಉತ್ಸಾಹಿ, ದೃಢ ನಿರ್ಧಾರಗಳ ಮತ್ತು ಭಾವುಕಜೀವಿಯನ್ನಾಗಿ ತೋರಿಸಿದ್ದೇನೆ ಎಂದು ನೀನಾ ಹೇಳುತ್ತಾರಾದರೂ ನಮ್ಮ ದೇಶದಲ್ಲೇ ರಾಮಾಯಣದ ಅನೇಕ ವ್ಯಾಖ್ಯಾನಗಳಲ್ಲಿ ಸೀತೆ ಇದಕ್ಕಿಂತಲೂ ಹೆಚ್ಚು ಗಟ್ಟಿ ವ್ಯಕ್ತಿತ್ವದವಳಾಗಿ ಮೂಡಿಬಂದಿದ್ದಾಳೆ.
ಸಹಜವಾಗಿಯೇ ಇದೆಲ್ಲ ಕೆಲ ‘ರಾಮಭಕ್ತ’ರಾದ ಹಿಂದೂತ್ವವಾದಿಗಳನ್ನು ಕೆರಳಿಸಿದೆ. ವಾಲ್ಮೀಕಿಯ ಜಾನಕಿ ಮತ್ತು ತಮ್ಮ ಸುತ್ತಲೂ ಇರುವ ಸೀತೆಯ ದುಃಖ ಅವರಿಗೆ ಅರ್ಥವಾಗುವುದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...