Homeಅಂಕಣಗಳುನೀನಾ ಮತ್ತು ಸೀತೆಯರ ದುಃಖ

ನೀನಾ ಮತ್ತು ಸೀತೆಯರ ದುಃಖ

- Advertisement -
- Advertisement -

| ಗೌರಿ ಲಂಕೇಶ್ |
27 ಮೇ 2009 (ಸಂಪಾದಕೀಯದಿಂದ)

ಒಬ್ಬಳ ಹೆಸರು ಸೀತಾ, ಇನ್ನೊಬ್ಬಳ ಹೆಸರು ನೀನಾ. ಮೊದ¯ನೆಯವಳು ಸುಮಾರು ಎರಡು ಸಾವಿರ ವರ್ಷಗಳ ಹಿಂದೆ ಸೃಷ್ಠಿಸಲ್ಪಟ್ಟ ಪುರಾಣದಲ್ಲಿ ಕಾಣಿಸಿಕೊಳ್ಳುವ ಮಹಿಳೆ. ಎರಡನೆಯವಳು ಆಧುನಿಕ ದೇಶವಾದ ಅಮೆರಿಕಾದಲ್ಲಿ ವ್ಯಂಗ್ಯಚಿತ್ರಕಾರಳಾಗಿ ದುಡಿಯುತ್ತಿರುವ ಹೆಂಗಸು. ಆದರೆ ಕಾಲ, ದೇಶ, ಭಾಷೆ, ಸಂಸ್ಕøತಿ ಮತ್ತು ಪರಂಪರೆಯನ್ನು ಮೀರಿ ಇವರಿಬ್ಬರನ್ನು ಒಂದು ಸಂಗತಿ ಜೊತೆಗೂಡಿಸುತ್ತದೆ. ಅದು ಗಂಡನಿಂದ ತಿರಸ್ಕøತಗೊಂಡಿರುವ ಮಡದಿಯೊಬ್ಬಳ ಯಾತನೆ, ಅಸಹಾಯಕತೆ ಮತ್ತು ಏಕಾಂಗಿತನ.
ಸೀತಿ ಬೇರೆ ಯಾರೂ ಅಲ್ಲ. ವಾಲ್ಮೀಕಿ ಬರೆದ ರಾಮಾಯಣದ ನಾಯಕಿ. ಆ ಸೀತೆಗಾದ ವ್ಯಥೆ ತನಗಾದ ದುಃಖಕ್ಕಿಂತ ವಿಭಿನ್ನವಾಗಿರಲಿಲ್ಲ ಎಂದು ‘ಸೀತಾ ಸಿಂಗ್ಸ್ ದ ಬ್ಲೂಸ್’ ಎಂಬ ಅನಿಮೇಷನ್ ಸಿನಿಮಾದ ಮೂಲಕ ನೀನಾ ಪ್ಯಾಲಿ ತೋರಿಸಿದ್ದರಿಂದ ಇವತ್ತು ಆಕೆ ಕೆಲ ಹಿಂದೂತ್ವವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾಳೆ.

ಅದು ಆದದ್ದು ಹೀಗೆ: ನೀನಾಳ ಅಮೆರಿಕನ್ ಗಂಡನಿಗೆ ಭಾರತದಲ್ಲಿ ಆರು ತಿಂಗಳ ಕಾಲ ಕಾಂಟ್ರಾಕ್ಟ್ ಮೇಲೆ ಕೆಲಸ ಮಾಡುವ ಅವಕಾಶ ಸಿಗುತ್ತದೆ. ಅಲ್ಲಿಯತನಕ ಅವರಿಬ್ಬರ ದಾಂಪತ್ಯಜೀವನ ಚೆನ್ನಾಗಿ ಸಾಗಿದ್ದು, ಆತ ನೀನಾಳನ್ನು ಅಮೆರಿಕದಲ್ಲಿ ಬಿಟ್ಟು ಭಾರತಕ್ಕೆ ಬರುತ್ತಾನೆ. ಆದರೆ ಇಲ್ಲಿಗೆ ಬಂದನಂತರ ನೀನಾಳನ್ನು ನಿರ್ಲಕ್ಷಿಸಲಾರಂಭಿಸುತ್ತಾನೆ. ಹೀಗೆ ಕೆಲ ತಿಂಗಳುಗಳು ಉರುಳಿದ ನಂತರ ಆತನ ಕಾಂಟ್ರಾಕ್ಟ್ ಅನ್ನು ಇನ್ನೊಂದು ವರ್ಷದ ಅವಧಿಗೆ ವಿಸ್ತರಿಸಲಾಗುತ್ತದೆ. ಆಗ ನೀನಾ ತಾನು ತನ್ನ ಗಂಡನೊಂದಿಗೆ ವಾಸಿಸಬೇಕೆಂದು ನಿರ್ಧರಿಸಿ ತನ್ನ ಕೆಲಸಕ್ಕೆ ರಾಜಿನಾಮೆ ನೀಡಿ, ಬಾಡಿಗೆ ಮನೆಯನ್ನು ತೊರೆದು, ಗಂಟುಮೂಟೆ ಕಟ್ಟಿಕೊಂಡು ಆಕೆಯೂ ಭಾರತಕ್ಕೆ ಬರುತ್ತಾಳೆ.

ಅಪಾರ ಪ್ರೀತಿ ಹೊತ್ತು ಬಂದಿರುವ ನೀನಾಳಿಗೆ ಇಲ್ಲಿ ಆಘಾತ ಕಾದಿರುತ್ತದೆ. ಅವಳ ಗಂಡ ಆಕೆಯ ಬಗೆಗಿನ ಪ್ರೀತಿ ಮತ್ತು ಆಸಕ್ತಿಯನ್ನು ಕಳೆದುಕೊಂಡಿರುತ್ತಾನೆ. ಸಹಜವಾಗಿಯೇ ನೀನಾ ಇದನ್ನು ಕಂಡು ಘಾಸಿಗೊಳಗಾಗುತ್ತಾಳೆ. ಇದು ತಾತ್ಕಾಲಿಕ ಸಮಸ್ಯೆ ಎಂದು ಭಾವಿಸಿ ಗಂಡನ ತಾತ್ಸಾರವನ್ನು ಸಹಿಸಿಕೊಂಡಿರುತ್ತಾಳೆ. ಭಾರತದಲ್ಲಿ ಆಕೆಗೆ ಸ್ನೇಹಿತರಾಗಲಿ, ಸಹೋದ್ಯೋಗಿಗಳಾಗಲಿ ಇಲ್ಲದಿರುವುದು ಆಕೆಯ ಏಕಾಂಗಿತನವನ್ನು ಹೆಚ್ಚಿಸುತ್ತದೆ. ಜೊತೆಗೆ ಭಾರತೀಯ ಮಹಿಳೆಯರಿಗೆ ಸ್ವಾತಂತ್ರ್ಯ ಇಲ್ಲದಿರುವುದು, ಅವರನ್ನು ಎರಡನೆ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳುವುದು, ಗಂಡನ ಹೊರತಾಗಿ ಪ್ರತ್ಯೇಕ ಅಸ್ತಿತ್ವ ಇಲ್ಲದಿರುವುದೆಲ್ಲ ನೀನಾಳಲ್ಲಿ ಬೇಸರ ಮೂಡಿಸುತ್ತದೆ.

 

ಅದೇ ಹೊತ್ತಿಗೆ ನೀನಾ ‘ರಾಮಾಯಣ’ವನ್ನು ಓದಲು ಪ್ರಾರಂಭಿಸುತ್ತಾಳೆ. ರಾಮನನ್ನು ಮರ್ಯಾದ ಪುರುಷೋತ್ತಮನೆಂದೂ, ಆತ ಎಲ್ಲ ರೀತಿಯ ಸದ್ಗುಣಗಳನ್ನು ಹೊಂದಿರುವವನೆಂದೂ; ಆದರೆ ಸೀತೆಯನ್ನು ಯಾವ ಸ್ವಂತಿಕೆಯೂ ಇಲ್ಲದ, ಸ್ವಾತಂತ್ರ್ಯವಿಲ್ಲದ ಆಕೃತಿಯಂತೆ ಚಿತ್ರಿಸಿರುವುದನ್ನು ನೋಡಿ ನೀನಾಳಿಗೆ ‘ರಾಮಾಯಣ’ ಸ್ತ್ರೀದ್ವೇಷಿಯಾದ ಕರಪತ್ರಕ್ಕಿಂತ ಹೆಚ್ಚಿನ ಮೌಲ್ಯ ಹೊಂದಿರದ ಕೃತಿ ಎಂಬಂತೆ ಕಾಣಿಸುತ್ತದೆ.ಮೂರು ಸಾವಿರ ವರ್ಷಗಳ ಹಿಂದೆ ವಾಲ್ಮೀಕಿಯ ಕಾಲ್ಪನಿಕ ಸೃಷ್ಟಿಯಾದ ಸೀತೆ ಅನುಭವಿಸಿದ ಒಬ್ಬಂಟಿತನಕ್ಕೂ, ಆಧುನಿಕ ಮಹಿಳೆಯಾದ ತಾನು 21ನೇ ಶತಮಾನದಲ್ಲಿ ಅನುಭವಿಸುತ್ತಿರುವ ನೋವಿಗೂ ಅಷ್ಟೇನೂ ವ್ಯತ್ಯಾಸವಿಲ್ಲ ಎನಿಸುತ್ತದೆ ನೀನಾಳಿಗೆ. “ನನ್ನನ್ನು ತಿರಸ್ಕರಿಸಿದ ತನ್ನ ಗಂಡನ ಬಗ್ಗೆ ನನಗಿನ್ನೂ ಇದ್ದ ಪ್ರೀತಿ, ಹಂಬಲ ಮತ್ತು ಆಶೆ ಸೀತೆಯ ಅನುಭವವೂ ಆಗಿತ್ತು. ಆಗ ರಾಮಾಯಣ ಕೇವಲ ಲಿಂಗಭೇದ ತೋರುವ ದೃಷ್ಟಾಂತ ಕತೆಯಾಗಲ್ಲದೆ, ಮನುಷ್ಯರ ನಡುವಿನ ಸಂಬಂಧಗಳು ಮತ್ತು ಹೃದಯಾಳದಲ್ಲಿರುವ ವೇದನೆಯ ಕತೆಯಂತೆ ಕಂಡಿತು. ಅದೇ ಹೊತ್ತಿಗೆ 1920ರಲ್ಲಿ ಬ್ಲೂಸ್ (ಹೆಚ್ಚಾಗಿ ದುಮ್ಮಾನಗಳ ಬಗೆಗಿನ ಹಾಡುಗಳ ಒಂದು ಸಂಗೀತ ಶೈಲಿ) ಕವನಗಳನ್ನು ಹಾಡಿದ್ದ ಆನೆಟ್ ಹಾನ್‍ಶಾ ಅವರ ಸಂಗೀತವನ್ನು ಕೇಳಿದೆ. ನನ್ನ ವೈಯಕ್ತಿಕ ದುಃಖ, ಸೀತಾಳ ಕಥನ ಮತ್ತು ಹಾನ್‍ಶಾಳ ಸಂಗೀತ, ಈ ಮೂರು ಒಟ್ಟಾಗಿ ಸಾಗಿದ್ದರಿಂದ ‘ಸೀತಾ ಸಿಂಗ್ಸ್ ದ ಬ್ಲೂ’ ಸಿನಿಮಾವನ್ನು ಮಾಡಿದೆ” ಎನ್ನುತ್ತಾಳೆ ನೀನಾ.

82 ನಿಮಿಷಗಳ ಈ ಅನಿಮೇಟೆಡ್ ಸಿನಿಮಾದಲ್ಲಿ ಸೀತೆಯನ್ನು ತಾನು ವಿಧೇಯಳನ್ನಾಗಿ ತೋರಿಸದೆ. ಉತ್ಸಾಹಿ, ದೃಢ ನಿರ್ಧಾರಗಳ ಮತ್ತು ಭಾವುಕಜೀವಿಯನ್ನಾಗಿ ತೋರಿಸಿದ್ದೇನೆ ಎಂದು ನೀನಾ ಹೇಳುತ್ತಾರಾದರೂ ನಮ್ಮ ದೇಶದಲ್ಲೇ ರಾಮಾಯಣದ ಅನೇಕ ವ್ಯಾಖ್ಯಾನಗಳಲ್ಲಿ ಸೀತೆ ಇದಕ್ಕಿಂತಲೂ ಹೆಚ್ಚು ಗಟ್ಟಿ ವ್ಯಕ್ತಿತ್ವದವಳಾಗಿ ಮೂಡಿಬಂದಿದ್ದಾಳೆ.
ಸಹಜವಾಗಿಯೇ ಇದೆಲ್ಲ ಕೆಲ ‘ರಾಮಭಕ್ತ’ರಾದ ಹಿಂದೂತ್ವವಾದಿಗಳನ್ನು ಕೆರಳಿಸಿದೆ. ವಾಲ್ಮೀಕಿಯ ಜಾನಕಿ ಮತ್ತು ತಮ್ಮ ಸುತ್ತಲೂ ಇರುವ ಸೀತೆಯ ದುಃಖ ಅವರಿಗೆ ಅರ್ಥವಾಗುವುದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...