Homeಅಂಕಣಗಳುನೀನಾ ಮತ್ತು ಸೀತೆಯರ ದುಃಖ

ನೀನಾ ಮತ್ತು ಸೀತೆಯರ ದುಃಖ

- Advertisement -
- Advertisement -

| ಗೌರಿ ಲಂಕೇಶ್ |
27 ಮೇ 2009 (ಸಂಪಾದಕೀಯದಿಂದ)

ಒಬ್ಬಳ ಹೆಸರು ಸೀತಾ, ಇನ್ನೊಬ್ಬಳ ಹೆಸರು ನೀನಾ. ಮೊದ¯ನೆಯವಳು ಸುಮಾರು ಎರಡು ಸಾವಿರ ವರ್ಷಗಳ ಹಿಂದೆ ಸೃಷ್ಠಿಸಲ್ಪಟ್ಟ ಪುರಾಣದಲ್ಲಿ ಕಾಣಿಸಿಕೊಳ್ಳುವ ಮಹಿಳೆ. ಎರಡನೆಯವಳು ಆಧುನಿಕ ದೇಶವಾದ ಅಮೆರಿಕಾದಲ್ಲಿ ವ್ಯಂಗ್ಯಚಿತ್ರಕಾರಳಾಗಿ ದುಡಿಯುತ್ತಿರುವ ಹೆಂಗಸು. ಆದರೆ ಕಾಲ, ದೇಶ, ಭಾಷೆ, ಸಂಸ್ಕøತಿ ಮತ್ತು ಪರಂಪರೆಯನ್ನು ಮೀರಿ ಇವರಿಬ್ಬರನ್ನು ಒಂದು ಸಂಗತಿ ಜೊತೆಗೂಡಿಸುತ್ತದೆ. ಅದು ಗಂಡನಿಂದ ತಿರಸ್ಕøತಗೊಂಡಿರುವ ಮಡದಿಯೊಬ್ಬಳ ಯಾತನೆ, ಅಸಹಾಯಕತೆ ಮತ್ತು ಏಕಾಂಗಿತನ.
ಸೀತಿ ಬೇರೆ ಯಾರೂ ಅಲ್ಲ. ವಾಲ್ಮೀಕಿ ಬರೆದ ರಾಮಾಯಣದ ನಾಯಕಿ. ಆ ಸೀತೆಗಾದ ವ್ಯಥೆ ತನಗಾದ ದುಃಖಕ್ಕಿಂತ ವಿಭಿನ್ನವಾಗಿರಲಿಲ್ಲ ಎಂದು ‘ಸೀತಾ ಸಿಂಗ್ಸ್ ದ ಬ್ಲೂಸ್’ ಎಂಬ ಅನಿಮೇಷನ್ ಸಿನಿಮಾದ ಮೂಲಕ ನೀನಾ ಪ್ಯಾಲಿ ತೋರಿಸಿದ್ದರಿಂದ ಇವತ್ತು ಆಕೆ ಕೆಲ ಹಿಂದೂತ್ವವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾಳೆ.

ಅದು ಆದದ್ದು ಹೀಗೆ: ನೀನಾಳ ಅಮೆರಿಕನ್ ಗಂಡನಿಗೆ ಭಾರತದಲ್ಲಿ ಆರು ತಿಂಗಳ ಕಾಲ ಕಾಂಟ್ರಾಕ್ಟ್ ಮೇಲೆ ಕೆಲಸ ಮಾಡುವ ಅವಕಾಶ ಸಿಗುತ್ತದೆ. ಅಲ್ಲಿಯತನಕ ಅವರಿಬ್ಬರ ದಾಂಪತ್ಯಜೀವನ ಚೆನ್ನಾಗಿ ಸಾಗಿದ್ದು, ಆತ ನೀನಾಳನ್ನು ಅಮೆರಿಕದಲ್ಲಿ ಬಿಟ್ಟು ಭಾರತಕ್ಕೆ ಬರುತ್ತಾನೆ. ಆದರೆ ಇಲ್ಲಿಗೆ ಬಂದನಂತರ ನೀನಾಳನ್ನು ನಿರ್ಲಕ್ಷಿಸಲಾರಂಭಿಸುತ್ತಾನೆ. ಹೀಗೆ ಕೆಲ ತಿಂಗಳುಗಳು ಉರುಳಿದ ನಂತರ ಆತನ ಕಾಂಟ್ರಾಕ್ಟ್ ಅನ್ನು ಇನ್ನೊಂದು ವರ್ಷದ ಅವಧಿಗೆ ವಿಸ್ತರಿಸಲಾಗುತ್ತದೆ. ಆಗ ನೀನಾ ತಾನು ತನ್ನ ಗಂಡನೊಂದಿಗೆ ವಾಸಿಸಬೇಕೆಂದು ನಿರ್ಧರಿಸಿ ತನ್ನ ಕೆಲಸಕ್ಕೆ ರಾಜಿನಾಮೆ ನೀಡಿ, ಬಾಡಿಗೆ ಮನೆಯನ್ನು ತೊರೆದು, ಗಂಟುಮೂಟೆ ಕಟ್ಟಿಕೊಂಡು ಆಕೆಯೂ ಭಾರತಕ್ಕೆ ಬರುತ್ತಾಳೆ.

ಅಪಾರ ಪ್ರೀತಿ ಹೊತ್ತು ಬಂದಿರುವ ನೀನಾಳಿಗೆ ಇಲ್ಲಿ ಆಘಾತ ಕಾದಿರುತ್ತದೆ. ಅವಳ ಗಂಡ ಆಕೆಯ ಬಗೆಗಿನ ಪ್ರೀತಿ ಮತ್ತು ಆಸಕ್ತಿಯನ್ನು ಕಳೆದುಕೊಂಡಿರುತ್ತಾನೆ. ಸಹಜವಾಗಿಯೇ ನೀನಾ ಇದನ್ನು ಕಂಡು ಘಾಸಿಗೊಳಗಾಗುತ್ತಾಳೆ. ಇದು ತಾತ್ಕಾಲಿಕ ಸಮಸ್ಯೆ ಎಂದು ಭಾವಿಸಿ ಗಂಡನ ತಾತ್ಸಾರವನ್ನು ಸಹಿಸಿಕೊಂಡಿರುತ್ತಾಳೆ. ಭಾರತದಲ್ಲಿ ಆಕೆಗೆ ಸ್ನೇಹಿತರಾಗಲಿ, ಸಹೋದ್ಯೋಗಿಗಳಾಗಲಿ ಇಲ್ಲದಿರುವುದು ಆಕೆಯ ಏಕಾಂಗಿತನವನ್ನು ಹೆಚ್ಚಿಸುತ್ತದೆ. ಜೊತೆಗೆ ಭಾರತೀಯ ಮಹಿಳೆಯರಿಗೆ ಸ್ವಾತಂತ್ರ್ಯ ಇಲ್ಲದಿರುವುದು, ಅವರನ್ನು ಎರಡನೆ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳುವುದು, ಗಂಡನ ಹೊರತಾಗಿ ಪ್ರತ್ಯೇಕ ಅಸ್ತಿತ್ವ ಇಲ್ಲದಿರುವುದೆಲ್ಲ ನೀನಾಳಲ್ಲಿ ಬೇಸರ ಮೂಡಿಸುತ್ತದೆ.

 

ಅದೇ ಹೊತ್ತಿಗೆ ನೀನಾ ‘ರಾಮಾಯಣ’ವನ್ನು ಓದಲು ಪ್ರಾರಂಭಿಸುತ್ತಾಳೆ. ರಾಮನನ್ನು ಮರ್ಯಾದ ಪುರುಷೋತ್ತಮನೆಂದೂ, ಆತ ಎಲ್ಲ ರೀತಿಯ ಸದ್ಗುಣಗಳನ್ನು ಹೊಂದಿರುವವನೆಂದೂ; ಆದರೆ ಸೀತೆಯನ್ನು ಯಾವ ಸ್ವಂತಿಕೆಯೂ ಇಲ್ಲದ, ಸ್ವಾತಂತ್ರ್ಯವಿಲ್ಲದ ಆಕೃತಿಯಂತೆ ಚಿತ್ರಿಸಿರುವುದನ್ನು ನೋಡಿ ನೀನಾಳಿಗೆ ‘ರಾಮಾಯಣ’ ಸ್ತ್ರೀದ್ವೇಷಿಯಾದ ಕರಪತ್ರಕ್ಕಿಂತ ಹೆಚ್ಚಿನ ಮೌಲ್ಯ ಹೊಂದಿರದ ಕೃತಿ ಎಂಬಂತೆ ಕಾಣಿಸುತ್ತದೆ.ಮೂರು ಸಾವಿರ ವರ್ಷಗಳ ಹಿಂದೆ ವಾಲ್ಮೀಕಿಯ ಕಾಲ್ಪನಿಕ ಸೃಷ್ಟಿಯಾದ ಸೀತೆ ಅನುಭವಿಸಿದ ಒಬ್ಬಂಟಿತನಕ್ಕೂ, ಆಧುನಿಕ ಮಹಿಳೆಯಾದ ತಾನು 21ನೇ ಶತಮಾನದಲ್ಲಿ ಅನುಭವಿಸುತ್ತಿರುವ ನೋವಿಗೂ ಅಷ್ಟೇನೂ ವ್ಯತ್ಯಾಸವಿಲ್ಲ ಎನಿಸುತ್ತದೆ ನೀನಾಳಿಗೆ. “ನನ್ನನ್ನು ತಿರಸ್ಕರಿಸಿದ ತನ್ನ ಗಂಡನ ಬಗ್ಗೆ ನನಗಿನ್ನೂ ಇದ್ದ ಪ್ರೀತಿ, ಹಂಬಲ ಮತ್ತು ಆಶೆ ಸೀತೆಯ ಅನುಭವವೂ ಆಗಿತ್ತು. ಆಗ ರಾಮಾಯಣ ಕೇವಲ ಲಿಂಗಭೇದ ತೋರುವ ದೃಷ್ಟಾಂತ ಕತೆಯಾಗಲ್ಲದೆ, ಮನುಷ್ಯರ ನಡುವಿನ ಸಂಬಂಧಗಳು ಮತ್ತು ಹೃದಯಾಳದಲ್ಲಿರುವ ವೇದನೆಯ ಕತೆಯಂತೆ ಕಂಡಿತು. ಅದೇ ಹೊತ್ತಿಗೆ 1920ರಲ್ಲಿ ಬ್ಲೂಸ್ (ಹೆಚ್ಚಾಗಿ ದುಮ್ಮಾನಗಳ ಬಗೆಗಿನ ಹಾಡುಗಳ ಒಂದು ಸಂಗೀತ ಶೈಲಿ) ಕವನಗಳನ್ನು ಹಾಡಿದ್ದ ಆನೆಟ್ ಹಾನ್‍ಶಾ ಅವರ ಸಂಗೀತವನ್ನು ಕೇಳಿದೆ. ನನ್ನ ವೈಯಕ್ತಿಕ ದುಃಖ, ಸೀತಾಳ ಕಥನ ಮತ್ತು ಹಾನ್‍ಶಾಳ ಸಂಗೀತ, ಈ ಮೂರು ಒಟ್ಟಾಗಿ ಸಾಗಿದ್ದರಿಂದ ‘ಸೀತಾ ಸಿಂಗ್ಸ್ ದ ಬ್ಲೂ’ ಸಿನಿಮಾವನ್ನು ಮಾಡಿದೆ” ಎನ್ನುತ್ತಾಳೆ ನೀನಾ.

82 ನಿಮಿಷಗಳ ಈ ಅನಿಮೇಟೆಡ್ ಸಿನಿಮಾದಲ್ಲಿ ಸೀತೆಯನ್ನು ತಾನು ವಿಧೇಯಳನ್ನಾಗಿ ತೋರಿಸದೆ. ಉತ್ಸಾಹಿ, ದೃಢ ನಿರ್ಧಾರಗಳ ಮತ್ತು ಭಾವುಕಜೀವಿಯನ್ನಾಗಿ ತೋರಿಸಿದ್ದೇನೆ ಎಂದು ನೀನಾ ಹೇಳುತ್ತಾರಾದರೂ ನಮ್ಮ ದೇಶದಲ್ಲೇ ರಾಮಾಯಣದ ಅನೇಕ ವ್ಯಾಖ್ಯಾನಗಳಲ್ಲಿ ಸೀತೆ ಇದಕ್ಕಿಂತಲೂ ಹೆಚ್ಚು ಗಟ್ಟಿ ವ್ಯಕ್ತಿತ್ವದವಳಾಗಿ ಮೂಡಿಬಂದಿದ್ದಾಳೆ.
ಸಹಜವಾಗಿಯೇ ಇದೆಲ್ಲ ಕೆಲ ‘ರಾಮಭಕ್ತ’ರಾದ ಹಿಂದೂತ್ವವಾದಿಗಳನ್ನು ಕೆರಳಿಸಿದೆ. ವಾಲ್ಮೀಕಿಯ ಜಾನಕಿ ಮತ್ತು ತಮ್ಮ ಸುತ್ತಲೂ ಇರುವ ಸೀತೆಯ ದುಃಖ ಅವರಿಗೆ ಅರ್ಥವಾಗುವುದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...