Homeಮುಖಪುಟ‘ಸೀತಾರಾಮನ್ ಸ್ಕೂಲ್ ಆಫ್‌ ಇಕನಾಮಿಕ್ಸ್‌‌’: ‘ರುಪಾಯಿ ಕುಸಿಯುತ್ತಿಲ್ಲ, ಡಾಲರ್‌ ಬಲಗೊಳ್ಳುತ್ತಿದೆ’ ವಿತ್ತ ಸಚಿವರ ಹೇಳಿಕೆ ಟ್ರೋಲ್‌

‘ಸೀತಾರಾಮನ್ ಸ್ಕೂಲ್ ಆಫ್‌ ಇಕನಾಮಿಕ್ಸ್‌‌’: ‘ರುಪಾಯಿ ಕುಸಿಯುತ್ತಿಲ್ಲ, ಡಾಲರ್‌ ಬಲಗೊಳ್ಳುತ್ತಿದೆ’ ವಿತ್ತ ಸಚಿವರ ಹೇಳಿಕೆ ಟ್ರೋಲ್‌

- Advertisement -
- Advertisement -

ಅಮೆರಿಕನ್‌‌‌ ಡಾಲರ್‌‌ ವಿರುದ್ಧ ಭಾರತೀಯ ರುಪಾಯಿ 82.38 ರೂ.ಗೆ ಕುಸಿದಿದೆ. ಇದು ಐತಿಹಾಸಿಕ ದಾಖಲೆಯ ಕುಸಿತವಾಗಿದ್ದು, ಭಾರತೀಯ ಕರೆನ್ಸಿ ಮೇಲೇಲುವ ಸ್ಥಿತಿಯ ಬಗ್ಗೆ ಆರ್ಥಿಕ ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಈತನ್ಮಧ್ಯೆ, ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಎಲ್ಲಾ ತರ್ಕಬದ್ಧತೆಯ ನಿಯಮಗಳನ್ನು ಗಾಳಿಗೆ ತೂರಿ, “ರುಪಾಯಿ ಕುಸಿಯುತ್ತಿಲ್ಲ, ಡಾಲರ್‌ ಬಲಗೊಳ್ಳುತ್ತಿದೆ” ಎಂದು ಹೇಳಿದೆ.

ಅಮೆರಿಕದ ವಾಶಿಂಗ್‌ಟನ್‌‌ ಡಿಸಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ್ದ ಒಕ್ಕೂಟ ಸರ್ಕಾರದ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್‌ ಅವರು ಭಾರತೀಯ ರೂಪಾಯಿ ಮೌಲ್ಯದಲ್ಲಿ 8% ದಷ್ಟು ಕುಸಿದಿರುವುದನ್ನು ಸಮರ್ಥಿಸಿಕೊಂಡಿದ್ದರು. “ರುಪಾಯಿ ಕುಸಿಯುತ್ತಿಲ್ಲ, ಬದಲಾಗಿ ಅಮೇರಿಕನ್ ಡಾಲರ್‌ ಬಲಗೊಳ್ಳುತ್ತಿದೆ” ಎಂದು ಅವರು ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಚಿವರ ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವ್ಯಂಗ್ಯಕ್ಕೆ ಈಡಾಗಿದೆ. ವಿಪಕ್ಷಗಳು ಸಚಿವರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದೆ.

ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಕೂಡ ಸಚಿವರನ್ನು ವ್ಯಂಗ್ಯವಾಡಿದ್ದಾರೆ. “ಶುಭಾಶಯಗಳು, ಜೆಎನ್‌ಯು ವಿಫಲವಾಗಿಲ್ಲ” ಎಂದು ಬರೆದಿರುವ ಅವರು, ‘‘ನಾವು ಪಂದ್ಯ ಸೋತಿಲ್ಲ, ನಮ್ಮ ವಿರುದ್ಧ ಇರುವ ತಂಡ ಗೆದ್ದಿದೆ” ಎಂದು ಬರೆದಿರುವ ಜೊತೆಗೆ ನಿರ್ಮಲಾ ಅವರ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಆಮ್‌ ಆದ್ಮಿ ಪಕ್ಷ ನಿರ್ಮಲಾ ಅವರನ್ನು ಟೀಕಿಸಿದ್ದು, “ಮೋದಿ ಅವರ ‘ಸ್ಕೂಲ್ ಆಫ್ ಲಾಜಿಕ್‌’ನ ಹೆಮ್ಮೆಯ ವಿದ್ಯಾರ್ಥಿ” ಎಂದು ವಿಡಿಯೊವೊಂದನ್ನು ಹಂಚಿಕೊಂಡಿದೆ. ಅದರಲ್ಲಿ, ನಿರ್ಮಲಾ ಅವರ ವೈರಲ್ ಹೇಳಿಕೆ ಮತ್ತು ಪ್ರಧಾನಿ ಮೋದಿ ಅವರು ತಾಪಮಾನ ಹೆಚ್ಚಿರುವ ಕುರಿತು ನೀಡಿರುವ ಹೇಳಿಕೆಯನ್ನು ನೀಡಲಾಗಿದೆ.

ತಾಪಮಾನ ಬದಲಾವಣೆ ಬಗ್ಗೆ ಪ್ರಧಾನಿ ಮೋದಿ ಅವರೊಂದಿಗೆ ಕೇಳಿದಾಗ ಅವರು, “ತಾಪಮಾನ ಬದಲಾಗಿಲ್ಲ, ವಯಸ್ಸು ಹೆಚ್ಚಾದ ಕಾರಣ ಸಹಿಸುವ ಶಕ್ತಿ ಕಡಿಮೆಯಾದಾಗ ತಾಪಮಾನ ಹೆಚ್ಚಾದಂತೆ ಅನಿಸುತ್ತದೆ. ತಾಪಮಾನ ಬದಲಾಗಿಲ್ಲ, ನಾವು ಬದಲಾಗಿದ್ದೇವೆ” ಎಂದು ಮೋದಿ ಹೇಳಿದ್ದರು. ಈ ಹೇಳಕೆ ಕೂಡಾ ವ್ಯಾಪಕ ಟ್ರೋಲ್‌ಗೆ ಒಳಗಾಗಿತ್ತು.

ಇದನ್ನೂ ಓದಿ: ಪಡಿತರ ಅಂಗಡಿಯಲ್ಲಿ ಮೋದಿ ಚಿತ್ರ ಇಲ್ಲದಿರುವುದನ್ನು ಕಂಡುಹಿಡಿದ ನಿರ್ಮಲಾ ಸೀತಾರಾಮನ್; ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್

ಡಿಎಂಕೆ ನಾಯಕರಾದ ಇಸೈ ಅವರು, ಸಚಿವರ ಈ ಹೇಳಿಕೆಗೆ ಅವರು ಅರ್ಥಶಾಸ್ತ್ರದ ನೋಬೆಲ್ ಪಡೆಯಬೇಕು ಎಂದು ವ್ಯಂಗ್ಯವಾಗಿದ್ದಾರೆ.

ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಅವರು ವ್ಯಂಗ್ಯ ಚಿತ್ರ ಬರೆದಿದ್ದು, ಕೋಚ್ ನಿರ್ಮಲಾ ಸೀತಾರಾಮನ್ ಎಂದು ಬರೆದಿದ್ದಾರೆ.

ಬಿಆರ್‌ಎಸ್‌ ಪಕ್ಷದ ಐಟಿ ಮುಖ್ಯಸ್ಥ ಯತೀಶ್‌ ರೆಡ್ಡಿ ಅವರು, ‘‘ಭೂಮಿಯ ಮೇಲೆ ರೂಪಾಯಿ ಗಟ್ಟಿಯಾಗಿದೆ, ಡಾಲರ್ ಏರುತ್ತಿದೆ’’ ಎಂದು ವ್ಯಂಗ್ಯಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ಬಗ್ಗೆ ನಿಮ್ಮ ರಾಜ್ಯ ಸರ್ಕಾರಗಳನ್ನು ಕೇಳಿ: ನಿರ್ಮಲಾ ಸೀತಾರಾಮನ್‌

ಎಎಪಿ ಸಂಸದ ರಾಘವ್ ಚಡ್ಡಾ ಅವರು,“ನನ್ನ ಅರ್ಥಶಾಸ್ತ್ರ ದುರ್ಬಲವಾಗಿಲ್ಲ, ನಿಮ್ಮದು ಶಕ್ತಿಯುತವಾಗಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

ಇದನ್ನೂ ಓದಿ: NMP ಯೋಜನೆ: ಕಾಂಗ್ರೆಸ್ ಡಿಎನ್‌ಎಯಲ್ಲಿ ಲೂಟಿ ಇದೆ ಎಂದ ಸಚಿವೆ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಾರ್ವಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...