Homeಮುಖಪುಟ‘ಸೀತಾರಾಮನ್ ಸ್ಕೂಲ್ ಆಫ್‌ ಇಕನಾಮಿಕ್ಸ್‌‌’: ‘ರುಪಾಯಿ ಕುಸಿಯುತ್ತಿಲ್ಲ, ಡಾಲರ್‌ ಬಲಗೊಳ್ಳುತ್ತಿದೆ’ ವಿತ್ತ ಸಚಿವರ ಹೇಳಿಕೆ ಟ್ರೋಲ್‌

‘ಸೀತಾರಾಮನ್ ಸ್ಕೂಲ್ ಆಫ್‌ ಇಕನಾಮಿಕ್ಸ್‌‌’: ‘ರುಪಾಯಿ ಕುಸಿಯುತ್ತಿಲ್ಲ, ಡಾಲರ್‌ ಬಲಗೊಳ್ಳುತ್ತಿದೆ’ ವಿತ್ತ ಸಚಿವರ ಹೇಳಿಕೆ ಟ್ರೋಲ್‌

- Advertisement -
- Advertisement -

ಅಮೆರಿಕನ್‌‌‌ ಡಾಲರ್‌‌ ವಿರುದ್ಧ ಭಾರತೀಯ ರುಪಾಯಿ 82.38 ರೂ.ಗೆ ಕುಸಿದಿದೆ. ಇದು ಐತಿಹಾಸಿಕ ದಾಖಲೆಯ ಕುಸಿತವಾಗಿದ್ದು, ಭಾರತೀಯ ಕರೆನ್ಸಿ ಮೇಲೇಲುವ ಸ್ಥಿತಿಯ ಬಗ್ಗೆ ಆರ್ಥಿಕ ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಈತನ್ಮಧ್ಯೆ, ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಎಲ್ಲಾ ತರ್ಕಬದ್ಧತೆಯ ನಿಯಮಗಳನ್ನು ಗಾಳಿಗೆ ತೂರಿ, “ರುಪಾಯಿ ಕುಸಿಯುತ್ತಿಲ್ಲ, ಡಾಲರ್‌ ಬಲಗೊಳ್ಳುತ್ತಿದೆ” ಎಂದು ಹೇಳಿದೆ.

ಅಮೆರಿಕದ ವಾಶಿಂಗ್‌ಟನ್‌‌ ಡಿಸಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ್ದ ಒಕ್ಕೂಟ ಸರ್ಕಾರದ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್‌ ಅವರು ಭಾರತೀಯ ರೂಪಾಯಿ ಮೌಲ್ಯದಲ್ಲಿ 8% ದಷ್ಟು ಕುಸಿದಿರುವುದನ್ನು ಸಮರ್ಥಿಸಿಕೊಂಡಿದ್ದರು. “ರುಪಾಯಿ ಕುಸಿಯುತ್ತಿಲ್ಲ, ಬದಲಾಗಿ ಅಮೇರಿಕನ್ ಡಾಲರ್‌ ಬಲಗೊಳ್ಳುತ್ತಿದೆ” ಎಂದು ಅವರು ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಚಿವರ ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವ್ಯಂಗ್ಯಕ್ಕೆ ಈಡಾಗಿದೆ. ವಿಪಕ್ಷಗಳು ಸಚಿವರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದೆ.

ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಕೂಡ ಸಚಿವರನ್ನು ವ್ಯಂಗ್ಯವಾಡಿದ್ದಾರೆ. “ಶುಭಾಶಯಗಳು, ಜೆಎನ್‌ಯು ವಿಫಲವಾಗಿಲ್ಲ” ಎಂದು ಬರೆದಿರುವ ಅವರು, ‘‘ನಾವು ಪಂದ್ಯ ಸೋತಿಲ್ಲ, ನಮ್ಮ ವಿರುದ್ಧ ಇರುವ ತಂಡ ಗೆದ್ದಿದೆ” ಎಂದು ಬರೆದಿರುವ ಜೊತೆಗೆ ನಿರ್ಮಲಾ ಅವರ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಆಮ್‌ ಆದ್ಮಿ ಪಕ್ಷ ನಿರ್ಮಲಾ ಅವರನ್ನು ಟೀಕಿಸಿದ್ದು, “ಮೋದಿ ಅವರ ‘ಸ್ಕೂಲ್ ಆಫ್ ಲಾಜಿಕ್‌’ನ ಹೆಮ್ಮೆಯ ವಿದ್ಯಾರ್ಥಿ” ಎಂದು ವಿಡಿಯೊವೊಂದನ್ನು ಹಂಚಿಕೊಂಡಿದೆ. ಅದರಲ್ಲಿ, ನಿರ್ಮಲಾ ಅವರ ವೈರಲ್ ಹೇಳಿಕೆ ಮತ್ತು ಪ್ರಧಾನಿ ಮೋದಿ ಅವರು ತಾಪಮಾನ ಹೆಚ್ಚಿರುವ ಕುರಿತು ನೀಡಿರುವ ಹೇಳಿಕೆಯನ್ನು ನೀಡಲಾಗಿದೆ.

ತಾಪಮಾನ ಬದಲಾವಣೆ ಬಗ್ಗೆ ಪ್ರಧಾನಿ ಮೋದಿ ಅವರೊಂದಿಗೆ ಕೇಳಿದಾಗ ಅವರು, “ತಾಪಮಾನ ಬದಲಾಗಿಲ್ಲ, ವಯಸ್ಸು ಹೆಚ್ಚಾದ ಕಾರಣ ಸಹಿಸುವ ಶಕ್ತಿ ಕಡಿಮೆಯಾದಾಗ ತಾಪಮಾನ ಹೆಚ್ಚಾದಂತೆ ಅನಿಸುತ್ತದೆ. ತಾಪಮಾನ ಬದಲಾಗಿಲ್ಲ, ನಾವು ಬದಲಾಗಿದ್ದೇವೆ” ಎಂದು ಮೋದಿ ಹೇಳಿದ್ದರು. ಈ ಹೇಳಕೆ ಕೂಡಾ ವ್ಯಾಪಕ ಟ್ರೋಲ್‌ಗೆ ಒಳಗಾಗಿತ್ತು.

ಇದನ್ನೂ ಓದಿ: ಪಡಿತರ ಅಂಗಡಿಯಲ್ಲಿ ಮೋದಿ ಚಿತ್ರ ಇಲ್ಲದಿರುವುದನ್ನು ಕಂಡುಹಿಡಿದ ನಿರ್ಮಲಾ ಸೀತಾರಾಮನ್; ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್

ಡಿಎಂಕೆ ನಾಯಕರಾದ ಇಸೈ ಅವರು, ಸಚಿವರ ಈ ಹೇಳಿಕೆಗೆ ಅವರು ಅರ್ಥಶಾಸ್ತ್ರದ ನೋಬೆಲ್ ಪಡೆಯಬೇಕು ಎಂದು ವ್ಯಂಗ್ಯವಾಗಿದ್ದಾರೆ.

ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಅವರು ವ್ಯಂಗ್ಯ ಚಿತ್ರ ಬರೆದಿದ್ದು, ಕೋಚ್ ನಿರ್ಮಲಾ ಸೀತಾರಾಮನ್ ಎಂದು ಬರೆದಿದ್ದಾರೆ.

ಬಿಆರ್‌ಎಸ್‌ ಪಕ್ಷದ ಐಟಿ ಮುಖ್ಯಸ್ಥ ಯತೀಶ್‌ ರೆಡ್ಡಿ ಅವರು, ‘‘ಭೂಮಿಯ ಮೇಲೆ ರೂಪಾಯಿ ಗಟ್ಟಿಯಾಗಿದೆ, ಡಾಲರ್ ಏರುತ್ತಿದೆ’’ ಎಂದು ವ್ಯಂಗ್ಯಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ಬಗ್ಗೆ ನಿಮ್ಮ ರಾಜ್ಯ ಸರ್ಕಾರಗಳನ್ನು ಕೇಳಿ: ನಿರ್ಮಲಾ ಸೀತಾರಾಮನ್‌

ಎಎಪಿ ಸಂಸದ ರಾಘವ್ ಚಡ್ಡಾ ಅವರು,“ನನ್ನ ಅರ್ಥಶಾಸ್ತ್ರ ದುರ್ಬಲವಾಗಿಲ್ಲ, ನಿಮ್ಮದು ಶಕ್ತಿಯುತವಾಗಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

ಇದನ್ನೂ ಓದಿ: NMP ಯೋಜನೆ: ಕಾಂಗ್ರೆಸ್ ಡಿಎನ್‌ಎಯಲ್ಲಿ ಲೂಟಿ ಇದೆ ಎಂದ ಸಚಿವೆ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...