Homeಮುಖಪುಟ‘ಸೀತಾರಾಮನ್ ಸ್ಕೂಲ್ ಆಫ್‌ ಇಕನಾಮಿಕ್ಸ್‌‌’: ‘ರುಪಾಯಿ ಕುಸಿಯುತ್ತಿಲ್ಲ, ಡಾಲರ್‌ ಬಲಗೊಳ್ಳುತ್ತಿದೆ’ ವಿತ್ತ ಸಚಿವರ ಹೇಳಿಕೆ ಟ್ರೋಲ್‌

‘ಸೀತಾರಾಮನ್ ಸ್ಕೂಲ್ ಆಫ್‌ ಇಕನಾಮಿಕ್ಸ್‌‌’: ‘ರುಪಾಯಿ ಕುಸಿಯುತ್ತಿಲ್ಲ, ಡಾಲರ್‌ ಬಲಗೊಳ್ಳುತ್ತಿದೆ’ ವಿತ್ತ ಸಚಿವರ ಹೇಳಿಕೆ ಟ್ರೋಲ್‌

- Advertisement -
- Advertisement -

ಅಮೆರಿಕನ್‌‌‌ ಡಾಲರ್‌‌ ವಿರುದ್ಧ ಭಾರತೀಯ ರುಪಾಯಿ 82.38 ರೂ.ಗೆ ಕುಸಿದಿದೆ. ಇದು ಐತಿಹಾಸಿಕ ದಾಖಲೆಯ ಕುಸಿತವಾಗಿದ್ದು, ಭಾರತೀಯ ಕರೆನ್ಸಿ ಮೇಲೇಲುವ ಸ್ಥಿತಿಯ ಬಗ್ಗೆ ಆರ್ಥಿಕ ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಈತನ್ಮಧ್ಯೆ, ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಎಲ್ಲಾ ತರ್ಕಬದ್ಧತೆಯ ನಿಯಮಗಳನ್ನು ಗಾಳಿಗೆ ತೂರಿ, “ರುಪಾಯಿ ಕುಸಿಯುತ್ತಿಲ್ಲ, ಡಾಲರ್‌ ಬಲಗೊಳ್ಳುತ್ತಿದೆ” ಎಂದು ಹೇಳಿದೆ.

ಅಮೆರಿಕದ ವಾಶಿಂಗ್‌ಟನ್‌‌ ಡಿಸಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ್ದ ಒಕ್ಕೂಟ ಸರ್ಕಾರದ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್‌ ಅವರು ಭಾರತೀಯ ರೂಪಾಯಿ ಮೌಲ್ಯದಲ್ಲಿ 8% ದಷ್ಟು ಕುಸಿದಿರುವುದನ್ನು ಸಮರ್ಥಿಸಿಕೊಂಡಿದ್ದರು. “ರುಪಾಯಿ ಕುಸಿಯುತ್ತಿಲ್ಲ, ಬದಲಾಗಿ ಅಮೇರಿಕನ್ ಡಾಲರ್‌ ಬಲಗೊಳ್ಳುತ್ತಿದೆ” ಎಂದು ಅವರು ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಚಿವರ ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವ್ಯಂಗ್ಯಕ್ಕೆ ಈಡಾಗಿದೆ. ವಿಪಕ್ಷಗಳು ಸಚಿವರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದೆ.

ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಕೂಡ ಸಚಿವರನ್ನು ವ್ಯಂಗ್ಯವಾಡಿದ್ದಾರೆ. “ಶುಭಾಶಯಗಳು, ಜೆಎನ್‌ಯು ವಿಫಲವಾಗಿಲ್ಲ” ಎಂದು ಬರೆದಿರುವ ಅವರು, ‘‘ನಾವು ಪಂದ್ಯ ಸೋತಿಲ್ಲ, ನಮ್ಮ ವಿರುದ್ಧ ಇರುವ ತಂಡ ಗೆದ್ದಿದೆ” ಎಂದು ಬರೆದಿರುವ ಜೊತೆಗೆ ನಿರ್ಮಲಾ ಅವರ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಆಮ್‌ ಆದ್ಮಿ ಪಕ್ಷ ನಿರ್ಮಲಾ ಅವರನ್ನು ಟೀಕಿಸಿದ್ದು, “ಮೋದಿ ಅವರ ‘ಸ್ಕೂಲ್ ಆಫ್ ಲಾಜಿಕ್‌’ನ ಹೆಮ್ಮೆಯ ವಿದ್ಯಾರ್ಥಿ” ಎಂದು ವಿಡಿಯೊವೊಂದನ್ನು ಹಂಚಿಕೊಂಡಿದೆ. ಅದರಲ್ಲಿ, ನಿರ್ಮಲಾ ಅವರ ವೈರಲ್ ಹೇಳಿಕೆ ಮತ್ತು ಪ್ರಧಾನಿ ಮೋದಿ ಅವರು ತಾಪಮಾನ ಹೆಚ್ಚಿರುವ ಕುರಿತು ನೀಡಿರುವ ಹೇಳಿಕೆಯನ್ನು ನೀಡಲಾಗಿದೆ.

ತಾಪಮಾನ ಬದಲಾವಣೆ ಬಗ್ಗೆ ಪ್ರಧಾನಿ ಮೋದಿ ಅವರೊಂದಿಗೆ ಕೇಳಿದಾಗ ಅವರು, “ತಾಪಮಾನ ಬದಲಾಗಿಲ್ಲ, ವಯಸ್ಸು ಹೆಚ್ಚಾದ ಕಾರಣ ಸಹಿಸುವ ಶಕ್ತಿ ಕಡಿಮೆಯಾದಾಗ ತಾಪಮಾನ ಹೆಚ್ಚಾದಂತೆ ಅನಿಸುತ್ತದೆ. ತಾಪಮಾನ ಬದಲಾಗಿಲ್ಲ, ನಾವು ಬದಲಾಗಿದ್ದೇವೆ” ಎಂದು ಮೋದಿ ಹೇಳಿದ್ದರು. ಈ ಹೇಳಕೆ ಕೂಡಾ ವ್ಯಾಪಕ ಟ್ರೋಲ್‌ಗೆ ಒಳಗಾಗಿತ್ತು.

ಇದನ್ನೂ ಓದಿ: ಪಡಿತರ ಅಂಗಡಿಯಲ್ಲಿ ಮೋದಿ ಚಿತ್ರ ಇಲ್ಲದಿರುವುದನ್ನು ಕಂಡುಹಿಡಿದ ನಿರ್ಮಲಾ ಸೀತಾರಾಮನ್; ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್

ಡಿಎಂಕೆ ನಾಯಕರಾದ ಇಸೈ ಅವರು, ಸಚಿವರ ಈ ಹೇಳಿಕೆಗೆ ಅವರು ಅರ್ಥಶಾಸ್ತ್ರದ ನೋಬೆಲ್ ಪಡೆಯಬೇಕು ಎಂದು ವ್ಯಂಗ್ಯವಾಗಿದ್ದಾರೆ.

ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಅವರು ವ್ಯಂಗ್ಯ ಚಿತ್ರ ಬರೆದಿದ್ದು, ಕೋಚ್ ನಿರ್ಮಲಾ ಸೀತಾರಾಮನ್ ಎಂದು ಬರೆದಿದ್ದಾರೆ.

ಬಿಆರ್‌ಎಸ್‌ ಪಕ್ಷದ ಐಟಿ ಮುಖ್ಯಸ್ಥ ಯತೀಶ್‌ ರೆಡ್ಡಿ ಅವರು, ‘‘ಭೂಮಿಯ ಮೇಲೆ ರೂಪಾಯಿ ಗಟ್ಟಿಯಾಗಿದೆ, ಡಾಲರ್ ಏರುತ್ತಿದೆ’’ ಎಂದು ವ್ಯಂಗ್ಯಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ಬಗ್ಗೆ ನಿಮ್ಮ ರಾಜ್ಯ ಸರ್ಕಾರಗಳನ್ನು ಕೇಳಿ: ನಿರ್ಮಲಾ ಸೀತಾರಾಮನ್‌

ಎಎಪಿ ಸಂಸದ ರಾಘವ್ ಚಡ್ಡಾ ಅವರು,“ನನ್ನ ಅರ್ಥಶಾಸ್ತ್ರ ದುರ್ಬಲವಾಗಿಲ್ಲ, ನಿಮ್ಮದು ಶಕ್ತಿಯುತವಾಗಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

ಇದನ್ನೂ ಓದಿ: NMP ಯೋಜನೆ: ಕಾಂಗ್ರೆಸ್ ಡಿಎನ್‌ಎಯಲ್ಲಿ ಲೂಟಿ ಇದೆ ಎಂದ ಸಚಿವೆ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...