Homeಮುಖಪುಟ‘ಸೀತಾರಾಮನ್ ಸ್ಕೂಲ್ ಆಫ್‌ ಇಕನಾಮಿಕ್ಸ್‌‌’: ‘ರುಪಾಯಿ ಕುಸಿಯುತ್ತಿಲ್ಲ, ಡಾಲರ್‌ ಬಲಗೊಳ್ಳುತ್ತಿದೆ’ ವಿತ್ತ ಸಚಿವರ ಹೇಳಿಕೆ ಟ್ರೋಲ್‌

‘ಸೀತಾರಾಮನ್ ಸ್ಕೂಲ್ ಆಫ್‌ ಇಕನಾಮಿಕ್ಸ್‌‌’: ‘ರುಪಾಯಿ ಕುಸಿಯುತ್ತಿಲ್ಲ, ಡಾಲರ್‌ ಬಲಗೊಳ್ಳುತ್ತಿದೆ’ ವಿತ್ತ ಸಚಿವರ ಹೇಳಿಕೆ ಟ್ರೋಲ್‌

- Advertisement -
- Advertisement -

ಅಮೆರಿಕನ್‌‌‌ ಡಾಲರ್‌‌ ವಿರುದ್ಧ ಭಾರತೀಯ ರುಪಾಯಿ 82.38 ರೂ.ಗೆ ಕುಸಿದಿದೆ. ಇದು ಐತಿಹಾಸಿಕ ದಾಖಲೆಯ ಕುಸಿತವಾಗಿದ್ದು, ಭಾರತೀಯ ಕರೆನ್ಸಿ ಮೇಲೇಲುವ ಸ್ಥಿತಿಯ ಬಗ್ಗೆ ಆರ್ಥಿಕ ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಈತನ್ಮಧ್ಯೆ, ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಎಲ್ಲಾ ತರ್ಕಬದ್ಧತೆಯ ನಿಯಮಗಳನ್ನು ಗಾಳಿಗೆ ತೂರಿ, “ರುಪಾಯಿ ಕುಸಿಯುತ್ತಿಲ್ಲ, ಡಾಲರ್‌ ಬಲಗೊಳ್ಳುತ್ತಿದೆ” ಎಂದು ಹೇಳಿದೆ.

ಅಮೆರಿಕದ ವಾಶಿಂಗ್‌ಟನ್‌‌ ಡಿಸಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ್ದ ಒಕ್ಕೂಟ ಸರ್ಕಾರದ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್‌ ಅವರು ಭಾರತೀಯ ರೂಪಾಯಿ ಮೌಲ್ಯದಲ್ಲಿ 8% ದಷ್ಟು ಕುಸಿದಿರುವುದನ್ನು ಸಮರ್ಥಿಸಿಕೊಂಡಿದ್ದರು. “ರುಪಾಯಿ ಕುಸಿಯುತ್ತಿಲ್ಲ, ಬದಲಾಗಿ ಅಮೇರಿಕನ್ ಡಾಲರ್‌ ಬಲಗೊಳ್ಳುತ್ತಿದೆ” ಎಂದು ಅವರು ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಚಿವರ ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವ್ಯಂಗ್ಯಕ್ಕೆ ಈಡಾಗಿದೆ. ವಿಪಕ್ಷಗಳು ಸಚಿವರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದೆ.

ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಕೂಡ ಸಚಿವರನ್ನು ವ್ಯಂಗ್ಯವಾಡಿದ್ದಾರೆ. “ಶುಭಾಶಯಗಳು, ಜೆಎನ್‌ಯು ವಿಫಲವಾಗಿಲ್ಲ” ಎಂದು ಬರೆದಿರುವ ಅವರು, ‘‘ನಾವು ಪಂದ್ಯ ಸೋತಿಲ್ಲ, ನಮ್ಮ ವಿರುದ್ಧ ಇರುವ ತಂಡ ಗೆದ್ದಿದೆ” ಎಂದು ಬರೆದಿರುವ ಜೊತೆಗೆ ನಿರ್ಮಲಾ ಅವರ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಆಮ್‌ ಆದ್ಮಿ ಪಕ್ಷ ನಿರ್ಮಲಾ ಅವರನ್ನು ಟೀಕಿಸಿದ್ದು, “ಮೋದಿ ಅವರ ‘ಸ್ಕೂಲ್ ಆಫ್ ಲಾಜಿಕ್‌’ನ ಹೆಮ್ಮೆಯ ವಿದ್ಯಾರ್ಥಿ” ಎಂದು ವಿಡಿಯೊವೊಂದನ್ನು ಹಂಚಿಕೊಂಡಿದೆ. ಅದರಲ್ಲಿ, ನಿರ್ಮಲಾ ಅವರ ವೈರಲ್ ಹೇಳಿಕೆ ಮತ್ತು ಪ್ರಧಾನಿ ಮೋದಿ ಅವರು ತಾಪಮಾನ ಹೆಚ್ಚಿರುವ ಕುರಿತು ನೀಡಿರುವ ಹೇಳಿಕೆಯನ್ನು ನೀಡಲಾಗಿದೆ.

ತಾಪಮಾನ ಬದಲಾವಣೆ ಬಗ್ಗೆ ಪ್ರಧಾನಿ ಮೋದಿ ಅವರೊಂದಿಗೆ ಕೇಳಿದಾಗ ಅವರು, “ತಾಪಮಾನ ಬದಲಾಗಿಲ್ಲ, ವಯಸ್ಸು ಹೆಚ್ಚಾದ ಕಾರಣ ಸಹಿಸುವ ಶಕ್ತಿ ಕಡಿಮೆಯಾದಾಗ ತಾಪಮಾನ ಹೆಚ್ಚಾದಂತೆ ಅನಿಸುತ್ತದೆ. ತಾಪಮಾನ ಬದಲಾಗಿಲ್ಲ, ನಾವು ಬದಲಾಗಿದ್ದೇವೆ” ಎಂದು ಮೋದಿ ಹೇಳಿದ್ದರು. ಈ ಹೇಳಕೆ ಕೂಡಾ ವ್ಯಾಪಕ ಟ್ರೋಲ್‌ಗೆ ಒಳಗಾಗಿತ್ತು.

ಇದನ್ನೂ ಓದಿ: ಪಡಿತರ ಅಂಗಡಿಯಲ್ಲಿ ಮೋದಿ ಚಿತ್ರ ಇಲ್ಲದಿರುವುದನ್ನು ಕಂಡುಹಿಡಿದ ನಿರ್ಮಲಾ ಸೀತಾರಾಮನ್; ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್

ಡಿಎಂಕೆ ನಾಯಕರಾದ ಇಸೈ ಅವರು, ಸಚಿವರ ಈ ಹೇಳಿಕೆಗೆ ಅವರು ಅರ್ಥಶಾಸ್ತ್ರದ ನೋಬೆಲ್ ಪಡೆಯಬೇಕು ಎಂದು ವ್ಯಂಗ್ಯವಾಗಿದ್ದಾರೆ.

ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಅವರು ವ್ಯಂಗ್ಯ ಚಿತ್ರ ಬರೆದಿದ್ದು, ಕೋಚ್ ನಿರ್ಮಲಾ ಸೀತಾರಾಮನ್ ಎಂದು ಬರೆದಿದ್ದಾರೆ.

ಬಿಆರ್‌ಎಸ್‌ ಪಕ್ಷದ ಐಟಿ ಮುಖ್ಯಸ್ಥ ಯತೀಶ್‌ ರೆಡ್ಡಿ ಅವರು, ‘‘ಭೂಮಿಯ ಮೇಲೆ ರೂಪಾಯಿ ಗಟ್ಟಿಯಾಗಿದೆ, ಡಾಲರ್ ಏರುತ್ತಿದೆ’’ ಎಂದು ವ್ಯಂಗ್ಯಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ಬಗ್ಗೆ ನಿಮ್ಮ ರಾಜ್ಯ ಸರ್ಕಾರಗಳನ್ನು ಕೇಳಿ: ನಿರ್ಮಲಾ ಸೀತಾರಾಮನ್‌

ಎಎಪಿ ಸಂಸದ ರಾಘವ್ ಚಡ್ಡಾ ಅವರು,“ನನ್ನ ಅರ್ಥಶಾಸ್ತ್ರ ದುರ್ಬಲವಾಗಿಲ್ಲ, ನಿಮ್ಮದು ಶಕ್ತಿಯುತವಾಗಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

ಇದನ್ನೂ ಓದಿ: NMP ಯೋಜನೆ: ಕಾಂಗ್ರೆಸ್ ಡಿಎನ್‌ಎಯಲ್ಲಿ ಲೂಟಿ ಇದೆ ಎಂದ ಸಚಿವೆ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....