Homeಮುಖಪುಟಪೂರ್ವ ಲಡಾಖ್‌ನ ಎಲ್‌ಎಸಿನಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ: ವಿದೇಶಾಂಗ ಸಚಿವ ಜೈಶಂಕರ್‌‌

ಪೂರ್ವ ಲಡಾಖ್‌ನ ಎಲ್‌ಎಸಿನಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ: ವಿದೇಶಾಂಗ ಸಚಿವ ಜೈಶಂಕರ್‌‌

- Advertisement -
- Advertisement -

ಪೂರ್ವ ಲಡಾಖ್‌ನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ನಡುವಿನ ಪರಿಸ್ಥಿತಿಯು ಬಹಳ ಸೂಕ್ಷ್ಮವೂ, ಸಾಕಷ್ಟು ಅಪಾಯಕಾರಿಯೂ ಆಗಿ ಉಳಿದಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

‘ಇಂಡಿಯಾ ಟುಡೇ’ ವಾಹಿನಿಯ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿರುವ ಅವರು, “ಎರಡೂ ದೇಶಗಳ ಮಿಲಿಟರಿ ಪಡೆಗಳು ಕೆಲವು ಭಾಗಗಳಲ್ಲಿ ಪರಸ್ಪರ ಹತ್ತಿರದಲ್ಲಿ ನಿಯೋಜಿಸಲ್ಪಟ್ಟಿವೆ. ಹೀಗಾಗಿ ಪರಿಸ್ಥಿತಿ ಸೂಕ್ಷ್ಮವೂ ಅಪಾಯಕಾರಿಯೂ ಆಗಿದೆ” ಎಂದಿದ್ದಾರೆ.

ಜೂನ್ 2020ರಲ್ಲಿ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರು ಮುಖಾಮುಖಿಯಾದಾಗ ಎರಡೂ ಕಡೆಗಳಲ್ಲಿ ಸಾವುನೋವುಗಳು ಸಂಭವಿಸಿದ್ದವು. ಹಲವು ದಶಕಗಳ ನಂತರ ಈ ವಿದ್ಯಮಾನ ನಡೆದಿತ್ತು. ಅನೇಕ ಸೂಕ್ಷ್ಮ ಪ್ರದೇಶಗಳಲ್ಲಿ ಉದ್ವಿಗ್ನತೆಗಳು ಭುಗಿಲೆದ್ದವು. ಫಿರಂಗಿ, ಟ್ಯಾಂಕ್‌ಗಳು ಮತ್ತು ಫೈಟರ್ ಜೆಟ್‌ಗಳೊಂದು ಹತ್ತಾರು ಸಾವಿರ ಸೈನಿಕರನ್ನು ಉಭಯ ದೇಶಗಳೂ ನಿಯೋಜಿಸಿದ್ದವು.

ಈ ತಿಂಗಳ ಆರಂಭದಲ್ಲಿ ಅಮೇರಿಕನ್ ಗುಪ್ತಚರವು ಹಲವು ವಿಚಾರಗಳನ್ನು ತಿಳಿಸಿತ್ತು. ಆತಂಕಕಾರಿ ಸಂಗತಿಗಳನ್ನು ಮೌಲ್ಯಮಾಪನ ಮಾಡಿ, ಮಿಲಿಟರಿ ವಿಸ್ತರಣೆಯಿಂದಾಗಿ ಪರಮಾಣು-ಶಸ್ತ್ರಸಜ್ಜಿತ ದೈತ್ಯರ ನಡುವಿನ ಸಶಸ್ತ್ರ ಮುಖಾಮುಖಿಯ ಅಪಾಯಕ್ಕೆ ಕಾರಣವಾಗುತ್ತದೆ ಎಂದು ತಿಳಿಸಿತ್ತು.

ಇಂಡಿಯಾ ಟುಡೇ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜೈ ಶಂಕರ್‌ ಮಾತನಾಡಿದ್ದು, “ಚೀನಾದ ಮಾಜಿ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ 2020ರ ಸೆಪ್ಟೆಂಬರ್‌ನಲ್ಲಾದ ತಾತ್ವಿಕ ಒಪ್ಪಂದಕ್ಕೆ ಅನುಗುಣವಾಗಿ ಗಡಿ ವಿವಾದವನ್ನು ಪರಿಹರಿಸುವವರೆಗೆ ನವದೆಹಲಿ ಮತ್ತು ಬೀಜಿಂಗ್ ನಡುವಿನ ಸಂಬಂಧಗಳು ಸಹಜ ಸ್ಥಿತಿಗೆ ಮರಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಚೀನಿಯರು ತಾವು ಒಪ್ಪಿಕೊಂಡದ್ದನ್ನು ನಡೆಸಿಕೊಡಬೇಕು. ಆದರೆ ಅವರು ಒಪ್ಪಂದದೊಂದಿಗೆ ತಾಕಲಾಟದಲ್ಲಿದ್ದಾರೆ” ಎಂದು ಜೈಶಂಕರ್ ಹೇಳಿದ್ದಾರೆ.

ಇದನ್ನೂ ಓದಿರಿ: ಕೆಲವು ನಿವೃತ್ತ ನ್ಯಾಯಮೂರ್ತಿಗಳು ದೇಶ ವಿರೋಧಿ ಗ್ಯಾಂಗ್‌ನಲ್ಲಿದ್ದಾರೆ: ಕೇಂದ್ರ ಕಾನೂನು ಸಚಿವ

ಇತರ ವಿಚಾರಗಳ ಬಗ್ಗೆಯೂ ಚರ್ಚೆಗಳು ನಡೆಯುತ್ತಿರುವಾಗ ಉಭಯ ರಾಷ್ಟ್ರಗಳು ಅನೇಕ ಕ್ಷೇತ್ರಗಳಿಂದ ಹೊರಗುಳಿಯುವಲ್ಲಿ ಗಣನೀಯ ಪ್ರಗತಿಯನ್ನು ಸಾಧಿಸಿವೆ ಎಂದು ವಿದೇಶಾಂಗ ಸಚಿವರು ತಿಳಿಸಿದ್ದಾರೆ.

ಮಾರ್ಚ್ 2ರಂದು ದೆಹಲಿಯಲ್ಲಿ ನಡೆದ ಜಿ 20 ವಿದೇಶಾಂಗ ಸಚಿವರ ಸಭೆಯ ಹಿನ್ನೆಲೆಯಲ್ಲಿ ಚೀನಾದ ಹೊಸ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ ಅವರೊಂದಿಗೆ ಗಡಿಯಲ್ಲಿನ ಪರಿಸ್ಥಿತಿಯ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದೇನೆ ಎಂದು ಜೈಶಂಕರ್ ಮಾಹಿತಿ ನೀಡಿದ್ದಾರೆ.

“ನಾವು ಶಾಂತಿ ಮತ್ತು ನೆಮ್ಮದಿಯನ್ನು ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ನಾವು ಚೀನಿಯರಿಗೆ ಸ್ಪಷ್ಟವಾಗಿ ಹೇಳಿದ್ದೇವೆ. ನೀವು ಒಪ್ಪಂದಗಳನ್ನು ಉಲ್ಲಂಘಿಸುವಂತಿಲ್ಲ ಮತ್ತು ನಂತರ ಏನೂ ಆಗಿಲ್ಲ ಎಂಬಂತೆ ಉಳಿದ ಸಂಬಂಧವನ್ನು ಮುಂದುವರಿಸಲು ಬಯಸುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...