Homeಮುಖಪುಟಪೂರ್ವ ಲಡಾಖ್‌ನ ಎಲ್‌ಎಸಿನಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ: ವಿದೇಶಾಂಗ ಸಚಿವ ಜೈಶಂಕರ್‌‌

ಪೂರ್ವ ಲಡಾಖ್‌ನ ಎಲ್‌ಎಸಿನಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ: ವಿದೇಶಾಂಗ ಸಚಿವ ಜೈಶಂಕರ್‌‌

- Advertisement -
- Advertisement -

ಪೂರ್ವ ಲಡಾಖ್‌ನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ನಡುವಿನ ಪರಿಸ್ಥಿತಿಯು ಬಹಳ ಸೂಕ್ಷ್ಮವೂ, ಸಾಕಷ್ಟು ಅಪಾಯಕಾರಿಯೂ ಆಗಿ ಉಳಿದಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

‘ಇಂಡಿಯಾ ಟುಡೇ’ ವಾಹಿನಿಯ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿರುವ ಅವರು, “ಎರಡೂ ದೇಶಗಳ ಮಿಲಿಟರಿ ಪಡೆಗಳು ಕೆಲವು ಭಾಗಗಳಲ್ಲಿ ಪರಸ್ಪರ ಹತ್ತಿರದಲ್ಲಿ ನಿಯೋಜಿಸಲ್ಪಟ್ಟಿವೆ. ಹೀಗಾಗಿ ಪರಿಸ್ಥಿತಿ ಸೂಕ್ಷ್ಮವೂ ಅಪಾಯಕಾರಿಯೂ ಆಗಿದೆ” ಎಂದಿದ್ದಾರೆ.

ಜೂನ್ 2020ರಲ್ಲಿ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರು ಮುಖಾಮುಖಿಯಾದಾಗ ಎರಡೂ ಕಡೆಗಳಲ್ಲಿ ಸಾವುನೋವುಗಳು ಸಂಭವಿಸಿದ್ದವು. ಹಲವು ದಶಕಗಳ ನಂತರ ಈ ವಿದ್ಯಮಾನ ನಡೆದಿತ್ತು. ಅನೇಕ ಸೂಕ್ಷ್ಮ ಪ್ರದೇಶಗಳಲ್ಲಿ ಉದ್ವಿಗ್ನತೆಗಳು ಭುಗಿಲೆದ್ದವು. ಫಿರಂಗಿ, ಟ್ಯಾಂಕ್‌ಗಳು ಮತ್ತು ಫೈಟರ್ ಜೆಟ್‌ಗಳೊಂದು ಹತ್ತಾರು ಸಾವಿರ ಸೈನಿಕರನ್ನು ಉಭಯ ದೇಶಗಳೂ ನಿಯೋಜಿಸಿದ್ದವು.

ಈ ತಿಂಗಳ ಆರಂಭದಲ್ಲಿ ಅಮೇರಿಕನ್ ಗುಪ್ತಚರವು ಹಲವು ವಿಚಾರಗಳನ್ನು ತಿಳಿಸಿತ್ತು. ಆತಂಕಕಾರಿ ಸಂಗತಿಗಳನ್ನು ಮೌಲ್ಯಮಾಪನ ಮಾಡಿ, ಮಿಲಿಟರಿ ವಿಸ್ತರಣೆಯಿಂದಾಗಿ ಪರಮಾಣು-ಶಸ್ತ್ರಸಜ್ಜಿತ ದೈತ್ಯರ ನಡುವಿನ ಸಶಸ್ತ್ರ ಮುಖಾಮುಖಿಯ ಅಪಾಯಕ್ಕೆ ಕಾರಣವಾಗುತ್ತದೆ ಎಂದು ತಿಳಿಸಿತ್ತು.

ಇಂಡಿಯಾ ಟುಡೇ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜೈ ಶಂಕರ್‌ ಮಾತನಾಡಿದ್ದು, “ಚೀನಾದ ಮಾಜಿ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ 2020ರ ಸೆಪ್ಟೆಂಬರ್‌ನಲ್ಲಾದ ತಾತ್ವಿಕ ಒಪ್ಪಂದಕ್ಕೆ ಅನುಗುಣವಾಗಿ ಗಡಿ ವಿವಾದವನ್ನು ಪರಿಹರಿಸುವವರೆಗೆ ನವದೆಹಲಿ ಮತ್ತು ಬೀಜಿಂಗ್ ನಡುವಿನ ಸಂಬಂಧಗಳು ಸಹಜ ಸ್ಥಿತಿಗೆ ಮರಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಚೀನಿಯರು ತಾವು ಒಪ್ಪಿಕೊಂಡದ್ದನ್ನು ನಡೆಸಿಕೊಡಬೇಕು. ಆದರೆ ಅವರು ಒಪ್ಪಂದದೊಂದಿಗೆ ತಾಕಲಾಟದಲ್ಲಿದ್ದಾರೆ” ಎಂದು ಜೈಶಂಕರ್ ಹೇಳಿದ್ದಾರೆ.

ಇದನ್ನೂ ಓದಿರಿ: ಕೆಲವು ನಿವೃತ್ತ ನ್ಯಾಯಮೂರ್ತಿಗಳು ದೇಶ ವಿರೋಧಿ ಗ್ಯಾಂಗ್‌ನಲ್ಲಿದ್ದಾರೆ: ಕೇಂದ್ರ ಕಾನೂನು ಸಚಿವ

ಇತರ ವಿಚಾರಗಳ ಬಗ್ಗೆಯೂ ಚರ್ಚೆಗಳು ನಡೆಯುತ್ತಿರುವಾಗ ಉಭಯ ರಾಷ್ಟ್ರಗಳು ಅನೇಕ ಕ್ಷೇತ್ರಗಳಿಂದ ಹೊರಗುಳಿಯುವಲ್ಲಿ ಗಣನೀಯ ಪ್ರಗತಿಯನ್ನು ಸಾಧಿಸಿವೆ ಎಂದು ವಿದೇಶಾಂಗ ಸಚಿವರು ತಿಳಿಸಿದ್ದಾರೆ.

ಮಾರ್ಚ್ 2ರಂದು ದೆಹಲಿಯಲ್ಲಿ ನಡೆದ ಜಿ 20 ವಿದೇಶಾಂಗ ಸಚಿವರ ಸಭೆಯ ಹಿನ್ನೆಲೆಯಲ್ಲಿ ಚೀನಾದ ಹೊಸ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ ಅವರೊಂದಿಗೆ ಗಡಿಯಲ್ಲಿನ ಪರಿಸ್ಥಿತಿಯ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದೇನೆ ಎಂದು ಜೈಶಂಕರ್ ಮಾಹಿತಿ ನೀಡಿದ್ದಾರೆ.

“ನಾವು ಶಾಂತಿ ಮತ್ತು ನೆಮ್ಮದಿಯನ್ನು ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ನಾವು ಚೀನಿಯರಿಗೆ ಸ್ಪಷ್ಟವಾಗಿ ಹೇಳಿದ್ದೇವೆ. ನೀವು ಒಪ್ಪಂದಗಳನ್ನು ಉಲ್ಲಂಘಿಸುವಂತಿಲ್ಲ ಮತ್ತು ನಂತರ ಏನೂ ಆಗಿಲ್ಲ ಎಂಬಂತೆ ಉಳಿದ ಸಂಬಂಧವನ್ನು ಮುಂದುವರಿಸಲು ಬಯಸುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...