Homeಮುಖಪುಟಪೂರ್ವ ಲಡಾಖ್‌ನ ಎಲ್‌ಎಸಿನಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ: ವಿದೇಶಾಂಗ ಸಚಿವ ಜೈಶಂಕರ್‌‌

ಪೂರ್ವ ಲಡಾಖ್‌ನ ಎಲ್‌ಎಸಿನಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ: ವಿದೇಶಾಂಗ ಸಚಿವ ಜೈಶಂಕರ್‌‌

- Advertisement -
- Advertisement -

ಪೂರ್ವ ಲಡಾಖ್‌ನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ನಡುವಿನ ಪರಿಸ್ಥಿತಿಯು ಬಹಳ ಸೂಕ್ಷ್ಮವೂ, ಸಾಕಷ್ಟು ಅಪಾಯಕಾರಿಯೂ ಆಗಿ ಉಳಿದಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

‘ಇಂಡಿಯಾ ಟುಡೇ’ ವಾಹಿನಿಯ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿರುವ ಅವರು, “ಎರಡೂ ದೇಶಗಳ ಮಿಲಿಟರಿ ಪಡೆಗಳು ಕೆಲವು ಭಾಗಗಳಲ್ಲಿ ಪರಸ್ಪರ ಹತ್ತಿರದಲ್ಲಿ ನಿಯೋಜಿಸಲ್ಪಟ್ಟಿವೆ. ಹೀಗಾಗಿ ಪರಿಸ್ಥಿತಿ ಸೂಕ್ಷ್ಮವೂ ಅಪಾಯಕಾರಿಯೂ ಆಗಿದೆ” ಎಂದಿದ್ದಾರೆ.

ಜೂನ್ 2020ರಲ್ಲಿ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರು ಮುಖಾಮುಖಿಯಾದಾಗ ಎರಡೂ ಕಡೆಗಳಲ್ಲಿ ಸಾವುನೋವುಗಳು ಸಂಭವಿಸಿದ್ದವು. ಹಲವು ದಶಕಗಳ ನಂತರ ಈ ವಿದ್ಯಮಾನ ನಡೆದಿತ್ತು. ಅನೇಕ ಸೂಕ್ಷ್ಮ ಪ್ರದೇಶಗಳಲ್ಲಿ ಉದ್ವಿಗ್ನತೆಗಳು ಭುಗಿಲೆದ್ದವು. ಫಿರಂಗಿ, ಟ್ಯಾಂಕ್‌ಗಳು ಮತ್ತು ಫೈಟರ್ ಜೆಟ್‌ಗಳೊಂದು ಹತ್ತಾರು ಸಾವಿರ ಸೈನಿಕರನ್ನು ಉಭಯ ದೇಶಗಳೂ ನಿಯೋಜಿಸಿದ್ದವು.

ಈ ತಿಂಗಳ ಆರಂಭದಲ್ಲಿ ಅಮೇರಿಕನ್ ಗುಪ್ತಚರವು ಹಲವು ವಿಚಾರಗಳನ್ನು ತಿಳಿಸಿತ್ತು. ಆತಂಕಕಾರಿ ಸಂಗತಿಗಳನ್ನು ಮೌಲ್ಯಮಾಪನ ಮಾಡಿ, ಮಿಲಿಟರಿ ವಿಸ್ತರಣೆಯಿಂದಾಗಿ ಪರಮಾಣು-ಶಸ್ತ್ರಸಜ್ಜಿತ ದೈತ್ಯರ ನಡುವಿನ ಸಶಸ್ತ್ರ ಮುಖಾಮುಖಿಯ ಅಪಾಯಕ್ಕೆ ಕಾರಣವಾಗುತ್ತದೆ ಎಂದು ತಿಳಿಸಿತ್ತು.

ಇಂಡಿಯಾ ಟುಡೇ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜೈ ಶಂಕರ್‌ ಮಾತನಾಡಿದ್ದು, “ಚೀನಾದ ಮಾಜಿ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ 2020ರ ಸೆಪ್ಟೆಂಬರ್‌ನಲ್ಲಾದ ತಾತ್ವಿಕ ಒಪ್ಪಂದಕ್ಕೆ ಅನುಗುಣವಾಗಿ ಗಡಿ ವಿವಾದವನ್ನು ಪರಿಹರಿಸುವವರೆಗೆ ನವದೆಹಲಿ ಮತ್ತು ಬೀಜಿಂಗ್ ನಡುವಿನ ಸಂಬಂಧಗಳು ಸಹಜ ಸ್ಥಿತಿಗೆ ಮರಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಚೀನಿಯರು ತಾವು ಒಪ್ಪಿಕೊಂಡದ್ದನ್ನು ನಡೆಸಿಕೊಡಬೇಕು. ಆದರೆ ಅವರು ಒಪ್ಪಂದದೊಂದಿಗೆ ತಾಕಲಾಟದಲ್ಲಿದ್ದಾರೆ” ಎಂದು ಜೈಶಂಕರ್ ಹೇಳಿದ್ದಾರೆ.

ಇದನ್ನೂ ಓದಿರಿ: ಕೆಲವು ನಿವೃತ್ತ ನ್ಯಾಯಮೂರ್ತಿಗಳು ದೇಶ ವಿರೋಧಿ ಗ್ಯಾಂಗ್‌ನಲ್ಲಿದ್ದಾರೆ: ಕೇಂದ್ರ ಕಾನೂನು ಸಚಿವ

ಇತರ ವಿಚಾರಗಳ ಬಗ್ಗೆಯೂ ಚರ್ಚೆಗಳು ನಡೆಯುತ್ತಿರುವಾಗ ಉಭಯ ರಾಷ್ಟ್ರಗಳು ಅನೇಕ ಕ್ಷೇತ್ರಗಳಿಂದ ಹೊರಗುಳಿಯುವಲ್ಲಿ ಗಣನೀಯ ಪ್ರಗತಿಯನ್ನು ಸಾಧಿಸಿವೆ ಎಂದು ವಿದೇಶಾಂಗ ಸಚಿವರು ತಿಳಿಸಿದ್ದಾರೆ.

ಮಾರ್ಚ್ 2ರಂದು ದೆಹಲಿಯಲ್ಲಿ ನಡೆದ ಜಿ 20 ವಿದೇಶಾಂಗ ಸಚಿವರ ಸಭೆಯ ಹಿನ್ನೆಲೆಯಲ್ಲಿ ಚೀನಾದ ಹೊಸ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ ಅವರೊಂದಿಗೆ ಗಡಿಯಲ್ಲಿನ ಪರಿಸ್ಥಿತಿಯ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದೇನೆ ಎಂದು ಜೈಶಂಕರ್ ಮಾಹಿತಿ ನೀಡಿದ್ದಾರೆ.

“ನಾವು ಶಾಂತಿ ಮತ್ತು ನೆಮ್ಮದಿಯನ್ನು ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ನಾವು ಚೀನಿಯರಿಗೆ ಸ್ಪಷ್ಟವಾಗಿ ಹೇಳಿದ್ದೇವೆ. ನೀವು ಒಪ್ಪಂದಗಳನ್ನು ಉಲ್ಲಂಘಿಸುವಂತಿಲ್ಲ ಮತ್ತು ನಂತರ ಏನೂ ಆಗಿಲ್ಲ ಎಂಬಂತೆ ಉಳಿದ ಸಂಬಂಧವನ್ನು ಮುಂದುವರಿಸಲು ಬಯಸುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...