Homeಮುಖಪುಟಮಾಸ್ಕೋದಲ್ಲಿ ರಾಜನಾಥ್ ಸಿಂಗ್, ಚೀನಾ ರಕ್ಷಣಾ ಸಚಿವರ ಭೇಟಿ ಸಾಧ್ಯತೆ

ಮಾಸ್ಕೋದಲ್ಲಿ ರಾಜನಾಥ್ ಸಿಂಗ್, ಚೀನಾ ರಕ್ಷಣಾ ಸಚಿವರ ಭೇಟಿ ಸಾಧ್ಯತೆ

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸಭೆಯಲ್ಲಿ ಚೀನಾದ ರಕ್ಷಣಾ ಸಚಿವ ವೀ ಫೆಂಗಿ, ರಾಜನಾಥ್ ಸಿಂಗ್ ಜೊತೆ ಮಾತನಾಡಲು ಬಯಸಿದ್ದು, ಸಮಯ ಕೇಳಿದ್ದಾರೆಂದು ತಿಳಿದುಬಂದಿದೆ.

- Advertisement -
- Advertisement -

ಭಾರತ-ಚೀನಾ ಗಡಿ ಸಂಘರ್ಷ ಹೆಚ್ಚಾಗುತ್ತಿರುವ ಹೊತ್ತಿನಲ್ಲೇ ಚೀನಾದ ರಕ್ಷಣಾ ಸಚಿವರನ್ನು ಭಾರತದ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಭೇಟಿಯಾಗಲಿದ್ದಾರೆ. ನಮಗೆ ಸಭೆಯ ವಿನಂತಿ ಬಂದಿದ್ದು, ಸಭೆ ನಡೆಯುವ ಸಾಧ್ಯತೆಯಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸಭೆಯಲ್ಲಿ ಚೀನಾದ ರಕ್ಷಣಾ ಸಚಿವ ವೀ ಫೆಂಗಿ, ರಾಜನಾಥ್ ಸಿಂಗ್ ಜೊತೆ ಮಾತನಾಡಲು ಬಯಸಿದ್ದು, ಸಮಯ ಕೇಳಿದ್ದಾರೆಂದು ತಿಳಿದುಬಂದಿದೆ.

ಭಾರತೀಯ ಮತ್ತು ಚೀನಾದ ಸೈನಿಕರ ಮಧ್ಯೆ ಮೇ ತಿಂಗಳಿನಿಂದ ಪೂರ್ವ ಲಡಾಕ್‌ನಲ್ಲಿ ಗಡಿ ಸಂಘರ್ಷ ಏರ್ಪಟ್ಟಿದೆ. ಜೂನ್ 15ರ ರಾತ್ರಿ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ಜೊತೆಗೆ ಕಳೆದ ಶನಿವಾರ ಮತ್ತು ಸೋಮವಾರ ಮತ್ತೆ ದಕ್ಷಿಣ ದಂಡೆಯ ಪಾಂಗೊಂಗ್ ಸರೋವರದ ಪ್ರದೇಶವನ್ನು ಚೀನಾ ಪಡೆಗಳು ಆಕ್ರಮಿಸಿಕೊಳ್ಳಲು ಪ್ರಯತ್ನಿಸಿದ ನಂತರ ಮತ್ತೆ ಬಿಕ್ಕಟ್ಟು ಉಂಟಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ ಮಾಧ್ಯಮಗಳು

ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಘರ್ಷಣೆಗಳು ಸಂಭವಿಸುತ್ತಲೇ ಇವೆ. ಸಮಸ್ಯೆ ಪರಿಹರಿಸಲು ಉಭಯ ರಾಷ್ಟ್ರಗಳು ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳಲ್ಲಿ ತೊಡಗಿದ್ದರೂ ಸಹ ಈ ಪ್ರಯತ್ನಗಳು ನಡೆದಿವೆ. ಈಗ ಮೂರು ದಿನಗಳ ಶಾಂಘೈ ಸಹಕಾರ ಸಭೆ ಬಳಿಕ ನಡೆಯುವ ಭಾರತ ಮತ್ತು ಚೀನಾ ರಕ್ಷಣಾ ಸಚಿವ ಸಭೆ ಬಳಿಕ ವಾದರೂ ಬಿಕ್ಕಟ್ಟು ಶಮನವಾಗುತ್ತದೆಯ ನೋಡಬೇಕು.

ಇದರ ಜೊತೆಗೆ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಹೇಳುವ ಮೂಲಕ ಸೇನಾ ಮುಖ್ಯಸ್ಥ ಎಂ.ಎಂ ನರವಣೆ ಮತ್ತೆ ಆತಂಕ ಸೃಷ್ಟಿಸಿದ್ದಾರೆ. ವಾಸ್ತವ ನಿಯಂತ್ರಣ ರೇಖೆ ಬಳಿ ಪರಿಸ್ಥಿತಿ ಗಂಭೀರವಾಗಿದೆ. ಮತ್ತು ಭಾರತೀಯ ಸೇನೆ ಹಲವು ಮುನ್ನೆಚ್ಚರಿಕೆ ತೆಗೆದುಕೊಂಡಿದೆ ಎಂದಿದ್ದಾರೆ.

ಭಾರತ– ಚೀನಾ ಗಡಿ ಭಾಗದಲ್ಲಿನ ಭದ್ರತಾ ವ್ಯವಸ್ಥೆ ಪರಿಶೀಲನೆಗಾಗಿ ಪೂರ್ವ ಲೇಹ್‌‌ಗೆ ಭೇಟಿ ನೀಡಿದ್ದ ಸೇನಾ ಮುಖ್ಯಸ್ಥರು ಲಡಾಖ್‌ಗೆ ತಲುಪಿದ ನಂತರ ಎಎನ್‌ಐ ಜೊತೆ ಮಾತನಾಡಿದ ಅವರು, ನಾನು ಬೇರೆ ಬೇರೆ ಸ್ಥಳಗಳಿಗೆ ಹೋಗಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಸೇನಾ ಅಧಿಕಾರಿಗಳು ಮತ್ತು ಜೆಸಿಒಗಳೊಂದಿಗೆ ಮಾತನಾಡಿದ್ದು, ಅವರು ಎಲ್ಲಾ ಸವಾಲುಗಳನ್ನು ಎದುರಿಸಲು ಸಿದ್ಧರಾಗಿದ್ದಾರೆ ಎಂದಿದ್ದಾರೆ.

ಆಗಸ್ಟ್ 29 ಮತ್ತು 30ರ ಮಧ್ಯರಾತ್ರಿಯಲ್ಲಿ ಲಡಾಖ್‌ನ ಚುಶುಲ್ ಬಳಿಯ ದಕ್ಷಿಣ ದಂಡೆಯ ಪಾಂಗೊಂಗ್ ತ್ಸೊ ಬಳಿ ಭಾರತೀಯ ಪ್ರದೇಶಗಳಿಗೆ ಅತಿಕ್ರಮಣ ಮಾಡಲು ಚೀನಾದ ಸೇನೆಯು ಮಾಡಿದ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು ಎಂದು ಸೇನಾ ಮೂಲಗಳು ತಿಳಿಸಿವೆ.

ಇಂತಹ ಸಮಯದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಬಯಸಿರುವ ಚೀನಾ ರಕ್ಷಣಾ ಸಚಿವ ವೀ ಫೆಂಗಿ ಏನು ಕ್ರಮ ಕೈಗೊಳ್ಳಬಹುದು ಎಂಬ  ಕುತೂಹಲವಿದೆ. ಜೊತೆಗೆ ಈ ಹಿಂದೆ ಹಲವು ಬಾರಿ ಬ್ರಿಗೇಡಿಯರ್ ಮಟ್ಟ, ಅಧಿಕಾರಿಗಳ ಮಟ್ಟದಲ್ಲಿ ಸಭೆಗಳಾಗಿದ್ದರೂ ಯಾವುದೇ ಪ್ರಯೋಜನವಾಗದಿರುವ ಬಗ್ಗೆ ನಾವು ನೆನಪಿಡಬೇಕಾಗುತ್ತದೆ.


ಇದನ್ನೂ ಓದಿ: ಭಾರತ-ಚೀನಾ ಗಡಿ ಸಂಘರ್ಷ: ಲಡಾಖ್‌ನಲ್ಲಿ ಗಂಭೀರ ಪರಿಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...