Homeಮುಖಪುಟಮಾಸ್ಕೋದಲ್ಲಿ ರಾಜನಾಥ್ ಸಿಂಗ್, ಚೀನಾ ರಕ್ಷಣಾ ಸಚಿವರ ಭೇಟಿ ಸಾಧ್ಯತೆ

ಮಾಸ್ಕೋದಲ್ಲಿ ರಾಜನಾಥ್ ಸಿಂಗ್, ಚೀನಾ ರಕ್ಷಣಾ ಸಚಿವರ ಭೇಟಿ ಸಾಧ್ಯತೆ

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸಭೆಯಲ್ಲಿ ಚೀನಾದ ರಕ್ಷಣಾ ಸಚಿವ ವೀ ಫೆಂಗಿ, ರಾಜನಾಥ್ ಸಿಂಗ್ ಜೊತೆ ಮಾತನಾಡಲು ಬಯಸಿದ್ದು, ಸಮಯ ಕೇಳಿದ್ದಾರೆಂದು ತಿಳಿದುಬಂದಿದೆ.

- Advertisement -
- Advertisement -

ಭಾರತ-ಚೀನಾ ಗಡಿ ಸಂಘರ್ಷ ಹೆಚ್ಚಾಗುತ್ತಿರುವ ಹೊತ್ತಿನಲ್ಲೇ ಚೀನಾದ ರಕ್ಷಣಾ ಸಚಿವರನ್ನು ಭಾರತದ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಭೇಟಿಯಾಗಲಿದ್ದಾರೆ. ನಮಗೆ ಸಭೆಯ ವಿನಂತಿ ಬಂದಿದ್ದು, ಸಭೆ ನಡೆಯುವ ಸಾಧ್ಯತೆಯಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸಭೆಯಲ್ಲಿ ಚೀನಾದ ರಕ್ಷಣಾ ಸಚಿವ ವೀ ಫೆಂಗಿ, ರಾಜನಾಥ್ ಸಿಂಗ್ ಜೊತೆ ಮಾತನಾಡಲು ಬಯಸಿದ್ದು, ಸಮಯ ಕೇಳಿದ್ದಾರೆಂದು ತಿಳಿದುಬಂದಿದೆ.

ಭಾರತೀಯ ಮತ್ತು ಚೀನಾದ ಸೈನಿಕರ ಮಧ್ಯೆ ಮೇ ತಿಂಗಳಿನಿಂದ ಪೂರ್ವ ಲಡಾಕ್‌ನಲ್ಲಿ ಗಡಿ ಸಂಘರ್ಷ ಏರ್ಪಟ್ಟಿದೆ. ಜೂನ್ 15ರ ರಾತ್ರಿ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ಜೊತೆಗೆ ಕಳೆದ ಶನಿವಾರ ಮತ್ತು ಸೋಮವಾರ ಮತ್ತೆ ದಕ್ಷಿಣ ದಂಡೆಯ ಪಾಂಗೊಂಗ್ ಸರೋವರದ ಪ್ರದೇಶವನ್ನು ಚೀನಾ ಪಡೆಗಳು ಆಕ್ರಮಿಸಿಕೊಳ್ಳಲು ಪ್ರಯತ್ನಿಸಿದ ನಂತರ ಮತ್ತೆ ಬಿಕ್ಕಟ್ಟು ಉಂಟಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ ಮಾಧ್ಯಮಗಳು

ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಘರ್ಷಣೆಗಳು ಸಂಭವಿಸುತ್ತಲೇ ಇವೆ. ಸಮಸ್ಯೆ ಪರಿಹರಿಸಲು ಉಭಯ ರಾಷ್ಟ್ರಗಳು ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳಲ್ಲಿ ತೊಡಗಿದ್ದರೂ ಸಹ ಈ ಪ್ರಯತ್ನಗಳು ನಡೆದಿವೆ. ಈಗ ಮೂರು ದಿನಗಳ ಶಾಂಘೈ ಸಹಕಾರ ಸಭೆ ಬಳಿಕ ನಡೆಯುವ ಭಾರತ ಮತ್ತು ಚೀನಾ ರಕ್ಷಣಾ ಸಚಿವ ಸಭೆ ಬಳಿಕ ವಾದರೂ ಬಿಕ್ಕಟ್ಟು ಶಮನವಾಗುತ್ತದೆಯ ನೋಡಬೇಕು.

ಇದರ ಜೊತೆಗೆ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಹೇಳುವ ಮೂಲಕ ಸೇನಾ ಮುಖ್ಯಸ್ಥ ಎಂ.ಎಂ ನರವಣೆ ಮತ್ತೆ ಆತಂಕ ಸೃಷ್ಟಿಸಿದ್ದಾರೆ. ವಾಸ್ತವ ನಿಯಂತ್ರಣ ರೇಖೆ ಬಳಿ ಪರಿಸ್ಥಿತಿ ಗಂಭೀರವಾಗಿದೆ. ಮತ್ತು ಭಾರತೀಯ ಸೇನೆ ಹಲವು ಮುನ್ನೆಚ್ಚರಿಕೆ ತೆಗೆದುಕೊಂಡಿದೆ ಎಂದಿದ್ದಾರೆ.

ಭಾರತ– ಚೀನಾ ಗಡಿ ಭಾಗದಲ್ಲಿನ ಭದ್ರತಾ ವ್ಯವಸ್ಥೆ ಪರಿಶೀಲನೆಗಾಗಿ ಪೂರ್ವ ಲೇಹ್‌‌ಗೆ ಭೇಟಿ ನೀಡಿದ್ದ ಸೇನಾ ಮುಖ್ಯಸ್ಥರು ಲಡಾಖ್‌ಗೆ ತಲುಪಿದ ನಂತರ ಎಎನ್‌ಐ ಜೊತೆ ಮಾತನಾಡಿದ ಅವರು, ನಾನು ಬೇರೆ ಬೇರೆ ಸ್ಥಳಗಳಿಗೆ ಹೋಗಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಸೇನಾ ಅಧಿಕಾರಿಗಳು ಮತ್ತು ಜೆಸಿಒಗಳೊಂದಿಗೆ ಮಾತನಾಡಿದ್ದು, ಅವರು ಎಲ್ಲಾ ಸವಾಲುಗಳನ್ನು ಎದುರಿಸಲು ಸಿದ್ಧರಾಗಿದ್ದಾರೆ ಎಂದಿದ್ದಾರೆ.

ಆಗಸ್ಟ್ 29 ಮತ್ತು 30ರ ಮಧ್ಯರಾತ್ರಿಯಲ್ಲಿ ಲಡಾಖ್‌ನ ಚುಶುಲ್ ಬಳಿಯ ದಕ್ಷಿಣ ದಂಡೆಯ ಪಾಂಗೊಂಗ್ ತ್ಸೊ ಬಳಿ ಭಾರತೀಯ ಪ್ರದೇಶಗಳಿಗೆ ಅತಿಕ್ರಮಣ ಮಾಡಲು ಚೀನಾದ ಸೇನೆಯು ಮಾಡಿದ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು ಎಂದು ಸೇನಾ ಮೂಲಗಳು ತಿಳಿಸಿವೆ.

ಇಂತಹ ಸಮಯದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಬಯಸಿರುವ ಚೀನಾ ರಕ್ಷಣಾ ಸಚಿವ ವೀ ಫೆಂಗಿ ಏನು ಕ್ರಮ ಕೈಗೊಳ್ಳಬಹುದು ಎಂಬ  ಕುತೂಹಲವಿದೆ. ಜೊತೆಗೆ ಈ ಹಿಂದೆ ಹಲವು ಬಾರಿ ಬ್ರಿಗೇಡಿಯರ್ ಮಟ್ಟ, ಅಧಿಕಾರಿಗಳ ಮಟ್ಟದಲ್ಲಿ ಸಭೆಗಳಾಗಿದ್ದರೂ ಯಾವುದೇ ಪ್ರಯೋಜನವಾಗದಿರುವ ಬಗ್ಗೆ ನಾವು ನೆನಪಿಡಬೇಕಾಗುತ್ತದೆ.


ಇದನ್ನೂ ಓದಿ: ಭಾರತ-ಚೀನಾ ಗಡಿ ಸಂಘರ್ಷ: ಲಡಾಖ್‌ನಲ್ಲಿ ಗಂಭೀರ ಪರಿಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...