Homeಮುಖಪುಟಮಾಸ್ಕೋದಲ್ಲಿ ರಾಜನಾಥ್ ಸಿಂಗ್, ಚೀನಾ ರಕ್ಷಣಾ ಸಚಿವರ ಭೇಟಿ ಸಾಧ್ಯತೆ

ಮಾಸ್ಕೋದಲ್ಲಿ ರಾಜನಾಥ್ ಸಿಂಗ್, ಚೀನಾ ರಕ್ಷಣಾ ಸಚಿವರ ಭೇಟಿ ಸಾಧ್ಯತೆ

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸಭೆಯಲ್ಲಿ ಚೀನಾದ ರಕ್ಷಣಾ ಸಚಿವ ವೀ ಫೆಂಗಿ, ರಾಜನಾಥ್ ಸಿಂಗ್ ಜೊತೆ ಮಾತನಾಡಲು ಬಯಸಿದ್ದು, ಸಮಯ ಕೇಳಿದ್ದಾರೆಂದು ತಿಳಿದುಬಂದಿದೆ.

- Advertisement -
- Advertisement -

ಭಾರತ-ಚೀನಾ ಗಡಿ ಸಂಘರ್ಷ ಹೆಚ್ಚಾಗುತ್ತಿರುವ ಹೊತ್ತಿನಲ್ಲೇ ಚೀನಾದ ರಕ್ಷಣಾ ಸಚಿವರನ್ನು ಭಾರತದ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಭೇಟಿಯಾಗಲಿದ್ದಾರೆ. ನಮಗೆ ಸಭೆಯ ವಿನಂತಿ ಬಂದಿದ್ದು, ಸಭೆ ನಡೆಯುವ ಸಾಧ್ಯತೆಯಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸಭೆಯಲ್ಲಿ ಚೀನಾದ ರಕ್ಷಣಾ ಸಚಿವ ವೀ ಫೆಂಗಿ, ರಾಜನಾಥ್ ಸಿಂಗ್ ಜೊತೆ ಮಾತನಾಡಲು ಬಯಸಿದ್ದು, ಸಮಯ ಕೇಳಿದ್ದಾರೆಂದು ತಿಳಿದುಬಂದಿದೆ.

ಭಾರತೀಯ ಮತ್ತು ಚೀನಾದ ಸೈನಿಕರ ಮಧ್ಯೆ ಮೇ ತಿಂಗಳಿನಿಂದ ಪೂರ್ವ ಲಡಾಕ್‌ನಲ್ಲಿ ಗಡಿ ಸಂಘರ್ಷ ಏರ್ಪಟ್ಟಿದೆ. ಜೂನ್ 15ರ ರಾತ್ರಿ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ಜೊತೆಗೆ ಕಳೆದ ಶನಿವಾರ ಮತ್ತು ಸೋಮವಾರ ಮತ್ತೆ ದಕ್ಷಿಣ ದಂಡೆಯ ಪಾಂಗೊಂಗ್ ಸರೋವರದ ಪ್ರದೇಶವನ್ನು ಚೀನಾ ಪಡೆಗಳು ಆಕ್ರಮಿಸಿಕೊಳ್ಳಲು ಪ್ರಯತ್ನಿಸಿದ ನಂತರ ಮತ್ತೆ ಬಿಕ್ಕಟ್ಟು ಉಂಟಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ ಮಾಧ್ಯಮಗಳು

ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಘರ್ಷಣೆಗಳು ಸಂಭವಿಸುತ್ತಲೇ ಇವೆ. ಸಮಸ್ಯೆ ಪರಿಹರಿಸಲು ಉಭಯ ರಾಷ್ಟ್ರಗಳು ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳಲ್ಲಿ ತೊಡಗಿದ್ದರೂ ಸಹ ಈ ಪ್ರಯತ್ನಗಳು ನಡೆದಿವೆ. ಈಗ ಮೂರು ದಿನಗಳ ಶಾಂಘೈ ಸಹಕಾರ ಸಭೆ ಬಳಿಕ ನಡೆಯುವ ಭಾರತ ಮತ್ತು ಚೀನಾ ರಕ್ಷಣಾ ಸಚಿವ ಸಭೆ ಬಳಿಕ ವಾದರೂ ಬಿಕ್ಕಟ್ಟು ಶಮನವಾಗುತ್ತದೆಯ ನೋಡಬೇಕು.

ಇದರ ಜೊತೆಗೆ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಹೇಳುವ ಮೂಲಕ ಸೇನಾ ಮುಖ್ಯಸ್ಥ ಎಂ.ಎಂ ನರವಣೆ ಮತ್ತೆ ಆತಂಕ ಸೃಷ್ಟಿಸಿದ್ದಾರೆ. ವಾಸ್ತವ ನಿಯಂತ್ರಣ ರೇಖೆ ಬಳಿ ಪರಿಸ್ಥಿತಿ ಗಂಭೀರವಾಗಿದೆ. ಮತ್ತು ಭಾರತೀಯ ಸೇನೆ ಹಲವು ಮುನ್ನೆಚ್ಚರಿಕೆ ತೆಗೆದುಕೊಂಡಿದೆ ಎಂದಿದ್ದಾರೆ.

ಭಾರತ– ಚೀನಾ ಗಡಿ ಭಾಗದಲ್ಲಿನ ಭದ್ರತಾ ವ್ಯವಸ್ಥೆ ಪರಿಶೀಲನೆಗಾಗಿ ಪೂರ್ವ ಲೇಹ್‌‌ಗೆ ಭೇಟಿ ನೀಡಿದ್ದ ಸೇನಾ ಮುಖ್ಯಸ್ಥರು ಲಡಾಖ್‌ಗೆ ತಲುಪಿದ ನಂತರ ಎಎನ್‌ಐ ಜೊತೆ ಮಾತನಾಡಿದ ಅವರು, ನಾನು ಬೇರೆ ಬೇರೆ ಸ್ಥಳಗಳಿಗೆ ಹೋಗಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಸೇನಾ ಅಧಿಕಾರಿಗಳು ಮತ್ತು ಜೆಸಿಒಗಳೊಂದಿಗೆ ಮಾತನಾಡಿದ್ದು, ಅವರು ಎಲ್ಲಾ ಸವಾಲುಗಳನ್ನು ಎದುರಿಸಲು ಸಿದ್ಧರಾಗಿದ್ದಾರೆ ಎಂದಿದ್ದಾರೆ.

ಆಗಸ್ಟ್ 29 ಮತ್ತು 30ರ ಮಧ್ಯರಾತ್ರಿಯಲ್ಲಿ ಲಡಾಖ್‌ನ ಚುಶುಲ್ ಬಳಿಯ ದಕ್ಷಿಣ ದಂಡೆಯ ಪಾಂಗೊಂಗ್ ತ್ಸೊ ಬಳಿ ಭಾರತೀಯ ಪ್ರದೇಶಗಳಿಗೆ ಅತಿಕ್ರಮಣ ಮಾಡಲು ಚೀನಾದ ಸೇನೆಯು ಮಾಡಿದ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು ಎಂದು ಸೇನಾ ಮೂಲಗಳು ತಿಳಿಸಿವೆ.

ಇಂತಹ ಸಮಯದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಬಯಸಿರುವ ಚೀನಾ ರಕ್ಷಣಾ ಸಚಿವ ವೀ ಫೆಂಗಿ ಏನು ಕ್ರಮ ಕೈಗೊಳ್ಳಬಹುದು ಎಂಬ  ಕುತೂಹಲವಿದೆ. ಜೊತೆಗೆ ಈ ಹಿಂದೆ ಹಲವು ಬಾರಿ ಬ್ರಿಗೇಡಿಯರ್ ಮಟ್ಟ, ಅಧಿಕಾರಿಗಳ ಮಟ್ಟದಲ್ಲಿ ಸಭೆಗಳಾಗಿದ್ದರೂ ಯಾವುದೇ ಪ್ರಯೋಜನವಾಗದಿರುವ ಬಗ್ಗೆ ನಾವು ನೆನಪಿಡಬೇಕಾಗುತ್ತದೆ.


ಇದನ್ನೂ ಓದಿ: ಭಾರತ-ಚೀನಾ ಗಡಿ ಸಂಘರ್ಷ: ಲಡಾಖ್‌ನಲ್ಲಿ ಗಂಭೀರ ಪರಿಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...