Homeಕರ್ನಾಟಕಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತ್ತಿತ್ತು- ನಳೀನ್ ಕುಮಾರ್‌ ಕಟೀಲ್

ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತ್ತಿತ್ತು- ನಳೀನ್ ಕುಮಾರ್‌ ಕಟೀಲ್

- Advertisement -
- Advertisement -

ದೇಶದಲ್ಲಿ ಕೊರೊನಾ ವಿಷಮ ಪರಿಸ್ಥಿತಿಯಲ್ಲಿ ಬೇರಾವುದೇ ಪಕ್ಷ ಅಧಿಕಾರದಲ್ಲಿದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಭಾನುವಾರ ಸರಣಿ ಟ್ವೀಟ್‌ಗಳನ್ನು ಮಾಡಿರುವ ಬಿಜೆಪಿ ಕರ್ನಾಟಕದ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ನಳೀನ್ ಕುಮಾರ್‌ ಕಟೀಲ್ ಇಂತಹ ಹೇಳಿಕೆ ನೀಡಿದ್ದಾರೆ. ಇಂತಹ ಬಿಕ್ಕಟ್ಟಿನ ಸಮಯದಲ್ಲಿಯೂ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ.

“ದೇಶವನ್ನು ಬಹುಕಾಲ ಆಳಿದ ಕಾಂಗ್ರೆಸ್, ಜನರ ತೆರಿಗೆ ಹಣವನ್ನು ವಿವೇಚನೆಯಿಂದ ಬಳಸಿದ್ದರೆ ಕೊರೊನಾ ನಿಯಂತ್ರಿಸಲು ಕಷ್ಟವಾಗುತ್ತಿರಲಿಲ್ಲ. ಕಾಂಗ್ರೆಸ್‌ ಪಕ್ಷಕ್ಕೆ ದೂರದೃಷ್ಟಿ ಇರಲಿಲ್ಲ. ದೇಶವನ್ನು ಲೂಟಿ ಮಾಡುವ ಯೋಚನೆ ಬಿಟ್ಟು ಮತ್ಯಾವ ಯೋಚನೆಯೂ ಇರಲಿಲ್ಲ” ಎಂದು ಕೊರೊನಾ ನಿಯಂತ್ರಣ ಆಗದಿರಲು ಕಾಂಗ್ರೆಸ್ ಕಾರಣ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

“ಕೋವಿಡ್ ಪರಿಹಾರ ಕಾರ್ಯದಲ್ಲಿ ಸರ್ಕಾರ ಮತ್ತು ಪಕ್ಷ ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿದೆ. ಶಾಸಕರು, ಪಕ್ಷದ ಜಿಲ್ಲಾಧ್ಯಕ್ಷರು ಸೇರಿ ಜಿಲ್ಲೆಗಳಲ್ಲಿ ವಾರ್‌ ರೂಮ್ ತೆರೆದಿದ್ದೇವೆ. ಇಲ್ಲಿಗೆ ಬರುವ ಕರೆಗಳನ್ನು ಜಿಲ್ಲಾಡಳಿತ, ಉಸ್ತುವಾರಿ ಸಚಿವರಿಗೆ ತಲುಪಿಸುವ ಕೆಲಸ ಸೇರಿದಂತೆ 13 ಅಂಶಗಳನ್ನೊಳಗೊಂಡ ಸೇವೆ ಮಾಡಲಾಗುತ್ತಿದೆ” ಎಂದು ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ.

“ಕೋವಿಡ್ ನಿಯಂತ್ರಣಕ್ಕಾಗಿ ಪಕ್ಷ ಹಾಗೂ ಸರ್ಕಾರ ಒಂದಾಗಿ ಸೇವೆ ಸಲ್ಲಿಸುತ್ತಿದ್ದು, ಸೇವೆಯೇ ನಮ್ಮ ಪರಮ ಧ್ಯೇಯ. ಮಾತು ಕಡಿಮೆ, ಕೆಲಸ ಹೆಚ್ಚು ಮಾಡುವುದೇ ನಮ್ಮ ಗುರಿ. ನಮ್ಮ ನಿಯತ್ತು ನಿಷ್ಠೆಯಲ್ಲಿ ಕೊರತೆ ಇಲ್ಲದಂತೆ ಕಾರ್ಯನಿರ್ವಹಿಸುತ್ತಿದ್ದೇವೆ. ಜನರ ಪ್ರಾಣ ರಕ್ಷಣೆಯೇ ನಮ್ಮ ಪ್ರಥಮ ಆದ್ಯತೆ” ಎಂದು ನಳೀನ್ ಕುಮಾರ್‌ ಕಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಬಸವನ ಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಕೈ ಕಟ್ಟಿ ಬಾವಿಗೆ ಎಸೆದು ಕೊಲೆಗೈದ ದುಷ್ಕರ್ಮಿಗಳು

“ಸರ್ಕಾರ ಕೈಗೊಳ್ಳುತ್ತಿರುವ ನಿರ್ಣಯಗಳು ನೂರಕ್ಕೆ ನೂರು ಸರಿದಾರಿಯಲ್ಲಿದೆ. ಕೋವಿಡ್ ವಿಷಮ ಪರಿಸ್ಥಿತಿಯಲ್ಲಿ ಬೇರಾವುದೇ ಪಕ್ಷ ಅಧಿಕಾರದಲ್ಲಿದ್ದಿದ್ದರೆ ಪರಿಸ್ಥಿತಿ ನಿಭಾವಣೆ ಕಷ್ಟವಿತ್ತು. ಕಾಂಗ್ರೆಸ್ ಆಡಳಿತದಲ್ಲಿ ದೇಶದಲ್ಲಿ ಕೇವಲ 2 ಏಮ್ಸ್ ಇದ್ದವು, ಮೋದಿ ಸರ್ಕಾರ ಕೇವಲ 7 ವರ್ಷದಲ್ಲಿ 9 ಏಮ್ಸ್‌ ಸ್ಥಾಪಿಸಿದ್ದಾರೆ” ಎಂದು ಬಿಜೆಪಿ ದೇಶದ ಕೊರೊನಾ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಿಸುತ್ತಿದೆ ಎಂದಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್.

ಮೊನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, “ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ನಿರ್ವಹಣೆಯ ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೈಲಾಗದ ಮಾತಾಡುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು” ಎಂದು ಆಕ್ರೋಶ ಹೊರಹಾಕಿದ್ದರು.


ಇದನ್ನೂ ಓದಿ: ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಅನಾನುಭವಿ ರಾಜಕಾರಣಿಗಳು ಹೀಗೆಯೇ ಹೇಳಿಕೆ ನೀಡುತ್ತಾರೆ…ಇನ್ನೊಬ್ಬರ ಮೇಲೆ ಗೂಬೆ ಕೂರಿಸಿ ತೊಲಗುತ್ತಾರೆ…ನಳಿನ್ರವರೆ ಒಮ್ಮೆ ಇತಿಹಾಸ ಓದಿ…ಮತ್ತೆ ಹೇಳಿಕೆ ನೀಡಿ.

  2. Mr. Nalin Kumar, a great economist, actually India should have appoint him as Reserve bank chairman, instead of Dr. Manmohan Singh. If it was the case, our economy could reach top economy.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...