Homeಕರ್ನಾಟಕಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತ್ತಿತ್ತು- ನಳೀನ್ ಕುಮಾರ್‌ ಕಟೀಲ್

ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತ್ತಿತ್ತು- ನಳೀನ್ ಕುಮಾರ್‌ ಕಟೀಲ್

- Advertisement -
- Advertisement -

ದೇಶದಲ್ಲಿ ಕೊರೊನಾ ವಿಷಮ ಪರಿಸ್ಥಿತಿಯಲ್ಲಿ ಬೇರಾವುದೇ ಪಕ್ಷ ಅಧಿಕಾರದಲ್ಲಿದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಭಾನುವಾರ ಸರಣಿ ಟ್ವೀಟ್‌ಗಳನ್ನು ಮಾಡಿರುವ ಬಿಜೆಪಿ ಕರ್ನಾಟಕದ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ನಳೀನ್ ಕುಮಾರ್‌ ಕಟೀಲ್ ಇಂತಹ ಹೇಳಿಕೆ ನೀಡಿದ್ದಾರೆ. ಇಂತಹ ಬಿಕ್ಕಟ್ಟಿನ ಸಮಯದಲ್ಲಿಯೂ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ.

“ದೇಶವನ್ನು ಬಹುಕಾಲ ಆಳಿದ ಕಾಂಗ್ರೆಸ್, ಜನರ ತೆರಿಗೆ ಹಣವನ್ನು ವಿವೇಚನೆಯಿಂದ ಬಳಸಿದ್ದರೆ ಕೊರೊನಾ ನಿಯಂತ್ರಿಸಲು ಕಷ್ಟವಾಗುತ್ತಿರಲಿಲ್ಲ. ಕಾಂಗ್ರೆಸ್‌ ಪಕ್ಷಕ್ಕೆ ದೂರದೃಷ್ಟಿ ಇರಲಿಲ್ಲ. ದೇಶವನ್ನು ಲೂಟಿ ಮಾಡುವ ಯೋಚನೆ ಬಿಟ್ಟು ಮತ್ಯಾವ ಯೋಚನೆಯೂ ಇರಲಿಲ್ಲ” ಎಂದು ಕೊರೊನಾ ನಿಯಂತ್ರಣ ಆಗದಿರಲು ಕಾಂಗ್ರೆಸ್ ಕಾರಣ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

“ಕೋವಿಡ್ ಪರಿಹಾರ ಕಾರ್ಯದಲ್ಲಿ ಸರ್ಕಾರ ಮತ್ತು ಪಕ್ಷ ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿದೆ. ಶಾಸಕರು, ಪಕ್ಷದ ಜಿಲ್ಲಾಧ್ಯಕ್ಷರು ಸೇರಿ ಜಿಲ್ಲೆಗಳಲ್ಲಿ ವಾರ್‌ ರೂಮ್ ತೆರೆದಿದ್ದೇವೆ. ಇಲ್ಲಿಗೆ ಬರುವ ಕರೆಗಳನ್ನು ಜಿಲ್ಲಾಡಳಿತ, ಉಸ್ತುವಾರಿ ಸಚಿವರಿಗೆ ತಲುಪಿಸುವ ಕೆಲಸ ಸೇರಿದಂತೆ 13 ಅಂಶಗಳನ್ನೊಳಗೊಂಡ ಸೇವೆ ಮಾಡಲಾಗುತ್ತಿದೆ” ಎಂದು ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ.

“ಕೋವಿಡ್ ನಿಯಂತ್ರಣಕ್ಕಾಗಿ ಪಕ್ಷ ಹಾಗೂ ಸರ್ಕಾರ ಒಂದಾಗಿ ಸೇವೆ ಸಲ್ಲಿಸುತ್ತಿದ್ದು, ಸೇವೆಯೇ ನಮ್ಮ ಪರಮ ಧ್ಯೇಯ. ಮಾತು ಕಡಿಮೆ, ಕೆಲಸ ಹೆಚ್ಚು ಮಾಡುವುದೇ ನಮ್ಮ ಗುರಿ. ನಮ್ಮ ನಿಯತ್ತು ನಿಷ್ಠೆಯಲ್ಲಿ ಕೊರತೆ ಇಲ್ಲದಂತೆ ಕಾರ್ಯನಿರ್ವಹಿಸುತ್ತಿದ್ದೇವೆ. ಜನರ ಪ್ರಾಣ ರಕ್ಷಣೆಯೇ ನಮ್ಮ ಪ್ರಥಮ ಆದ್ಯತೆ” ಎಂದು ನಳೀನ್ ಕುಮಾರ್‌ ಕಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಬಸವನ ಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಕೈ ಕಟ್ಟಿ ಬಾವಿಗೆ ಎಸೆದು ಕೊಲೆಗೈದ ದುಷ್ಕರ್ಮಿಗಳು

“ಸರ್ಕಾರ ಕೈಗೊಳ್ಳುತ್ತಿರುವ ನಿರ್ಣಯಗಳು ನೂರಕ್ಕೆ ನೂರು ಸರಿದಾರಿಯಲ್ಲಿದೆ. ಕೋವಿಡ್ ವಿಷಮ ಪರಿಸ್ಥಿತಿಯಲ್ಲಿ ಬೇರಾವುದೇ ಪಕ್ಷ ಅಧಿಕಾರದಲ್ಲಿದ್ದಿದ್ದರೆ ಪರಿಸ್ಥಿತಿ ನಿಭಾವಣೆ ಕಷ್ಟವಿತ್ತು. ಕಾಂಗ್ರೆಸ್ ಆಡಳಿತದಲ್ಲಿ ದೇಶದಲ್ಲಿ ಕೇವಲ 2 ಏಮ್ಸ್ ಇದ್ದವು, ಮೋದಿ ಸರ್ಕಾರ ಕೇವಲ 7 ವರ್ಷದಲ್ಲಿ 9 ಏಮ್ಸ್‌ ಸ್ಥಾಪಿಸಿದ್ದಾರೆ” ಎಂದು ಬಿಜೆಪಿ ದೇಶದ ಕೊರೊನಾ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಿಸುತ್ತಿದೆ ಎಂದಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್.

ಮೊನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, “ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ನಿರ್ವಹಣೆಯ ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೈಲಾಗದ ಮಾತಾಡುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು” ಎಂದು ಆಕ್ರೋಶ ಹೊರಹಾಕಿದ್ದರು.


ಇದನ್ನೂ ಓದಿ: ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಅನಾನುಭವಿ ರಾಜಕಾರಣಿಗಳು ಹೀಗೆಯೇ ಹೇಳಿಕೆ ನೀಡುತ್ತಾರೆ…ಇನ್ನೊಬ್ಬರ ಮೇಲೆ ಗೂಬೆ ಕೂರಿಸಿ ತೊಲಗುತ್ತಾರೆ…ನಳಿನ್ರವರೆ ಒಮ್ಮೆ ಇತಿಹಾಸ ಓದಿ…ಮತ್ತೆ ಹೇಳಿಕೆ ನೀಡಿ.

  2. Mr. Nalin Kumar, a great economist, actually India should have appoint him as Reserve bank chairman, instead of Dr. Manmohan Singh. If it was the case, our economy could reach top economy.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....