Homeಕರ್ನಾಟಕಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದ ಅರಸೀಕೆರೆಯ ಮಾಜಿ ಶಾಸಕ ಶಿವಲಿಂಗೇಗೌಡ

ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದ ಅರಸೀಕೆರೆಯ ಮಾಜಿ ಶಾಸಕ ಶಿವಲಿಂಗೇಗೌಡ

- Advertisement -
- Advertisement -

ಕೆಲವು ದಿನಗಳಿಂದ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಕಾಂಗ್ರೆಸ್ ಪಕ್ಷ ಸೇರುವ ತವಕದಲ್ಲಿದ್ದರು. ಅದರಂತೆ ಭಾನುವಾರ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಅರಸೀಕೆರೆಯ ಜೇನುಕಲ್‌ ಕ್ರೀಡಾಂಗಣದಲ್ಲಿ ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೆ.ಎಂ. ಶಿವಲಿಂಗೇಗೌಡರಿಗೆ ಕಾಂಗ್ರೆಸ್‌ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ”ಶಿವಲಿಂಗೇಗೌಡರನ್ನು ಸುಮಾರು 10 ವರ್ಷಗಳಿಂದ ಕಾಂಗ್ರೆಸ್‌ಗೆ ಕರೆತರಲು ಪ್ರಯತ್ನಿಸಿದ್ದರೂ ಆಗಿರಲಿಲ್ಲ. ನನ್ನ ಮತ್ತು ಸಿದ್ದರಾಮಯ್ಯನವರ ಮಾತಿಗೂ ಅವರು ಒಪ್ಟಿರಲಿಲ್ಲ. ಅಂತಿಮವಾಗಿ ಕ್ಷೇತ್ರದ ಜನರ ಮಾತಿಗೆ ಬೆಲೆ ಕೊಟ್ಟು ಕಾಂಗ್ರೆಸ್ ಸೇರುತ್ತಿರುವುದು ಸಂತಸದ ವಿಷಯ” ಎಂದರು.

”ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆ ಸಮಾವೇಶ ಎಂದರೆ ಇತಿಹಾಸ ಸೃಷ್ಟಿಯಾಗುತ್ತಿದೆ. ಕ್ಷೇತ್ರದ ಹೆಚ್ಚಿನ ಅಭಿವೃದ್ಧಿಗೆ ಕೆ.ಎಂ. ಶಿವಲಿಂಗೇಗೌಡ ಕಾಂಗ್ರೆಸ್ ಪಕ್ಷ ಸೇರುತ್ತಿರುವುದಕ್ಕೆ ಅಧಿಕೃತವಾಗಿ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ” ಎಂದರು.

”ಹೋರಾಟ ಮಾಡುವವರು ಗೆದ್ದೇ ಗೆಲ್ಲುತ್ತಾರೆ ಎಂದು ಅಂಬೇಡ್ಕರ್ ಹೇಳಿದ್ದಾರೆ. ದೇವರು ಕೊಟ್ಟ ಅವಕಾಶವನ್ನು ಉಪಯೋಗಿಸಿಕೊಳ್ಳುವುದು ಸಾಧನೆ. ನಂಬಿಕೆ ಮೇಲೆ ಎಲ್ಲರೂ ಬದುಕುತ್ತಿದ್ದೇವೆ. ದೇಶದ ಶಕ್ತಿ ಕಾಂಗ್ರೆಸ್. ಸಾಮಾಜಿಕ ಬದ್ದತೆ, ಬಡವರು ಮತ್ತು ರೈತರನ್ನು ಸಬಲರನ್ನಾಗಿಸುವುದು ಕಾಂಗ್ರೆಸ್ ಉದ್ದೇಶ. ರಾಜ್ಯದ ಹಿತಕ್ಕಾಗಿ ಸ್ವಾಭಿಮಾನ ಬದಿಗೊತ್ತಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹೋರಾಡುತ್ತಿದ್ದೇವೆ” ಎಂದು ಹೇಳಿದರು.

”ಮೇ 10 ಕೇವಲ ಮತದಾನ ಮಾಡುವ ದಿನವಲ್ಲ, ಅದು ಕಾಂಗ್ರೆಸ್ ಅಧಿಕಾರಕ್ಕೆ ತರುವ ದಿನವಾಗಿದೆ, ಎಲ್ಲರೂ ತೀರ್ಮಾನಿಸುವ ದಿನ. ಕಮಲ ಕೆರೆಯಲ್ಲಿದ್ದರೆ ಚೆನ್ನ, ಜೆಡಿಎಸ್ ಹೊಲದಲ್ಲಿದ್ದರೆ ಚೆನ್ನ, ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಚೆನ್ನ. ಈ ನಿಟ್ಟಿನಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿ: ಅರಸಿಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ರಾಜೀನಾಮೆ; ಕಾಂಗ್ರೆಸ್ ಸೇರುವ ಸಾಧ್ಯತೆ

”ಯಾರೂ ಹಸಿದುಕೊಂಡು ಇರಬಾರದು ಎಂದು ಕಾಂಗ್ರೆಸ್ 10 ಕೆ.ಜಿ. ಅಕ್ಕಿ, 200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ₹2 ಸಾವಿರ ನೀಡಲು ನಿರ್ಧರಿಸಿದ್ದೇವೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಯಡಿ ನೀಡಿರುವ ಭರವಸೆಗಳನ್ನು ಈಡೇರಿಸಲು ಬದ್ದರಾಗಿದ್ದೇವೆ” ಎಂದು ತಿಳಿಸಿದರು.

ಈ ವೇಳೆ ಮಾಜಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಮಾತನಾಡಿ, ”ಎತ್ತಿನಹೊಳೆ ನೀರಾವರಿ ಯೋಜನೆ ತಾಲ್ಲೂಕಿಗೆ ಕೊಟ್ಟಿದ್ದು ಕಾಂಗ್ರೆಸ್, ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ. ಎತ್ತಿನಹೊಳೆ ನೀರಾವರಿ ಯೋಜನೆ ಹಣ ಲೂಟಿ ಮಾಡುವ ಯೋಜನೆಯಾಗಿದೆ. ಇದರ ಉದ್ಘಾಟನೆ ಸಮಾರಂಭಕ್ಕೆ ಹೋಗಬೇಡ ಎಂದು ನನ್ನ ಮೇಲೆ ಒತ್ತಡ ಹಾಕಿದ್ದರು. ನನ್ನ ಕ್ಷೇತ್ರದ ಜನರ ಹಿತದೃಷ್ಟಿಯಿಂದ ಜೆಡಿಎಸ್ ಶಾಸಕನಾಗಿ ನಾನೊಬ್ಬನೇ ಅಂದು ಎತ್ತಿನಹೊಳೆ ನೀರಾವರಿ ಯೋಜನೆ ಉದ್ಘಾಟನಾ ಸಮಾರಂಭಕ್ಕೆ ಹೋಗಿದ್ದೆ. ಸದನದಲ್ಲಿ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಕ್ಕೆ ಜೆಡಿಎಸ್‌ನವರು ನನ್ನನ್ನು ವಿರೋಧಿಸಲು ಆರಂಭಿಸಿದರು” ಎಂದು ತಿಳಿಸಿದರು.

”ಬಿಜೆಪಿ ಭ್ರಷ್ಟಾಚಾರದ ಪಕ್ಷವಾಗಿದೆ. ಬಿಜೆಪಿಯಂಥ ನೀತಿಗೆಟ್ಟ ಸರ್ಕಾರ ಯಾವುದೂ ಇಲ್ಲ. ಬಿಜೆಪಿ ಅಭ್ಯರ್ಥಿ ಎಂದು ಬಂದಿರುವ ವ್ಯಕ್ತಿ, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಸಿಲಿಂಡರ್ ಬೆಲೆ ಹಾಗೂ ಗೊಬ್ಬರದ ಬೆಲೆ ಏರಿಕೆ ಮಾಡುತ್ತಿದೆ. ರೈತರು ಹಾಗೂ ಸಾಮಾನ್ಯ ಜನರು, ಬಡವರನ್ನು ಸುಲಿಗೆ ಮಾಡುತ್ತಿರುವುದೇ ಬಿಜೆಪಿ ಸರ್ಕಾರದ ಸಾಧನೆ. ಕೊಬ್ಬರಿ ಬೆಂಬಲ ಬೆಲೆ ನಿಗದಿಯಲ್ಲಿ ರೈತರಿಗೆ ಅನ್ಯಾಯ ಮಾಡುತ್ತಿದೆ. ಆದಾನಿ, ಅಂಬಾನಿ ಸೇರಿದಂತೆ ದೊಡ್ಡ ಕಾರ್ಪೋರೇಟ್ ಕಂಪೆನಿಗಳನ್ನು ಬೆಳೆಸುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದಿನೇ ದಿನೇ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ” ಎಂದು ಕಿಡಿಕಾರಿದರು.

ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ”ಕಾಂಗ್ರೆಸ್‌ ಪಕ್ಷ ನಮ್ಮೂರಿಗೆ ಬಂದು ನನ್ನನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದು, ಅದೇ ರೀತಿ ನಿಮ್ಮೂರಿಗೆ ಬಂದು ಶಿವಲಿಂಗೇಗೌಡರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುತ್ತಿದ್ದೇವೆ. ನಿನಗೆ ನೀರಿಗೆ ಹಾಕಲ್ಲ, ಹಾಲಿಗೆ ಹಾಕೇ ಹಾಕುತ್ತೇವೆ. ನಿನ್ನ ಮತ್ತು ನಿನ್ನ ಕ್ಷೇತ್ರವನ್ನೂ ಕ್ಷೇಮವಾಗಿ ನೋಡಿಕೊಳ್ಳುತ್ತೇವೆ” ಎಂದು ಹೇಳಿದರು.

”ಜೆಡಿಎಸ್‌ನಲ್ಲಿ ಎಚ್.ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ಹೇಳಿದ್ದನ್ನು ಕೇಳಿಕೊಂಡು ಇರಬೇಕು. ಪ್ರಶ್ನೆ ಮಾಡಿದವರನ್ನು ಜೆಡಿಎಸ್‌ನಿಂದ ಹೊರಗೆ ಹಾಕುತ್ತಾರೆ. ಶಿವಲಿಂಗೇಗೌಡರಿಗೂ ಅದನ್ನೇ ಮಾಡಿದ್ದು” ಎಂದರು..

”ಶಿವಲಿಂಗೇಗೌಡರು ಜೆಡಿಎಸ್ ಶಾಸಕರಾಗಿದ್ದುಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳ ಜೊತೆ ಉತ್ತಮ ಒಡನಾಟ ಇಟ್ಟುಕೊಂಡು ಹೆಚ್ಚು ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದರು.

”ಎತ್ತಿನಹೊಳೆ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಂಜೂರು ಮಾಡಿಸಿಕೊಂಡು ಜನರ ಸೇವೆ ಮಾಡಿದ್ದಾರೆ ಕ್ಷೇತ್ರದ ಜನತೆಗೆ ಕುಡಿಯುವ ನೀರನ್ನು ಕೊಟ್ಟಿದ್ದು ಶಿವಲಿಂಗೇಗೌಡ. ಎತ್ತಿನಹೊಳೆ ನೀರಾವರಿ ಯೋಜನೆ ಉದ್ಘಾಟನೆ ಸಮಾರಂಭಕ್ಕೆ ಶಿವಲಿಂಗೇಗೌಡ ಹೊರತಪಡಿಸಿ, ಉಳಿದ ಜೆಡಿಎಸ್ ಶಾಸಕರು ಸಮಾರಂಭಕ್ಕೆ ಬರಲಿಲ್ಲ. ಎಚ್.ಡಿ. ಕುಮಾರಸ್ವಾಮಿ ಎತ್ತಿನಹೊಳೆ ನೀರಾವರಿ ಯೋಜನೆ ವಿರೋಧಿಸಿದ್ದರು. ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿದ ನಂತರ ಬಂದ ಬೇರೆ ಪಕ್ಷಗಳ ಸರ್ಕಾರಗಳು ಎತ್ತಿನಹೊಳೆ ಯೋಜನೆಗೆ ಹಣ ಮಂಜೂರು ಮಾಡುತ್ತಿಲ್ಲ” ಎಂದು ಸಿದ್ದರಾಮಯ್ಯ ದೂರಿದರು.

ಈ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ. ಸುರೇಶ್, ವಿಧಾನ ಪರಿಷತ್ ಮುಖ್ಯ ಸಚೇತಕ ಪ್ರಕಾಶ್ ರಾಠೋಡ್, ಮಾಜಿ ಸಚಿವ ಜಮೀರ್ ಅಹ್ಮದ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣ್, ಉಪಾಧ್ಯಕ್ಷ ಶಿವಶಂಕರಸ್ವಾಮಿ, ಪಟೇಲ್ ಶಿವಪ್ಪ, ಸಿ.ಎಸ್ ಪುಟ್ಟೇಗೌಡ, ಗೋಪಾಲಸ್ವಾಮಿ, ಬಾಗೂರು ಮಂಜೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ್, ಮೆಟ್ರೊ ಬಾಬು, ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ತಾರಾ ಚಂದನ್, ಜಿಲ್ಲಾ ಹಾಗೂ ತಾಲ್ಲೂಕು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...