Homeಕರ್ನಾಟಕಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದ ಅರಸೀಕೆರೆಯ ಮಾಜಿ ಶಾಸಕ ಶಿವಲಿಂಗೇಗೌಡ

ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದ ಅರಸೀಕೆರೆಯ ಮಾಜಿ ಶಾಸಕ ಶಿವಲಿಂಗೇಗೌಡ

- Advertisement -
- Advertisement -

ಕೆಲವು ದಿನಗಳಿಂದ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಕಾಂಗ್ರೆಸ್ ಪಕ್ಷ ಸೇರುವ ತವಕದಲ್ಲಿದ್ದರು. ಅದರಂತೆ ಭಾನುವಾರ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಅರಸೀಕೆರೆಯ ಜೇನುಕಲ್‌ ಕ್ರೀಡಾಂಗಣದಲ್ಲಿ ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೆ.ಎಂ. ಶಿವಲಿಂಗೇಗೌಡರಿಗೆ ಕಾಂಗ್ರೆಸ್‌ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ”ಶಿವಲಿಂಗೇಗೌಡರನ್ನು ಸುಮಾರು 10 ವರ್ಷಗಳಿಂದ ಕಾಂಗ್ರೆಸ್‌ಗೆ ಕರೆತರಲು ಪ್ರಯತ್ನಿಸಿದ್ದರೂ ಆಗಿರಲಿಲ್ಲ. ನನ್ನ ಮತ್ತು ಸಿದ್ದರಾಮಯ್ಯನವರ ಮಾತಿಗೂ ಅವರು ಒಪ್ಟಿರಲಿಲ್ಲ. ಅಂತಿಮವಾಗಿ ಕ್ಷೇತ್ರದ ಜನರ ಮಾತಿಗೆ ಬೆಲೆ ಕೊಟ್ಟು ಕಾಂಗ್ರೆಸ್ ಸೇರುತ್ತಿರುವುದು ಸಂತಸದ ವಿಷಯ” ಎಂದರು.

”ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆ ಸಮಾವೇಶ ಎಂದರೆ ಇತಿಹಾಸ ಸೃಷ್ಟಿಯಾಗುತ್ತಿದೆ. ಕ್ಷೇತ್ರದ ಹೆಚ್ಚಿನ ಅಭಿವೃದ್ಧಿಗೆ ಕೆ.ಎಂ. ಶಿವಲಿಂಗೇಗೌಡ ಕಾಂಗ್ರೆಸ್ ಪಕ್ಷ ಸೇರುತ್ತಿರುವುದಕ್ಕೆ ಅಧಿಕೃತವಾಗಿ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ” ಎಂದರು.

”ಹೋರಾಟ ಮಾಡುವವರು ಗೆದ್ದೇ ಗೆಲ್ಲುತ್ತಾರೆ ಎಂದು ಅಂಬೇಡ್ಕರ್ ಹೇಳಿದ್ದಾರೆ. ದೇವರು ಕೊಟ್ಟ ಅವಕಾಶವನ್ನು ಉಪಯೋಗಿಸಿಕೊಳ್ಳುವುದು ಸಾಧನೆ. ನಂಬಿಕೆ ಮೇಲೆ ಎಲ್ಲರೂ ಬದುಕುತ್ತಿದ್ದೇವೆ. ದೇಶದ ಶಕ್ತಿ ಕಾಂಗ್ರೆಸ್. ಸಾಮಾಜಿಕ ಬದ್ದತೆ, ಬಡವರು ಮತ್ತು ರೈತರನ್ನು ಸಬಲರನ್ನಾಗಿಸುವುದು ಕಾಂಗ್ರೆಸ್ ಉದ್ದೇಶ. ರಾಜ್ಯದ ಹಿತಕ್ಕಾಗಿ ಸ್ವಾಭಿಮಾನ ಬದಿಗೊತ್ತಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹೋರಾಡುತ್ತಿದ್ದೇವೆ” ಎಂದು ಹೇಳಿದರು.

”ಮೇ 10 ಕೇವಲ ಮತದಾನ ಮಾಡುವ ದಿನವಲ್ಲ, ಅದು ಕಾಂಗ್ರೆಸ್ ಅಧಿಕಾರಕ್ಕೆ ತರುವ ದಿನವಾಗಿದೆ, ಎಲ್ಲರೂ ತೀರ್ಮಾನಿಸುವ ದಿನ. ಕಮಲ ಕೆರೆಯಲ್ಲಿದ್ದರೆ ಚೆನ್ನ, ಜೆಡಿಎಸ್ ಹೊಲದಲ್ಲಿದ್ದರೆ ಚೆನ್ನ, ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಚೆನ್ನ. ಈ ನಿಟ್ಟಿನಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿ: ಅರಸಿಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ರಾಜೀನಾಮೆ; ಕಾಂಗ್ರೆಸ್ ಸೇರುವ ಸಾಧ್ಯತೆ

”ಯಾರೂ ಹಸಿದುಕೊಂಡು ಇರಬಾರದು ಎಂದು ಕಾಂಗ್ರೆಸ್ 10 ಕೆ.ಜಿ. ಅಕ್ಕಿ, 200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ₹2 ಸಾವಿರ ನೀಡಲು ನಿರ್ಧರಿಸಿದ್ದೇವೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಯಡಿ ನೀಡಿರುವ ಭರವಸೆಗಳನ್ನು ಈಡೇರಿಸಲು ಬದ್ದರಾಗಿದ್ದೇವೆ” ಎಂದು ತಿಳಿಸಿದರು.

ಈ ವೇಳೆ ಮಾಜಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಮಾತನಾಡಿ, ”ಎತ್ತಿನಹೊಳೆ ನೀರಾವರಿ ಯೋಜನೆ ತಾಲ್ಲೂಕಿಗೆ ಕೊಟ್ಟಿದ್ದು ಕಾಂಗ್ರೆಸ್, ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ. ಎತ್ತಿನಹೊಳೆ ನೀರಾವರಿ ಯೋಜನೆ ಹಣ ಲೂಟಿ ಮಾಡುವ ಯೋಜನೆಯಾಗಿದೆ. ಇದರ ಉದ್ಘಾಟನೆ ಸಮಾರಂಭಕ್ಕೆ ಹೋಗಬೇಡ ಎಂದು ನನ್ನ ಮೇಲೆ ಒತ್ತಡ ಹಾಕಿದ್ದರು. ನನ್ನ ಕ್ಷೇತ್ರದ ಜನರ ಹಿತದೃಷ್ಟಿಯಿಂದ ಜೆಡಿಎಸ್ ಶಾಸಕನಾಗಿ ನಾನೊಬ್ಬನೇ ಅಂದು ಎತ್ತಿನಹೊಳೆ ನೀರಾವರಿ ಯೋಜನೆ ಉದ್ಘಾಟನಾ ಸಮಾರಂಭಕ್ಕೆ ಹೋಗಿದ್ದೆ. ಸದನದಲ್ಲಿ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಕ್ಕೆ ಜೆಡಿಎಸ್‌ನವರು ನನ್ನನ್ನು ವಿರೋಧಿಸಲು ಆರಂಭಿಸಿದರು” ಎಂದು ತಿಳಿಸಿದರು.

”ಬಿಜೆಪಿ ಭ್ರಷ್ಟಾಚಾರದ ಪಕ್ಷವಾಗಿದೆ. ಬಿಜೆಪಿಯಂಥ ನೀತಿಗೆಟ್ಟ ಸರ್ಕಾರ ಯಾವುದೂ ಇಲ್ಲ. ಬಿಜೆಪಿ ಅಭ್ಯರ್ಥಿ ಎಂದು ಬಂದಿರುವ ವ್ಯಕ್ತಿ, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಸಿಲಿಂಡರ್ ಬೆಲೆ ಹಾಗೂ ಗೊಬ್ಬರದ ಬೆಲೆ ಏರಿಕೆ ಮಾಡುತ್ತಿದೆ. ರೈತರು ಹಾಗೂ ಸಾಮಾನ್ಯ ಜನರು, ಬಡವರನ್ನು ಸುಲಿಗೆ ಮಾಡುತ್ತಿರುವುದೇ ಬಿಜೆಪಿ ಸರ್ಕಾರದ ಸಾಧನೆ. ಕೊಬ್ಬರಿ ಬೆಂಬಲ ಬೆಲೆ ನಿಗದಿಯಲ್ಲಿ ರೈತರಿಗೆ ಅನ್ಯಾಯ ಮಾಡುತ್ತಿದೆ. ಆದಾನಿ, ಅಂಬಾನಿ ಸೇರಿದಂತೆ ದೊಡ್ಡ ಕಾರ್ಪೋರೇಟ್ ಕಂಪೆನಿಗಳನ್ನು ಬೆಳೆಸುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದಿನೇ ದಿನೇ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ” ಎಂದು ಕಿಡಿಕಾರಿದರು.

ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ”ಕಾಂಗ್ರೆಸ್‌ ಪಕ್ಷ ನಮ್ಮೂರಿಗೆ ಬಂದು ನನ್ನನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದು, ಅದೇ ರೀತಿ ನಿಮ್ಮೂರಿಗೆ ಬಂದು ಶಿವಲಿಂಗೇಗೌಡರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುತ್ತಿದ್ದೇವೆ. ನಿನಗೆ ನೀರಿಗೆ ಹಾಕಲ್ಲ, ಹಾಲಿಗೆ ಹಾಕೇ ಹಾಕುತ್ತೇವೆ. ನಿನ್ನ ಮತ್ತು ನಿನ್ನ ಕ್ಷೇತ್ರವನ್ನೂ ಕ್ಷೇಮವಾಗಿ ನೋಡಿಕೊಳ್ಳುತ್ತೇವೆ” ಎಂದು ಹೇಳಿದರು.

”ಜೆಡಿಎಸ್‌ನಲ್ಲಿ ಎಚ್.ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ಹೇಳಿದ್ದನ್ನು ಕೇಳಿಕೊಂಡು ಇರಬೇಕು. ಪ್ರಶ್ನೆ ಮಾಡಿದವರನ್ನು ಜೆಡಿಎಸ್‌ನಿಂದ ಹೊರಗೆ ಹಾಕುತ್ತಾರೆ. ಶಿವಲಿಂಗೇಗೌಡರಿಗೂ ಅದನ್ನೇ ಮಾಡಿದ್ದು” ಎಂದರು..

”ಶಿವಲಿಂಗೇಗೌಡರು ಜೆಡಿಎಸ್ ಶಾಸಕರಾಗಿದ್ದುಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳ ಜೊತೆ ಉತ್ತಮ ಒಡನಾಟ ಇಟ್ಟುಕೊಂಡು ಹೆಚ್ಚು ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದರು.

”ಎತ್ತಿನಹೊಳೆ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಂಜೂರು ಮಾಡಿಸಿಕೊಂಡು ಜನರ ಸೇವೆ ಮಾಡಿದ್ದಾರೆ ಕ್ಷೇತ್ರದ ಜನತೆಗೆ ಕುಡಿಯುವ ನೀರನ್ನು ಕೊಟ್ಟಿದ್ದು ಶಿವಲಿಂಗೇಗೌಡ. ಎತ್ತಿನಹೊಳೆ ನೀರಾವರಿ ಯೋಜನೆ ಉದ್ಘಾಟನೆ ಸಮಾರಂಭಕ್ಕೆ ಶಿವಲಿಂಗೇಗೌಡ ಹೊರತಪಡಿಸಿ, ಉಳಿದ ಜೆಡಿಎಸ್ ಶಾಸಕರು ಸಮಾರಂಭಕ್ಕೆ ಬರಲಿಲ್ಲ. ಎಚ್.ಡಿ. ಕುಮಾರಸ್ವಾಮಿ ಎತ್ತಿನಹೊಳೆ ನೀರಾವರಿ ಯೋಜನೆ ವಿರೋಧಿಸಿದ್ದರು. ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿದ ನಂತರ ಬಂದ ಬೇರೆ ಪಕ್ಷಗಳ ಸರ್ಕಾರಗಳು ಎತ್ತಿನಹೊಳೆ ಯೋಜನೆಗೆ ಹಣ ಮಂಜೂರು ಮಾಡುತ್ತಿಲ್ಲ” ಎಂದು ಸಿದ್ದರಾಮಯ್ಯ ದೂರಿದರು.

ಈ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ. ಸುರೇಶ್, ವಿಧಾನ ಪರಿಷತ್ ಮುಖ್ಯ ಸಚೇತಕ ಪ್ರಕಾಶ್ ರಾಠೋಡ್, ಮಾಜಿ ಸಚಿವ ಜಮೀರ್ ಅಹ್ಮದ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣ್, ಉಪಾಧ್ಯಕ್ಷ ಶಿವಶಂಕರಸ್ವಾಮಿ, ಪಟೇಲ್ ಶಿವಪ್ಪ, ಸಿ.ಎಸ್ ಪುಟ್ಟೇಗೌಡ, ಗೋಪಾಲಸ್ವಾಮಿ, ಬಾಗೂರು ಮಂಜೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ್, ಮೆಟ್ರೊ ಬಾಬು, ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ತಾರಾ ಚಂದನ್, ಜಿಲ್ಲಾ ಹಾಗೂ ತಾಲ್ಲೂಕು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...