Homeಕರ್ನಾಟಕಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದ ಅರಸೀಕೆರೆಯ ಮಾಜಿ ಶಾಸಕ ಶಿವಲಿಂಗೇಗೌಡ

ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದ ಅರಸೀಕೆರೆಯ ಮಾಜಿ ಶಾಸಕ ಶಿವಲಿಂಗೇಗೌಡ

- Advertisement -
- Advertisement -

ಕೆಲವು ದಿನಗಳಿಂದ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಕಾಂಗ್ರೆಸ್ ಪಕ್ಷ ಸೇರುವ ತವಕದಲ್ಲಿದ್ದರು. ಅದರಂತೆ ಭಾನುವಾರ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಅರಸೀಕೆರೆಯ ಜೇನುಕಲ್‌ ಕ್ರೀಡಾಂಗಣದಲ್ಲಿ ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೆ.ಎಂ. ಶಿವಲಿಂಗೇಗೌಡರಿಗೆ ಕಾಂಗ್ರೆಸ್‌ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ”ಶಿವಲಿಂಗೇಗೌಡರನ್ನು ಸುಮಾರು 10 ವರ್ಷಗಳಿಂದ ಕಾಂಗ್ರೆಸ್‌ಗೆ ಕರೆತರಲು ಪ್ರಯತ್ನಿಸಿದ್ದರೂ ಆಗಿರಲಿಲ್ಲ. ನನ್ನ ಮತ್ತು ಸಿದ್ದರಾಮಯ್ಯನವರ ಮಾತಿಗೂ ಅವರು ಒಪ್ಟಿರಲಿಲ್ಲ. ಅಂತಿಮವಾಗಿ ಕ್ಷೇತ್ರದ ಜನರ ಮಾತಿಗೆ ಬೆಲೆ ಕೊಟ್ಟು ಕಾಂಗ್ರೆಸ್ ಸೇರುತ್ತಿರುವುದು ಸಂತಸದ ವಿಷಯ” ಎಂದರು.

”ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆ ಸಮಾವೇಶ ಎಂದರೆ ಇತಿಹಾಸ ಸೃಷ್ಟಿಯಾಗುತ್ತಿದೆ. ಕ್ಷೇತ್ರದ ಹೆಚ್ಚಿನ ಅಭಿವೃದ್ಧಿಗೆ ಕೆ.ಎಂ. ಶಿವಲಿಂಗೇಗೌಡ ಕಾಂಗ್ರೆಸ್ ಪಕ್ಷ ಸೇರುತ್ತಿರುವುದಕ್ಕೆ ಅಧಿಕೃತವಾಗಿ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ” ಎಂದರು.

”ಹೋರಾಟ ಮಾಡುವವರು ಗೆದ್ದೇ ಗೆಲ್ಲುತ್ತಾರೆ ಎಂದು ಅಂಬೇಡ್ಕರ್ ಹೇಳಿದ್ದಾರೆ. ದೇವರು ಕೊಟ್ಟ ಅವಕಾಶವನ್ನು ಉಪಯೋಗಿಸಿಕೊಳ್ಳುವುದು ಸಾಧನೆ. ನಂಬಿಕೆ ಮೇಲೆ ಎಲ್ಲರೂ ಬದುಕುತ್ತಿದ್ದೇವೆ. ದೇಶದ ಶಕ್ತಿ ಕಾಂಗ್ರೆಸ್. ಸಾಮಾಜಿಕ ಬದ್ದತೆ, ಬಡವರು ಮತ್ತು ರೈತರನ್ನು ಸಬಲರನ್ನಾಗಿಸುವುದು ಕಾಂಗ್ರೆಸ್ ಉದ್ದೇಶ. ರಾಜ್ಯದ ಹಿತಕ್ಕಾಗಿ ಸ್ವಾಭಿಮಾನ ಬದಿಗೊತ್ತಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹೋರಾಡುತ್ತಿದ್ದೇವೆ” ಎಂದು ಹೇಳಿದರು.

”ಮೇ 10 ಕೇವಲ ಮತದಾನ ಮಾಡುವ ದಿನವಲ್ಲ, ಅದು ಕಾಂಗ್ರೆಸ್ ಅಧಿಕಾರಕ್ಕೆ ತರುವ ದಿನವಾಗಿದೆ, ಎಲ್ಲರೂ ತೀರ್ಮಾನಿಸುವ ದಿನ. ಕಮಲ ಕೆರೆಯಲ್ಲಿದ್ದರೆ ಚೆನ್ನ, ಜೆಡಿಎಸ್ ಹೊಲದಲ್ಲಿದ್ದರೆ ಚೆನ್ನ, ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಚೆನ್ನ. ಈ ನಿಟ್ಟಿನಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿ: ಅರಸಿಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ರಾಜೀನಾಮೆ; ಕಾಂಗ್ರೆಸ್ ಸೇರುವ ಸಾಧ್ಯತೆ

”ಯಾರೂ ಹಸಿದುಕೊಂಡು ಇರಬಾರದು ಎಂದು ಕಾಂಗ್ರೆಸ್ 10 ಕೆ.ಜಿ. ಅಕ್ಕಿ, 200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ₹2 ಸಾವಿರ ನೀಡಲು ನಿರ್ಧರಿಸಿದ್ದೇವೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಯಡಿ ನೀಡಿರುವ ಭರವಸೆಗಳನ್ನು ಈಡೇರಿಸಲು ಬದ್ದರಾಗಿದ್ದೇವೆ” ಎಂದು ತಿಳಿಸಿದರು.

ಈ ವೇಳೆ ಮಾಜಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಮಾತನಾಡಿ, ”ಎತ್ತಿನಹೊಳೆ ನೀರಾವರಿ ಯೋಜನೆ ತಾಲ್ಲೂಕಿಗೆ ಕೊಟ್ಟಿದ್ದು ಕಾಂಗ್ರೆಸ್, ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ. ಎತ್ತಿನಹೊಳೆ ನೀರಾವರಿ ಯೋಜನೆ ಹಣ ಲೂಟಿ ಮಾಡುವ ಯೋಜನೆಯಾಗಿದೆ. ಇದರ ಉದ್ಘಾಟನೆ ಸಮಾರಂಭಕ್ಕೆ ಹೋಗಬೇಡ ಎಂದು ನನ್ನ ಮೇಲೆ ಒತ್ತಡ ಹಾಕಿದ್ದರು. ನನ್ನ ಕ್ಷೇತ್ರದ ಜನರ ಹಿತದೃಷ್ಟಿಯಿಂದ ಜೆಡಿಎಸ್ ಶಾಸಕನಾಗಿ ನಾನೊಬ್ಬನೇ ಅಂದು ಎತ್ತಿನಹೊಳೆ ನೀರಾವರಿ ಯೋಜನೆ ಉದ್ಘಾಟನಾ ಸಮಾರಂಭಕ್ಕೆ ಹೋಗಿದ್ದೆ. ಸದನದಲ್ಲಿ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಕ್ಕೆ ಜೆಡಿಎಸ್‌ನವರು ನನ್ನನ್ನು ವಿರೋಧಿಸಲು ಆರಂಭಿಸಿದರು” ಎಂದು ತಿಳಿಸಿದರು.

”ಬಿಜೆಪಿ ಭ್ರಷ್ಟಾಚಾರದ ಪಕ್ಷವಾಗಿದೆ. ಬಿಜೆಪಿಯಂಥ ನೀತಿಗೆಟ್ಟ ಸರ್ಕಾರ ಯಾವುದೂ ಇಲ್ಲ. ಬಿಜೆಪಿ ಅಭ್ಯರ್ಥಿ ಎಂದು ಬಂದಿರುವ ವ್ಯಕ್ತಿ, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಸಿಲಿಂಡರ್ ಬೆಲೆ ಹಾಗೂ ಗೊಬ್ಬರದ ಬೆಲೆ ಏರಿಕೆ ಮಾಡುತ್ತಿದೆ. ರೈತರು ಹಾಗೂ ಸಾಮಾನ್ಯ ಜನರು, ಬಡವರನ್ನು ಸುಲಿಗೆ ಮಾಡುತ್ತಿರುವುದೇ ಬಿಜೆಪಿ ಸರ್ಕಾರದ ಸಾಧನೆ. ಕೊಬ್ಬರಿ ಬೆಂಬಲ ಬೆಲೆ ನಿಗದಿಯಲ್ಲಿ ರೈತರಿಗೆ ಅನ್ಯಾಯ ಮಾಡುತ್ತಿದೆ. ಆದಾನಿ, ಅಂಬಾನಿ ಸೇರಿದಂತೆ ದೊಡ್ಡ ಕಾರ್ಪೋರೇಟ್ ಕಂಪೆನಿಗಳನ್ನು ಬೆಳೆಸುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದಿನೇ ದಿನೇ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ” ಎಂದು ಕಿಡಿಕಾರಿದರು.

ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ”ಕಾಂಗ್ರೆಸ್‌ ಪಕ್ಷ ನಮ್ಮೂರಿಗೆ ಬಂದು ನನ್ನನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದು, ಅದೇ ರೀತಿ ನಿಮ್ಮೂರಿಗೆ ಬಂದು ಶಿವಲಿಂಗೇಗೌಡರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುತ್ತಿದ್ದೇವೆ. ನಿನಗೆ ನೀರಿಗೆ ಹಾಕಲ್ಲ, ಹಾಲಿಗೆ ಹಾಕೇ ಹಾಕುತ್ತೇವೆ. ನಿನ್ನ ಮತ್ತು ನಿನ್ನ ಕ್ಷೇತ್ರವನ್ನೂ ಕ್ಷೇಮವಾಗಿ ನೋಡಿಕೊಳ್ಳುತ್ತೇವೆ” ಎಂದು ಹೇಳಿದರು.

”ಜೆಡಿಎಸ್‌ನಲ್ಲಿ ಎಚ್.ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ಹೇಳಿದ್ದನ್ನು ಕೇಳಿಕೊಂಡು ಇರಬೇಕು. ಪ್ರಶ್ನೆ ಮಾಡಿದವರನ್ನು ಜೆಡಿಎಸ್‌ನಿಂದ ಹೊರಗೆ ಹಾಕುತ್ತಾರೆ. ಶಿವಲಿಂಗೇಗೌಡರಿಗೂ ಅದನ್ನೇ ಮಾಡಿದ್ದು” ಎಂದರು..

”ಶಿವಲಿಂಗೇಗೌಡರು ಜೆಡಿಎಸ್ ಶಾಸಕರಾಗಿದ್ದುಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳ ಜೊತೆ ಉತ್ತಮ ಒಡನಾಟ ಇಟ್ಟುಕೊಂಡು ಹೆಚ್ಚು ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದರು.

”ಎತ್ತಿನಹೊಳೆ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಂಜೂರು ಮಾಡಿಸಿಕೊಂಡು ಜನರ ಸೇವೆ ಮಾಡಿದ್ದಾರೆ ಕ್ಷೇತ್ರದ ಜನತೆಗೆ ಕುಡಿಯುವ ನೀರನ್ನು ಕೊಟ್ಟಿದ್ದು ಶಿವಲಿಂಗೇಗೌಡ. ಎತ್ತಿನಹೊಳೆ ನೀರಾವರಿ ಯೋಜನೆ ಉದ್ಘಾಟನೆ ಸಮಾರಂಭಕ್ಕೆ ಶಿವಲಿಂಗೇಗೌಡ ಹೊರತಪಡಿಸಿ, ಉಳಿದ ಜೆಡಿಎಸ್ ಶಾಸಕರು ಸಮಾರಂಭಕ್ಕೆ ಬರಲಿಲ್ಲ. ಎಚ್.ಡಿ. ಕುಮಾರಸ್ವಾಮಿ ಎತ್ತಿನಹೊಳೆ ನೀರಾವರಿ ಯೋಜನೆ ವಿರೋಧಿಸಿದ್ದರು. ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿದ ನಂತರ ಬಂದ ಬೇರೆ ಪಕ್ಷಗಳ ಸರ್ಕಾರಗಳು ಎತ್ತಿನಹೊಳೆ ಯೋಜನೆಗೆ ಹಣ ಮಂಜೂರು ಮಾಡುತ್ತಿಲ್ಲ” ಎಂದು ಸಿದ್ದರಾಮಯ್ಯ ದೂರಿದರು.

ಈ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ. ಸುರೇಶ್, ವಿಧಾನ ಪರಿಷತ್ ಮುಖ್ಯ ಸಚೇತಕ ಪ್ರಕಾಶ್ ರಾಠೋಡ್, ಮಾಜಿ ಸಚಿವ ಜಮೀರ್ ಅಹ್ಮದ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣ್, ಉಪಾಧ್ಯಕ್ಷ ಶಿವಶಂಕರಸ್ವಾಮಿ, ಪಟೇಲ್ ಶಿವಪ್ಪ, ಸಿ.ಎಸ್ ಪುಟ್ಟೇಗೌಡ, ಗೋಪಾಲಸ್ವಾಮಿ, ಬಾಗೂರು ಮಂಜೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ್, ಮೆಟ್ರೊ ಬಾಬು, ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ತಾರಾ ಚಂದನ್, ಜಿಲ್ಲಾ ಹಾಗೂ ತಾಲ್ಲೂಕು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...