Homeಮುಖಪುಟಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

- Advertisement -
- Advertisement -

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಲಿಯಾದ ವ್ಯಕ್ತಿಯನ್ನು ಜ್ಯುವೆಲ್ ಶೇಖ್ ಎಂದು ಗುರುತಿಸಲಾಗಿದೆ. ಇವರು ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಚಕ್ಬಹಾದೂರ್ಪುರ ಗ್ರಾಮದವರು. ಒಡಿಶಾದ ಸಂಬಾಲ್‌ಪುರದಲ್ಲಿ ನಿರ್ಮಾಣ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು.

ಬಾಂಗ್ಲಾದೇಶದಿಂದ ಬಂದ ದಾಖಲೆರಹಿತ ವಲಸೆಗಾರ ಎಂದು ಆರೋಪಿಸಿ ಥಳಿಸಿ ಹತ್ಯೆ ಮಾಡಲಾಗಿದೆ ಎಂದು ಮೃತನ ಸಹೋದ್ಯೋಗಿಗಳು ಮತ್ತು ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ, ಒಡಿಶಾ ಪೊಲೀಸರು ಇದನ್ನು ನಿರಾಕರಿಸಿದ್ದು, ಮೃತ ವ್ಯಕ್ತಿ ಮತ್ತು ಆರೋಪಿಗಳು ಪರಸ್ಪರ ಮೊದಲೇ ಪರಿಚಯ ಇದ್ದರು ಎಂದಿದ್ದಾರೆ.

ಬುಧವಾರ ಸಂಜೆ ಜ್ಯುವೆಲ್ ಶೇಖ್ ಮತ್ತು ಇತರ ನಿರ್ಮಾಣ ಕಾರ್ಮಿಕರು ಕೆಲಸದಿಂದ ಹಿಂತಿರುಗುತ್ತಿದ್ದಾಗ ಸಂಬಾಲ್‌ಪುರದ ಶಾಂತಿನಗರ ಪ್ರದೇಶದಲ್ಲಿ ಹಲ್ಲೆ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ಹಲ್ಲೆ ಮಾಡಿದವರು ಪಕ್ಕದ ಟೀ ಸ್ಟಾಲ್‌ನಲ್ಲಿದ್ದರು. ಅವರು ಜ್ಯುವೆಲ್ ಶೇಖ್‌ನೊಂದಿಗೆ ಬೀಡಿ ಕೇಳಿದರು. ನಂತರ ನಮ್ಮ ಆಧಾರ್ ಕಾರ್ಡ್‌ ಕೇಳಲು ಪ್ರಾರಂಭಿಸಿದರು, ನೀವು ಎಲ್ಲಿಂದ ಬಂದಿದ್ದೀರಿ ಎಂದು ಪ್ರಶ್ನಿಸಿದರು. ನಾವು ನಮ್ಮ ಆಧಾರ್ ಕಾರ್ಡ್‌ಗಳನ್ನು ತೋರಿಸಿದೆವು. ಇದ್ದಕ್ಕಿದ್ದಂತೆ, ಅವರು ಬಿದಿರಿನ ಕೋಲುಗಳಿಂದ ನಮ್ಮನ್ನು ಹೊಡೆಯಲು ಪ್ರಾರಂಭಿಸಿದರು. ಇದರಿಂದ ಜ್ಯುವೆಲ್ ತಲೆಗೆ ಪೆಟ್ಟಾಯಿತು. ನಮ್ಮ ಜೊತೆಗಿದ್ದ ಇನ್ನೂ ಕೆಲವರು ಗಾಯಗೊಂಡರು” ಎಂದು ಜ್ಯುವೆಲ್ ಶೇಖ್ ಜೊತೆಗಿದ್ದ ಮುರ್ಷಿದಾಬಾದ್‌ನ ಪಾಲ್ಟು ಶೇಖ್ ತಿಳಿಸಿದ್ದಾರೆ.

ಗಾಯಗೊಂಡಿದ್ದ ಜ್ಯುವೆಲ್ ಶೇಖ್ ಅವರನ್ನು ಆಸ್ಪತ್ರೆಗೆ ಕರೆದೊಯ್ದೆವು. ಆದರೆ, ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದರು. ದಾಳಿಯಲ್ಲಿ ಇತರ ಇಬ್ಬರು ಕಾರ್ಮಿಕರಾದ ಅಕಿರ್ ಶೇಖ್ ಮತ್ತು ಪಲಾಶ್ ಶೇಖ್ ಕೂಡ ಗಾಯಗೊಂಡಿದ್ದು, ಅವರನ್ನು ಸಂಬಾಲ್‌ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಾಲ್ಟು ಶೇಖ್ ವಿವರಿಸಿದ್ದಾರೆ.

“ನಾವು 12 ವರ್ಷಗಳಿಂದ ಒಡಿಶಾದಲ್ಲಿ ಕೆಲಸ ಮಾಡುತ್ತಿದ್ದೇವೆ. ಇಂತಹ ಘಟನೆ ನಡೆದಿರುವುದು ಇದೇ ಮೊದಲು” ಎಂದು ಪಾಲ್ಟು ಶೇಖ್ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ಪಶ್ಚಿಮ ಬಂಗಾಳದ ಕಾರ್ಮಿಕರು ಹಲವಾರು ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿದ್ದು, ಅಲ್ಲಿನ ನಿವಾಸಿಗಳಿಗೆ ಪರಿಚಿತರು ಎಂದು ಸಂಬಾಲ್‌ಪುರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮಂತ ಬಾರಿಕ್ ತಿಳಿಸಿದ್ದಾರೆ.

ಬೀಡಿ ಬೇಡಿಕೆಯ ಮೇರೆಗೆ ಈ ಹಲ್ಲೆ ನಡೆದಿದೆ. ಬಂಗಾಳಿ ವಲಸೆ ಕಾರ್ಮಿಕರು ಬೀಡಿ ಕೊಡಲು ನಿರಾಕರಿಸಿದ ನಂತರ ಗುಂಪು ಏಕಾಏಕಿ ಅವರ ಮೇಲೆ ದಾಳಿ ಮಾಡಿದೆ. ಘಟನೆ ಸಂಬಂಧ ನಾವು ಆರು ಜನರನ್ನು ಬಂಧಿಸಿದ್ದೇವೆ. ಇನ್ನೂ ಹೆಚ್ಚಿನವರು ಭಾಗಿಯಾಗಿದ್ದಾರೆಯೇ ಎಂದು ತನಿಖೆ ನಡೆಸುತ್ತಿದ್ದೇವೆ ಎಂದು ಬಾರಿಕ್ ಮಾಹಿತಿ ನೀಡಿದ್ದಾರೆ.

ಸಂಬಾಲ್‌ಪುರ ಉತ್ತರ ವಲಯ ಪೊಲೀಸ್ ಮಹಾನಿರ್ದೇಶಕ ಹಿಮಾಂಶು ಲಾಲ್ ಕೂಡ, ಈ ಕೊಲೆ ಹಠಾತ್ ಪ್ರಚೋದನೆಯ ಪರಿಣಾಮವಾಗಿ ನಡೆದಿದೇ ಹೊರತು, ಉದ್ದೇಶಿತ ದಾಳಿಯಲ್ಲ. ಆರೋಪಿಗಳೆಲ್ಲರನ್ನೂ ಬಂಧಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಘಟನೆಯ ನಂತರ, ಸ್ಥಳೀಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರು ಮತ್ತು ಪಶ್ಚಿಮ ಬಂಗಾಳದ ಸುತಿಯ ಶಾಸಕ ಇಮಾನಿ ಬಿಸ್ವಾಸ್ ಅವರು ಜ್ಯುವೆಲ್ ಶೇಖ್ ಅವರ ಮನೆಗೆ ಭೇಟಿ ನೀಡಿ ಸಹಾಯದ ಭರವಸೆ ನೀಡಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಮತ್ತೊಮ್ಮೆ ಗುರಿಯಾಗಿಸಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಮತ್ತು ಪಶ್ಚಿಮ ಬಂಗಾಳ ವಲಸೆ ಕಾರ್ಮಿಕ ಕಲ್ಯಾಣ ಮಂಡಳಿಯ ಅಧ್ಯಕ್ಷ ಸಮೀರುಲ್ ಇಸ್ಲಾಂ ಹೇಳಿದ್ದಾರೆ.

“ಬಿಜೆಪಿ ಬಂಗಾಳಿ ಮಾತನಾಡುವ ಎಷ್ಟು ಮುಗ್ಧ ಜನರ ಜೀವಗಳನ್ನು ಬಲಿ ತೆಗೆದುಕೊಳ್ಳಲು ಬಯಸಿದೆ?” ಎಂದು ಅವರು ಪ್ರಶ್ನಿಸಿದ್ದು, “ಬಿಜೆಪಿ ಬಂಗಾಳಿಗಳನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...