Homeಮುಖಪುಟಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

- Advertisement -
- Advertisement -

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಲಿಯಾದ ವ್ಯಕ್ತಿಯನ್ನು ಜ್ಯುವೆಲ್ ಶೇಖ್ ಎಂದು ಗುರುತಿಸಲಾಗಿದೆ. ಇವರು ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಚಕ್ಬಹಾದೂರ್ಪುರ ಗ್ರಾಮದವರು. ಒಡಿಶಾದ ಸಂಬಾಲ್‌ಪುರದಲ್ಲಿ ನಿರ್ಮಾಣ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು.

ಬಾಂಗ್ಲಾದೇಶದಿಂದ ಬಂದ ದಾಖಲೆರಹಿತ ವಲಸೆಗಾರ ಎಂದು ಆರೋಪಿಸಿ ಥಳಿಸಿ ಹತ್ಯೆ ಮಾಡಲಾಗಿದೆ ಎಂದು ಮೃತನ ಸಹೋದ್ಯೋಗಿಗಳು ಮತ್ತು ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ, ಒಡಿಶಾ ಪೊಲೀಸರು ಇದನ್ನು ನಿರಾಕರಿಸಿದ್ದು, ಮೃತ ವ್ಯಕ್ತಿ ಮತ್ತು ಆರೋಪಿಗಳು ಪರಸ್ಪರ ಮೊದಲೇ ಪರಿಚಯ ಇದ್ದರು ಎಂದಿದ್ದಾರೆ.

ಬುಧವಾರ ಸಂಜೆ ಜ್ಯುವೆಲ್ ಶೇಖ್ ಮತ್ತು ಇತರ ನಿರ್ಮಾಣ ಕಾರ್ಮಿಕರು ಕೆಲಸದಿಂದ ಹಿಂತಿರುಗುತ್ತಿದ್ದಾಗ ಸಂಬಾಲ್‌ಪುರದ ಶಾಂತಿನಗರ ಪ್ರದೇಶದಲ್ಲಿ ಹಲ್ಲೆ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ಹಲ್ಲೆ ಮಾಡಿದವರು ಪಕ್ಕದ ಟೀ ಸ್ಟಾಲ್‌ನಲ್ಲಿದ್ದರು. ಅವರು ಜ್ಯುವೆಲ್ ಶೇಖ್‌ನೊಂದಿಗೆ ಬೀಡಿ ಕೇಳಿದರು. ನಂತರ ನಮ್ಮ ಆಧಾರ್ ಕಾರ್ಡ್‌ ಕೇಳಲು ಪ್ರಾರಂಭಿಸಿದರು, ನೀವು ಎಲ್ಲಿಂದ ಬಂದಿದ್ದೀರಿ ಎಂದು ಪ್ರಶ್ನಿಸಿದರು. ನಾವು ನಮ್ಮ ಆಧಾರ್ ಕಾರ್ಡ್‌ಗಳನ್ನು ತೋರಿಸಿದೆವು. ಇದ್ದಕ್ಕಿದ್ದಂತೆ, ಅವರು ಬಿದಿರಿನ ಕೋಲುಗಳಿಂದ ನಮ್ಮನ್ನು ಹೊಡೆಯಲು ಪ್ರಾರಂಭಿಸಿದರು. ಇದರಿಂದ ಜ್ಯುವೆಲ್ ತಲೆಗೆ ಪೆಟ್ಟಾಯಿತು. ನಮ್ಮ ಜೊತೆಗಿದ್ದ ಇನ್ನೂ ಕೆಲವರು ಗಾಯಗೊಂಡರು” ಎಂದು ಜ್ಯುವೆಲ್ ಶೇಖ್ ಜೊತೆಗಿದ್ದ ಮುರ್ಷಿದಾಬಾದ್‌ನ ಪಾಲ್ಟು ಶೇಖ್ ತಿಳಿಸಿದ್ದಾರೆ.

ಗಾಯಗೊಂಡಿದ್ದ ಜ್ಯುವೆಲ್ ಶೇಖ್ ಅವರನ್ನು ಆಸ್ಪತ್ರೆಗೆ ಕರೆದೊಯ್ದೆವು. ಆದರೆ, ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದರು. ದಾಳಿಯಲ್ಲಿ ಇತರ ಇಬ್ಬರು ಕಾರ್ಮಿಕರಾದ ಅಕಿರ್ ಶೇಖ್ ಮತ್ತು ಪಲಾಶ್ ಶೇಖ್ ಕೂಡ ಗಾಯಗೊಂಡಿದ್ದು, ಅವರನ್ನು ಸಂಬಾಲ್‌ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಾಲ್ಟು ಶೇಖ್ ವಿವರಿಸಿದ್ದಾರೆ.

“ನಾವು 12 ವರ್ಷಗಳಿಂದ ಒಡಿಶಾದಲ್ಲಿ ಕೆಲಸ ಮಾಡುತ್ತಿದ್ದೇವೆ. ಇಂತಹ ಘಟನೆ ನಡೆದಿರುವುದು ಇದೇ ಮೊದಲು” ಎಂದು ಪಾಲ್ಟು ಶೇಖ್ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ಪಶ್ಚಿಮ ಬಂಗಾಳದ ಕಾರ್ಮಿಕರು ಹಲವಾರು ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿದ್ದು, ಅಲ್ಲಿನ ನಿವಾಸಿಗಳಿಗೆ ಪರಿಚಿತರು ಎಂದು ಸಂಬಾಲ್‌ಪುರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮಂತ ಬಾರಿಕ್ ತಿಳಿಸಿದ್ದಾರೆ.

ಬೀಡಿ ಬೇಡಿಕೆಯ ಮೇರೆಗೆ ಈ ಹಲ್ಲೆ ನಡೆದಿದೆ. ಬಂಗಾಳಿ ವಲಸೆ ಕಾರ್ಮಿಕರು ಬೀಡಿ ಕೊಡಲು ನಿರಾಕರಿಸಿದ ನಂತರ ಗುಂಪು ಏಕಾಏಕಿ ಅವರ ಮೇಲೆ ದಾಳಿ ಮಾಡಿದೆ. ಘಟನೆ ಸಂಬಂಧ ನಾವು ಆರು ಜನರನ್ನು ಬಂಧಿಸಿದ್ದೇವೆ. ಇನ್ನೂ ಹೆಚ್ಚಿನವರು ಭಾಗಿಯಾಗಿದ್ದಾರೆಯೇ ಎಂದು ತನಿಖೆ ನಡೆಸುತ್ತಿದ್ದೇವೆ ಎಂದು ಬಾರಿಕ್ ಮಾಹಿತಿ ನೀಡಿದ್ದಾರೆ.

ಸಂಬಾಲ್‌ಪುರ ಉತ್ತರ ವಲಯ ಪೊಲೀಸ್ ಮಹಾನಿರ್ದೇಶಕ ಹಿಮಾಂಶು ಲಾಲ್ ಕೂಡ, ಈ ಕೊಲೆ ಹಠಾತ್ ಪ್ರಚೋದನೆಯ ಪರಿಣಾಮವಾಗಿ ನಡೆದಿದೇ ಹೊರತು, ಉದ್ದೇಶಿತ ದಾಳಿಯಲ್ಲ. ಆರೋಪಿಗಳೆಲ್ಲರನ್ನೂ ಬಂಧಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಘಟನೆಯ ನಂತರ, ಸ್ಥಳೀಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರು ಮತ್ತು ಪಶ್ಚಿಮ ಬಂಗಾಳದ ಸುತಿಯ ಶಾಸಕ ಇಮಾನಿ ಬಿಸ್ವಾಸ್ ಅವರು ಜ್ಯುವೆಲ್ ಶೇಖ್ ಅವರ ಮನೆಗೆ ಭೇಟಿ ನೀಡಿ ಸಹಾಯದ ಭರವಸೆ ನೀಡಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಮತ್ತೊಮ್ಮೆ ಗುರಿಯಾಗಿಸಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಮತ್ತು ಪಶ್ಚಿಮ ಬಂಗಾಳ ವಲಸೆ ಕಾರ್ಮಿಕ ಕಲ್ಯಾಣ ಮಂಡಳಿಯ ಅಧ್ಯಕ್ಷ ಸಮೀರುಲ್ ಇಸ್ಲಾಂ ಹೇಳಿದ್ದಾರೆ.

“ಬಿಜೆಪಿ ಬಂಗಾಳಿ ಮಾತನಾಡುವ ಎಷ್ಟು ಮುಗ್ಧ ಜನರ ಜೀವಗಳನ್ನು ಬಲಿ ತೆಗೆದುಕೊಳ್ಳಲು ಬಯಸಿದೆ?” ಎಂದು ಅವರು ಪ್ರಶ್ನಿಸಿದ್ದು, “ಬಿಜೆಪಿ ಬಂಗಾಳಿಗಳನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...