Homeಅಂತರಾಷ್ಟ್ರೀಯಫ್ರಾನ್ಸ್‌ ಸೇರಿದಂತೆ 6 ದೇಶಗಳಿಂದ 'ಪ್ಯಾಲೆಸ್ತೀನ್‌ಗೆ ಪ್ರತ್ಯೇಕ' ರಾಷ್ಟ್ರದ ಅಂಗೀಕಾರ

ಫ್ರಾನ್ಸ್‌ ಸೇರಿದಂತೆ 6 ದೇಶಗಳಿಂದ ‘ಪ್ಯಾಲೆಸ್ತೀನ್‌ಗೆ ಪ್ರತ್ಯೇಕ’ ರಾಷ್ಟ್ರದ ಅಂಗೀಕಾರ

ವಿಶ್ವಸಂಸ್ಥೆಯ 193 ಸದಸ್ಯ ರಾಷ್ಟ್ರಗಳ ಪೈಕಿ 155 ರಾಷ್ಟ್ರಗಳು ಈಗಾಗಲೇ 'ಪ್ಯಾಲೆಸ್ತೀನ್‌ ಪ್ರತ್ಯೇಕ ರಾಷ್ಟ್ರ'ವೆಂದು ಗುರುತಿಸಿವೆ

- Advertisement -
- Advertisement -

ನ್ಯೂಯಾರ್ಕ್‌ನಲ್ಲಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ (ಯುಎನ್‌ಜಿಎ) ವಾರ್ಷಿಕ ಸಭೆಗೂ  ಮುನ್ನ ನಡೆದ ಉನ್ನತ ಮಟ್ಟದ ಶೃಂಗಸಭೆಯಲ್ಲಿ ಫ್ರಾನ್ಸ್ ಸೇರಿದಂತೆ ಆರು ದೇಶಗಳ ನಾಯಕರು ಪ್ಯಾಲೆಸ್ತೀನ್‌ ಅನ್ನು ‘ಪ್ರತ್ಯೇಕ ರಾಷ್ಟ್ರವಾಗಿ’ ಗುರುತಿಸಲು ನಿರ್ಧರಿಸಿದ್ದಾರೆ.

ಸೋಮವಾರ (ಸೆ.22) ನ್ಯೂಯಾರ್ಕ್‌ನಲ್ಲಿ ಸೌದಿ ಅರೇಬಿಯಾ ಮತ್ತು ಫ್ರಾನ್ಸ್ ಸಹಯೋಗದಲ್ಲಿ ನಡೆದ ‘ದ್ವಿರಾಷ್ಟ್ರ ಪರಿಹಾರಕ್ಕಾಗಿ ಉನ್ನತ ಮಟ್ಟದ ಅಂತಾರಾಷ್ಟ್ರೀಯ ಸಮ್ಮೇಳನ’ ಎಂಬ ಶೀರ್ಷಿಕೆಯ ಶೃಂಗ ಸಭೆಯಲ್ಲಿ, ಫ್ರಾನ್ಸ್‌ ಜೊತೆಗೆ, ಅಂಡೋರಾ, ಬೆಲ್ಜಿಯಂ, ಲಕ್ಸೆಂಬರ್ಗ್, ಮಾಲ್ಟಾ ಮತ್ತು ಮೊನಾಕೊ ದೇಶಗಳು ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸುವುದಾಗಿ ಘೋಷಿಸಿವೆ.

ಈಗಾಗಲೇ ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರ ಎಂದು ಔಪಚಾರಿಕವಾಗಿ ಗುರುತಿಸಿರುವ ಆಸ್ಟ್ರೇಲಿಯಾ, ಕೆನಡಾ, ಪೋರ್ಚುಗಲ್ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ನಾಯಕರು ಕೂಡ ಶೃಂಗ ಸಭೆಯಲ್ಲಿ ಭಾಗವಹಿಸಿದ್ದರು.

“ಈಗ ಸಮಯ ಕೂಡಿ ಬಂದಿದೆ. ಹಾಗಾಗಿ, ನಾವು ಇಲ್ಲಿ ಸೇರಿದ್ದೇವೆ. ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ದೀರ್ಘಕಾಲ ವಿಳಂಬವಾದ ದ್ವಿರಾಷ್ಟ್ರ ಪರಿಹಾರವನ್ನು ಪುನರುಜ್ಜೀವನಗೊಳಿಸಲು ಈ ಸಮ್ಮೇಳನ ಆಯೋಜಿಸಲಾಗಿದೆ” ಎಂದು ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಸಭೆಯಲ್ಲಿ ಹೇಳಿದ್ದಾರೆ.

“ದ್ವಿರಾಷ್ಟ್ರ ಪರಿಹಾರಕ್ಕಾಗಿ ಎನೆಲ್ಲ ಮಾಡಲು ಸಾಧ್ಯವೋ, ಅವುಗಳನ್ನು ಮಾಡುವ ಜವಾಬ್ದಾರಿ ನಮ್ಮ ಮೇಲೆ ಇದೆ. ಫ್ರಾನ್ಸ್ ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರವಾಗಿ ಗುರುತಿಸುತ್ತದೆ ಎಂದು ನಾನು ಈ ಸಂದರ್ಭದಲ್ಲಿ ಘೋಷಿಸುತ್ತಿದ್ದೇನೆ” ಎಂದು ಮ್ಯಾಕ್ರನ್ ತಿಳಿಸಿದ್ದಾರೆ.

ಏಪ್ರಿಲ್ 2025ರ ವೇಳೆಗೆ, ವಿಶ್ವ ಸಂಸ್ಥೆಯ ಒಟ್ಟು 193 ಸದಸ್ಯ ರಾಷ್ಟ್ರಗಳಲ್ಲಿ ಸುಮಾರು 147 ರಾಷ್ಟ್ರಗಳು ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರ ಎಂದು ಔಪಚಾರಿಕವಾಗಿ ಗುರುತಿಸಿದ್ದವು. ಸೋಮವವಾರ (ಸೆ.22) ನ್ಯೂಯಾರ್ಕ್‌ನಲ್ಲಿ ನಡೆದ ಸಮ್ಮೇಳನದಲ್ಲಿ, ಫ್ರಾನ್ಸ್, ಅಂಡೋರಾ, ಬೆಲ್ಜಿಯಂ, ಲಕ್ಸೆಂಬರ್ಗ್, ಮಾಲ್ಟಾ, ಮತ್ತು ಮೊನಾಕೊ ಪ್ಯಾಲೆಸ್ತೀಜ್ ಪ್ರತ್ಯೇಕ ರಾಷ್ಟ್ರವಾಗಿ ಗುರುತಿಸಲು ನಿರ್ಧರಿಸಿವೆ. ಈ ಮೂಲಕ ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡಿದ ದೇಶಗಳ ಸಂಖ್ಯೆ 155ಕ್ಕೆ ಏರಿದೆ. ಇದು ಯುಎನ್ ಸದಸ್ಯ ರಾಷ್ಟ್ರಗಳಲ್ಲಿ ಶೇ. 80ಕ್ಕಿಂತಲೂ ಹೆಚ್ಚು.

ಅಂತಾರಾಷ್ಟ್ರೀಯ ಸಮುದಾಯದ ಶೇಕಡ 80ಕ್ಕಿಂತ ಹೆಚ್ಚು ಜನರು ಈಗ ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸಿರುವುದರಿಂದ, 65,300ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಹತ್ಯೆಗೈದ, ಗಾಝಾ ಪಟ್ಟಿಯನ್ನು ನರಕವಾಗಿ ಮಾರ್ಪಡಿಸಿರುವ, ಅಮಾಯಕ ನಾಗರಿಕರ ಮೇಲೆ ಜನಾಂಗೀಯ ವಿನಾಶಕಾರಿ ಆಕ್ರಮಣ ಮುಂದುವರೆಸುತ್ತಿರುವ ಇಸ್ರೇಲ್ ಮೇಲೆ ರಾಜತಾಂತ್ರಿಕ ಒತ್ತಡ ಹೆಚ್ಚಾಗಿದೆ.

ಕಳೆದ ವರ್ಷ ಸ್ಪೇನ್, ನಾರ್ವೆ ಮತ್ತು ಐರ್ಲೆಂಡ್ ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡಿದ್ದವು. ಗಾಝಾ ಮೇಲೆ ಅಕ್ರಮಣ ನಡೆಸುತ್ತಿರುವ ಇಸ್ರೇಲ್‌ಗೆ ಸ್ಪೇನ್ ನಿರ್ಬಂಧ ವಿಧಿಸಿತ್ತು.

“ಎರಡು ರಾಷ್ಟ್ರಗಳ ಪೈಕಿ ಒಂದರಲ್ಲಿ ನರಮೇಧಕ್ಕೆ ನಡೆಯುತ್ತಿರುವಾಗ ದ್ವಿರಾಷ್ಟ್ರ ಪರಿಹಾರ ಸಾಧ್ಯವಿಲ್ಲ” ಎಂದು ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಸೋಮವಾರದ ಶೃಂಗಸಭೆಯಲ್ಲಿ ಹೇಳಿದ್ದಾರೆ.

“ಪ್ಯಾಲೆಸ್ತೀನ್ ಜನರನ್ನು ನಿರ್ನಾಮ ಮಾಡಲಾಗುತ್ತಿದೆ. ಆದ್ದರಿಂದ, ವಿವೇಚನೆಯ ಹೆಸರಿನಲ್ಲಿ, ಅಂತಾರಾಷ್ಟ್ರೀಯ ಕಾನೂನಿನ ಹೆಸರಿನಲ್ಲಿ ಮತ್ತು ಮಾನವ ಘನತೆಯ ಹೆಸರಿನಲ್ಲಿ, ನಾವು ಈ ಹತ್ಯಾಕಾಂಡವನ್ನು ನಿಲ್ಲಿಸಬೇಕು” ಎಂದು ಸ್ಯಾಂಚೆಜ್ ಆಗ್ರಹಿಸಿದ್ದಾರೆ.

ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮಾತನಾಡುವಾಗ, “ನವೀಕೃತ ಪ್ಯಾಲೆಸ್ಟೈನ್ ಅಥಾರಿಟಿ” (ಪ್ಯಾಲೆಸ್ಟೈನ್ ಪ್ರಾಧಿಕಾರ) ಸ್ಥಾಪನೆಗೆ ಒಂದು ಚೌಕಟ್ಟನ್ನು ಹೇಳಿದ್ದಾರೆ. ಯುದ್ದದ ನಂತರ ಈ ಚೌಕಟ್ಟು, ಅಂತಾರಾಷ್ಟ್ರೀಯ ಸ್ಥಿರೀಕರಣ ಪಡೆ (International Stabilisation Force – ISF) ರಚನೆಯನ್ನು ಒಳಗೊಂಡಿದೆ. ಇದು ಪ್ಯಾಲೆಸ್ಟೈನ್ ಪ್ರಾಧಿಕಾರ (ಪಿಎ) ಗಾಝಾದಲ್ಲಿ ಆಡಳಿತ ವಹಿಸಿಕೊಳ್ಳಲು ಸಹಾಯ ಮಾಡುತ್ತದೆ” ಎಂದಿದ್ದಾರೆ.

ಪ್ಯಾಲೆಸ್ತೀನ್‌ ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸಿದ ದೇಶಗಳನ್ನು ಪೆನ್ಸಿಲ್ವೇನಿಯಾ ಅಧ್ಯಕ್ಷ ಮಹಮೂದ್ ಅಬ್ಬಾಸ್ ಶ್ಲಾಘಿಸಿದ್ದಾರೆ. ಈ ವಾರ ನಡೆಯಲಿರುವ ಯುಎನ್‌ಜಿಎಯಲ್ಲಿ ಭಾಗವಹಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಅಬ್ಬಾಸ್ ಅವರಿಗೆ ವೀಸಾ ನಿರಾಕರಿಸಿದೆ. ಹಾಗಾಗಿ, ಸಹಜವಾಗಿ ಅಮೆರಿಕದ ಮೇಲೆ ಕೋಪಗೊಂಡಿರುವ ಅಬ್ಬಾಸ್ ಅವರು, ಸೋಮವಾರದ ಸಭೆಯಲ್ಲಿ ವಿಡಿಯೋ ಮೂಲಕ ಮಾತನಾಡಿದ್ದಾರೆ.

“ಇನ್ನುಳಿದ ರಾಷ್ಟ್ರಗಳು ಕೂಡ ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡುವಂತೆ ನಾನು ಕೋರುತ್ತೇನೆ. ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್‌ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುವಂತೆ ಮನವಿ ಮಾಡುತ್ತೇನೆ” ಎಂದು ಅಬ್ಬಾಸ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸಮುದಾಯ ದಿನದಿಂದ ದಿನಕ್ಕೆ ಪ್ಯಾಲೆಸ್ತೀನ್‌ಗೆ ಬೆಂಬಲ ಹೆಚ್ಚಿಸುತ್ತಿವೆ. ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳ ಪೈಕಿ ಶೇ.80 ರಾಷ್ಟ್ರಗಳು ಈಗಾಗಲೇ ಪ್ಯಾಲೆಸ್ತೀನ್‌ ಪ್ರತ್ಯೇಕ ರಾಷ್ಟ್ರವೆಂದು ಗುರುತಿಸಿವೆ. ಇದರಿಂದ ಅಮೆರಿಕ ಮತ್ತು ಇಸ್ರೇಲ್‌ ದಿನಕಳೆದಂತೆ ಅಂತಾರಾಷ್ಟ್ರೀಯವಾಗಿ ಕ್ರಮೇಣ ಪ್ರತ್ಯೇಕಗೊಳ್ಳುತ್ತಿವೆ. ಈ ಅಸಮಾಧಾನದಲ್ಲಿ ಸೋಮವಾರ ನಡೆದ ಶೃಂಗಸಭೆಯನ್ನು ಈ ಎರಡೂ ರಾಷ್ಟ್ರಗಳು ಬಹಿಷ್ಕರಿಸಿತ್ತು. ಇಸ್ರೇಲ್‌ನ ವಿಶ್ವಸಂಸ್ಥೆಯ ರಾಯಭಾರಿ ಡ್ಯಾನಿ ಡ್ಯಾನನ್ ಈ ಸಭೆಯನ್ನು ಒಂದು ‘ಸರ್ಕಸ್’ ಎಂದು ಬಣ್ಣಿಸಿದ್ದಾರೆ.

ವಿಶ್ವಸಂಸ್ಥೆ ಬಹುಪಾಲು ಸದಸ್ಯ ರಾಷ್ಟ್ರಗಳು ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸಿವೆಯಾದರೂ, ಹೊಸ ಸದಸ್ಯ ರಾಷ್ಟ್ರಗಳು ಯುಎನ್‌ ಭದ್ರತಾ ಮಂಡಳಿಯ ಬೆಂಬಲವನ್ನು ಹೊಂದಿರಬೇಕು. ಅಲ್ಲಿ ಯುಎಸ್‌ ಪ್ಯಾಲೆಸ್ತೀನ್ ಪೂರ್ಣ ಯುಎನ್‌ ಸದಸ್ಯ ರಾಷ್ಟ್ರವಾಗುವುದನ್ನು ತಡೆಯಲು ತನ್ನ ವೀಟೋವನ್ನು ಬಳಸಿದೆ.

ಪ್ಯಾಲೆಸ್ತೀನ್ ‘ಪ್ರತ್ಯೇಕ ರಾಷ್ಟ್ರ’ವೆಂದು ಗುರುತಿಸಿದ ಯುಕೆ, ಕೆನಡಾ, ಆಸ್ಟ್ರೇಲಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...