Homeಅಂತರಾಷ್ಟ್ರೀಯಫ್ರಾನ್ಸ್‌ ಸೇರಿದಂತೆ 6 ದೇಶಗಳಿಂದ 'ಪ್ಯಾಲೆಸ್ತೀನ್‌ಗೆ ಪ್ರತ್ಯೇಕ' ರಾಷ್ಟ್ರದ ಅಂಗೀಕಾರ

ಫ್ರಾನ್ಸ್‌ ಸೇರಿದಂತೆ 6 ದೇಶಗಳಿಂದ ‘ಪ್ಯಾಲೆಸ್ತೀನ್‌ಗೆ ಪ್ರತ್ಯೇಕ’ ರಾಷ್ಟ್ರದ ಅಂಗೀಕಾರ

ವಿಶ್ವಸಂಸ್ಥೆಯ 193 ಸದಸ್ಯ ರಾಷ್ಟ್ರಗಳ ಪೈಕಿ 155 ರಾಷ್ಟ್ರಗಳು ಈಗಾಗಲೇ 'ಪ್ಯಾಲೆಸ್ತೀನ್‌ ಪ್ರತ್ಯೇಕ ರಾಷ್ಟ್ರ'ವೆಂದು ಗುರುತಿಸಿವೆ

- Advertisement -
- Advertisement -

ನ್ಯೂಯಾರ್ಕ್‌ನಲ್ಲಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ (ಯುಎನ್‌ಜಿಎ) ವಾರ್ಷಿಕ ಸಭೆಗೂ  ಮುನ್ನ ನಡೆದ ಉನ್ನತ ಮಟ್ಟದ ಶೃಂಗಸಭೆಯಲ್ಲಿ ಫ್ರಾನ್ಸ್ ಸೇರಿದಂತೆ ಆರು ದೇಶಗಳ ನಾಯಕರು ಪ್ಯಾಲೆಸ್ತೀನ್‌ ಅನ್ನು ‘ಪ್ರತ್ಯೇಕ ರಾಷ್ಟ್ರವಾಗಿ’ ಗುರುತಿಸಲು ನಿರ್ಧರಿಸಿದ್ದಾರೆ.

ಸೋಮವಾರ (ಸೆ.22) ನ್ಯೂಯಾರ್ಕ್‌ನಲ್ಲಿ ಸೌದಿ ಅರೇಬಿಯಾ ಮತ್ತು ಫ್ರಾನ್ಸ್ ಸಹಯೋಗದಲ್ಲಿ ನಡೆದ ‘ದ್ವಿರಾಷ್ಟ್ರ ಪರಿಹಾರಕ್ಕಾಗಿ ಉನ್ನತ ಮಟ್ಟದ ಅಂತಾರಾಷ್ಟ್ರೀಯ ಸಮ್ಮೇಳನ’ ಎಂಬ ಶೀರ್ಷಿಕೆಯ ಶೃಂಗ ಸಭೆಯಲ್ಲಿ, ಫ್ರಾನ್ಸ್‌ ಜೊತೆಗೆ, ಅಂಡೋರಾ, ಬೆಲ್ಜಿಯಂ, ಲಕ್ಸೆಂಬರ್ಗ್, ಮಾಲ್ಟಾ ಮತ್ತು ಮೊನಾಕೊ ದೇಶಗಳು ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸುವುದಾಗಿ ಘೋಷಿಸಿವೆ.

ಈಗಾಗಲೇ ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರ ಎಂದು ಔಪಚಾರಿಕವಾಗಿ ಗುರುತಿಸಿರುವ ಆಸ್ಟ್ರೇಲಿಯಾ, ಕೆನಡಾ, ಪೋರ್ಚುಗಲ್ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ನಾಯಕರು ಕೂಡ ಶೃಂಗ ಸಭೆಯಲ್ಲಿ ಭಾಗವಹಿಸಿದ್ದರು.

“ಈಗ ಸಮಯ ಕೂಡಿ ಬಂದಿದೆ. ಹಾಗಾಗಿ, ನಾವು ಇಲ್ಲಿ ಸೇರಿದ್ದೇವೆ. ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ದೀರ್ಘಕಾಲ ವಿಳಂಬವಾದ ದ್ವಿರಾಷ್ಟ್ರ ಪರಿಹಾರವನ್ನು ಪುನರುಜ್ಜೀವನಗೊಳಿಸಲು ಈ ಸಮ್ಮೇಳನ ಆಯೋಜಿಸಲಾಗಿದೆ” ಎಂದು ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಸಭೆಯಲ್ಲಿ ಹೇಳಿದ್ದಾರೆ.

“ದ್ವಿರಾಷ್ಟ್ರ ಪರಿಹಾರಕ್ಕಾಗಿ ಎನೆಲ್ಲ ಮಾಡಲು ಸಾಧ್ಯವೋ, ಅವುಗಳನ್ನು ಮಾಡುವ ಜವಾಬ್ದಾರಿ ನಮ್ಮ ಮೇಲೆ ಇದೆ. ಫ್ರಾನ್ಸ್ ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರವಾಗಿ ಗುರುತಿಸುತ್ತದೆ ಎಂದು ನಾನು ಈ ಸಂದರ್ಭದಲ್ಲಿ ಘೋಷಿಸುತ್ತಿದ್ದೇನೆ” ಎಂದು ಮ್ಯಾಕ್ರನ್ ತಿಳಿಸಿದ್ದಾರೆ.

ಏಪ್ರಿಲ್ 2025ರ ವೇಳೆಗೆ, ವಿಶ್ವ ಸಂಸ್ಥೆಯ ಒಟ್ಟು 193 ಸದಸ್ಯ ರಾಷ್ಟ್ರಗಳಲ್ಲಿ ಸುಮಾರು 147 ರಾಷ್ಟ್ರಗಳು ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರ ಎಂದು ಔಪಚಾರಿಕವಾಗಿ ಗುರುತಿಸಿದ್ದವು. ಸೋಮವವಾರ (ಸೆ.22) ನ್ಯೂಯಾರ್ಕ್‌ನಲ್ಲಿ ನಡೆದ ಸಮ್ಮೇಳನದಲ್ಲಿ, ಫ್ರಾನ್ಸ್, ಅಂಡೋರಾ, ಬೆಲ್ಜಿಯಂ, ಲಕ್ಸೆಂಬರ್ಗ್, ಮಾಲ್ಟಾ, ಮತ್ತು ಮೊನಾಕೊ ಪ್ಯಾಲೆಸ್ತೀಜ್ ಪ್ರತ್ಯೇಕ ರಾಷ್ಟ್ರವಾಗಿ ಗುರುತಿಸಲು ನಿರ್ಧರಿಸಿವೆ. ಈ ಮೂಲಕ ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡಿದ ದೇಶಗಳ ಸಂಖ್ಯೆ 155ಕ್ಕೆ ಏರಿದೆ. ಇದು ಯುಎನ್ ಸದಸ್ಯ ರಾಷ್ಟ್ರಗಳಲ್ಲಿ ಶೇ. 80ಕ್ಕಿಂತಲೂ ಹೆಚ್ಚು.

ಅಂತಾರಾಷ್ಟ್ರೀಯ ಸಮುದಾಯದ ಶೇಕಡ 80ಕ್ಕಿಂತ ಹೆಚ್ಚು ಜನರು ಈಗ ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸಿರುವುದರಿಂದ, 65,300ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಹತ್ಯೆಗೈದ, ಗಾಝಾ ಪಟ್ಟಿಯನ್ನು ನರಕವಾಗಿ ಮಾರ್ಪಡಿಸಿರುವ, ಅಮಾಯಕ ನಾಗರಿಕರ ಮೇಲೆ ಜನಾಂಗೀಯ ವಿನಾಶಕಾರಿ ಆಕ್ರಮಣ ಮುಂದುವರೆಸುತ್ತಿರುವ ಇಸ್ರೇಲ್ ಮೇಲೆ ರಾಜತಾಂತ್ರಿಕ ಒತ್ತಡ ಹೆಚ್ಚಾಗಿದೆ.

ಕಳೆದ ವರ್ಷ ಸ್ಪೇನ್, ನಾರ್ವೆ ಮತ್ತು ಐರ್ಲೆಂಡ್ ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡಿದ್ದವು. ಗಾಝಾ ಮೇಲೆ ಅಕ್ರಮಣ ನಡೆಸುತ್ತಿರುವ ಇಸ್ರೇಲ್‌ಗೆ ಸ್ಪೇನ್ ನಿರ್ಬಂಧ ವಿಧಿಸಿತ್ತು.

“ಎರಡು ರಾಷ್ಟ್ರಗಳ ಪೈಕಿ ಒಂದರಲ್ಲಿ ನರಮೇಧಕ್ಕೆ ನಡೆಯುತ್ತಿರುವಾಗ ದ್ವಿರಾಷ್ಟ್ರ ಪರಿಹಾರ ಸಾಧ್ಯವಿಲ್ಲ” ಎಂದು ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಸೋಮವಾರದ ಶೃಂಗಸಭೆಯಲ್ಲಿ ಹೇಳಿದ್ದಾರೆ.

“ಪ್ಯಾಲೆಸ್ತೀನ್ ಜನರನ್ನು ನಿರ್ನಾಮ ಮಾಡಲಾಗುತ್ತಿದೆ. ಆದ್ದರಿಂದ, ವಿವೇಚನೆಯ ಹೆಸರಿನಲ್ಲಿ, ಅಂತಾರಾಷ್ಟ್ರೀಯ ಕಾನೂನಿನ ಹೆಸರಿನಲ್ಲಿ ಮತ್ತು ಮಾನವ ಘನತೆಯ ಹೆಸರಿನಲ್ಲಿ, ನಾವು ಈ ಹತ್ಯಾಕಾಂಡವನ್ನು ನಿಲ್ಲಿಸಬೇಕು” ಎಂದು ಸ್ಯಾಂಚೆಜ್ ಆಗ್ರಹಿಸಿದ್ದಾರೆ.

ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮಾತನಾಡುವಾಗ, “ನವೀಕೃತ ಪ್ಯಾಲೆಸ್ಟೈನ್ ಅಥಾರಿಟಿ” (ಪ್ಯಾಲೆಸ್ಟೈನ್ ಪ್ರಾಧಿಕಾರ) ಸ್ಥಾಪನೆಗೆ ಒಂದು ಚೌಕಟ್ಟನ್ನು ಹೇಳಿದ್ದಾರೆ. ಯುದ್ದದ ನಂತರ ಈ ಚೌಕಟ್ಟು, ಅಂತಾರಾಷ್ಟ್ರೀಯ ಸ್ಥಿರೀಕರಣ ಪಡೆ (International Stabilisation Force – ISF) ರಚನೆಯನ್ನು ಒಳಗೊಂಡಿದೆ. ಇದು ಪ್ಯಾಲೆಸ್ಟೈನ್ ಪ್ರಾಧಿಕಾರ (ಪಿಎ) ಗಾಝಾದಲ್ಲಿ ಆಡಳಿತ ವಹಿಸಿಕೊಳ್ಳಲು ಸಹಾಯ ಮಾಡುತ್ತದೆ” ಎಂದಿದ್ದಾರೆ.

ಪ್ಯಾಲೆಸ್ತೀನ್‌ ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸಿದ ದೇಶಗಳನ್ನು ಪೆನ್ಸಿಲ್ವೇನಿಯಾ ಅಧ್ಯಕ್ಷ ಮಹಮೂದ್ ಅಬ್ಬಾಸ್ ಶ್ಲಾಘಿಸಿದ್ದಾರೆ. ಈ ವಾರ ನಡೆಯಲಿರುವ ಯುಎನ್‌ಜಿಎಯಲ್ಲಿ ಭಾಗವಹಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಅಬ್ಬಾಸ್ ಅವರಿಗೆ ವೀಸಾ ನಿರಾಕರಿಸಿದೆ. ಹಾಗಾಗಿ, ಸಹಜವಾಗಿ ಅಮೆರಿಕದ ಮೇಲೆ ಕೋಪಗೊಂಡಿರುವ ಅಬ್ಬಾಸ್ ಅವರು, ಸೋಮವಾರದ ಸಭೆಯಲ್ಲಿ ವಿಡಿಯೋ ಮೂಲಕ ಮಾತನಾಡಿದ್ದಾರೆ.

“ಇನ್ನುಳಿದ ರಾಷ್ಟ್ರಗಳು ಕೂಡ ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡುವಂತೆ ನಾನು ಕೋರುತ್ತೇನೆ. ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್‌ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುವಂತೆ ಮನವಿ ಮಾಡುತ್ತೇನೆ” ಎಂದು ಅಬ್ಬಾಸ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸಮುದಾಯ ದಿನದಿಂದ ದಿನಕ್ಕೆ ಪ್ಯಾಲೆಸ್ತೀನ್‌ಗೆ ಬೆಂಬಲ ಹೆಚ್ಚಿಸುತ್ತಿವೆ. ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳ ಪೈಕಿ ಶೇ.80 ರಾಷ್ಟ್ರಗಳು ಈಗಾಗಲೇ ಪ್ಯಾಲೆಸ್ತೀನ್‌ ಪ್ರತ್ಯೇಕ ರಾಷ್ಟ್ರವೆಂದು ಗುರುತಿಸಿವೆ. ಇದರಿಂದ ಅಮೆರಿಕ ಮತ್ತು ಇಸ್ರೇಲ್‌ ದಿನಕಳೆದಂತೆ ಅಂತಾರಾಷ್ಟ್ರೀಯವಾಗಿ ಕ್ರಮೇಣ ಪ್ರತ್ಯೇಕಗೊಳ್ಳುತ್ತಿವೆ. ಈ ಅಸಮಾಧಾನದಲ್ಲಿ ಸೋಮವಾರ ನಡೆದ ಶೃಂಗಸಭೆಯನ್ನು ಈ ಎರಡೂ ರಾಷ್ಟ್ರಗಳು ಬಹಿಷ್ಕರಿಸಿತ್ತು. ಇಸ್ರೇಲ್‌ನ ವಿಶ್ವಸಂಸ್ಥೆಯ ರಾಯಭಾರಿ ಡ್ಯಾನಿ ಡ್ಯಾನನ್ ಈ ಸಭೆಯನ್ನು ಒಂದು ‘ಸರ್ಕಸ್’ ಎಂದು ಬಣ್ಣಿಸಿದ್ದಾರೆ.

ವಿಶ್ವಸಂಸ್ಥೆ ಬಹುಪಾಲು ಸದಸ್ಯ ರಾಷ್ಟ್ರಗಳು ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸಿವೆಯಾದರೂ, ಹೊಸ ಸದಸ್ಯ ರಾಷ್ಟ್ರಗಳು ಯುಎನ್‌ ಭದ್ರತಾ ಮಂಡಳಿಯ ಬೆಂಬಲವನ್ನು ಹೊಂದಿರಬೇಕು. ಅಲ್ಲಿ ಯುಎಸ್‌ ಪ್ಯಾಲೆಸ್ತೀನ್ ಪೂರ್ಣ ಯುಎನ್‌ ಸದಸ್ಯ ರಾಷ್ಟ್ರವಾಗುವುದನ್ನು ತಡೆಯಲು ತನ್ನ ವೀಟೋವನ್ನು ಬಳಸಿದೆ.

ಪ್ಯಾಲೆಸ್ತೀನ್ ‘ಪ್ರತ್ಯೇಕ ರಾಷ್ಟ್ರ’ವೆಂದು ಗುರುತಿಸಿದ ಯುಕೆ, ಕೆನಡಾ, ಆಸ್ಟ್ರೇಲಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...