Homeಅಂತರಾಷ್ಟ್ರೀಯಫ್ರಾನ್ಸ್‌ ಸೇರಿದಂತೆ 6 ದೇಶಗಳಿಂದ 'ಪ್ಯಾಲೆಸ್ತೀನ್‌ಗೆ ಪ್ರತ್ಯೇಕ' ರಾಷ್ಟ್ರದ ಅಂಗೀಕಾರ

ಫ್ರಾನ್ಸ್‌ ಸೇರಿದಂತೆ 6 ದೇಶಗಳಿಂದ ‘ಪ್ಯಾಲೆಸ್ತೀನ್‌ಗೆ ಪ್ರತ್ಯೇಕ’ ರಾಷ್ಟ್ರದ ಅಂಗೀಕಾರ

ವಿಶ್ವಸಂಸ್ಥೆಯ 193 ಸದಸ್ಯ ರಾಷ್ಟ್ರಗಳ ಪೈಕಿ 155 ರಾಷ್ಟ್ರಗಳು ಈಗಾಗಲೇ 'ಪ್ಯಾಲೆಸ್ತೀನ್‌ ಪ್ರತ್ಯೇಕ ರಾಷ್ಟ್ರ'ವೆಂದು ಗುರುತಿಸಿವೆ

- Advertisement -
- Advertisement -

ನ್ಯೂಯಾರ್ಕ್‌ನಲ್ಲಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ (ಯುಎನ್‌ಜಿಎ) ವಾರ್ಷಿಕ ಸಭೆಗೂ  ಮುನ್ನ ನಡೆದ ಉನ್ನತ ಮಟ್ಟದ ಶೃಂಗಸಭೆಯಲ್ಲಿ ಫ್ರಾನ್ಸ್ ಸೇರಿದಂತೆ ಆರು ದೇಶಗಳ ನಾಯಕರು ಪ್ಯಾಲೆಸ್ತೀನ್‌ ಅನ್ನು ‘ಪ್ರತ್ಯೇಕ ರಾಷ್ಟ್ರವಾಗಿ’ ಗುರುತಿಸಲು ನಿರ್ಧರಿಸಿದ್ದಾರೆ.

ಸೋಮವಾರ (ಸೆ.22) ನ್ಯೂಯಾರ್ಕ್‌ನಲ್ಲಿ ಸೌದಿ ಅರೇಬಿಯಾ ಮತ್ತು ಫ್ರಾನ್ಸ್ ಸಹಯೋಗದಲ್ಲಿ ನಡೆದ ‘ದ್ವಿರಾಷ್ಟ್ರ ಪರಿಹಾರಕ್ಕಾಗಿ ಉನ್ನತ ಮಟ್ಟದ ಅಂತಾರಾಷ್ಟ್ರೀಯ ಸಮ್ಮೇಳನ’ ಎಂಬ ಶೀರ್ಷಿಕೆಯ ಶೃಂಗ ಸಭೆಯಲ್ಲಿ, ಫ್ರಾನ್ಸ್‌ ಜೊತೆಗೆ, ಅಂಡೋರಾ, ಬೆಲ್ಜಿಯಂ, ಲಕ್ಸೆಂಬರ್ಗ್, ಮಾಲ್ಟಾ ಮತ್ತು ಮೊನಾಕೊ ದೇಶಗಳು ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸುವುದಾಗಿ ಘೋಷಿಸಿವೆ.

ಈಗಾಗಲೇ ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರ ಎಂದು ಔಪಚಾರಿಕವಾಗಿ ಗುರುತಿಸಿರುವ ಆಸ್ಟ್ರೇಲಿಯಾ, ಕೆನಡಾ, ಪೋರ್ಚುಗಲ್ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ನಾಯಕರು ಕೂಡ ಶೃಂಗ ಸಭೆಯಲ್ಲಿ ಭಾಗವಹಿಸಿದ್ದರು.

“ಈಗ ಸಮಯ ಕೂಡಿ ಬಂದಿದೆ. ಹಾಗಾಗಿ, ನಾವು ಇಲ್ಲಿ ಸೇರಿದ್ದೇವೆ. ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ದೀರ್ಘಕಾಲ ವಿಳಂಬವಾದ ದ್ವಿರಾಷ್ಟ್ರ ಪರಿಹಾರವನ್ನು ಪುನರುಜ್ಜೀವನಗೊಳಿಸಲು ಈ ಸಮ್ಮೇಳನ ಆಯೋಜಿಸಲಾಗಿದೆ” ಎಂದು ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಸಭೆಯಲ್ಲಿ ಹೇಳಿದ್ದಾರೆ.

“ದ್ವಿರಾಷ್ಟ್ರ ಪರಿಹಾರಕ್ಕಾಗಿ ಎನೆಲ್ಲ ಮಾಡಲು ಸಾಧ್ಯವೋ, ಅವುಗಳನ್ನು ಮಾಡುವ ಜವಾಬ್ದಾರಿ ನಮ್ಮ ಮೇಲೆ ಇದೆ. ಫ್ರಾನ್ಸ್ ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರವಾಗಿ ಗುರುತಿಸುತ್ತದೆ ಎಂದು ನಾನು ಈ ಸಂದರ್ಭದಲ್ಲಿ ಘೋಷಿಸುತ್ತಿದ್ದೇನೆ” ಎಂದು ಮ್ಯಾಕ್ರನ್ ತಿಳಿಸಿದ್ದಾರೆ.

ಏಪ್ರಿಲ್ 2025ರ ವೇಳೆಗೆ, ವಿಶ್ವ ಸಂಸ್ಥೆಯ ಒಟ್ಟು 193 ಸದಸ್ಯ ರಾಷ್ಟ್ರಗಳಲ್ಲಿ ಸುಮಾರು 147 ರಾಷ್ಟ್ರಗಳು ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರ ಎಂದು ಔಪಚಾರಿಕವಾಗಿ ಗುರುತಿಸಿದ್ದವು. ಸೋಮವವಾರ (ಸೆ.22) ನ್ಯೂಯಾರ್ಕ್‌ನಲ್ಲಿ ನಡೆದ ಸಮ್ಮೇಳನದಲ್ಲಿ, ಫ್ರಾನ್ಸ್, ಅಂಡೋರಾ, ಬೆಲ್ಜಿಯಂ, ಲಕ್ಸೆಂಬರ್ಗ್, ಮಾಲ್ಟಾ, ಮತ್ತು ಮೊನಾಕೊ ಪ್ಯಾಲೆಸ್ತೀಜ್ ಪ್ರತ್ಯೇಕ ರಾಷ್ಟ್ರವಾಗಿ ಗುರುತಿಸಲು ನಿರ್ಧರಿಸಿವೆ. ಈ ಮೂಲಕ ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡಿದ ದೇಶಗಳ ಸಂಖ್ಯೆ 155ಕ್ಕೆ ಏರಿದೆ. ಇದು ಯುಎನ್ ಸದಸ್ಯ ರಾಷ್ಟ್ರಗಳಲ್ಲಿ ಶೇ. 80ಕ್ಕಿಂತಲೂ ಹೆಚ್ಚು.

ಅಂತಾರಾಷ್ಟ್ರೀಯ ಸಮುದಾಯದ ಶೇಕಡ 80ಕ್ಕಿಂತ ಹೆಚ್ಚು ಜನರು ಈಗ ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸಿರುವುದರಿಂದ, 65,300ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಹತ್ಯೆಗೈದ, ಗಾಝಾ ಪಟ್ಟಿಯನ್ನು ನರಕವಾಗಿ ಮಾರ್ಪಡಿಸಿರುವ, ಅಮಾಯಕ ನಾಗರಿಕರ ಮೇಲೆ ಜನಾಂಗೀಯ ವಿನಾಶಕಾರಿ ಆಕ್ರಮಣ ಮುಂದುವರೆಸುತ್ತಿರುವ ಇಸ್ರೇಲ್ ಮೇಲೆ ರಾಜತಾಂತ್ರಿಕ ಒತ್ತಡ ಹೆಚ್ಚಾಗಿದೆ.

ಕಳೆದ ವರ್ಷ ಸ್ಪೇನ್, ನಾರ್ವೆ ಮತ್ತು ಐರ್ಲೆಂಡ್ ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡಿದ್ದವು. ಗಾಝಾ ಮೇಲೆ ಅಕ್ರಮಣ ನಡೆಸುತ್ತಿರುವ ಇಸ್ರೇಲ್‌ಗೆ ಸ್ಪೇನ್ ನಿರ್ಬಂಧ ವಿಧಿಸಿತ್ತು.

“ಎರಡು ರಾಷ್ಟ್ರಗಳ ಪೈಕಿ ಒಂದರಲ್ಲಿ ನರಮೇಧಕ್ಕೆ ನಡೆಯುತ್ತಿರುವಾಗ ದ್ವಿರಾಷ್ಟ್ರ ಪರಿಹಾರ ಸಾಧ್ಯವಿಲ್ಲ” ಎಂದು ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಸೋಮವಾರದ ಶೃಂಗಸಭೆಯಲ್ಲಿ ಹೇಳಿದ್ದಾರೆ.

“ಪ್ಯಾಲೆಸ್ತೀನ್ ಜನರನ್ನು ನಿರ್ನಾಮ ಮಾಡಲಾಗುತ್ತಿದೆ. ಆದ್ದರಿಂದ, ವಿವೇಚನೆಯ ಹೆಸರಿನಲ್ಲಿ, ಅಂತಾರಾಷ್ಟ್ರೀಯ ಕಾನೂನಿನ ಹೆಸರಿನಲ್ಲಿ ಮತ್ತು ಮಾನವ ಘನತೆಯ ಹೆಸರಿನಲ್ಲಿ, ನಾವು ಈ ಹತ್ಯಾಕಾಂಡವನ್ನು ನಿಲ್ಲಿಸಬೇಕು” ಎಂದು ಸ್ಯಾಂಚೆಜ್ ಆಗ್ರಹಿಸಿದ್ದಾರೆ.

ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮಾತನಾಡುವಾಗ, “ನವೀಕೃತ ಪ್ಯಾಲೆಸ್ಟೈನ್ ಅಥಾರಿಟಿ” (ಪ್ಯಾಲೆಸ್ಟೈನ್ ಪ್ರಾಧಿಕಾರ) ಸ್ಥಾಪನೆಗೆ ಒಂದು ಚೌಕಟ್ಟನ್ನು ಹೇಳಿದ್ದಾರೆ. ಯುದ್ದದ ನಂತರ ಈ ಚೌಕಟ್ಟು, ಅಂತಾರಾಷ್ಟ್ರೀಯ ಸ್ಥಿರೀಕರಣ ಪಡೆ (International Stabilisation Force – ISF) ರಚನೆಯನ್ನು ಒಳಗೊಂಡಿದೆ. ಇದು ಪ್ಯಾಲೆಸ್ಟೈನ್ ಪ್ರಾಧಿಕಾರ (ಪಿಎ) ಗಾಝಾದಲ್ಲಿ ಆಡಳಿತ ವಹಿಸಿಕೊಳ್ಳಲು ಸಹಾಯ ಮಾಡುತ್ತದೆ” ಎಂದಿದ್ದಾರೆ.

ಪ್ಯಾಲೆಸ್ತೀನ್‌ ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸಿದ ದೇಶಗಳನ್ನು ಪೆನ್ಸಿಲ್ವೇನಿಯಾ ಅಧ್ಯಕ್ಷ ಮಹಮೂದ್ ಅಬ್ಬಾಸ್ ಶ್ಲಾಘಿಸಿದ್ದಾರೆ. ಈ ವಾರ ನಡೆಯಲಿರುವ ಯುಎನ್‌ಜಿಎಯಲ್ಲಿ ಭಾಗವಹಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಅಬ್ಬಾಸ್ ಅವರಿಗೆ ವೀಸಾ ನಿರಾಕರಿಸಿದೆ. ಹಾಗಾಗಿ, ಸಹಜವಾಗಿ ಅಮೆರಿಕದ ಮೇಲೆ ಕೋಪಗೊಂಡಿರುವ ಅಬ್ಬಾಸ್ ಅವರು, ಸೋಮವಾರದ ಸಭೆಯಲ್ಲಿ ವಿಡಿಯೋ ಮೂಲಕ ಮಾತನಾಡಿದ್ದಾರೆ.

“ಇನ್ನುಳಿದ ರಾಷ್ಟ್ರಗಳು ಕೂಡ ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡುವಂತೆ ನಾನು ಕೋರುತ್ತೇನೆ. ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್‌ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುವಂತೆ ಮನವಿ ಮಾಡುತ್ತೇನೆ” ಎಂದು ಅಬ್ಬಾಸ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸಮುದಾಯ ದಿನದಿಂದ ದಿನಕ್ಕೆ ಪ್ಯಾಲೆಸ್ತೀನ್‌ಗೆ ಬೆಂಬಲ ಹೆಚ್ಚಿಸುತ್ತಿವೆ. ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳ ಪೈಕಿ ಶೇ.80 ರಾಷ್ಟ್ರಗಳು ಈಗಾಗಲೇ ಪ್ಯಾಲೆಸ್ತೀನ್‌ ಪ್ರತ್ಯೇಕ ರಾಷ್ಟ್ರವೆಂದು ಗುರುತಿಸಿವೆ. ಇದರಿಂದ ಅಮೆರಿಕ ಮತ್ತು ಇಸ್ರೇಲ್‌ ದಿನಕಳೆದಂತೆ ಅಂತಾರಾಷ್ಟ್ರೀಯವಾಗಿ ಕ್ರಮೇಣ ಪ್ರತ್ಯೇಕಗೊಳ್ಳುತ್ತಿವೆ. ಈ ಅಸಮಾಧಾನದಲ್ಲಿ ಸೋಮವಾರ ನಡೆದ ಶೃಂಗಸಭೆಯನ್ನು ಈ ಎರಡೂ ರಾಷ್ಟ್ರಗಳು ಬಹಿಷ್ಕರಿಸಿತ್ತು. ಇಸ್ರೇಲ್‌ನ ವಿಶ್ವಸಂಸ್ಥೆಯ ರಾಯಭಾರಿ ಡ್ಯಾನಿ ಡ್ಯಾನನ್ ಈ ಸಭೆಯನ್ನು ಒಂದು ‘ಸರ್ಕಸ್’ ಎಂದು ಬಣ್ಣಿಸಿದ್ದಾರೆ.

ವಿಶ್ವಸಂಸ್ಥೆ ಬಹುಪಾಲು ಸದಸ್ಯ ರಾಷ್ಟ್ರಗಳು ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸಿವೆಯಾದರೂ, ಹೊಸ ಸದಸ್ಯ ರಾಷ್ಟ್ರಗಳು ಯುಎನ್‌ ಭದ್ರತಾ ಮಂಡಳಿಯ ಬೆಂಬಲವನ್ನು ಹೊಂದಿರಬೇಕು. ಅಲ್ಲಿ ಯುಎಸ್‌ ಪ್ಯಾಲೆಸ್ತೀನ್ ಪೂರ್ಣ ಯುಎನ್‌ ಸದಸ್ಯ ರಾಷ್ಟ್ರವಾಗುವುದನ್ನು ತಡೆಯಲು ತನ್ನ ವೀಟೋವನ್ನು ಬಳಸಿದೆ.

ಪ್ಯಾಲೆಸ್ತೀನ್ ‘ಪ್ರತ್ಯೇಕ ರಾಷ್ಟ್ರ’ವೆಂದು ಗುರುತಿಸಿದ ಯುಕೆ, ಕೆನಡಾ, ಆಸ್ಟ್ರೇಲಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...