Homeಅಂತರಾಷ್ಟ್ರೀಯಫ್ರಾನ್ಸ್‌ ಸೇರಿದಂತೆ 6 ದೇಶಗಳಿಂದ 'ಪ್ಯಾಲೆಸ್ತೀನ್‌ಗೆ ಪ್ರತ್ಯೇಕ' ರಾಷ್ಟ್ರದ ಅಂಗೀಕಾರ

ಫ್ರಾನ್ಸ್‌ ಸೇರಿದಂತೆ 6 ದೇಶಗಳಿಂದ ‘ಪ್ಯಾಲೆಸ್ತೀನ್‌ಗೆ ಪ್ರತ್ಯೇಕ’ ರಾಷ್ಟ್ರದ ಅಂಗೀಕಾರ

ವಿಶ್ವಸಂಸ್ಥೆಯ 193 ಸದಸ್ಯ ರಾಷ್ಟ್ರಗಳ ಪೈಕಿ 155 ರಾಷ್ಟ್ರಗಳು ಈಗಾಗಲೇ 'ಪ್ಯಾಲೆಸ್ತೀನ್‌ ಪ್ರತ್ಯೇಕ ರಾಷ್ಟ್ರ'ವೆಂದು ಗುರುತಿಸಿವೆ

- Advertisement -
- Advertisement -

ನ್ಯೂಯಾರ್ಕ್‌ನಲ್ಲಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ (ಯುಎನ್‌ಜಿಎ) ವಾರ್ಷಿಕ ಸಭೆಗೂ  ಮುನ್ನ ನಡೆದ ಉನ್ನತ ಮಟ್ಟದ ಶೃಂಗಸಭೆಯಲ್ಲಿ ಫ್ರಾನ್ಸ್ ಸೇರಿದಂತೆ ಆರು ದೇಶಗಳ ನಾಯಕರು ಪ್ಯಾಲೆಸ್ತೀನ್‌ ಅನ್ನು ‘ಪ್ರತ್ಯೇಕ ರಾಷ್ಟ್ರವಾಗಿ’ ಗುರುತಿಸಲು ನಿರ್ಧರಿಸಿದ್ದಾರೆ.

ಸೋಮವಾರ (ಸೆ.22) ನ್ಯೂಯಾರ್ಕ್‌ನಲ್ಲಿ ಸೌದಿ ಅರೇಬಿಯಾ ಮತ್ತು ಫ್ರಾನ್ಸ್ ಸಹಯೋಗದಲ್ಲಿ ನಡೆದ ‘ದ್ವಿರಾಷ್ಟ್ರ ಪರಿಹಾರಕ್ಕಾಗಿ ಉನ್ನತ ಮಟ್ಟದ ಅಂತಾರಾಷ್ಟ್ರೀಯ ಸಮ್ಮೇಳನ’ ಎಂಬ ಶೀರ್ಷಿಕೆಯ ಶೃಂಗ ಸಭೆಯಲ್ಲಿ, ಫ್ರಾನ್ಸ್‌ ಜೊತೆಗೆ, ಅಂಡೋರಾ, ಬೆಲ್ಜಿಯಂ, ಲಕ್ಸೆಂಬರ್ಗ್, ಮಾಲ್ಟಾ ಮತ್ತು ಮೊನಾಕೊ ದೇಶಗಳು ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸುವುದಾಗಿ ಘೋಷಿಸಿವೆ.

ಈಗಾಗಲೇ ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರ ಎಂದು ಔಪಚಾರಿಕವಾಗಿ ಗುರುತಿಸಿರುವ ಆಸ್ಟ್ರೇಲಿಯಾ, ಕೆನಡಾ, ಪೋರ್ಚುಗಲ್ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ನಾಯಕರು ಕೂಡ ಶೃಂಗ ಸಭೆಯಲ್ಲಿ ಭಾಗವಹಿಸಿದ್ದರು.

“ಈಗ ಸಮಯ ಕೂಡಿ ಬಂದಿದೆ. ಹಾಗಾಗಿ, ನಾವು ಇಲ್ಲಿ ಸೇರಿದ್ದೇವೆ. ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ದೀರ್ಘಕಾಲ ವಿಳಂಬವಾದ ದ್ವಿರಾಷ್ಟ್ರ ಪರಿಹಾರವನ್ನು ಪುನರುಜ್ಜೀವನಗೊಳಿಸಲು ಈ ಸಮ್ಮೇಳನ ಆಯೋಜಿಸಲಾಗಿದೆ” ಎಂದು ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಸಭೆಯಲ್ಲಿ ಹೇಳಿದ್ದಾರೆ.

“ದ್ವಿರಾಷ್ಟ್ರ ಪರಿಹಾರಕ್ಕಾಗಿ ಎನೆಲ್ಲ ಮಾಡಲು ಸಾಧ್ಯವೋ, ಅವುಗಳನ್ನು ಮಾಡುವ ಜವಾಬ್ದಾರಿ ನಮ್ಮ ಮೇಲೆ ಇದೆ. ಫ್ರಾನ್ಸ್ ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರವಾಗಿ ಗುರುತಿಸುತ್ತದೆ ಎಂದು ನಾನು ಈ ಸಂದರ್ಭದಲ್ಲಿ ಘೋಷಿಸುತ್ತಿದ್ದೇನೆ” ಎಂದು ಮ್ಯಾಕ್ರನ್ ತಿಳಿಸಿದ್ದಾರೆ.

ಏಪ್ರಿಲ್ 2025ರ ವೇಳೆಗೆ, ವಿಶ್ವ ಸಂಸ್ಥೆಯ ಒಟ್ಟು 193 ಸದಸ್ಯ ರಾಷ್ಟ್ರಗಳಲ್ಲಿ ಸುಮಾರು 147 ರಾಷ್ಟ್ರಗಳು ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರ ಎಂದು ಔಪಚಾರಿಕವಾಗಿ ಗುರುತಿಸಿದ್ದವು. ಸೋಮವವಾರ (ಸೆ.22) ನ್ಯೂಯಾರ್ಕ್‌ನಲ್ಲಿ ನಡೆದ ಸಮ್ಮೇಳನದಲ್ಲಿ, ಫ್ರಾನ್ಸ್, ಅಂಡೋರಾ, ಬೆಲ್ಜಿಯಂ, ಲಕ್ಸೆಂಬರ್ಗ್, ಮಾಲ್ಟಾ, ಮತ್ತು ಮೊನಾಕೊ ಪ್ಯಾಲೆಸ್ತೀಜ್ ಪ್ರತ್ಯೇಕ ರಾಷ್ಟ್ರವಾಗಿ ಗುರುತಿಸಲು ನಿರ್ಧರಿಸಿವೆ. ಈ ಮೂಲಕ ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡಿದ ದೇಶಗಳ ಸಂಖ್ಯೆ 155ಕ್ಕೆ ಏರಿದೆ. ಇದು ಯುಎನ್ ಸದಸ್ಯ ರಾಷ್ಟ್ರಗಳಲ್ಲಿ ಶೇ. 80ಕ್ಕಿಂತಲೂ ಹೆಚ್ಚು.

ಅಂತಾರಾಷ್ಟ್ರೀಯ ಸಮುದಾಯದ ಶೇಕಡ 80ಕ್ಕಿಂತ ಹೆಚ್ಚು ಜನರು ಈಗ ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸಿರುವುದರಿಂದ, 65,300ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಹತ್ಯೆಗೈದ, ಗಾಝಾ ಪಟ್ಟಿಯನ್ನು ನರಕವಾಗಿ ಮಾರ್ಪಡಿಸಿರುವ, ಅಮಾಯಕ ನಾಗರಿಕರ ಮೇಲೆ ಜನಾಂಗೀಯ ವಿನಾಶಕಾರಿ ಆಕ್ರಮಣ ಮುಂದುವರೆಸುತ್ತಿರುವ ಇಸ್ರೇಲ್ ಮೇಲೆ ರಾಜತಾಂತ್ರಿಕ ಒತ್ತಡ ಹೆಚ್ಚಾಗಿದೆ.

ಕಳೆದ ವರ್ಷ ಸ್ಪೇನ್, ನಾರ್ವೆ ಮತ್ತು ಐರ್ಲೆಂಡ್ ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡಿದ್ದವು. ಗಾಝಾ ಮೇಲೆ ಅಕ್ರಮಣ ನಡೆಸುತ್ತಿರುವ ಇಸ್ರೇಲ್‌ಗೆ ಸ್ಪೇನ್ ನಿರ್ಬಂಧ ವಿಧಿಸಿತ್ತು.

“ಎರಡು ರಾಷ್ಟ್ರಗಳ ಪೈಕಿ ಒಂದರಲ್ಲಿ ನರಮೇಧಕ್ಕೆ ನಡೆಯುತ್ತಿರುವಾಗ ದ್ವಿರಾಷ್ಟ್ರ ಪರಿಹಾರ ಸಾಧ್ಯವಿಲ್ಲ” ಎಂದು ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಸೋಮವಾರದ ಶೃಂಗಸಭೆಯಲ್ಲಿ ಹೇಳಿದ್ದಾರೆ.

“ಪ್ಯಾಲೆಸ್ತೀನ್ ಜನರನ್ನು ನಿರ್ನಾಮ ಮಾಡಲಾಗುತ್ತಿದೆ. ಆದ್ದರಿಂದ, ವಿವೇಚನೆಯ ಹೆಸರಿನಲ್ಲಿ, ಅಂತಾರಾಷ್ಟ್ರೀಯ ಕಾನೂನಿನ ಹೆಸರಿನಲ್ಲಿ ಮತ್ತು ಮಾನವ ಘನತೆಯ ಹೆಸರಿನಲ್ಲಿ, ನಾವು ಈ ಹತ್ಯಾಕಾಂಡವನ್ನು ನಿಲ್ಲಿಸಬೇಕು” ಎಂದು ಸ್ಯಾಂಚೆಜ್ ಆಗ್ರಹಿಸಿದ್ದಾರೆ.

ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮಾತನಾಡುವಾಗ, “ನವೀಕೃತ ಪ್ಯಾಲೆಸ್ಟೈನ್ ಅಥಾರಿಟಿ” (ಪ್ಯಾಲೆಸ್ಟೈನ್ ಪ್ರಾಧಿಕಾರ) ಸ್ಥಾಪನೆಗೆ ಒಂದು ಚೌಕಟ್ಟನ್ನು ಹೇಳಿದ್ದಾರೆ. ಯುದ್ದದ ನಂತರ ಈ ಚೌಕಟ್ಟು, ಅಂತಾರಾಷ್ಟ್ರೀಯ ಸ್ಥಿರೀಕರಣ ಪಡೆ (International Stabilisation Force – ISF) ರಚನೆಯನ್ನು ಒಳಗೊಂಡಿದೆ. ಇದು ಪ್ಯಾಲೆಸ್ಟೈನ್ ಪ್ರಾಧಿಕಾರ (ಪಿಎ) ಗಾಝಾದಲ್ಲಿ ಆಡಳಿತ ವಹಿಸಿಕೊಳ್ಳಲು ಸಹಾಯ ಮಾಡುತ್ತದೆ” ಎಂದಿದ್ದಾರೆ.

ಪ್ಯಾಲೆಸ್ತೀನ್‌ ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸಿದ ದೇಶಗಳನ್ನು ಪೆನ್ಸಿಲ್ವೇನಿಯಾ ಅಧ್ಯಕ್ಷ ಮಹಮೂದ್ ಅಬ್ಬಾಸ್ ಶ್ಲಾಘಿಸಿದ್ದಾರೆ. ಈ ವಾರ ನಡೆಯಲಿರುವ ಯುಎನ್‌ಜಿಎಯಲ್ಲಿ ಭಾಗವಹಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಅಬ್ಬಾಸ್ ಅವರಿಗೆ ವೀಸಾ ನಿರಾಕರಿಸಿದೆ. ಹಾಗಾಗಿ, ಸಹಜವಾಗಿ ಅಮೆರಿಕದ ಮೇಲೆ ಕೋಪಗೊಂಡಿರುವ ಅಬ್ಬಾಸ್ ಅವರು, ಸೋಮವಾರದ ಸಭೆಯಲ್ಲಿ ವಿಡಿಯೋ ಮೂಲಕ ಮಾತನಾಡಿದ್ದಾರೆ.

“ಇನ್ನುಳಿದ ರಾಷ್ಟ್ರಗಳು ಕೂಡ ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡುವಂತೆ ನಾನು ಕೋರುತ್ತೇನೆ. ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್‌ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುವಂತೆ ಮನವಿ ಮಾಡುತ್ತೇನೆ” ಎಂದು ಅಬ್ಬಾಸ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸಮುದಾಯ ದಿನದಿಂದ ದಿನಕ್ಕೆ ಪ್ಯಾಲೆಸ್ತೀನ್‌ಗೆ ಬೆಂಬಲ ಹೆಚ್ಚಿಸುತ್ತಿವೆ. ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳ ಪೈಕಿ ಶೇ.80 ರಾಷ್ಟ್ರಗಳು ಈಗಾಗಲೇ ಪ್ಯಾಲೆಸ್ತೀನ್‌ ಪ್ರತ್ಯೇಕ ರಾಷ್ಟ್ರವೆಂದು ಗುರುತಿಸಿವೆ. ಇದರಿಂದ ಅಮೆರಿಕ ಮತ್ತು ಇಸ್ರೇಲ್‌ ದಿನಕಳೆದಂತೆ ಅಂತಾರಾಷ್ಟ್ರೀಯವಾಗಿ ಕ್ರಮೇಣ ಪ್ರತ್ಯೇಕಗೊಳ್ಳುತ್ತಿವೆ. ಈ ಅಸಮಾಧಾನದಲ್ಲಿ ಸೋಮವಾರ ನಡೆದ ಶೃಂಗಸಭೆಯನ್ನು ಈ ಎರಡೂ ರಾಷ್ಟ್ರಗಳು ಬಹಿಷ್ಕರಿಸಿತ್ತು. ಇಸ್ರೇಲ್‌ನ ವಿಶ್ವಸಂಸ್ಥೆಯ ರಾಯಭಾರಿ ಡ್ಯಾನಿ ಡ್ಯಾನನ್ ಈ ಸಭೆಯನ್ನು ಒಂದು ‘ಸರ್ಕಸ್’ ಎಂದು ಬಣ್ಣಿಸಿದ್ದಾರೆ.

ವಿಶ್ವಸಂಸ್ಥೆ ಬಹುಪಾಲು ಸದಸ್ಯ ರಾಷ್ಟ್ರಗಳು ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸಿವೆಯಾದರೂ, ಹೊಸ ಸದಸ್ಯ ರಾಷ್ಟ್ರಗಳು ಯುಎನ್‌ ಭದ್ರತಾ ಮಂಡಳಿಯ ಬೆಂಬಲವನ್ನು ಹೊಂದಿರಬೇಕು. ಅಲ್ಲಿ ಯುಎಸ್‌ ಪ್ಯಾಲೆಸ್ತೀನ್ ಪೂರ್ಣ ಯುಎನ್‌ ಸದಸ್ಯ ರಾಷ್ಟ್ರವಾಗುವುದನ್ನು ತಡೆಯಲು ತನ್ನ ವೀಟೋವನ್ನು ಬಳಸಿದೆ.

ಪ್ಯಾಲೆಸ್ತೀನ್ ‘ಪ್ರತ್ಯೇಕ ರಾಷ್ಟ್ರ’ವೆಂದು ಗುರುತಿಸಿದ ಯುಕೆ, ಕೆನಡಾ, ಆಸ್ಟ್ರೇಲಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...