HomeಮುಖಪುಟMSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

MSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

- Advertisement -
- Advertisement -

ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ತನ್ನ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಂಡಿದೆ. ಆದರೆ ಎಂಎಸ್‌ಪಿ (MSP) ಖಾತ್ರಿಗೆ ಕಾನೂನು ಜಾರಿ ಮಾಡಬೇಕೆಂದು ರೈತರು ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ. ಈ ಸಂದರ್ಭದಲ್ಲಿ ಎಂಎಸ್‌ಪಿ ಸಾದ್ಯವಿಲ್ಲ, ಈಗಾಗಲೇ ಜಾರಿಯಲ್ಲಿದೆ ಎಂದು ಬಿಜೆಪಿ ನಾಯಕರು ಸೇರಿದಂತೆ ಹಲವರು ಅಪಪ್ರಚಾರದಲ್ಲಿ ನಿರತರಾಗಿದ್ದಾರೆ. ಅವೆಲ್ಲ ಸುಳ್ಳು ಎಂದು ಸ್ವರಾಜ್ ಇಂಡಿಯಾ ಅಧ್ಯಕ್ಷ ಮತ್ತು ಹಿರಿಯ ರೈತ ಮುಖಂಡರಾದ ಯೋಗೇಂದ್ರ ಯಾದವ್ ಬಯಲು ಮಾಡಿದ್ದಾರೆ. ಅವರು ಟ್ವಿಟರ್‌ನಲ್ಲಿ ಹಂಚಿಕೊಂಡ ಮಾಹಿತಿಯ ಕನ್ನಡ ಅನುವಾದ ಇಲ್ಲಿದೆ.

1ನೇ ಸುಳ್ಳು: ರೈತರು ತಮ್ಮ ಹಕ್ಕೊತ್ತಾಯವನ್ನು ಬದಲಾಯಿಸಿದ್ದಾರೆ

ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಡುತ್ತಿದ್ದರು. ಸರ್ಕಾರ ಅವನ್ನು ಹಿಂಪಡೆದುಕೊಂಡಿದೆ. ಆದರೆ ರೈತರು ಈಗ ತಮ್ಮ ಹಕ್ಕೊತ್ತಾಯ ಬದಲಿಗೆ ಎಂಎಸ್‌ಪಿಗೆ ಕಾನೂನು ಗ್ಯಾರಂಟಿ ಕೇಳುತ್ತಿದ್ದಾರೆ.

ವಾಸ್ತವ: ಎಂಎಸ್‌ಪಿಗಾಗಿನ ಹಕ್ಕೊತ್ತಾಯವು ರೈತ ಹೋರಾಟದ ಆರಂಭದಿಂದಲೂ, ಪ್ರತಿ ಹಂತದಲ್ಲಿಯೂ ಕೇಳಿಬಂದಿದೆ. ಕೃಷಿ ಕಾಯ್ದೆಗಳು ರದ್ದಾಗಬೇಕು ಮತ್ತು ಎಂಎಸ್‌ಪಿ ಖಾತ್ರಿಯಾಗಬೇಕು ಎಂಬುದು ರೈತ ಹೋರಾಟದ ಘೋಷಣೆಯಾಗಿದೆ. ಕೇಂದ್ರ ಸರ್ಕಾರದೊಂದಿಗೆ ರೈತರ ಮೊದಲ ಮಾತುಕತೆಯಲ್ಲಿ ಕೊಟ್ಟ ಹಕ್ಕೊತ್ತಾಯ ಪತ್ರದಲ್ಲಿಯೂ ಇದು ಸೇರಿದೆ. ಕಿಸಾನ್ ಸಂಸತ್ತು ಹೋರಾಟದಲ್ಲಿಯೂ ಚರ್ಚೆಯಾಗಿದೆ.

2ನೇ ಸುಳ್ಳು: ಎಂಎಸ್‌ಪಿ ಈಗಾಗಲೇ ಜಾರಿಯಲ್ಲಿದೆ? ಅದಕ್ಕೆ ಕಾನೂನಿನ ಮಾನ್ಯತೆಯೇಕೆ?

ವಾಸ್ತವ: ಎಂಎಸ್‌ಪಿ ಎಂಬುದು ಕೇವಲ ಕಾಗದದ ಮೇಲಿದೆ. ಇದನ್ನು ಸರ್ಕಾರದ ಅಂಕಿ ಅಂಶಗಳೆ ಹೇಳುತ್ತವೆ. ದೇಶದ ಶೇ.6% ರೈತರು ಮಾತ್ರ ಎಂಎಸ್‌ಪಿಯ ಪ್ರಯೋಜನ ಪಡೆಯುತ್ತಿದ್ದಾರೆ.

3ನೇ ಸುಳ್ಳು: ಎಂಎಸ್‌ಪಿ ಕಾನೂನು ಖಾತ್ರಿ ಮಾಡಿದರೆ ಅತಿ ಹೆಚ್ಚು ನೀರಾವರಿ ಬೇಡುವ ಬೆಳೆಯಾದ ಭತ್ತದ ಅತೀ ಉತ್ಪಾದನೆಯಾಗುತ್ತದೆ ಮತ್ತು ಅಗತ್ಯ ವೈವಿಧ್ಯಮಯ ಬೆಳೆಗಳು ವಿಳಂಬವಾಗುತ್ತವೆ.

ವಾಸ್ತವ: ಭತ್ತದ ಮೇಲಿನ ರೈತರ ಅತಿಯಾದ ಅವಲಂಬನೆಗೆ ಎಂಎಸ್‌ಪಿ ಕೊಡುತ್ತಿರುವುದು ಕಾರಣವಲ್ಲ. ಅಸಮರ್ಪಕ ಖರೀದಿ ಪ್ರಕ್ರಿಯೆ ಅದಕ್ಕೆ ಕಾರಣ. ಇದಕ್ಕೆ ಎಂಎಸ್‌ಪಿ ಹಿಂತೆಗೆದುಕೊಳ್ಳುವುದು ಪರಿಹಾರವಲ್ಲ. ಬದಲಿಗೆ ಕಡಲೇ ಕಾಳು, ಮೆಕ್ಕೆ ಜೋಳ, ಗೋವಿನ ಜೋಳ, ವಿವಿಧ ಬೇಳೆ ಕಾಳುಗಳಿಗೆ ಎಂಎಸ್‌ಪಿ ದೊರೆಯುತ್ತದೆ ಎಂದು ರೈತರಿಗೆ ಖಾತರಿ ನೀಡುವುದು ಸೂಕ್ತ ಪರಿಹಾರವಾಗಿದೆ.

4ನೇ ಸುಳ್ಳು: ಬೆಳೆಗಳಿಗೆ ಎಂಎಸ್‌ಪಿ ನೀಡಿದರೆ ಮಾರುಕಟ್ಟೆ ಬಿದ್ದುಹೋಗುತ್ತದೆ, ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಆತಂಕವಿದೆ.

ವಾಸ್ತವ: ವಾಸ್ತವವೆಂದರೆ ಸಾಮಾಜಿಕ ಉದ್ದೇಶಗಳನ್ನು ಪೂರೈಸಲು ಮುಕ್ತ ಮಾರುಕಟ್ಟೆಯನ್ನು ಪ್ರಪಂಚದಾದ್ಯಂತ ನಿಯಂತ್ರಿಸಲ್ಪಡಬೇಕು.  ಬೆಲೆ ಖಾತ್ರಿಯೂ ಕೆಟ್ಟದಾದರೆ ಈಗಾಗಲೇ ಎಂಎಸ್‌ಪಿ ಏಕೆ ಘೋಷಿಸಲಾಗಿದೆ?
ಆಹಾರದ ಬೆಲೆ ಏರಿಕೆಯನ್ನು ನಿಯಂತ್ರಿಸುವ ಮಾರ್ಗವೆಂದರೆ ಬಡವರಿಗೆ ಸಬ್ಸಿಡಿ ದರದಲ್ಲಿ ಆಹಾರದ ನೀಡುವುದೇ ಹೊರತು, ರೈತರಿಗೆ ನ್ಯಾಯಯುತ ಬೆಲೆಗಳನ್ನು ನಿರಾಕರಿಸುವುದು ಅಲ್ಲ.

5ನೇ ಸುಳ್ಳು: ಎಂಎಸ್‌ಪಿ ಎಂಬುದು ಒಳ್ಳೆಯ ಕಲ್ಪನೆ: ಆದರೆ ಪ್ರಾಯೋಗಿಕವಾಗಿ ಸಾಧ್ಯವಿಲ್ಲ

ವಾಸ್ತವ: ಎಲ್ಲಾ ರೈತರಿಗೆ ಎಂಎಸ್‌ಪಿ ಖಾತ್ರಿಗೊಳಿಸಲು ಹಲವಾರು ವಿಧಾನಗಳಿವೆ. ಮೊದಲನೇಯದಾಗಿ ಸರ್ಕಾರವು ಈಗ ಖರೀದಿಸುತ್ತಿರುವುದಕ್ಕಿಂತ ಹೆಚ್ಚು ಖರೀದಿಸಬೇಕು. ಮುಖ್ಯವಾಗಿ ಬೇಳೆಕಾಳುಗಳು, ಧಾನ್ಯಗಳು ಮತ್ತು ಎಣ್ಣೆಕಾಳುಗಳನ್ನು ಖರೀದಿಸಿದರೆ ಸಾಕು ಉಳಿದವುಗಳನ್ನು ಖರೀದಿಸಬೇಕಾಗಿಲ್ಲ. ಬದಲಿಗೆ ಎಂಎಸ್‌ಪಿ ಮತ್ತು ಮಾರುಕಟ್ಟೆ ಬೆಲೆಯ ನಡುವಿನ ಕೊರತೆಯನ್ನು ಸರ್ಕಾರ ತುಂಬಿಕೊಟ್ಟರೆ ಸಾಕು.

ಸರ್ಕಾರವು ಅಗತ್ಯಬಿದ್ದಾಗ ಮಾರುಕಟ್ಟೆಯಲ್ಲಿ ಹಸ್ತಕ್ಷೇಪವನ್ನು ಮಾಡಬಹುದು ಅಥವಾ ಬೆಲೆಗಳು ಕುಸಿಯದಂತೆ ತಡೆಯಲು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಕ್ಷಣಾ ನೀತಿಗಳನ್ನು ಬಳಸಬಹುದು. ಮತ್ತ, ಕೊನೆಯದಾಗಿ MSP ಗಿಂತ ಕಡಿಮೆ ದರದಲ್ಲಿ ಕೊಳ್ಳುವುದನ್ನು ನಿಯಂತ್ರಿಸಲು ಸರ್ಕಾರವು ದಂಡನಾತ್ಮಕ ಕ್ರಮಗಳನ್ನು ಬಳಸಬಹುದು.

6ನೇ ಹಣಕಾಸಿನ ಸುಳ್ಳು: ಭಾರತ ದಿವಾಳುತ್ತದೆ!

ವಾಸ್ತವ: 2017-18 ರ ನಮ್ಮ ಲೆಕ್ಕಾಚಾರದ ಪ್ರಕಾರ ಕೃಷಿ ಮೇಲಿನ ಒಟ್ಟಾರೆ ವೆಚ್ಚವು 47,764 ಕೋಟಿ ರೂಪಾಯಿ ಎಂದು ತೋರಿಸಿದೆ (ಆ ವರ್ಷದ ಕೇಂದ್ರ ಬಜೆಟ್‌ನ ಕೇವಲ ಶೇ.1.6 ಮತ್ತು ಜಿಡಿಪಿಯ ಶೇಕಡಾ 0.3 ಕ್ಕಿಂತ ಕಡಿಮೆ). ಸ್ವಾಮಿನಾಥನ್ ಆಯೋಗವು ಶಿಫಾರಸು ಮಾಡಿದ ಮಟ್ಟಕ್ಕೆ ಎಂಎಸ್‌ಪಿಯನ್ನು ಏರಿಸಿದರೆ, ಅದಕ್ಕೆ ಇನ್ನೂ 2.28 ಲಕ್ಷ ಕೋಟಿ ರೂ. (ಬಜೆಟ್‌ನ ಸುಮಾರು ಶೇ.7.8 ಮತ್ತು ಜಿಡಿಪಿಯ ಶೇಕಡಾ 1.2) ವೆಚ್ಚವಾಗುತ್ತದೆ.

ಭಾರತವು ತನ್ನ ಜನಸಂಖ್ಯೆಯ ಸುಮಾರು ಮೂರನೇ ಎರಡರಷ್ಟು ಜನರ ಕಲ್ಯಾಣಕ್ಕಾಗಿ ಇದನ್ನು ಭರಿಸಬಹುದೇ? ಅದು ದೇಶ ಎದುರಿಸಬೇಕಾದ ನಿಜವಾದ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...