HomeಮುಖಪುಟMSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

MSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

- Advertisement -
- Advertisement -

ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ತನ್ನ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಂಡಿದೆ. ಆದರೆ ಎಂಎಸ್‌ಪಿ (MSP) ಖಾತ್ರಿಗೆ ಕಾನೂನು ಜಾರಿ ಮಾಡಬೇಕೆಂದು ರೈತರು ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ. ಈ ಸಂದರ್ಭದಲ್ಲಿ ಎಂಎಸ್‌ಪಿ ಸಾದ್ಯವಿಲ್ಲ, ಈಗಾಗಲೇ ಜಾರಿಯಲ್ಲಿದೆ ಎಂದು ಬಿಜೆಪಿ ನಾಯಕರು ಸೇರಿದಂತೆ ಹಲವರು ಅಪಪ್ರಚಾರದಲ್ಲಿ ನಿರತರಾಗಿದ್ದಾರೆ. ಅವೆಲ್ಲ ಸುಳ್ಳು ಎಂದು ಸ್ವರಾಜ್ ಇಂಡಿಯಾ ಅಧ್ಯಕ್ಷ ಮತ್ತು ಹಿರಿಯ ರೈತ ಮುಖಂಡರಾದ ಯೋಗೇಂದ್ರ ಯಾದವ್ ಬಯಲು ಮಾಡಿದ್ದಾರೆ. ಅವರು ಟ್ವಿಟರ್‌ನಲ್ಲಿ ಹಂಚಿಕೊಂಡ ಮಾಹಿತಿಯ ಕನ್ನಡ ಅನುವಾದ ಇಲ್ಲಿದೆ.

1ನೇ ಸುಳ್ಳು: ರೈತರು ತಮ್ಮ ಹಕ್ಕೊತ್ತಾಯವನ್ನು ಬದಲಾಯಿಸಿದ್ದಾರೆ

ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಡುತ್ತಿದ್ದರು. ಸರ್ಕಾರ ಅವನ್ನು ಹಿಂಪಡೆದುಕೊಂಡಿದೆ. ಆದರೆ ರೈತರು ಈಗ ತಮ್ಮ ಹಕ್ಕೊತ್ತಾಯ ಬದಲಿಗೆ ಎಂಎಸ್‌ಪಿಗೆ ಕಾನೂನು ಗ್ಯಾರಂಟಿ ಕೇಳುತ್ತಿದ್ದಾರೆ.

ವಾಸ್ತವ: ಎಂಎಸ್‌ಪಿಗಾಗಿನ ಹಕ್ಕೊತ್ತಾಯವು ರೈತ ಹೋರಾಟದ ಆರಂಭದಿಂದಲೂ, ಪ್ರತಿ ಹಂತದಲ್ಲಿಯೂ ಕೇಳಿಬಂದಿದೆ. ಕೃಷಿ ಕಾಯ್ದೆಗಳು ರದ್ದಾಗಬೇಕು ಮತ್ತು ಎಂಎಸ್‌ಪಿ ಖಾತ್ರಿಯಾಗಬೇಕು ಎಂಬುದು ರೈತ ಹೋರಾಟದ ಘೋಷಣೆಯಾಗಿದೆ. ಕೇಂದ್ರ ಸರ್ಕಾರದೊಂದಿಗೆ ರೈತರ ಮೊದಲ ಮಾತುಕತೆಯಲ್ಲಿ ಕೊಟ್ಟ ಹಕ್ಕೊತ್ತಾಯ ಪತ್ರದಲ್ಲಿಯೂ ಇದು ಸೇರಿದೆ. ಕಿಸಾನ್ ಸಂಸತ್ತು ಹೋರಾಟದಲ್ಲಿಯೂ ಚರ್ಚೆಯಾಗಿದೆ.

2ನೇ ಸುಳ್ಳು: ಎಂಎಸ್‌ಪಿ ಈಗಾಗಲೇ ಜಾರಿಯಲ್ಲಿದೆ? ಅದಕ್ಕೆ ಕಾನೂನಿನ ಮಾನ್ಯತೆಯೇಕೆ?

ವಾಸ್ತವ: ಎಂಎಸ್‌ಪಿ ಎಂಬುದು ಕೇವಲ ಕಾಗದದ ಮೇಲಿದೆ. ಇದನ್ನು ಸರ್ಕಾರದ ಅಂಕಿ ಅಂಶಗಳೆ ಹೇಳುತ್ತವೆ. ದೇಶದ ಶೇ.6% ರೈತರು ಮಾತ್ರ ಎಂಎಸ್‌ಪಿಯ ಪ್ರಯೋಜನ ಪಡೆಯುತ್ತಿದ್ದಾರೆ.

3ನೇ ಸುಳ್ಳು: ಎಂಎಸ್‌ಪಿ ಕಾನೂನು ಖಾತ್ರಿ ಮಾಡಿದರೆ ಅತಿ ಹೆಚ್ಚು ನೀರಾವರಿ ಬೇಡುವ ಬೆಳೆಯಾದ ಭತ್ತದ ಅತೀ ಉತ್ಪಾದನೆಯಾಗುತ್ತದೆ ಮತ್ತು ಅಗತ್ಯ ವೈವಿಧ್ಯಮಯ ಬೆಳೆಗಳು ವಿಳಂಬವಾಗುತ್ತವೆ.

ವಾಸ್ತವ: ಭತ್ತದ ಮೇಲಿನ ರೈತರ ಅತಿಯಾದ ಅವಲಂಬನೆಗೆ ಎಂಎಸ್‌ಪಿ ಕೊಡುತ್ತಿರುವುದು ಕಾರಣವಲ್ಲ. ಅಸಮರ್ಪಕ ಖರೀದಿ ಪ್ರಕ್ರಿಯೆ ಅದಕ್ಕೆ ಕಾರಣ. ಇದಕ್ಕೆ ಎಂಎಸ್‌ಪಿ ಹಿಂತೆಗೆದುಕೊಳ್ಳುವುದು ಪರಿಹಾರವಲ್ಲ. ಬದಲಿಗೆ ಕಡಲೇ ಕಾಳು, ಮೆಕ್ಕೆ ಜೋಳ, ಗೋವಿನ ಜೋಳ, ವಿವಿಧ ಬೇಳೆ ಕಾಳುಗಳಿಗೆ ಎಂಎಸ್‌ಪಿ ದೊರೆಯುತ್ತದೆ ಎಂದು ರೈತರಿಗೆ ಖಾತರಿ ನೀಡುವುದು ಸೂಕ್ತ ಪರಿಹಾರವಾಗಿದೆ.

4ನೇ ಸುಳ್ಳು: ಬೆಳೆಗಳಿಗೆ ಎಂಎಸ್‌ಪಿ ನೀಡಿದರೆ ಮಾರುಕಟ್ಟೆ ಬಿದ್ದುಹೋಗುತ್ತದೆ, ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಆತಂಕವಿದೆ.

ವಾಸ್ತವ: ವಾಸ್ತವವೆಂದರೆ ಸಾಮಾಜಿಕ ಉದ್ದೇಶಗಳನ್ನು ಪೂರೈಸಲು ಮುಕ್ತ ಮಾರುಕಟ್ಟೆಯನ್ನು ಪ್ರಪಂಚದಾದ್ಯಂತ ನಿಯಂತ್ರಿಸಲ್ಪಡಬೇಕು.  ಬೆಲೆ ಖಾತ್ರಿಯೂ ಕೆಟ್ಟದಾದರೆ ಈಗಾಗಲೇ ಎಂಎಸ್‌ಪಿ ಏಕೆ ಘೋಷಿಸಲಾಗಿದೆ?
ಆಹಾರದ ಬೆಲೆ ಏರಿಕೆಯನ್ನು ನಿಯಂತ್ರಿಸುವ ಮಾರ್ಗವೆಂದರೆ ಬಡವರಿಗೆ ಸಬ್ಸಿಡಿ ದರದಲ್ಲಿ ಆಹಾರದ ನೀಡುವುದೇ ಹೊರತು, ರೈತರಿಗೆ ನ್ಯಾಯಯುತ ಬೆಲೆಗಳನ್ನು ನಿರಾಕರಿಸುವುದು ಅಲ್ಲ.

5ನೇ ಸುಳ್ಳು: ಎಂಎಸ್‌ಪಿ ಎಂಬುದು ಒಳ್ಳೆಯ ಕಲ್ಪನೆ: ಆದರೆ ಪ್ರಾಯೋಗಿಕವಾಗಿ ಸಾಧ್ಯವಿಲ್ಲ

ವಾಸ್ತವ: ಎಲ್ಲಾ ರೈತರಿಗೆ ಎಂಎಸ್‌ಪಿ ಖಾತ್ರಿಗೊಳಿಸಲು ಹಲವಾರು ವಿಧಾನಗಳಿವೆ. ಮೊದಲನೇಯದಾಗಿ ಸರ್ಕಾರವು ಈಗ ಖರೀದಿಸುತ್ತಿರುವುದಕ್ಕಿಂತ ಹೆಚ್ಚು ಖರೀದಿಸಬೇಕು. ಮುಖ್ಯವಾಗಿ ಬೇಳೆಕಾಳುಗಳು, ಧಾನ್ಯಗಳು ಮತ್ತು ಎಣ್ಣೆಕಾಳುಗಳನ್ನು ಖರೀದಿಸಿದರೆ ಸಾಕು ಉಳಿದವುಗಳನ್ನು ಖರೀದಿಸಬೇಕಾಗಿಲ್ಲ. ಬದಲಿಗೆ ಎಂಎಸ್‌ಪಿ ಮತ್ತು ಮಾರುಕಟ್ಟೆ ಬೆಲೆಯ ನಡುವಿನ ಕೊರತೆಯನ್ನು ಸರ್ಕಾರ ತುಂಬಿಕೊಟ್ಟರೆ ಸಾಕು.

ಸರ್ಕಾರವು ಅಗತ್ಯಬಿದ್ದಾಗ ಮಾರುಕಟ್ಟೆಯಲ್ಲಿ ಹಸ್ತಕ್ಷೇಪವನ್ನು ಮಾಡಬಹುದು ಅಥವಾ ಬೆಲೆಗಳು ಕುಸಿಯದಂತೆ ತಡೆಯಲು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಕ್ಷಣಾ ನೀತಿಗಳನ್ನು ಬಳಸಬಹುದು. ಮತ್ತ, ಕೊನೆಯದಾಗಿ MSP ಗಿಂತ ಕಡಿಮೆ ದರದಲ್ಲಿ ಕೊಳ್ಳುವುದನ್ನು ನಿಯಂತ್ರಿಸಲು ಸರ್ಕಾರವು ದಂಡನಾತ್ಮಕ ಕ್ರಮಗಳನ್ನು ಬಳಸಬಹುದು.

6ನೇ ಹಣಕಾಸಿನ ಸುಳ್ಳು: ಭಾರತ ದಿವಾಳುತ್ತದೆ!

ವಾಸ್ತವ: 2017-18 ರ ನಮ್ಮ ಲೆಕ್ಕಾಚಾರದ ಪ್ರಕಾರ ಕೃಷಿ ಮೇಲಿನ ಒಟ್ಟಾರೆ ವೆಚ್ಚವು 47,764 ಕೋಟಿ ರೂಪಾಯಿ ಎಂದು ತೋರಿಸಿದೆ (ಆ ವರ್ಷದ ಕೇಂದ್ರ ಬಜೆಟ್‌ನ ಕೇವಲ ಶೇ.1.6 ಮತ್ತು ಜಿಡಿಪಿಯ ಶೇಕಡಾ 0.3 ಕ್ಕಿಂತ ಕಡಿಮೆ). ಸ್ವಾಮಿನಾಥನ್ ಆಯೋಗವು ಶಿಫಾರಸು ಮಾಡಿದ ಮಟ್ಟಕ್ಕೆ ಎಂಎಸ್‌ಪಿಯನ್ನು ಏರಿಸಿದರೆ, ಅದಕ್ಕೆ ಇನ್ನೂ 2.28 ಲಕ್ಷ ಕೋಟಿ ರೂ. (ಬಜೆಟ್‌ನ ಸುಮಾರು ಶೇ.7.8 ಮತ್ತು ಜಿಡಿಪಿಯ ಶೇಕಡಾ 1.2) ವೆಚ್ಚವಾಗುತ್ತದೆ.

ಭಾರತವು ತನ್ನ ಜನಸಂಖ್ಯೆಯ ಸುಮಾರು ಮೂರನೇ ಎರಡರಷ್ಟು ಜನರ ಕಲ್ಯಾಣಕ್ಕಾಗಿ ಇದನ್ನು ಭರಿಸಬಹುದೇ? ಅದು ದೇಶ ಎದುರಿಸಬೇಕಾದ ನಿಜವಾದ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...