HomeಮುಖಪುಟMSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

MSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

- Advertisement -
- Advertisement -

ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ತನ್ನ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಂಡಿದೆ. ಆದರೆ ಎಂಎಸ್‌ಪಿ (MSP) ಖಾತ್ರಿಗೆ ಕಾನೂನು ಜಾರಿ ಮಾಡಬೇಕೆಂದು ರೈತರು ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ. ಈ ಸಂದರ್ಭದಲ್ಲಿ ಎಂಎಸ್‌ಪಿ ಸಾದ್ಯವಿಲ್ಲ, ಈಗಾಗಲೇ ಜಾರಿಯಲ್ಲಿದೆ ಎಂದು ಬಿಜೆಪಿ ನಾಯಕರು ಸೇರಿದಂತೆ ಹಲವರು ಅಪಪ್ರಚಾರದಲ್ಲಿ ನಿರತರಾಗಿದ್ದಾರೆ. ಅವೆಲ್ಲ ಸುಳ್ಳು ಎಂದು ಸ್ವರಾಜ್ ಇಂಡಿಯಾ ಅಧ್ಯಕ್ಷ ಮತ್ತು ಹಿರಿಯ ರೈತ ಮುಖಂಡರಾದ ಯೋಗೇಂದ್ರ ಯಾದವ್ ಬಯಲು ಮಾಡಿದ್ದಾರೆ. ಅವರು ಟ್ವಿಟರ್‌ನಲ್ಲಿ ಹಂಚಿಕೊಂಡ ಮಾಹಿತಿಯ ಕನ್ನಡ ಅನುವಾದ ಇಲ್ಲಿದೆ.

1ನೇ ಸುಳ್ಳು: ರೈತರು ತಮ್ಮ ಹಕ್ಕೊತ್ತಾಯವನ್ನು ಬದಲಾಯಿಸಿದ್ದಾರೆ

ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಡುತ್ತಿದ್ದರು. ಸರ್ಕಾರ ಅವನ್ನು ಹಿಂಪಡೆದುಕೊಂಡಿದೆ. ಆದರೆ ರೈತರು ಈಗ ತಮ್ಮ ಹಕ್ಕೊತ್ತಾಯ ಬದಲಿಗೆ ಎಂಎಸ್‌ಪಿಗೆ ಕಾನೂನು ಗ್ಯಾರಂಟಿ ಕೇಳುತ್ತಿದ್ದಾರೆ.

ವಾಸ್ತವ: ಎಂಎಸ್‌ಪಿಗಾಗಿನ ಹಕ್ಕೊತ್ತಾಯವು ರೈತ ಹೋರಾಟದ ಆರಂಭದಿಂದಲೂ, ಪ್ರತಿ ಹಂತದಲ್ಲಿಯೂ ಕೇಳಿಬಂದಿದೆ. ಕೃಷಿ ಕಾಯ್ದೆಗಳು ರದ್ದಾಗಬೇಕು ಮತ್ತು ಎಂಎಸ್‌ಪಿ ಖಾತ್ರಿಯಾಗಬೇಕು ಎಂಬುದು ರೈತ ಹೋರಾಟದ ಘೋಷಣೆಯಾಗಿದೆ. ಕೇಂದ್ರ ಸರ್ಕಾರದೊಂದಿಗೆ ರೈತರ ಮೊದಲ ಮಾತುಕತೆಯಲ್ಲಿ ಕೊಟ್ಟ ಹಕ್ಕೊತ್ತಾಯ ಪತ್ರದಲ್ಲಿಯೂ ಇದು ಸೇರಿದೆ. ಕಿಸಾನ್ ಸಂಸತ್ತು ಹೋರಾಟದಲ್ಲಿಯೂ ಚರ್ಚೆಯಾಗಿದೆ.

2ನೇ ಸುಳ್ಳು: ಎಂಎಸ್‌ಪಿ ಈಗಾಗಲೇ ಜಾರಿಯಲ್ಲಿದೆ? ಅದಕ್ಕೆ ಕಾನೂನಿನ ಮಾನ್ಯತೆಯೇಕೆ?

ವಾಸ್ತವ: ಎಂಎಸ್‌ಪಿ ಎಂಬುದು ಕೇವಲ ಕಾಗದದ ಮೇಲಿದೆ. ಇದನ್ನು ಸರ್ಕಾರದ ಅಂಕಿ ಅಂಶಗಳೆ ಹೇಳುತ್ತವೆ. ದೇಶದ ಶೇ.6% ರೈತರು ಮಾತ್ರ ಎಂಎಸ್‌ಪಿಯ ಪ್ರಯೋಜನ ಪಡೆಯುತ್ತಿದ್ದಾರೆ.

3ನೇ ಸುಳ್ಳು: ಎಂಎಸ್‌ಪಿ ಕಾನೂನು ಖಾತ್ರಿ ಮಾಡಿದರೆ ಅತಿ ಹೆಚ್ಚು ನೀರಾವರಿ ಬೇಡುವ ಬೆಳೆಯಾದ ಭತ್ತದ ಅತೀ ಉತ್ಪಾದನೆಯಾಗುತ್ತದೆ ಮತ್ತು ಅಗತ್ಯ ವೈವಿಧ್ಯಮಯ ಬೆಳೆಗಳು ವಿಳಂಬವಾಗುತ್ತವೆ.

ವಾಸ್ತವ: ಭತ್ತದ ಮೇಲಿನ ರೈತರ ಅತಿಯಾದ ಅವಲಂಬನೆಗೆ ಎಂಎಸ್‌ಪಿ ಕೊಡುತ್ತಿರುವುದು ಕಾರಣವಲ್ಲ. ಅಸಮರ್ಪಕ ಖರೀದಿ ಪ್ರಕ್ರಿಯೆ ಅದಕ್ಕೆ ಕಾರಣ. ಇದಕ್ಕೆ ಎಂಎಸ್‌ಪಿ ಹಿಂತೆಗೆದುಕೊಳ್ಳುವುದು ಪರಿಹಾರವಲ್ಲ. ಬದಲಿಗೆ ಕಡಲೇ ಕಾಳು, ಮೆಕ್ಕೆ ಜೋಳ, ಗೋವಿನ ಜೋಳ, ವಿವಿಧ ಬೇಳೆ ಕಾಳುಗಳಿಗೆ ಎಂಎಸ್‌ಪಿ ದೊರೆಯುತ್ತದೆ ಎಂದು ರೈತರಿಗೆ ಖಾತರಿ ನೀಡುವುದು ಸೂಕ್ತ ಪರಿಹಾರವಾಗಿದೆ.

4ನೇ ಸುಳ್ಳು: ಬೆಳೆಗಳಿಗೆ ಎಂಎಸ್‌ಪಿ ನೀಡಿದರೆ ಮಾರುಕಟ್ಟೆ ಬಿದ್ದುಹೋಗುತ್ತದೆ, ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಆತಂಕವಿದೆ.

ವಾಸ್ತವ: ವಾಸ್ತವವೆಂದರೆ ಸಾಮಾಜಿಕ ಉದ್ದೇಶಗಳನ್ನು ಪೂರೈಸಲು ಮುಕ್ತ ಮಾರುಕಟ್ಟೆಯನ್ನು ಪ್ರಪಂಚದಾದ್ಯಂತ ನಿಯಂತ್ರಿಸಲ್ಪಡಬೇಕು.  ಬೆಲೆ ಖಾತ್ರಿಯೂ ಕೆಟ್ಟದಾದರೆ ಈಗಾಗಲೇ ಎಂಎಸ್‌ಪಿ ಏಕೆ ಘೋಷಿಸಲಾಗಿದೆ?
ಆಹಾರದ ಬೆಲೆ ಏರಿಕೆಯನ್ನು ನಿಯಂತ್ರಿಸುವ ಮಾರ್ಗವೆಂದರೆ ಬಡವರಿಗೆ ಸಬ್ಸಿಡಿ ದರದಲ್ಲಿ ಆಹಾರದ ನೀಡುವುದೇ ಹೊರತು, ರೈತರಿಗೆ ನ್ಯಾಯಯುತ ಬೆಲೆಗಳನ್ನು ನಿರಾಕರಿಸುವುದು ಅಲ್ಲ.

5ನೇ ಸುಳ್ಳು: ಎಂಎಸ್‌ಪಿ ಎಂಬುದು ಒಳ್ಳೆಯ ಕಲ್ಪನೆ: ಆದರೆ ಪ್ರಾಯೋಗಿಕವಾಗಿ ಸಾಧ್ಯವಿಲ್ಲ

ವಾಸ್ತವ: ಎಲ್ಲಾ ರೈತರಿಗೆ ಎಂಎಸ್‌ಪಿ ಖಾತ್ರಿಗೊಳಿಸಲು ಹಲವಾರು ವಿಧಾನಗಳಿವೆ. ಮೊದಲನೇಯದಾಗಿ ಸರ್ಕಾರವು ಈಗ ಖರೀದಿಸುತ್ತಿರುವುದಕ್ಕಿಂತ ಹೆಚ್ಚು ಖರೀದಿಸಬೇಕು. ಮುಖ್ಯವಾಗಿ ಬೇಳೆಕಾಳುಗಳು, ಧಾನ್ಯಗಳು ಮತ್ತು ಎಣ್ಣೆಕಾಳುಗಳನ್ನು ಖರೀದಿಸಿದರೆ ಸಾಕು ಉಳಿದವುಗಳನ್ನು ಖರೀದಿಸಬೇಕಾಗಿಲ್ಲ. ಬದಲಿಗೆ ಎಂಎಸ್‌ಪಿ ಮತ್ತು ಮಾರುಕಟ್ಟೆ ಬೆಲೆಯ ನಡುವಿನ ಕೊರತೆಯನ್ನು ಸರ್ಕಾರ ತುಂಬಿಕೊಟ್ಟರೆ ಸಾಕು.

ಸರ್ಕಾರವು ಅಗತ್ಯಬಿದ್ದಾಗ ಮಾರುಕಟ್ಟೆಯಲ್ಲಿ ಹಸ್ತಕ್ಷೇಪವನ್ನು ಮಾಡಬಹುದು ಅಥವಾ ಬೆಲೆಗಳು ಕುಸಿಯದಂತೆ ತಡೆಯಲು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಕ್ಷಣಾ ನೀತಿಗಳನ್ನು ಬಳಸಬಹುದು. ಮತ್ತ, ಕೊನೆಯದಾಗಿ MSP ಗಿಂತ ಕಡಿಮೆ ದರದಲ್ಲಿ ಕೊಳ್ಳುವುದನ್ನು ನಿಯಂತ್ರಿಸಲು ಸರ್ಕಾರವು ದಂಡನಾತ್ಮಕ ಕ್ರಮಗಳನ್ನು ಬಳಸಬಹುದು.

6ನೇ ಹಣಕಾಸಿನ ಸುಳ್ಳು: ಭಾರತ ದಿವಾಳುತ್ತದೆ!

ವಾಸ್ತವ: 2017-18 ರ ನಮ್ಮ ಲೆಕ್ಕಾಚಾರದ ಪ್ರಕಾರ ಕೃಷಿ ಮೇಲಿನ ಒಟ್ಟಾರೆ ವೆಚ್ಚವು 47,764 ಕೋಟಿ ರೂಪಾಯಿ ಎಂದು ತೋರಿಸಿದೆ (ಆ ವರ್ಷದ ಕೇಂದ್ರ ಬಜೆಟ್‌ನ ಕೇವಲ ಶೇ.1.6 ಮತ್ತು ಜಿಡಿಪಿಯ ಶೇಕಡಾ 0.3 ಕ್ಕಿಂತ ಕಡಿಮೆ). ಸ್ವಾಮಿನಾಥನ್ ಆಯೋಗವು ಶಿಫಾರಸು ಮಾಡಿದ ಮಟ್ಟಕ್ಕೆ ಎಂಎಸ್‌ಪಿಯನ್ನು ಏರಿಸಿದರೆ, ಅದಕ್ಕೆ ಇನ್ನೂ 2.28 ಲಕ್ಷ ಕೋಟಿ ರೂ. (ಬಜೆಟ್‌ನ ಸುಮಾರು ಶೇ.7.8 ಮತ್ತು ಜಿಡಿಪಿಯ ಶೇಕಡಾ 1.2) ವೆಚ್ಚವಾಗುತ್ತದೆ.

ಭಾರತವು ತನ್ನ ಜನಸಂಖ್ಯೆಯ ಸುಮಾರು ಮೂರನೇ ಎರಡರಷ್ಟು ಜನರ ಕಲ್ಯಾಣಕ್ಕಾಗಿ ಇದನ್ನು ಭರಿಸಬಹುದೇ? ಅದು ದೇಶ ಎದುರಿಸಬೇಕಾದ ನಿಜವಾದ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...