HomeಮುಖಪುಟMSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

MSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

- Advertisement -
- Advertisement -

ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ತನ್ನ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಂಡಿದೆ. ಆದರೆ ಎಂಎಸ್‌ಪಿ (MSP) ಖಾತ್ರಿಗೆ ಕಾನೂನು ಜಾರಿ ಮಾಡಬೇಕೆಂದು ರೈತರು ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ. ಈ ಸಂದರ್ಭದಲ್ಲಿ ಎಂಎಸ್‌ಪಿ ಸಾದ್ಯವಿಲ್ಲ, ಈಗಾಗಲೇ ಜಾರಿಯಲ್ಲಿದೆ ಎಂದು ಬಿಜೆಪಿ ನಾಯಕರು ಸೇರಿದಂತೆ ಹಲವರು ಅಪಪ್ರಚಾರದಲ್ಲಿ ನಿರತರಾಗಿದ್ದಾರೆ. ಅವೆಲ್ಲ ಸುಳ್ಳು ಎಂದು ಸ್ವರಾಜ್ ಇಂಡಿಯಾ ಅಧ್ಯಕ್ಷ ಮತ್ತು ಹಿರಿಯ ರೈತ ಮುಖಂಡರಾದ ಯೋಗೇಂದ್ರ ಯಾದವ್ ಬಯಲು ಮಾಡಿದ್ದಾರೆ. ಅವರು ಟ್ವಿಟರ್‌ನಲ್ಲಿ ಹಂಚಿಕೊಂಡ ಮಾಹಿತಿಯ ಕನ್ನಡ ಅನುವಾದ ಇಲ್ಲಿದೆ.

1ನೇ ಸುಳ್ಳು: ರೈತರು ತಮ್ಮ ಹಕ್ಕೊತ್ತಾಯವನ್ನು ಬದಲಾಯಿಸಿದ್ದಾರೆ

ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಡುತ್ತಿದ್ದರು. ಸರ್ಕಾರ ಅವನ್ನು ಹಿಂಪಡೆದುಕೊಂಡಿದೆ. ಆದರೆ ರೈತರು ಈಗ ತಮ್ಮ ಹಕ್ಕೊತ್ತಾಯ ಬದಲಿಗೆ ಎಂಎಸ್‌ಪಿಗೆ ಕಾನೂನು ಗ್ಯಾರಂಟಿ ಕೇಳುತ್ತಿದ್ದಾರೆ.

ವಾಸ್ತವ: ಎಂಎಸ್‌ಪಿಗಾಗಿನ ಹಕ್ಕೊತ್ತಾಯವು ರೈತ ಹೋರಾಟದ ಆರಂಭದಿಂದಲೂ, ಪ್ರತಿ ಹಂತದಲ್ಲಿಯೂ ಕೇಳಿಬಂದಿದೆ. ಕೃಷಿ ಕಾಯ್ದೆಗಳು ರದ್ದಾಗಬೇಕು ಮತ್ತು ಎಂಎಸ್‌ಪಿ ಖಾತ್ರಿಯಾಗಬೇಕು ಎಂಬುದು ರೈತ ಹೋರಾಟದ ಘೋಷಣೆಯಾಗಿದೆ. ಕೇಂದ್ರ ಸರ್ಕಾರದೊಂದಿಗೆ ರೈತರ ಮೊದಲ ಮಾತುಕತೆಯಲ್ಲಿ ಕೊಟ್ಟ ಹಕ್ಕೊತ್ತಾಯ ಪತ್ರದಲ್ಲಿಯೂ ಇದು ಸೇರಿದೆ. ಕಿಸಾನ್ ಸಂಸತ್ತು ಹೋರಾಟದಲ್ಲಿಯೂ ಚರ್ಚೆಯಾಗಿದೆ.

2ನೇ ಸುಳ್ಳು: ಎಂಎಸ್‌ಪಿ ಈಗಾಗಲೇ ಜಾರಿಯಲ್ಲಿದೆ? ಅದಕ್ಕೆ ಕಾನೂನಿನ ಮಾನ್ಯತೆಯೇಕೆ?

ವಾಸ್ತವ: ಎಂಎಸ್‌ಪಿ ಎಂಬುದು ಕೇವಲ ಕಾಗದದ ಮೇಲಿದೆ. ಇದನ್ನು ಸರ್ಕಾರದ ಅಂಕಿ ಅಂಶಗಳೆ ಹೇಳುತ್ತವೆ. ದೇಶದ ಶೇ.6% ರೈತರು ಮಾತ್ರ ಎಂಎಸ್‌ಪಿಯ ಪ್ರಯೋಜನ ಪಡೆಯುತ್ತಿದ್ದಾರೆ.

3ನೇ ಸುಳ್ಳು: ಎಂಎಸ್‌ಪಿ ಕಾನೂನು ಖಾತ್ರಿ ಮಾಡಿದರೆ ಅತಿ ಹೆಚ್ಚು ನೀರಾವರಿ ಬೇಡುವ ಬೆಳೆಯಾದ ಭತ್ತದ ಅತೀ ಉತ್ಪಾದನೆಯಾಗುತ್ತದೆ ಮತ್ತು ಅಗತ್ಯ ವೈವಿಧ್ಯಮಯ ಬೆಳೆಗಳು ವಿಳಂಬವಾಗುತ್ತವೆ.

ವಾಸ್ತವ: ಭತ್ತದ ಮೇಲಿನ ರೈತರ ಅತಿಯಾದ ಅವಲಂಬನೆಗೆ ಎಂಎಸ್‌ಪಿ ಕೊಡುತ್ತಿರುವುದು ಕಾರಣವಲ್ಲ. ಅಸಮರ್ಪಕ ಖರೀದಿ ಪ್ರಕ್ರಿಯೆ ಅದಕ್ಕೆ ಕಾರಣ. ಇದಕ್ಕೆ ಎಂಎಸ್‌ಪಿ ಹಿಂತೆಗೆದುಕೊಳ್ಳುವುದು ಪರಿಹಾರವಲ್ಲ. ಬದಲಿಗೆ ಕಡಲೇ ಕಾಳು, ಮೆಕ್ಕೆ ಜೋಳ, ಗೋವಿನ ಜೋಳ, ವಿವಿಧ ಬೇಳೆ ಕಾಳುಗಳಿಗೆ ಎಂಎಸ್‌ಪಿ ದೊರೆಯುತ್ತದೆ ಎಂದು ರೈತರಿಗೆ ಖಾತರಿ ನೀಡುವುದು ಸೂಕ್ತ ಪರಿಹಾರವಾಗಿದೆ.

4ನೇ ಸುಳ್ಳು: ಬೆಳೆಗಳಿಗೆ ಎಂಎಸ್‌ಪಿ ನೀಡಿದರೆ ಮಾರುಕಟ್ಟೆ ಬಿದ್ದುಹೋಗುತ್ತದೆ, ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಆತಂಕವಿದೆ.

ವಾಸ್ತವ: ವಾಸ್ತವವೆಂದರೆ ಸಾಮಾಜಿಕ ಉದ್ದೇಶಗಳನ್ನು ಪೂರೈಸಲು ಮುಕ್ತ ಮಾರುಕಟ್ಟೆಯನ್ನು ಪ್ರಪಂಚದಾದ್ಯಂತ ನಿಯಂತ್ರಿಸಲ್ಪಡಬೇಕು.  ಬೆಲೆ ಖಾತ್ರಿಯೂ ಕೆಟ್ಟದಾದರೆ ಈಗಾಗಲೇ ಎಂಎಸ್‌ಪಿ ಏಕೆ ಘೋಷಿಸಲಾಗಿದೆ?
ಆಹಾರದ ಬೆಲೆ ಏರಿಕೆಯನ್ನು ನಿಯಂತ್ರಿಸುವ ಮಾರ್ಗವೆಂದರೆ ಬಡವರಿಗೆ ಸಬ್ಸಿಡಿ ದರದಲ್ಲಿ ಆಹಾರದ ನೀಡುವುದೇ ಹೊರತು, ರೈತರಿಗೆ ನ್ಯಾಯಯುತ ಬೆಲೆಗಳನ್ನು ನಿರಾಕರಿಸುವುದು ಅಲ್ಲ.

5ನೇ ಸುಳ್ಳು: ಎಂಎಸ್‌ಪಿ ಎಂಬುದು ಒಳ್ಳೆಯ ಕಲ್ಪನೆ: ಆದರೆ ಪ್ರಾಯೋಗಿಕವಾಗಿ ಸಾಧ್ಯವಿಲ್ಲ

ವಾಸ್ತವ: ಎಲ್ಲಾ ರೈತರಿಗೆ ಎಂಎಸ್‌ಪಿ ಖಾತ್ರಿಗೊಳಿಸಲು ಹಲವಾರು ವಿಧಾನಗಳಿವೆ. ಮೊದಲನೇಯದಾಗಿ ಸರ್ಕಾರವು ಈಗ ಖರೀದಿಸುತ್ತಿರುವುದಕ್ಕಿಂತ ಹೆಚ್ಚು ಖರೀದಿಸಬೇಕು. ಮುಖ್ಯವಾಗಿ ಬೇಳೆಕಾಳುಗಳು, ಧಾನ್ಯಗಳು ಮತ್ತು ಎಣ್ಣೆಕಾಳುಗಳನ್ನು ಖರೀದಿಸಿದರೆ ಸಾಕು ಉಳಿದವುಗಳನ್ನು ಖರೀದಿಸಬೇಕಾಗಿಲ್ಲ. ಬದಲಿಗೆ ಎಂಎಸ್‌ಪಿ ಮತ್ತು ಮಾರುಕಟ್ಟೆ ಬೆಲೆಯ ನಡುವಿನ ಕೊರತೆಯನ್ನು ಸರ್ಕಾರ ತುಂಬಿಕೊಟ್ಟರೆ ಸಾಕು.

ಸರ್ಕಾರವು ಅಗತ್ಯಬಿದ್ದಾಗ ಮಾರುಕಟ್ಟೆಯಲ್ಲಿ ಹಸ್ತಕ್ಷೇಪವನ್ನು ಮಾಡಬಹುದು ಅಥವಾ ಬೆಲೆಗಳು ಕುಸಿಯದಂತೆ ತಡೆಯಲು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಕ್ಷಣಾ ನೀತಿಗಳನ್ನು ಬಳಸಬಹುದು. ಮತ್ತ, ಕೊನೆಯದಾಗಿ MSP ಗಿಂತ ಕಡಿಮೆ ದರದಲ್ಲಿ ಕೊಳ್ಳುವುದನ್ನು ನಿಯಂತ್ರಿಸಲು ಸರ್ಕಾರವು ದಂಡನಾತ್ಮಕ ಕ್ರಮಗಳನ್ನು ಬಳಸಬಹುದು.

6ನೇ ಹಣಕಾಸಿನ ಸುಳ್ಳು: ಭಾರತ ದಿವಾಳುತ್ತದೆ!

ವಾಸ್ತವ: 2017-18 ರ ನಮ್ಮ ಲೆಕ್ಕಾಚಾರದ ಪ್ರಕಾರ ಕೃಷಿ ಮೇಲಿನ ಒಟ್ಟಾರೆ ವೆಚ್ಚವು 47,764 ಕೋಟಿ ರೂಪಾಯಿ ಎಂದು ತೋರಿಸಿದೆ (ಆ ವರ್ಷದ ಕೇಂದ್ರ ಬಜೆಟ್‌ನ ಕೇವಲ ಶೇ.1.6 ಮತ್ತು ಜಿಡಿಪಿಯ ಶೇಕಡಾ 0.3 ಕ್ಕಿಂತ ಕಡಿಮೆ). ಸ್ವಾಮಿನಾಥನ್ ಆಯೋಗವು ಶಿಫಾರಸು ಮಾಡಿದ ಮಟ್ಟಕ್ಕೆ ಎಂಎಸ್‌ಪಿಯನ್ನು ಏರಿಸಿದರೆ, ಅದಕ್ಕೆ ಇನ್ನೂ 2.28 ಲಕ್ಷ ಕೋಟಿ ರೂ. (ಬಜೆಟ್‌ನ ಸುಮಾರು ಶೇ.7.8 ಮತ್ತು ಜಿಡಿಪಿಯ ಶೇಕಡಾ 1.2) ವೆಚ್ಚವಾಗುತ್ತದೆ.

ಭಾರತವು ತನ್ನ ಜನಸಂಖ್ಯೆಯ ಸುಮಾರು ಮೂರನೇ ಎರಡರಷ್ಟು ಜನರ ಕಲ್ಯಾಣಕ್ಕಾಗಿ ಇದನ್ನು ಭರಿಸಬಹುದೇ? ಅದು ದೇಶ ಎದುರಿಸಬೇಕಾದ ನಿಜವಾದ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...