HomeಮುಖಪುಟMSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

MSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

- Advertisement -
- Advertisement -

ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ತನ್ನ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಂಡಿದೆ. ಆದರೆ ಎಂಎಸ್‌ಪಿ (MSP) ಖಾತ್ರಿಗೆ ಕಾನೂನು ಜಾರಿ ಮಾಡಬೇಕೆಂದು ರೈತರು ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ. ಈ ಸಂದರ್ಭದಲ್ಲಿ ಎಂಎಸ್‌ಪಿ ಸಾದ್ಯವಿಲ್ಲ, ಈಗಾಗಲೇ ಜಾರಿಯಲ್ಲಿದೆ ಎಂದು ಬಿಜೆಪಿ ನಾಯಕರು ಸೇರಿದಂತೆ ಹಲವರು ಅಪಪ್ರಚಾರದಲ್ಲಿ ನಿರತರಾಗಿದ್ದಾರೆ. ಅವೆಲ್ಲ ಸುಳ್ಳು ಎಂದು ಸ್ವರಾಜ್ ಇಂಡಿಯಾ ಅಧ್ಯಕ್ಷ ಮತ್ತು ಹಿರಿಯ ರೈತ ಮುಖಂಡರಾದ ಯೋಗೇಂದ್ರ ಯಾದವ್ ಬಯಲು ಮಾಡಿದ್ದಾರೆ. ಅವರು ಟ್ವಿಟರ್‌ನಲ್ಲಿ ಹಂಚಿಕೊಂಡ ಮಾಹಿತಿಯ ಕನ್ನಡ ಅನುವಾದ ಇಲ್ಲಿದೆ.

1ನೇ ಸುಳ್ಳು: ರೈತರು ತಮ್ಮ ಹಕ್ಕೊತ್ತಾಯವನ್ನು ಬದಲಾಯಿಸಿದ್ದಾರೆ

ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಡುತ್ತಿದ್ದರು. ಸರ್ಕಾರ ಅವನ್ನು ಹಿಂಪಡೆದುಕೊಂಡಿದೆ. ಆದರೆ ರೈತರು ಈಗ ತಮ್ಮ ಹಕ್ಕೊತ್ತಾಯ ಬದಲಿಗೆ ಎಂಎಸ್‌ಪಿಗೆ ಕಾನೂನು ಗ್ಯಾರಂಟಿ ಕೇಳುತ್ತಿದ್ದಾರೆ.

ವಾಸ್ತವ: ಎಂಎಸ್‌ಪಿಗಾಗಿನ ಹಕ್ಕೊತ್ತಾಯವು ರೈತ ಹೋರಾಟದ ಆರಂಭದಿಂದಲೂ, ಪ್ರತಿ ಹಂತದಲ್ಲಿಯೂ ಕೇಳಿಬಂದಿದೆ. ಕೃಷಿ ಕಾಯ್ದೆಗಳು ರದ್ದಾಗಬೇಕು ಮತ್ತು ಎಂಎಸ್‌ಪಿ ಖಾತ್ರಿಯಾಗಬೇಕು ಎಂಬುದು ರೈತ ಹೋರಾಟದ ಘೋಷಣೆಯಾಗಿದೆ. ಕೇಂದ್ರ ಸರ್ಕಾರದೊಂದಿಗೆ ರೈತರ ಮೊದಲ ಮಾತುಕತೆಯಲ್ಲಿ ಕೊಟ್ಟ ಹಕ್ಕೊತ್ತಾಯ ಪತ್ರದಲ್ಲಿಯೂ ಇದು ಸೇರಿದೆ. ಕಿಸಾನ್ ಸಂಸತ್ತು ಹೋರಾಟದಲ್ಲಿಯೂ ಚರ್ಚೆಯಾಗಿದೆ.

2ನೇ ಸುಳ್ಳು: ಎಂಎಸ್‌ಪಿ ಈಗಾಗಲೇ ಜಾರಿಯಲ್ಲಿದೆ? ಅದಕ್ಕೆ ಕಾನೂನಿನ ಮಾನ್ಯತೆಯೇಕೆ?

ವಾಸ್ತವ: ಎಂಎಸ್‌ಪಿ ಎಂಬುದು ಕೇವಲ ಕಾಗದದ ಮೇಲಿದೆ. ಇದನ್ನು ಸರ್ಕಾರದ ಅಂಕಿ ಅಂಶಗಳೆ ಹೇಳುತ್ತವೆ. ದೇಶದ ಶೇ.6% ರೈತರು ಮಾತ್ರ ಎಂಎಸ್‌ಪಿಯ ಪ್ರಯೋಜನ ಪಡೆಯುತ್ತಿದ್ದಾರೆ.

3ನೇ ಸುಳ್ಳು: ಎಂಎಸ್‌ಪಿ ಕಾನೂನು ಖಾತ್ರಿ ಮಾಡಿದರೆ ಅತಿ ಹೆಚ್ಚು ನೀರಾವರಿ ಬೇಡುವ ಬೆಳೆಯಾದ ಭತ್ತದ ಅತೀ ಉತ್ಪಾದನೆಯಾಗುತ್ತದೆ ಮತ್ತು ಅಗತ್ಯ ವೈವಿಧ್ಯಮಯ ಬೆಳೆಗಳು ವಿಳಂಬವಾಗುತ್ತವೆ.

ವಾಸ್ತವ: ಭತ್ತದ ಮೇಲಿನ ರೈತರ ಅತಿಯಾದ ಅವಲಂಬನೆಗೆ ಎಂಎಸ್‌ಪಿ ಕೊಡುತ್ತಿರುವುದು ಕಾರಣವಲ್ಲ. ಅಸಮರ್ಪಕ ಖರೀದಿ ಪ್ರಕ್ರಿಯೆ ಅದಕ್ಕೆ ಕಾರಣ. ಇದಕ್ಕೆ ಎಂಎಸ್‌ಪಿ ಹಿಂತೆಗೆದುಕೊಳ್ಳುವುದು ಪರಿಹಾರವಲ್ಲ. ಬದಲಿಗೆ ಕಡಲೇ ಕಾಳು, ಮೆಕ್ಕೆ ಜೋಳ, ಗೋವಿನ ಜೋಳ, ವಿವಿಧ ಬೇಳೆ ಕಾಳುಗಳಿಗೆ ಎಂಎಸ್‌ಪಿ ದೊರೆಯುತ್ತದೆ ಎಂದು ರೈತರಿಗೆ ಖಾತರಿ ನೀಡುವುದು ಸೂಕ್ತ ಪರಿಹಾರವಾಗಿದೆ.

4ನೇ ಸುಳ್ಳು: ಬೆಳೆಗಳಿಗೆ ಎಂಎಸ್‌ಪಿ ನೀಡಿದರೆ ಮಾರುಕಟ್ಟೆ ಬಿದ್ದುಹೋಗುತ್ತದೆ, ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಆತಂಕವಿದೆ.

ವಾಸ್ತವ: ವಾಸ್ತವವೆಂದರೆ ಸಾಮಾಜಿಕ ಉದ್ದೇಶಗಳನ್ನು ಪೂರೈಸಲು ಮುಕ್ತ ಮಾರುಕಟ್ಟೆಯನ್ನು ಪ್ರಪಂಚದಾದ್ಯಂತ ನಿಯಂತ್ರಿಸಲ್ಪಡಬೇಕು.  ಬೆಲೆ ಖಾತ್ರಿಯೂ ಕೆಟ್ಟದಾದರೆ ಈಗಾಗಲೇ ಎಂಎಸ್‌ಪಿ ಏಕೆ ಘೋಷಿಸಲಾಗಿದೆ?
ಆಹಾರದ ಬೆಲೆ ಏರಿಕೆಯನ್ನು ನಿಯಂತ್ರಿಸುವ ಮಾರ್ಗವೆಂದರೆ ಬಡವರಿಗೆ ಸಬ್ಸಿಡಿ ದರದಲ್ಲಿ ಆಹಾರದ ನೀಡುವುದೇ ಹೊರತು, ರೈತರಿಗೆ ನ್ಯಾಯಯುತ ಬೆಲೆಗಳನ್ನು ನಿರಾಕರಿಸುವುದು ಅಲ್ಲ.

5ನೇ ಸುಳ್ಳು: ಎಂಎಸ್‌ಪಿ ಎಂಬುದು ಒಳ್ಳೆಯ ಕಲ್ಪನೆ: ಆದರೆ ಪ್ರಾಯೋಗಿಕವಾಗಿ ಸಾಧ್ಯವಿಲ್ಲ

ವಾಸ್ತವ: ಎಲ್ಲಾ ರೈತರಿಗೆ ಎಂಎಸ್‌ಪಿ ಖಾತ್ರಿಗೊಳಿಸಲು ಹಲವಾರು ವಿಧಾನಗಳಿವೆ. ಮೊದಲನೇಯದಾಗಿ ಸರ್ಕಾರವು ಈಗ ಖರೀದಿಸುತ್ತಿರುವುದಕ್ಕಿಂತ ಹೆಚ್ಚು ಖರೀದಿಸಬೇಕು. ಮುಖ್ಯವಾಗಿ ಬೇಳೆಕಾಳುಗಳು, ಧಾನ್ಯಗಳು ಮತ್ತು ಎಣ್ಣೆಕಾಳುಗಳನ್ನು ಖರೀದಿಸಿದರೆ ಸಾಕು ಉಳಿದವುಗಳನ್ನು ಖರೀದಿಸಬೇಕಾಗಿಲ್ಲ. ಬದಲಿಗೆ ಎಂಎಸ್‌ಪಿ ಮತ್ತು ಮಾರುಕಟ್ಟೆ ಬೆಲೆಯ ನಡುವಿನ ಕೊರತೆಯನ್ನು ಸರ್ಕಾರ ತುಂಬಿಕೊಟ್ಟರೆ ಸಾಕು.

ಸರ್ಕಾರವು ಅಗತ್ಯಬಿದ್ದಾಗ ಮಾರುಕಟ್ಟೆಯಲ್ಲಿ ಹಸ್ತಕ್ಷೇಪವನ್ನು ಮಾಡಬಹುದು ಅಥವಾ ಬೆಲೆಗಳು ಕುಸಿಯದಂತೆ ತಡೆಯಲು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಕ್ಷಣಾ ನೀತಿಗಳನ್ನು ಬಳಸಬಹುದು. ಮತ್ತ, ಕೊನೆಯದಾಗಿ MSP ಗಿಂತ ಕಡಿಮೆ ದರದಲ್ಲಿ ಕೊಳ್ಳುವುದನ್ನು ನಿಯಂತ್ರಿಸಲು ಸರ್ಕಾರವು ದಂಡನಾತ್ಮಕ ಕ್ರಮಗಳನ್ನು ಬಳಸಬಹುದು.

6ನೇ ಹಣಕಾಸಿನ ಸುಳ್ಳು: ಭಾರತ ದಿವಾಳುತ್ತದೆ!

ವಾಸ್ತವ: 2017-18 ರ ನಮ್ಮ ಲೆಕ್ಕಾಚಾರದ ಪ್ರಕಾರ ಕೃಷಿ ಮೇಲಿನ ಒಟ್ಟಾರೆ ವೆಚ್ಚವು 47,764 ಕೋಟಿ ರೂಪಾಯಿ ಎಂದು ತೋರಿಸಿದೆ (ಆ ವರ್ಷದ ಕೇಂದ್ರ ಬಜೆಟ್‌ನ ಕೇವಲ ಶೇ.1.6 ಮತ್ತು ಜಿಡಿಪಿಯ ಶೇಕಡಾ 0.3 ಕ್ಕಿಂತ ಕಡಿಮೆ). ಸ್ವಾಮಿನಾಥನ್ ಆಯೋಗವು ಶಿಫಾರಸು ಮಾಡಿದ ಮಟ್ಟಕ್ಕೆ ಎಂಎಸ್‌ಪಿಯನ್ನು ಏರಿಸಿದರೆ, ಅದಕ್ಕೆ ಇನ್ನೂ 2.28 ಲಕ್ಷ ಕೋಟಿ ರೂ. (ಬಜೆಟ್‌ನ ಸುಮಾರು ಶೇ.7.8 ಮತ್ತು ಜಿಡಿಪಿಯ ಶೇಕಡಾ 1.2) ವೆಚ್ಚವಾಗುತ್ತದೆ.

ಭಾರತವು ತನ್ನ ಜನಸಂಖ್ಯೆಯ ಸುಮಾರು ಮೂರನೇ ಎರಡರಷ್ಟು ಜನರ ಕಲ್ಯಾಣಕ್ಕಾಗಿ ಇದನ್ನು ಭರಿಸಬಹುದೇ? ಅದು ದೇಶ ಎದುರಿಸಬೇಕಾದ ನಿಜವಾದ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...