HomeಮುಖಪುಟMSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

MSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

- Advertisement -
- Advertisement -

ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ತನ್ನ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಂಡಿದೆ. ಆದರೆ ಎಂಎಸ್‌ಪಿ (MSP) ಖಾತ್ರಿಗೆ ಕಾನೂನು ಜಾರಿ ಮಾಡಬೇಕೆಂದು ರೈತರು ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ. ಈ ಸಂದರ್ಭದಲ್ಲಿ ಎಂಎಸ್‌ಪಿ ಸಾದ್ಯವಿಲ್ಲ, ಈಗಾಗಲೇ ಜಾರಿಯಲ್ಲಿದೆ ಎಂದು ಬಿಜೆಪಿ ನಾಯಕರು ಸೇರಿದಂತೆ ಹಲವರು ಅಪಪ್ರಚಾರದಲ್ಲಿ ನಿರತರಾಗಿದ್ದಾರೆ. ಅವೆಲ್ಲ ಸುಳ್ಳು ಎಂದು ಸ್ವರಾಜ್ ಇಂಡಿಯಾ ಅಧ್ಯಕ್ಷ ಮತ್ತು ಹಿರಿಯ ರೈತ ಮುಖಂಡರಾದ ಯೋಗೇಂದ್ರ ಯಾದವ್ ಬಯಲು ಮಾಡಿದ್ದಾರೆ. ಅವರು ಟ್ವಿಟರ್‌ನಲ್ಲಿ ಹಂಚಿಕೊಂಡ ಮಾಹಿತಿಯ ಕನ್ನಡ ಅನುವಾದ ಇಲ್ಲಿದೆ.

1ನೇ ಸುಳ್ಳು: ರೈತರು ತಮ್ಮ ಹಕ್ಕೊತ್ತಾಯವನ್ನು ಬದಲಾಯಿಸಿದ್ದಾರೆ

ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಡುತ್ತಿದ್ದರು. ಸರ್ಕಾರ ಅವನ್ನು ಹಿಂಪಡೆದುಕೊಂಡಿದೆ. ಆದರೆ ರೈತರು ಈಗ ತಮ್ಮ ಹಕ್ಕೊತ್ತಾಯ ಬದಲಿಗೆ ಎಂಎಸ್‌ಪಿಗೆ ಕಾನೂನು ಗ್ಯಾರಂಟಿ ಕೇಳುತ್ತಿದ್ದಾರೆ.

ವಾಸ್ತವ: ಎಂಎಸ್‌ಪಿಗಾಗಿನ ಹಕ್ಕೊತ್ತಾಯವು ರೈತ ಹೋರಾಟದ ಆರಂಭದಿಂದಲೂ, ಪ್ರತಿ ಹಂತದಲ್ಲಿಯೂ ಕೇಳಿಬಂದಿದೆ. ಕೃಷಿ ಕಾಯ್ದೆಗಳು ರದ್ದಾಗಬೇಕು ಮತ್ತು ಎಂಎಸ್‌ಪಿ ಖಾತ್ರಿಯಾಗಬೇಕು ಎಂಬುದು ರೈತ ಹೋರಾಟದ ಘೋಷಣೆಯಾಗಿದೆ. ಕೇಂದ್ರ ಸರ್ಕಾರದೊಂದಿಗೆ ರೈತರ ಮೊದಲ ಮಾತುಕತೆಯಲ್ಲಿ ಕೊಟ್ಟ ಹಕ್ಕೊತ್ತಾಯ ಪತ್ರದಲ್ಲಿಯೂ ಇದು ಸೇರಿದೆ. ಕಿಸಾನ್ ಸಂಸತ್ತು ಹೋರಾಟದಲ್ಲಿಯೂ ಚರ್ಚೆಯಾಗಿದೆ.

2ನೇ ಸುಳ್ಳು: ಎಂಎಸ್‌ಪಿ ಈಗಾಗಲೇ ಜಾರಿಯಲ್ಲಿದೆ? ಅದಕ್ಕೆ ಕಾನೂನಿನ ಮಾನ್ಯತೆಯೇಕೆ?

ವಾಸ್ತವ: ಎಂಎಸ್‌ಪಿ ಎಂಬುದು ಕೇವಲ ಕಾಗದದ ಮೇಲಿದೆ. ಇದನ್ನು ಸರ್ಕಾರದ ಅಂಕಿ ಅಂಶಗಳೆ ಹೇಳುತ್ತವೆ. ದೇಶದ ಶೇ.6% ರೈತರು ಮಾತ್ರ ಎಂಎಸ್‌ಪಿಯ ಪ್ರಯೋಜನ ಪಡೆಯುತ್ತಿದ್ದಾರೆ.

3ನೇ ಸುಳ್ಳು: ಎಂಎಸ್‌ಪಿ ಕಾನೂನು ಖಾತ್ರಿ ಮಾಡಿದರೆ ಅತಿ ಹೆಚ್ಚು ನೀರಾವರಿ ಬೇಡುವ ಬೆಳೆಯಾದ ಭತ್ತದ ಅತೀ ಉತ್ಪಾದನೆಯಾಗುತ್ತದೆ ಮತ್ತು ಅಗತ್ಯ ವೈವಿಧ್ಯಮಯ ಬೆಳೆಗಳು ವಿಳಂಬವಾಗುತ್ತವೆ.

ವಾಸ್ತವ: ಭತ್ತದ ಮೇಲಿನ ರೈತರ ಅತಿಯಾದ ಅವಲಂಬನೆಗೆ ಎಂಎಸ್‌ಪಿ ಕೊಡುತ್ತಿರುವುದು ಕಾರಣವಲ್ಲ. ಅಸಮರ್ಪಕ ಖರೀದಿ ಪ್ರಕ್ರಿಯೆ ಅದಕ್ಕೆ ಕಾರಣ. ಇದಕ್ಕೆ ಎಂಎಸ್‌ಪಿ ಹಿಂತೆಗೆದುಕೊಳ್ಳುವುದು ಪರಿಹಾರವಲ್ಲ. ಬದಲಿಗೆ ಕಡಲೇ ಕಾಳು, ಮೆಕ್ಕೆ ಜೋಳ, ಗೋವಿನ ಜೋಳ, ವಿವಿಧ ಬೇಳೆ ಕಾಳುಗಳಿಗೆ ಎಂಎಸ್‌ಪಿ ದೊರೆಯುತ್ತದೆ ಎಂದು ರೈತರಿಗೆ ಖಾತರಿ ನೀಡುವುದು ಸೂಕ್ತ ಪರಿಹಾರವಾಗಿದೆ.

4ನೇ ಸುಳ್ಳು: ಬೆಳೆಗಳಿಗೆ ಎಂಎಸ್‌ಪಿ ನೀಡಿದರೆ ಮಾರುಕಟ್ಟೆ ಬಿದ್ದುಹೋಗುತ್ತದೆ, ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಆತಂಕವಿದೆ.

ವಾಸ್ತವ: ವಾಸ್ತವವೆಂದರೆ ಸಾಮಾಜಿಕ ಉದ್ದೇಶಗಳನ್ನು ಪೂರೈಸಲು ಮುಕ್ತ ಮಾರುಕಟ್ಟೆಯನ್ನು ಪ್ರಪಂಚದಾದ್ಯಂತ ನಿಯಂತ್ರಿಸಲ್ಪಡಬೇಕು.  ಬೆಲೆ ಖಾತ್ರಿಯೂ ಕೆಟ್ಟದಾದರೆ ಈಗಾಗಲೇ ಎಂಎಸ್‌ಪಿ ಏಕೆ ಘೋಷಿಸಲಾಗಿದೆ?
ಆಹಾರದ ಬೆಲೆ ಏರಿಕೆಯನ್ನು ನಿಯಂತ್ರಿಸುವ ಮಾರ್ಗವೆಂದರೆ ಬಡವರಿಗೆ ಸಬ್ಸಿಡಿ ದರದಲ್ಲಿ ಆಹಾರದ ನೀಡುವುದೇ ಹೊರತು, ರೈತರಿಗೆ ನ್ಯಾಯಯುತ ಬೆಲೆಗಳನ್ನು ನಿರಾಕರಿಸುವುದು ಅಲ್ಲ.

5ನೇ ಸುಳ್ಳು: ಎಂಎಸ್‌ಪಿ ಎಂಬುದು ಒಳ್ಳೆಯ ಕಲ್ಪನೆ: ಆದರೆ ಪ್ರಾಯೋಗಿಕವಾಗಿ ಸಾಧ್ಯವಿಲ್ಲ

ವಾಸ್ತವ: ಎಲ್ಲಾ ರೈತರಿಗೆ ಎಂಎಸ್‌ಪಿ ಖಾತ್ರಿಗೊಳಿಸಲು ಹಲವಾರು ವಿಧಾನಗಳಿವೆ. ಮೊದಲನೇಯದಾಗಿ ಸರ್ಕಾರವು ಈಗ ಖರೀದಿಸುತ್ತಿರುವುದಕ್ಕಿಂತ ಹೆಚ್ಚು ಖರೀದಿಸಬೇಕು. ಮುಖ್ಯವಾಗಿ ಬೇಳೆಕಾಳುಗಳು, ಧಾನ್ಯಗಳು ಮತ್ತು ಎಣ್ಣೆಕಾಳುಗಳನ್ನು ಖರೀದಿಸಿದರೆ ಸಾಕು ಉಳಿದವುಗಳನ್ನು ಖರೀದಿಸಬೇಕಾಗಿಲ್ಲ. ಬದಲಿಗೆ ಎಂಎಸ್‌ಪಿ ಮತ್ತು ಮಾರುಕಟ್ಟೆ ಬೆಲೆಯ ನಡುವಿನ ಕೊರತೆಯನ್ನು ಸರ್ಕಾರ ತುಂಬಿಕೊಟ್ಟರೆ ಸಾಕು.

ಸರ್ಕಾರವು ಅಗತ್ಯಬಿದ್ದಾಗ ಮಾರುಕಟ್ಟೆಯಲ್ಲಿ ಹಸ್ತಕ್ಷೇಪವನ್ನು ಮಾಡಬಹುದು ಅಥವಾ ಬೆಲೆಗಳು ಕುಸಿಯದಂತೆ ತಡೆಯಲು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಕ್ಷಣಾ ನೀತಿಗಳನ್ನು ಬಳಸಬಹುದು. ಮತ್ತ, ಕೊನೆಯದಾಗಿ MSP ಗಿಂತ ಕಡಿಮೆ ದರದಲ್ಲಿ ಕೊಳ್ಳುವುದನ್ನು ನಿಯಂತ್ರಿಸಲು ಸರ್ಕಾರವು ದಂಡನಾತ್ಮಕ ಕ್ರಮಗಳನ್ನು ಬಳಸಬಹುದು.

6ನೇ ಹಣಕಾಸಿನ ಸುಳ್ಳು: ಭಾರತ ದಿವಾಳುತ್ತದೆ!

ವಾಸ್ತವ: 2017-18 ರ ನಮ್ಮ ಲೆಕ್ಕಾಚಾರದ ಪ್ರಕಾರ ಕೃಷಿ ಮೇಲಿನ ಒಟ್ಟಾರೆ ವೆಚ್ಚವು 47,764 ಕೋಟಿ ರೂಪಾಯಿ ಎಂದು ತೋರಿಸಿದೆ (ಆ ವರ್ಷದ ಕೇಂದ್ರ ಬಜೆಟ್‌ನ ಕೇವಲ ಶೇ.1.6 ಮತ್ತು ಜಿಡಿಪಿಯ ಶೇಕಡಾ 0.3 ಕ್ಕಿಂತ ಕಡಿಮೆ). ಸ್ವಾಮಿನಾಥನ್ ಆಯೋಗವು ಶಿಫಾರಸು ಮಾಡಿದ ಮಟ್ಟಕ್ಕೆ ಎಂಎಸ್‌ಪಿಯನ್ನು ಏರಿಸಿದರೆ, ಅದಕ್ಕೆ ಇನ್ನೂ 2.28 ಲಕ್ಷ ಕೋಟಿ ರೂ. (ಬಜೆಟ್‌ನ ಸುಮಾರು ಶೇ.7.8 ಮತ್ತು ಜಿಡಿಪಿಯ ಶೇಕಡಾ 1.2) ವೆಚ್ಚವಾಗುತ್ತದೆ.

ಭಾರತವು ತನ್ನ ಜನಸಂಖ್ಯೆಯ ಸುಮಾರು ಮೂರನೇ ಎರಡರಷ್ಟು ಜನರ ಕಲ್ಯಾಣಕ್ಕಾಗಿ ಇದನ್ನು ಭರಿಸಬಹುದೇ? ಅದು ದೇಶ ಎದುರಿಸಬೇಕಾದ ನಿಜವಾದ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...