HomeಮುಖಪುಟMSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

MSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

- Advertisement -
- Advertisement -

ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ತನ್ನ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಂಡಿದೆ. ಆದರೆ ಎಂಎಸ್‌ಪಿ (MSP) ಖಾತ್ರಿಗೆ ಕಾನೂನು ಜಾರಿ ಮಾಡಬೇಕೆಂದು ರೈತರು ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ. ಈ ಸಂದರ್ಭದಲ್ಲಿ ಎಂಎಸ್‌ಪಿ ಸಾದ್ಯವಿಲ್ಲ, ಈಗಾಗಲೇ ಜಾರಿಯಲ್ಲಿದೆ ಎಂದು ಬಿಜೆಪಿ ನಾಯಕರು ಸೇರಿದಂತೆ ಹಲವರು ಅಪಪ್ರಚಾರದಲ್ಲಿ ನಿರತರಾಗಿದ್ದಾರೆ. ಅವೆಲ್ಲ ಸುಳ್ಳು ಎಂದು ಸ್ವರಾಜ್ ಇಂಡಿಯಾ ಅಧ್ಯಕ್ಷ ಮತ್ತು ಹಿರಿಯ ರೈತ ಮುಖಂಡರಾದ ಯೋಗೇಂದ್ರ ಯಾದವ್ ಬಯಲು ಮಾಡಿದ್ದಾರೆ. ಅವರು ಟ್ವಿಟರ್‌ನಲ್ಲಿ ಹಂಚಿಕೊಂಡ ಮಾಹಿತಿಯ ಕನ್ನಡ ಅನುವಾದ ಇಲ್ಲಿದೆ.

1ನೇ ಸುಳ್ಳು: ರೈತರು ತಮ್ಮ ಹಕ್ಕೊತ್ತಾಯವನ್ನು ಬದಲಾಯಿಸಿದ್ದಾರೆ

ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಡುತ್ತಿದ್ದರು. ಸರ್ಕಾರ ಅವನ್ನು ಹಿಂಪಡೆದುಕೊಂಡಿದೆ. ಆದರೆ ರೈತರು ಈಗ ತಮ್ಮ ಹಕ್ಕೊತ್ತಾಯ ಬದಲಿಗೆ ಎಂಎಸ್‌ಪಿಗೆ ಕಾನೂನು ಗ್ಯಾರಂಟಿ ಕೇಳುತ್ತಿದ್ದಾರೆ.

ವಾಸ್ತವ: ಎಂಎಸ್‌ಪಿಗಾಗಿನ ಹಕ್ಕೊತ್ತಾಯವು ರೈತ ಹೋರಾಟದ ಆರಂಭದಿಂದಲೂ, ಪ್ರತಿ ಹಂತದಲ್ಲಿಯೂ ಕೇಳಿಬಂದಿದೆ. ಕೃಷಿ ಕಾಯ್ದೆಗಳು ರದ್ದಾಗಬೇಕು ಮತ್ತು ಎಂಎಸ್‌ಪಿ ಖಾತ್ರಿಯಾಗಬೇಕು ಎಂಬುದು ರೈತ ಹೋರಾಟದ ಘೋಷಣೆಯಾಗಿದೆ. ಕೇಂದ್ರ ಸರ್ಕಾರದೊಂದಿಗೆ ರೈತರ ಮೊದಲ ಮಾತುಕತೆಯಲ್ಲಿ ಕೊಟ್ಟ ಹಕ್ಕೊತ್ತಾಯ ಪತ್ರದಲ್ಲಿಯೂ ಇದು ಸೇರಿದೆ. ಕಿಸಾನ್ ಸಂಸತ್ತು ಹೋರಾಟದಲ್ಲಿಯೂ ಚರ್ಚೆಯಾಗಿದೆ.

2ನೇ ಸುಳ್ಳು: ಎಂಎಸ್‌ಪಿ ಈಗಾಗಲೇ ಜಾರಿಯಲ್ಲಿದೆ? ಅದಕ್ಕೆ ಕಾನೂನಿನ ಮಾನ್ಯತೆಯೇಕೆ?

ವಾಸ್ತವ: ಎಂಎಸ್‌ಪಿ ಎಂಬುದು ಕೇವಲ ಕಾಗದದ ಮೇಲಿದೆ. ಇದನ್ನು ಸರ್ಕಾರದ ಅಂಕಿ ಅಂಶಗಳೆ ಹೇಳುತ್ತವೆ. ದೇಶದ ಶೇ.6% ರೈತರು ಮಾತ್ರ ಎಂಎಸ್‌ಪಿಯ ಪ್ರಯೋಜನ ಪಡೆಯುತ್ತಿದ್ದಾರೆ.

3ನೇ ಸುಳ್ಳು: ಎಂಎಸ್‌ಪಿ ಕಾನೂನು ಖಾತ್ರಿ ಮಾಡಿದರೆ ಅತಿ ಹೆಚ್ಚು ನೀರಾವರಿ ಬೇಡುವ ಬೆಳೆಯಾದ ಭತ್ತದ ಅತೀ ಉತ್ಪಾದನೆಯಾಗುತ್ತದೆ ಮತ್ತು ಅಗತ್ಯ ವೈವಿಧ್ಯಮಯ ಬೆಳೆಗಳು ವಿಳಂಬವಾಗುತ್ತವೆ.

ವಾಸ್ತವ: ಭತ್ತದ ಮೇಲಿನ ರೈತರ ಅತಿಯಾದ ಅವಲಂಬನೆಗೆ ಎಂಎಸ್‌ಪಿ ಕೊಡುತ್ತಿರುವುದು ಕಾರಣವಲ್ಲ. ಅಸಮರ್ಪಕ ಖರೀದಿ ಪ್ರಕ್ರಿಯೆ ಅದಕ್ಕೆ ಕಾರಣ. ಇದಕ್ಕೆ ಎಂಎಸ್‌ಪಿ ಹಿಂತೆಗೆದುಕೊಳ್ಳುವುದು ಪರಿಹಾರವಲ್ಲ. ಬದಲಿಗೆ ಕಡಲೇ ಕಾಳು, ಮೆಕ್ಕೆ ಜೋಳ, ಗೋವಿನ ಜೋಳ, ವಿವಿಧ ಬೇಳೆ ಕಾಳುಗಳಿಗೆ ಎಂಎಸ್‌ಪಿ ದೊರೆಯುತ್ತದೆ ಎಂದು ರೈತರಿಗೆ ಖಾತರಿ ನೀಡುವುದು ಸೂಕ್ತ ಪರಿಹಾರವಾಗಿದೆ.

4ನೇ ಸುಳ್ಳು: ಬೆಳೆಗಳಿಗೆ ಎಂಎಸ್‌ಪಿ ನೀಡಿದರೆ ಮಾರುಕಟ್ಟೆ ಬಿದ್ದುಹೋಗುತ್ತದೆ, ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಆತಂಕವಿದೆ.

ವಾಸ್ತವ: ವಾಸ್ತವವೆಂದರೆ ಸಾಮಾಜಿಕ ಉದ್ದೇಶಗಳನ್ನು ಪೂರೈಸಲು ಮುಕ್ತ ಮಾರುಕಟ್ಟೆಯನ್ನು ಪ್ರಪಂಚದಾದ್ಯಂತ ನಿಯಂತ್ರಿಸಲ್ಪಡಬೇಕು.  ಬೆಲೆ ಖಾತ್ರಿಯೂ ಕೆಟ್ಟದಾದರೆ ಈಗಾಗಲೇ ಎಂಎಸ್‌ಪಿ ಏಕೆ ಘೋಷಿಸಲಾಗಿದೆ?
ಆಹಾರದ ಬೆಲೆ ಏರಿಕೆಯನ್ನು ನಿಯಂತ್ರಿಸುವ ಮಾರ್ಗವೆಂದರೆ ಬಡವರಿಗೆ ಸಬ್ಸಿಡಿ ದರದಲ್ಲಿ ಆಹಾರದ ನೀಡುವುದೇ ಹೊರತು, ರೈತರಿಗೆ ನ್ಯಾಯಯುತ ಬೆಲೆಗಳನ್ನು ನಿರಾಕರಿಸುವುದು ಅಲ್ಲ.

5ನೇ ಸುಳ್ಳು: ಎಂಎಸ್‌ಪಿ ಎಂಬುದು ಒಳ್ಳೆಯ ಕಲ್ಪನೆ: ಆದರೆ ಪ್ರಾಯೋಗಿಕವಾಗಿ ಸಾಧ್ಯವಿಲ್ಲ

ವಾಸ್ತವ: ಎಲ್ಲಾ ರೈತರಿಗೆ ಎಂಎಸ್‌ಪಿ ಖಾತ್ರಿಗೊಳಿಸಲು ಹಲವಾರು ವಿಧಾನಗಳಿವೆ. ಮೊದಲನೇಯದಾಗಿ ಸರ್ಕಾರವು ಈಗ ಖರೀದಿಸುತ್ತಿರುವುದಕ್ಕಿಂತ ಹೆಚ್ಚು ಖರೀದಿಸಬೇಕು. ಮುಖ್ಯವಾಗಿ ಬೇಳೆಕಾಳುಗಳು, ಧಾನ್ಯಗಳು ಮತ್ತು ಎಣ್ಣೆಕಾಳುಗಳನ್ನು ಖರೀದಿಸಿದರೆ ಸಾಕು ಉಳಿದವುಗಳನ್ನು ಖರೀದಿಸಬೇಕಾಗಿಲ್ಲ. ಬದಲಿಗೆ ಎಂಎಸ್‌ಪಿ ಮತ್ತು ಮಾರುಕಟ್ಟೆ ಬೆಲೆಯ ನಡುವಿನ ಕೊರತೆಯನ್ನು ಸರ್ಕಾರ ತುಂಬಿಕೊಟ್ಟರೆ ಸಾಕು.

ಸರ್ಕಾರವು ಅಗತ್ಯಬಿದ್ದಾಗ ಮಾರುಕಟ್ಟೆಯಲ್ಲಿ ಹಸ್ತಕ್ಷೇಪವನ್ನು ಮಾಡಬಹುದು ಅಥವಾ ಬೆಲೆಗಳು ಕುಸಿಯದಂತೆ ತಡೆಯಲು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಕ್ಷಣಾ ನೀತಿಗಳನ್ನು ಬಳಸಬಹುದು. ಮತ್ತ, ಕೊನೆಯದಾಗಿ MSP ಗಿಂತ ಕಡಿಮೆ ದರದಲ್ಲಿ ಕೊಳ್ಳುವುದನ್ನು ನಿಯಂತ್ರಿಸಲು ಸರ್ಕಾರವು ದಂಡನಾತ್ಮಕ ಕ್ರಮಗಳನ್ನು ಬಳಸಬಹುದು.

6ನೇ ಹಣಕಾಸಿನ ಸುಳ್ಳು: ಭಾರತ ದಿವಾಳುತ್ತದೆ!

ವಾಸ್ತವ: 2017-18 ರ ನಮ್ಮ ಲೆಕ್ಕಾಚಾರದ ಪ್ರಕಾರ ಕೃಷಿ ಮೇಲಿನ ಒಟ್ಟಾರೆ ವೆಚ್ಚವು 47,764 ಕೋಟಿ ರೂಪಾಯಿ ಎಂದು ತೋರಿಸಿದೆ (ಆ ವರ್ಷದ ಕೇಂದ್ರ ಬಜೆಟ್‌ನ ಕೇವಲ ಶೇ.1.6 ಮತ್ತು ಜಿಡಿಪಿಯ ಶೇಕಡಾ 0.3 ಕ್ಕಿಂತ ಕಡಿಮೆ). ಸ್ವಾಮಿನಾಥನ್ ಆಯೋಗವು ಶಿಫಾರಸು ಮಾಡಿದ ಮಟ್ಟಕ್ಕೆ ಎಂಎಸ್‌ಪಿಯನ್ನು ಏರಿಸಿದರೆ, ಅದಕ್ಕೆ ಇನ್ನೂ 2.28 ಲಕ್ಷ ಕೋಟಿ ರೂ. (ಬಜೆಟ್‌ನ ಸುಮಾರು ಶೇ.7.8 ಮತ್ತು ಜಿಡಿಪಿಯ ಶೇಕಡಾ 1.2) ವೆಚ್ಚವಾಗುತ್ತದೆ.

ಭಾರತವು ತನ್ನ ಜನಸಂಖ್ಯೆಯ ಸುಮಾರು ಮೂರನೇ ಎರಡರಷ್ಟು ಜನರ ಕಲ್ಯಾಣಕ್ಕಾಗಿ ಇದನ್ನು ಭರಿಸಬಹುದೇ? ಅದು ದೇಶ ಎದುರಿಸಬೇಕಾದ ನಿಜವಾದ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...