Homeಅಂತರಾಷ್ಟ್ರೀಯಸತ್ತು ಹೋದ ಮಾನವೀಯತೆ: ಗಾಝಾದಲ್ಲಿ ಹಸಿವು, ಅಪೌಷ್ಠಿಕತೆಗೆ ಮತ್ತೆ 6 ಬಲಿ

ಸತ್ತು ಹೋದ ಮಾನವೀಯತೆ: ಗಾಝಾದಲ್ಲಿ ಹಸಿವು, ಅಪೌಷ್ಠಿಕತೆಗೆ ಮತ್ತೆ 6 ಬಲಿ

- Advertisement -
- Advertisement -

ಇಸ್ರೇಲ್ ವಿಧಿಸಿದ ದಿಗ್ಭಂಧನದಿಂದ ಆಹಾರ, ನೀರು ಗಾಝಾದಲ್ಲಿ ಮತ್ತೆ 6 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಹಸಿವು, ಅಪೌಷ್ಠಿಕತೆಯಿಂದ ಸಾವಿಗೀಡಾದವರ ಸಂಖ್ಯೆ 173ಕ್ಕೆ ಏರಿಕೆಯಾಗಿದೆ.

ಆಹಾರ ವಸ್ತುಗಳು ಸೇರಿದಂತೆ ಅಗತ್ಯ ಸಾಮಾಗ್ರಿಗಳು ಗಾಝಾ ತಲುಪದಂತೆ ಮಾರ್ಚ್ 2ರಿಂದ ಇಸ್ರೇಲ್ ದಿಗ್ಬಂಧನ ವಿಧಿಸಿದೆ. ಹಾಗಾಗಿ, ಯಾವುದೇ ನೆರವು ಟ್ರಕ್‌ಗಳು ಯುದ್ಧ ಪೀಡಿತ ಭೂಮಿಗೆ ಹೋಗುತ್ತಿಲ್ಲ. ಇದರಿಂದ ಗಾಝಾದ ಜನರ ಪರಿಸ್ಥಿತಿ ಇನ್ನಷ್ಟು ಶೋಚಣೀಯವಾಗಿದೆ.

ಈ 21ನೇ ಶತಮಾನದಲ್ಲಿ, ಮನುಷ್ಯರು ಚಂದ್ರನ ಮೇಲೆ ಹೋಗಿ ಬಂದಿರುವ ಕಾಲದಲ್ಲಿ, ನಮ್ಮ ಜೊತೆಯೇ ಈ ಭೂಮಿ ಮೇಲೆ ಬದುಕುತ್ತಿರುವ ಒಂದು ಪ್ರದೇಶದ ಜನರು ಆಹಾರ ಸಿಗದೆ ಸಾಯುತ್ತಿರುವುದು ಅಥವಾ ಆಹಾರ ಸಿಗದಂತೆ ಮಾಡಿ ಸಾಯಿಸುತ್ತಿರುವುದು ಸತ್ತು ಹೋಗಿರುವ ಮಾನವೀಯತೆಗೆ ಒಂದು ನಿದರ್ಶನವಾಗಿದೆ.

ಆಹಾರ ಸಿಗದೆ ಸಾಯುತ್ತಿರುವವರ ಕಥೆ ಒಂದೆಡೆಯಾದರೆ, ಸಿಗುತ್ತಿರುವ ಅಲ್ಪ ಸ್ವಲ್ಪ ಆಹಾರವನ್ನು ಪಡೆಯಲು ಹೋದವರು ವಾಪಸ್ ಬರುತ್ತಾರೆ ಎಂಬ ಧೈರ್ಯ ಗಾಝಾದ ಜನತೆಗೆ ಇಲ್ಲ. ಏಕೆಂದರೆ, ಆಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತವನ್ನು ಗುರಿಯಾಗಿಸಿ ಇಸ್ರೇಲ್ ಗುಂಡಿಕ್ಕುತ್ತಿದೆ. ಹಾಗಾಗಿ, ಆಹಾರ ಬದಲು ಅನೇಕರ ಹೆಣಗಳು ವಾಪಸ್ ತಾತ್ಕಾಲಿಕ ಟೆಂಟ್‌ಗಳಾದ ಮನೆಗಳಿಗೆ ಬಂದಿವೆ.

ಅಮೆರಿಕ ಮತ್ತು ಇಸ್ರೇಲ್ ಬೆಂಬಲಿತ ಜಿಹೆಚ್‌ಎಫ್ ಗುಂಪು ಕಳೆದ ಮೇ ತಿಂಗಳಿನಿಂದ ಗಾಝಾದಲ್ಲಿ ಆಹಾರ ವಿತರಣೆ ನಡೆಸುತ್ತಿದೆ. ಇವರನ್ನು ಬಿಟ್ಟು ಬೇರೆಯವರಿಗೆ ಅವಕಾಶ ಇಲ್ಲ ಎಂಬ ವರದಿಗಳಿವೆ. ಈ ಜಿಹೆಚ್‌ಎಫ್‌ನ ನಾಲ್ಕು ಆಹಾರ ವಿತರಣಾ ಕೇಂದ್ರಗಳಲ್ಲಿ ಆಹಾರ ಪಡೆಯಲು ನಿಂತ 1,400 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಪಡೆ ಗುಂಡಿಕ್ಕಿ ಕೊಂದಿದೆ. ಹಾಗಾಗಿ, ಆಹಾರ ವಿತರಣೆಯ ನೆಪದಲ್ಲಿ ಜನರನ್ನು ಕೊಲ್ಲಲೆಂದೇ ಅಮೆರಿಕ-ಇಸ್ರೇಲ್ ಜಿಹೆಚ್‌ಎಫ್ ಆಹಾರ ವಿತರಣಾ ಕೇಂದ್ರಗಳನ್ನು ತೆರೆದಂತೆ ತೋರುತ್ತಿದೆ.

ಮಾನವೀಯ ನೆರವು ವಿತರಣೆಯ ಮೇಲಿನ ಇಸ್ರೇಲ್ ನಿರ್ಬಂಧಗಳು ಇತ್ತೀಚಿನ ದಿನಗಳಲ್ಲಿ ಭಾಗಶಃ ತೆಗೆದುಹಾಕಲಾಗಿದ್ದರೂ, ಪ್ಯಾಲೆಸ್ತೀನಿಯರು ಹಸಿವಿನಿಂದ ಬಳಲುತ್ತಿದ್ದಾರೆ. ಅವರ ಕುಟುಂಬಗಳನ್ನು ಪೋಷಿಸಲು ಸಾಕಷ್ಟು ಆಹಾರವನ್ನು ಹುಡುಕಲು ಹೆಣಗಾಡುತ್ತಿದ್ದಾರೆ ಎಂದು ವಿಶ್ವಸಂಸ್ಥೆ ಮತ್ತು ಇತರ ಮಾನವೀಯ ಸಂಸ್ಥೆಗಳ ಅಧಿಕಾರಿಗಳು ಹೇಳುತ್ತಾರೆ.

ಆಹಾರ ಸಿಗದಂತೆ ಮಾಡಿರುವ ಇಸ್ರೇಲ್‌ನ ಅಮಾನವೀಯ ನಡೆಗೆ ವಿಶ್ವದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಸ್ವತಃ ಇಸ್ರೇಲ್ ವಿಮಾನದ ಮೂಲಕ ಗಾಝಾದ ಜನತೆಗೆ ಆಹಾರ ವಿತರಣೆ ಮಾಡಿದೆ ಎಂದು ವರದಿಯಾಗಿದೆ. ಆದರೆ, ಮಾನವೀಯ ಗುಂಪುಗಳು ವಿಮಾನದಿಂದ ಅಗತ್ಯ ವಸ್ತುಗಳನ್ನು ಎಸೆಯುವುದನ್ನು ವಿರೋಧಿಸಿದೆ. ಎಲ್ಲಾ ಗಡಿಗಳನ್ನು ತೆರೆದು ಗಾಝಾಗೆ ಅಗತ್ಯ ಸಾಮಾಗ್ರಿಗಳು ತಲುಪುವಂತೆ ಮಾಡಬೇಕು ಎಂದು ಆಗ್ರಹಿಸಿವೆ.

ಮಾನವ ಹಕ್ಕುಗಳ ಗುಂಪುಗಳು ಮತ್ತು ವಿಶ್ವಸಂಸ್ಥೆಯ ಅಧಿಕಾರಿಗಳು ಇಸ್ರೇಲ್ ಹಸಿವನ್ನು ಯುದ್ಧದ ಅಸ್ತ್ರವಾಗಿ ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಳೆದ 24 ಗಂಟೆಯಲ್ಲಿ ಗಾಝಾದಾದ್ಯಂತ ಇಸ್ರೇಲಿ ಪಡೆಗಳು ಕನಿಷ್ಠ 22 ಜನರನ್ನು ಹತ್ಯೆಗೈದಿವೆ. ಇದರಲ್ಲಿ 16 ಮಂದಿ ನೆರವು ಪಡೆಯಲು ನಿಂತವರು ಎಂದು ವೈದ್ಯಕೀಯ ಮೂಲಗಳನ್ನು ಉಲ್ಲೇಖಿಸಿ ಅಲ್ ಜಝೀರಾ ವರದಿ ಮಾಡಿದೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್ ಗಾಝಾ ಮೇಲೆ ನಡೆಸಿದ ದಾಳಿಯಿಂದ ಇದುವರೆಗೆ ಕನಿಷ್ಠ 60,430 ಜನರು ಸಾವನ್ನಪ್ಪಿದ್ದಾರೆ ಮತ್ತು 148,722 ಜನರು ಗಾಯಗೊಂಡಿದ್ದಾರೆ. ಇದುವರೆಗೆ 93 ಮಕ್ಕಳು ಸೇರಿದಂತೆ 175 ಜನರು ಹಸಿವು, ಅಪೌಷ್ಠಿಕತೆಯಿಂದ ಸಾವಿಗೀಡಾಗಿದ್ದಾರೆ.

ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಿದೆ ಎಂದು ತನಗೆ ತಿಳಿದುಬಂದಿದೆ: ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...