Homeಅಂತರಾಷ್ಟ್ರೀಯಸತ್ತು ಹೋದ ಮಾನವೀಯತೆ: ಗಾಝಾದಲ್ಲಿ ಹಸಿವು, ಅಪೌಷ್ಠಿಕತೆಗೆ ಮತ್ತೆ 6 ಬಲಿ

ಸತ್ತು ಹೋದ ಮಾನವೀಯತೆ: ಗಾಝಾದಲ್ಲಿ ಹಸಿವು, ಅಪೌಷ್ಠಿಕತೆಗೆ ಮತ್ತೆ 6 ಬಲಿ

- Advertisement -
- Advertisement -

ಇಸ್ರೇಲ್ ವಿಧಿಸಿದ ದಿಗ್ಭಂಧನದಿಂದ ಆಹಾರ, ನೀರು ಗಾಝಾದಲ್ಲಿ ಮತ್ತೆ 6 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಹಸಿವು, ಅಪೌಷ್ಠಿಕತೆಯಿಂದ ಸಾವಿಗೀಡಾದವರ ಸಂಖ್ಯೆ 173ಕ್ಕೆ ಏರಿಕೆಯಾಗಿದೆ.

ಆಹಾರ ವಸ್ತುಗಳು ಸೇರಿದಂತೆ ಅಗತ್ಯ ಸಾಮಾಗ್ರಿಗಳು ಗಾಝಾ ತಲುಪದಂತೆ ಮಾರ್ಚ್ 2ರಿಂದ ಇಸ್ರೇಲ್ ದಿಗ್ಬಂಧನ ವಿಧಿಸಿದೆ. ಹಾಗಾಗಿ, ಯಾವುದೇ ನೆರವು ಟ್ರಕ್‌ಗಳು ಯುದ್ಧ ಪೀಡಿತ ಭೂಮಿಗೆ ಹೋಗುತ್ತಿಲ್ಲ. ಇದರಿಂದ ಗಾಝಾದ ಜನರ ಪರಿಸ್ಥಿತಿ ಇನ್ನಷ್ಟು ಶೋಚಣೀಯವಾಗಿದೆ.

ಈ 21ನೇ ಶತಮಾನದಲ್ಲಿ, ಮನುಷ್ಯರು ಚಂದ್ರನ ಮೇಲೆ ಹೋಗಿ ಬಂದಿರುವ ಕಾಲದಲ್ಲಿ, ನಮ್ಮ ಜೊತೆಯೇ ಈ ಭೂಮಿ ಮೇಲೆ ಬದುಕುತ್ತಿರುವ ಒಂದು ಪ್ರದೇಶದ ಜನರು ಆಹಾರ ಸಿಗದೆ ಸಾಯುತ್ತಿರುವುದು ಅಥವಾ ಆಹಾರ ಸಿಗದಂತೆ ಮಾಡಿ ಸಾಯಿಸುತ್ತಿರುವುದು ಸತ್ತು ಹೋಗಿರುವ ಮಾನವೀಯತೆಗೆ ಒಂದು ನಿದರ್ಶನವಾಗಿದೆ.

ಆಹಾರ ಸಿಗದೆ ಸಾಯುತ್ತಿರುವವರ ಕಥೆ ಒಂದೆಡೆಯಾದರೆ, ಸಿಗುತ್ತಿರುವ ಅಲ್ಪ ಸ್ವಲ್ಪ ಆಹಾರವನ್ನು ಪಡೆಯಲು ಹೋದವರು ವಾಪಸ್ ಬರುತ್ತಾರೆ ಎಂಬ ಧೈರ್ಯ ಗಾಝಾದ ಜನತೆಗೆ ಇಲ್ಲ. ಏಕೆಂದರೆ, ಆಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತವನ್ನು ಗುರಿಯಾಗಿಸಿ ಇಸ್ರೇಲ್ ಗುಂಡಿಕ್ಕುತ್ತಿದೆ. ಹಾಗಾಗಿ, ಆಹಾರ ಬದಲು ಅನೇಕರ ಹೆಣಗಳು ವಾಪಸ್ ತಾತ್ಕಾಲಿಕ ಟೆಂಟ್‌ಗಳಾದ ಮನೆಗಳಿಗೆ ಬಂದಿವೆ.

ಅಮೆರಿಕ ಮತ್ತು ಇಸ್ರೇಲ್ ಬೆಂಬಲಿತ ಜಿಹೆಚ್‌ಎಫ್ ಗುಂಪು ಕಳೆದ ಮೇ ತಿಂಗಳಿನಿಂದ ಗಾಝಾದಲ್ಲಿ ಆಹಾರ ವಿತರಣೆ ನಡೆಸುತ್ತಿದೆ. ಇವರನ್ನು ಬಿಟ್ಟು ಬೇರೆಯವರಿಗೆ ಅವಕಾಶ ಇಲ್ಲ ಎಂಬ ವರದಿಗಳಿವೆ. ಈ ಜಿಹೆಚ್‌ಎಫ್‌ನ ನಾಲ್ಕು ಆಹಾರ ವಿತರಣಾ ಕೇಂದ್ರಗಳಲ್ಲಿ ಆಹಾರ ಪಡೆಯಲು ನಿಂತ 1,400 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಪಡೆ ಗುಂಡಿಕ್ಕಿ ಕೊಂದಿದೆ. ಹಾಗಾಗಿ, ಆಹಾರ ವಿತರಣೆಯ ನೆಪದಲ್ಲಿ ಜನರನ್ನು ಕೊಲ್ಲಲೆಂದೇ ಅಮೆರಿಕ-ಇಸ್ರೇಲ್ ಜಿಹೆಚ್‌ಎಫ್ ಆಹಾರ ವಿತರಣಾ ಕೇಂದ್ರಗಳನ್ನು ತೆರೆದಂತೆ ತೋರುತ್ತಿದೆ.

ಮಾನವೀಯ ನೆರವು ವಿತರಣೆಯ ಮೇಲಿನ ಇಸ್ರೇಲ್ ನಿರ್ಬಂಧಗಳು ಇತ್ತೀಚಿನ ದಿನಗಳಲ್ಲಿ ಭಾಗಶಃ ತೆಗೆದುಹಾಕಲಾಗಿದ್ದರೂ, ಪ್ಯಾಲೆಸ್ತೀನಿಯರು ಹಸಿವಿನಿಂದ ಬಳಲುತ್ತಿದ್ದಾರೆ. ಅವರ ಕುಟುಂಬಗಳನ್ನು ಪೋಷಿಸಲು ಸಾಕಷ್ಟು ಆಹಾರವನ್ನು ಹುಡುಕಲು ಹೆಣಗಾಡುತ್ತಿದ್ದಾರೆ ಎಂದು ವಿಶ್ವಸಂಸ್ಥೆ ಮತ್ತು ಇತರ ಮಾನವೀಯ ಸಂಸ್ಥೆಗಳ ಅಧಿಕಾರಿಗಳು ಹೇಳುತ್ತಾರೆ.

ಆಹಾರ ಸಿಗದಂತೆ ಮಾಡಿರುವ ಇಸ್ರೇಲ್‌ನ ಅಮಾನವೀಯ ನಡೆಗೆ ವಿಶ್ವದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಸ್ವತಃ ಇಸ್ರೇಲ್ ವಿಮಾನದ ಮೂಲಕ ಗಾಝಾದ ಜನತೆಗೆ ಆಹಾರ ವಿತರಣೆ ಮಾಡಿದೆ ಎಂದು ವರದಿಯಾಗಿದೆ. ಆದರೆ, ಮಾನವೀಯ ಗುಂಪುಗಳು ವಿಮಾನದಿಂದ ಅಗತ್ಯ ವಸ್ತುಗಳನ್ನು ಎಸೆಯುವುದನ್ನು ವಿರೋಧಿಸಿದೆ. ಎಲ್ಲಾ ಗಡಿಗಳನ್ನು ತೆರೆದು ಗಾಝಾಗೆ ಅಗತ್ಯ ಸಾಮಾಗ್ರಿಗಳು ತಲುಪುವಂತೆ ಮಾಡಬೇಕು ಎಂದು ಆಗ್ರಹಿಸಿವೆ.

ಮಾನವ ಹಕ್ಕುಗಳ ಗುಂಪುಗಳು ಮತ್ತು ವಿಶ್ವಸಂಸ್ಥೆಯ ಅಧಿಕಾರಿಗಳು ಇಸ್ರೇಲ್ ಹಸಿವನ್ನು ಯುದ್ಧದ ಅಸ್ತ್ರವಾಗಿ ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಳೆದ 24 ಗಂಟೆಯಲ್ಲಿ ಗಾಝಾದಾದ್ಯಂತ ಇಸ್ರೇಲಿ ಪಡೆಗಳು ಕನಿಷ್ಠ 22 ಜನರನ್ನು ಹತ್ಯೆಗೈದಿವೆ. ಇದರಲ್ಲಿ 16 ಮಂದಿ ನೆರವು ಪಡೆಯಲು ನಿಂತವರು ಎಂದು ವೈದ್ಯಕೀಯ ಮೂಲಗಳನ್ನು ಉಲ್ಲೇಖಿಸಿ ಅಲ್ ಜಝೀರಾ ವರದಿ ಮಾಡಿದೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್ ಗಾಝಾ ಮೇಲೆ ನಡೆಸಿದ ದಾಳಿಯಿಂದ ಇದುವರೆಗೆ ಕನಿಷ್ಠ 60,430 ಜನರು ಸಾವನ್ನಪ್ಪಿದ್ದಾರೆ ಮತ್ತು 148,722 ಜನರು ಗಾಯಗೊಂಡಿದ್ದಾರೆ. ಇದುವರೆಗೆ 93 ಮಕ್ಕಳು ಸೇರಿದಂತೆ 175 ಜನರು ಹಸಿವು, ಅಪೌಷ್ಠಿಕತೆಯಿಂದ ಸಾವಿಗೀಡಾಗಿದ್ದಾರೆ.

ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಿದೆ ಎಂದು ತನಗೆ ತಿಳಿದುಬಂದಿದೆ: ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...