Homeಅಂತರಾಷ್ಟ್ರೀಯಸತ್ತು ಹೋದ ಮಾನವೀಯತೆ: ಗಾಝಾದಲ್ಲಿ ಹಸಿವು, ಅಪೌಷ್ಠಿಕತೆಗೆ ಮತ್ತೆ 6 ಬಲಿ

ಸತ್ತು ಹೋದ ಮಾನವೀಯತೆ: ಗಾಝಾದಲ್ಲಿ ಹಸಿವು, ಅಪೌಷ್ಠಿಕತೆಗೆ ಮತ್ತೆ 6 ಬಲಿ

- Advertisement -
- Advertisement -

ಇಸ್ರೇಲ್ ವಿಧಿಸಿದ ದಿಗ್ಭಂಧನದಿಂದ ಆಹಾರ, ನೀರು ಗಾಝಾದಲ್ಲಿ ಮತ್ತೆ 6 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಹಸಿವು, ಅಪೌಷ್ಠಿಕತೆಯಿಂದ ಸಾವಿಗೀಡಾದವರ ಸಂಖ್ಯೆ 173ಕ್ಕೆ ಏರಿಕೆಯಾಗಿದೆ.

ಆಹಾರ ವಸ್ತುಗಳು ಸೇರಿದಂತೆ ಅಗತ್ಯ ಸಾಮಾಗ್ರಿಗಳು ಗಾಝಾ ತಲುಪದಂತೆ ಮಾರ್ಚ್ 2ರಿಂದ ಇಸ್ರೇಲ್ ದಿಗ್ಬಂಧನ ವಿಧಿಸಿದೆ. ಹಾಗಾಗಿ, ಯಾವುದೇ ನೆರವು ಟ್ರಕ್‌ಗಳು ಯುದ್ಧ ಪೀಡಿತ ಭೂಮಿಗೆ ಹೋಗುತ್ತಿಲ್ಲ. ಇದರಿಂದ ಗಾಝಾದ ಜನರ ಪರಿಸ್ಥಿತಿ ಇನ್ನಷ್ಟು ಶೋಚಣೀಯವಾಗಿದೆ.

ಈ 21ನೇ ಶತಮಾನದಲ್ಲಿ, ಮನುಷ್ಯರು ಚಂದ್ರನ ಮೇಲೆ ಹೋಗಿ ಬಂದಿರುವ ಕಾಲದಲ್ಲಿ, ನಮ್ಮ ಜೊತೆಯೇ ಈ ಭೂಮಿ ಮೇಲೆ ಬದುಕುತ್ತಿರುವ ಒಂದು ಪ್ರದೇಶದ ಜನರು ಆಹಾರ ಸಿಗದೆ ಸಾಯುತ್ತಿರುವುದು ಅಥವಾ ಆಹಾರ ಸಿಗದಂತೆ ಮಾಡಿ ಸಾಯಿಸುತ್ತಿರುವುದು ಸತ್ತು ಹೋಗಿರುವ ಮಾನವೀಯತೆಗೆ ಒಂದು ನಿದರ್ಶನವಾಗಿದೆ.

ಆಹಾರ ಸಿಗದೆ ಸಾಯುತ್ತಿರುವವರ ಕಥೆ ಒಂದೆಡೆಯಾದರೆ, ಸಿಗುತ್ತಿರುವ ಅಲ್ಪ ಸ್ವಲ್ಪ ಆಹಾರವನ್ನು ಪಡೆಯಲು ಹೋದವರು ವಾಪಸ್ ಬರುತ್ತಾರೆ ಎಂಬ ಧೈರ್ಯ ಗಾಝಾದ ಜನತೆಗೆ ಇಲ್ಲ. ಏಕೆಂದರೆ, ಆಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತವನ್ನು ಗುರಿಯಾಗಿಸಿ ಇಸ್ರೇಲ್ ಗುಂಡಿಕ್ಕುತ್ತಿದೆ. ಹಾಗಾಗಿ, ಆಹಾರ ಬದಲು ಅನೇಕರ ಹೆಣಗಳು ವಾಪಸ್ ತಾತ್ಕಾಲಿಕ ಟೆಂಟ್‌ಗಳಾದ ಮನೆಗಳಿಗೆ ಬಂದಿವೆ.

ಅಮೆರಿಕ ಮತ್ತು ಇಸ್ರೇಲ್ ಬೆಂಬಲಿತ ಜಿಹೆಚ್‌ಎಫ್ ಗುಂಪು ಕಳೆದ ಮೇ ತಿಂಗಳಿನಿಂದ ಗಾಝಾದಲ್ಲಿ ಆಹಾರ ವಿತರಣೆ ನಡೆಸುತ್ತಿದೆ. ಇವರನ್ನು ಬಿಟ್ಟು ಬೇರೆಯವರಿಗೆ ಅವಕಾಶ ಇಲ್ಲ ಎಂಬ ವರದಿಗಳಿವೆ. ಈ ಜಿಹೆಚ್‌ಎಫ್‌ನ ನಾಲ್ಕು ಆಹಾರ ವಿತರಣಾ ಕೇಂದ್ರಗಳಲ್ಲಿ ಆಹಾರ ಪಡೆಯಲು ನಿಂತ 1,400 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಪಡೆ ಗುಂಡಿಕ್ಕಿ ಕೊಂದಿದೆ. ಹಾಗಾಗಿ, ಆಹಾರ ವಿತರಣೆಯ ನೆಪದಲ್ಲಿ ಜನರನ್ನು ಕೊಲ್ಲಲೆಂದೇ ಅಮೆರಿಕ-ಇಸ್ರೇಲ್ ಜಿಹೆಚ್‌ಎಫ್ ಆಹಾರ ವಿತರಣಾ ಕೇಂದ್ರಗಳನ್ನು ತೆರೆದಂತೆ ತೋರುತ್ತಿದೆ.

ಮಾನವೀಯ ನೆರವು ವಿತರಣೆಯ ಮೇಲಿನ ಇಸ್ರೇಲ್ ನಿರ್ಬಂಧಗಳು ಇತ್ತೀಚಿನ ದಿನಗಳಲ್ಲಿ ಭಾಗಶಃ ತೆಗೆದುಹಾಕಲಾಗಿದ್ದರೂ, ಪ್ಯಾಲೆಸ್ತೀನಿಯರು ಹಸಿವಿನಿಂದ ಬಳಲುತ್ತಿದ್ದಾರೆ. ಅವರ ಕುಟುಂಬಗಳನ್ನು ಪೋಷಿಸಲು ಸಾಕಷ್ಟು ಆಹಾರವನ್ನು ಹುಡುಕಲು ಹೆಣಗಾಡುತ್ತಿದ್ದಾರೆ ಎಂದು ವಿಶ್ವಸಂಸ್ಥೆ ಮತ್ತು ಇತರ ಮಾನವೀಯ ಸಂಸ್ಥೆಗಳ ಅಧಿಕಾರಿಗಳು ಹೇಳುತ್ತಾರೆ.

ಆಹಾರ ಸಿಗದಂತೆ ಮಾಡಿರುವ ಇಸ್ರೇಲ್‌ನ ಅಮಾನವೀಯ ನಡೆಗೆ ವಿಶ್ವದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಸ್ವತಃ ಇಸ್ರೇಲ್ ವಿಮಾನದ ಮೂಲಕ ಗಾಝಾದ ಜನತೆಗೆ ಆಹಾರ ವಿತರಣೆ ಮಾಡಿದೆ ಎಂದು ವರದಿಯಾಗಿದೆ. ಆದರೆ, ಮಾನವೀಯ ಗುಂಪುಗಳು ವಿಮಾನದಿಂದ ಅಗತ್ಯ ವಸ್ತುಗಳನ್ನು ಎಸೆಯುವುದನ್ನು ವಿರೋಧಿಸಿದೆ. ಎಲ್ಲಾ ಗಡಿಗಳನ್ನು ತೆರೆದು ಗಾಝಾಗೆ ಅಗತ್ಯ ಸಾಮಾಗ್ರಿಗಳು ತಲುಪುವಂತೆ ಮಾಡಬೇಕು ಎಂದು ಆಗ್ರಹಿಸಿವೆ.

ಮಾನವ ಹಕ್ಕುಗಳ ಗುಂಪುಗಳು ಮತ್ತು ವಿಶ್ವಸಂಸ್ಥೆಯ ಅಧಿಕಾರಿಗಳು ಇಸ್ರೇಲ್ ಹಸಿವನ್ನು ಯುದ್ಧದ ಅಸ್ತ್ರವಾಗಿ ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಳೆದ 24 ಗಂಟೆಯಲ್ಲಿ ಗಾಝಾದಾದ್ಯಂತ ಇಸ್ರೇಲಿ ಪಡೆಗಳು ಕನಿಷ್ಠ 22 ಜನರನ್ನು ಹತ್ಯೆಗೈದಿವೆ. ಇದರಲ್ಲಿ 16 ಮಂದಿ ನೆರವು ಪಡೆಯಲು ನಿಂತವರು ಎಂದು ವೈದ್ಯಕೀಯ ಮೂಲಗಳನ್ನು ಉಲ್ಲೇಖಿಸಿ ಅಲ್ ಜಝೀರಾ ವರದಿ ಮಾಡಿದೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್ ಗಾಝಾ ಮೇಲೆ ನಡೆಸಿದ ದಾಳಿಯಿಂದ ಇದುವರೆಗೆ ಕನಿಷ್ಠ 60,430 ಜನರು ಸಾವನ್ನಪ್ಪಿದ್ದಾರೆ ಮತ್ತು 148,722 ಜನರು ಗಾಯಗೊಂಡಿದ್ದಾರೆ. ಇದುವರೆಗೆ 93 ಮಕ್ಕಳು ಸೇರಿದಂತೆ 175 ಜನರು ಹಸಿವು, ಅಪೌಷ್ಠಿಕತೆಯಿಂದ ಸಾವಿಗೀಡಾಗಿದ್ದಾರೆ.

ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಿದೆ ಎಂದು ತನಗೆ ತಿಳಿದುಬಂದಿದೆ: ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...