Homeಅಂತರಾಷ್ಟ್ರೀಯಸತ್ತು ಹೋದ ಮಾನವೀಯತೆ: ಗಾಝಾದಲ್ಲಿ ಹಸಿವು, ಅಪೌಷ್ಠಿಕತೆಗೆ ಮತ್ತೆ 6 ಬಲಿ

ಸತ್ತು ಹೋದ ಮಾನವೀಯತೆ: ಗಾಝಾದಲ್ಲಿ ಹಸಿವು, ಅಪೌಷ್ಠಿಕತೆಗೆ ಮತ್ತೆ 6 ಬಲಿ

- Advertisement -
- Advertisement -

ಇಸ್ರೇಲ್ ವಿಧಿಸಿದ ದಿಗ್ಭಂಧನದಿಂದ ಆಹಾರ, ನೀರು ಗಾಝಾದಲ್ಲಿ ಮತ್ತೆ 6 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಹಸಿವು, ಅಪೌಷ್ಠಿಕತೆಯಿಂದ ಸಾವಿಗೀಡಾದವರ ಸಂಖ್ಯೆ 173ಕ್ಕೆ ಏರಿಕೆಯಾಗಿದೆ.

ಆಹಾರ ವಸ್ತುಗಳು ಸೇರಿದಂತೆ ಅಗತ್ಯ ಸಾಮಾಗ್ರಿಗಳು ಗಾಝಾ ತಲುಪದಂತೆ ಮಾರ್ಚ್ 2ರಿಂದ ಇಸ್ರೇಲ್ ದಿಗ್ಬಂಧನ ವಿಧಿಸಿದೆ. ಹಾಗಾಗಿ, ಯಾವುದೇ ನೆರವು ಟ್ರಕ್‌ಗಳು ಯುದ್ಧ ಪೀಡಿತ ಭೂಮಿಗೆ ಹೋಗುತ್ತಿಲ್ಲ. ಇದರಿಂದ ಗಾಝಾದ ಜನರ ಪರಿಸ್ಥಿತಿ ಇನ್ನಷ್ಟು ಶೋಚಣೀಯವಾಗಿದೆ.

ಈ 21ನೇ ಶತಮಾನದಲ್ಲಿ, ಮನುಷ್ಯರು ಚಂದ್ರನ ಮೇಲೆ ಹೋಗಿ ಬಂದಿರುವ ಕಾಲದಲ್ಲಿ, ನಮ್ಮ ಜೊತೆಯೇ ಈ ಭೂಮಿ ಮೇಲೆ ಬದುಕುತ್ತಿರುವ ಒಂದು ಪ್ರದೇಶದ ಜನರು ಆಹಾರ ಸಿಗದೆ ಸಾಯುತ್ತಿರುವುದು ಅಥವಾ ಆಹಾರ ಸಿಗದಂತೆ ಮಾಡಿ ಸಾಯಿಸುತ್ತಿರುವುದು ಸತ್ತು ಹೋಗಿರುವ ಮಾನವೀಯತೆಗೆ ಒಂದು ನಿದರ್ಶನವಾಗಿದೆ.

ಆಹಾರ ಸಿಗದೆ ಸಾಯುತ್ತಿರುವವರ ಕಥೆ ಒಂದೆಡೆಯಾದರೆ, ಸಿಗುತ್ತಿರುವ ಅಲ್ಪ ಸ್ವಲ್ಪ ಆಹಾರವನ್ನು ಪಡೆಯಲು ಹೋದವರು ವಾಪಸ್ ಬರುತ್ತಾರೆ ಎಂಬ ಧೈರ್ಯ ಗಾಝಾದ ಜನತೆಗೆ ಇಲ್ಲ. ಏಕೆಂದರೆ, ಆಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತವನ್ನು ಗುರಿಯಾಗಿಸಿ ಇಸ್ರೇಲ್ ಗುಂಡಿಕ್ಕುತ್ತಿದೆ. ಹಾಗಾಗಿ, ಆಹಾರ ಬದಲು ಅನೇಕರ ಹೆಣಗಳು ವಾಪಸ್ ತಾತ್ಕಾಲಿಕ ಟೆಂಟ್‌ಗಳಾದ ಮನೆಗಳಿಗೆ ಬಂದಿವೆ.

ಅಮೆರಿಕ ಮತ್ತು ಇಸ್ರೇಲ್ ಬೆಂಬಲಿತ ಜಿಹೆಚ್‌ಎಫ್ ಗುಂಪು ಕಳೆದ ಮೇ ತಿಂಗಳಿನಿಂದ ಗಾಝಾದಲ್ಲಿ ಆಹಾರ ವಿತರಣೆ ನಡೆಸುತ್ತಿದೆ. ಇವರನ್ನು ಬಿಟ್ಟು ಬೇರೆಯವರಿಗೆ ಅವಕಾಶ ಇಲ್ಲ ಎಂಬ ವರದಿಗಳಿವೆ. ಈ ಜಿಹೆಚ್‌ಎಫ್‌ನ ನಾಲ್ಕು ಆಹಾರ ವಿತರಣಾ ಕೇಂದ್ರಗಳಲ್ಲಿ ಆಹಾರ ಪಡೆಯಲು ನಿಂತ 1,400 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಪಡೆ ಗುಂಡಿಕ್ಕಿ ಕೊಂದಿದೆ. ಹಾಗಾಗಿ, ಆಹಾರ ವಿತರಣೆಯ ನೆಪದಲ್ಲಿ ಜನರನ್ನು ಕೊಲ್ಲಲೆಂದೇ ಅಮೆರಿಕ-ಇಸ್ರೇಲ್ ಜಿಹೆಚ್‌ಎಫ್ ಆಹಾರ ವಿತರಣಾ ಕೇಂದ್ರಗಳನ್ನು ತೆರೆದಂತೆ ತೋರುತ್ತಿದೆ.

ಮಾನವೀಯ ನೆರವು ವಿತರಣೆಯ ಮೇಲಿನ ಇಸ್ರೇಲ್ ನಿರ್ಬಂಧಗಳು ಇತ್ತೀಚಿನ ದಿನಗಳಲ್ಲಿ ಭಾಗಶಃ ತೆಗೆದುಹಾಕಲಾಗಿದ್ದರೂ, ಪ್ಯಾಲೆಸ್ತೀನಿಯರು ಹಸಿವಿನಿಂದ ಬಳಲುತ್ತಿದ್ದಾರೆ. ಅವರ ಕುಟುಂಬಗಳನ್ನು ಪೋಷಿಸಲು ಸಾಕಷ್ಟು ಆಹಾರವನ್ನು ಹುಡುಕಲು ಹೆಣಗಾಡುತ್ತಿದ್ದಾರೆ ಎಂದು ವಿಶ್ವಸಂಸ್ಥೆ ಮತ್ತು ಇತರ ಮಾನವೀಯ ಸಂಸ್ಥೆಗಳ ಅಧಿಕಾರಿಗಳು ಹೇಳುತ್ತಾರೆ.

ಆಹಾರ ಸಿಗದಂತೆ ಮಾಡಿರುವ ಇಸ್ರೇಲ್‌ನ ಅಮಾನವೀಯ ನಡೆಗೆ ವಿಶ್ವದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಸ್ವತಃ ಇಸ್ರೇಲ್ ವಿಮಾನದ ಮೂಲಕ ಗಾಝಾದ ಜನತೆಗೆ ಆಹಾರ ವಿತರಣೆ ಮಾಡಿದೆ ಎಂದು ವರದಿಯಾಗಿದೆ. ಆದರೆ, ಮಾನವೀಯ ಗುಂಪುಗಳು ವಿಮಾನದಿಂದ ಅಗತ್ಯ ವಸ್ತುಗಳನ್ನು ಎಸೆಯುವುದನ್ನು ವಿರೋಧಿಸಿದೆ. ಎಲ್ಲಾ ಗಡಿಗಳನ್ನು ತೆರೆದು ಗಾಝಾಗೆ ಅಗತ್ಯ ಸಾಮಾಗ್ರಿಗಳು ತಲುಪುವಂತೆ ಮಾಡಬೇಕು ಎಂದು ಆಗ್ರಹಿಸಿವೆ.

ಮಾನವ ಹಕ್ಕುಗಳ ಗುಂಪುಗಳು ಮತ್ತು ವಿಶ್ವಸಂಸ್ಥೆಯ ಅಧಿಕಾರಿಗಳು ಇಸ್ರೇಲ್ ಹಸಿವನ್ನು ಯುದ್ಧದ ಅಸ್ತ್ರವಾಗಿ ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಳೆದ 24 ಗಂಟೆಯಲ್ಲಿ ಗಾಝಾದಾದ್ಯಂತ ಇಸ್ರೇಲಿ ಪಡೆಗಳು ಕನಿಷ್ಠ 22 ಜನರನ್ನು ಹತ್ಯೆಗೈದಿವೆ. ಇದರಲ್ಲಿ 16 ಮಂದಿ ನೆರವು ಪಡೆಯಲು ನಿಂತವರು ಎಂದು ವೈದ್ಯಕೀಯ ಮೂಲಗಳನ್ನು ಉಲ್ಲೇಖಿಸಿ ಅಲ್ ಜಝೀರಾ ವರದಿ ಮಾಡಿದೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್ ಗಾಝಾ ಮೇಲೆ ನಡೆಸಿದ ದಾಳಿಯಿಂದ ಇದುವರೆಗೆ ಕನಿಷ್ಠ 60,430 ಜನರು ಸಾವನ್ನಪ್ಪಿದ್ದಾರೆ ಮತ್ತು 148,722 ಜನರು ಗಾಯಗೊಂಡಿದ್ದಾರೆ. ಇದುವರೆಗೆ 93 ಮಕ್ಕಳು ಸೇರಿದಂತೆ 175 ಜನರು ಹಸಿವು, ಅಪೌಷ್ಠಿಕತೆಯಿಂದ ಸಾವಿಗೀಡಾಗಿದ್ದಾರೆ.

ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಿದೆ ಎಂದು ತನಗೆ ತಿಳಿದುಬಂದಿದೆ: ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...